Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 10:28 - ಪರಿಶುದ್ದ ಬೈಬಲ್‌

28 ಒಳ್ಳೆಯವರ ನಿರೀಕ್ಷೆಗೆ ಸಂತೋಷವೇ ಫಲಿತಾಂಶ. ಕೆಟ್ಟವರ ನಿರೀಕ್ಷೆಗೆ ಶೂನ್ಯವೇ ಫಲಿತಾಂಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಶಿಷ್ಟನ ನಂಬಿಕೆಗೆ ಆನಂದವು ಫಲ, ದುಷ್ಟನ ನಿರೀಕ್ಷೆ ನಿಷ್ಫಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಸಜ್ಜನರ ನಂಬಿಕೆ ಆನಂದಕರ; ದುರ್ಜನರ ನಿರೀಕ್ಷೆ ವಿನಾಶಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಶಿಷ್ಟನ ನಂಬಿಕೆಗೆ ಆನಂದವು ಫಲ; ದುಷ್ಟನ ನಿರೀಕ್ಷೆ ನಿಷ್ಫಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನೀತಿವಂತರ ನಿರೀಕ್ಷೆಯು ಆನಂದಕರವಾಗಿರುವುದು; ಆದರೆ ದುಷ್ಟರ ನಿರೀಕ್ಷೆಯು ನಾಶವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 10:28
15 ತಿಳಿವುಗಳ ಹೋಲಿಕೆ  

ನಿರೀಕ್ಷೆಯನ್ನು ಕೊಡುವ ದೇವರು ನಂಬಿಕೆಯಿಂದ ಉಂಟಾಗುವ ಆನಂದವನ್ನೂ ಸಮಾಧಾನವನ್ನೂ ನಿಮಗೆ ಸಂಪೂರ್ಣವಾಗಿ ದಯಪಾಲಿಸಲೆಂದು ನಾನು ಪ್ರಾರ್ಥಿಸುತ್ತೇನೆ. ಆಗ ಪವಿತ್ರಾತ್ಮನ ಶಕ್ತಿಯ ಮೂಲಕ ನಿರೀಕ್ಷೆಯು ನಿಮ್ಮಲ್ಲಿ ತುಂಬಿ ಹೊರಸೂಸುವುದು.


ದೇವರನ್ನು ಮರೆಯುವವನು ಆ ಜವುಗು ಸಸ್ಯಗಳಂತೆಯೇ ಇರುವನು. ದೇವರನ್ನು ಮರೆಯುವವನಿಗೆ ನಿರೀಕ್ಷೆಯೇ ಇಲ್ಲ.


ದುಷ್ಟನು ಸಾಯುವಾಗ ಅವನ ನಿರೀಕ್ಷೆಗಳೆಲ್ಲಾ ನಾಶವಾಗುತ್ತವೆ. ಅವನ ಅಪೇಕ್ಷೆಗಳೆಲ್ಲಾ ಕೊನೆಗೊಳ್ಳುತ್ತವೆ.


ನೀವು ಹೇಳುವ ಒಳ್ಳೆಯ ಸಂಗತಿಗಳಲ್ಲಿ ಮತ್ತು ಮಾಡುವ ಒಳ್ಳೆಯ ಕಾರ್ಯಗಳಲ್ಲಿ ನಿಮಗೆ ಬಲವನ್ನೂ ಆದರಣೆಯನ್ನೂ ಪ್ರಭುವಾದ ಯೇಸು ಕ್ರಿಸ್ತನು ಮತ್ತು ತಂದೆಯಾದ ದೇವರು ನಿಮಗೆ ದಯಪಾಲಿಸಲಿ ಎಂದು ನಾವು ಪ್ರಾರ್ಥಿಸುತ್ತೇವೆ. ದೇವರು ನಮ್ಮನ್ನು ಪ್ರೀತಿಸಿದನು. ಆತನು ತನ್ನ ಕೃಪೆಯಿಂದಲೇ ನಮಗೆ ಒಳ್ಳೆಯ ನಿರೀಕ್ಷೆಯನ್ನೂ ಶಾಶ್ವತವಾದ ಆದರಣೆಯನ್ನೂ ದಯಪಾಲಿಸಿದನು.


ನಿಮಗೆ ನಿರೀಕ್ಷೆಯಿರುವುದರಿಂದ ಸಂತೋಷವಾಗಿರಿ. ನಿಮಗೆ ಸಂಕಟಗಳಿರುವಾಗ ತಾಳ್ಮೆಯಿಂದಿರಿ. ಎಲ್ಲಾ ಸಮಯದಲ್ಲಿ ಪ್ರಾರ್ಥಿಸಿರಿ.


ಈಗ ನಾವು ಆನಂದಿಸುತ್ತಿರುವ ದೇವರ ಕೃಪಾಶ್ರಯಕ್ಕೆ ಕ್ರಿಸ್ತನೇ ನಮ್ಮನ್ನು ನಮ್ಮ ನಂಬಿಕೆಯ ಮೂಲಕ ತಂದಿದ್ದಾನೆ. ದೇವರ ಮಹಿಮೆಯನ್ನು ಹೊಂದುವೆವು ಎಂಬ ನಿರೀಕ್ಷೆಯು ನಮಗಿರುವುದರಿಂದ ನಾವು ಬಹು ಸಂತೋಷವಾಗಿದ್ದೇವೆ.


ದುಷ್ಟನು ತನ್ನ ಕೆಡುಕಿನಿಂದಲೇ ಸೋತುಹೋಗುವನು; ಆದರೆ ಒಳ್ಳೆಯವನು ಮರಣದ ಸಮಯದಲ್ಲೂ ಜಯಶಾಲಿಯಾಗುವನು.


ದುಷ್ಟರು ಇದನ್ನು ಕಂಡು ಕೋಪಗೊಳ್ಳುವರು; ಕೋಪದಿಂದ ಹಲ್ಲು ಕಡಿಯುತ್ತಾ ಅಳಿದುಹೋಗುವರು. ಅವರ ದುರಾಶೆಯು ಈಡೇರದು.


ಆದರೆ ದುಷ್ಟರು ಸಹಾಯಕ್ಕಾಗಿ ಎದುರುನೋಡಿದರೂ ತಮ್ಮ ಆಪತ್ತುಗಳಿಂದ ಪಾರಾಗಲು ಅವರಿಗೆ ಸಾಧ್ಯವಿಲ್ಲ. ಅವರ ನಿರೀಕ್ಷೆಯೇ ಅವರನ್ನು ಮರಣಕ್ಕೆ ನಡೆಸುತ್ತದೆ.”


ಆದ್ದರಿಂದ ನನ್ನ ಹೃದಯವೂ ಆತ್ಮವೂ ಉಲ್ಲಾಸಪಡುತ್ತವೆ. ನನ್ನ ದೇಹವೂ ಸುರಕ್ಷಿತವಾಗಿರುವುದು.


ಒಳ್ಳೆಯವರ ಬಯಕೆ ಅವರನ್ನು ಕ್ಷೇಮಕ್ಕೆ ನಡೆಸುತ್ತದೆ. ಆದರೆ ದುಷ್ಟರ ಆಕಾಂಕ್ಷೆ ಅವರನ್ನು ದಂಡನೆಗೆ ನಡೆಸುತ್ತದೆ.


ದೇವರಿಗೆ ಗಾಯನ ಮಾಡಿರಿ; ಆತನ ಹೆಸರನ್ನು ಕೊಂಡಾಡಿರಿ. ಅರಣ್ಯದಲ್ಲಿ ರಥದ ಮೇಲೆ ಸವಾರಿ ಮಾಡುತ್ತಾ ಬರುವಾತನಿಗೆ ಹಾದಿಯನ್ನು ಸಿದ್ಧಗೊಳಿಸಿರಿ. ಆತನ ಹೆಸರು ಯಾಹು. ಆತನ ಹೆಸರನ್ನು ಕೊಂಡಾಡಿರಿ!


ಕೆಡುಕರು ತಮ್ಮ ಪಾಪದಿಂದಲೇ ಸಿಕ್ಕಿಕೊಳ್ಳುವರು. ಒಳ್ಳೆಯವರಾದರೋ ಸಂತೋಷದಿಂದ ಹಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು