Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 10:30 - ಪರಿಶುದ್ದ ಬೈಬಲ್‌

30 ಒಳ್ಳೆಯವರು ಯಾವಾಗಲೂ ಕ್ಷೇಮವಾಗಿರುವರು. ಆದರೆ ಕೆಡುಕರನ್ನು ದೇಶದಿಂದ ಬಲವಂತವಾಗಿ ಹೊರಗಟ್ಟಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಶಿಷ್ಟರು ಎಂದಿಗೂ ಕದಲರು, ದುಷ್ಟರು ದೇಶದಲ್ಲಿ ನಿಲ್ಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಸಜ್ಜನರು ಎಂದಿಗೂ ಕದಲರು; ದುರ್ಜನರು ನಾಡಿನಲ್ಲಿ ನಿಲ್ಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಶಿಷ್ಟರು ಎಂದಿಗೂ ಕದಲರು; ದುಷ್ಟರು ದೇಶದಲ್ಲಿ ನಿಲ್ಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನೀತಿವಂತರು ಎಂದಿಗೂ ಕದಲುವುದೇ ಇಲ್ಲ; ಆದರೆ ದುಷ್ಟರು ಭೂಮಿಯಲ್ಲಿ ನಿಲ್ಲುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 10:30
16 ತಿಳಿವುಗಳ ಹೋಲಿಕೆ  

ನೀತಿವಂತರು ಆಶೀರ್ವದಿಸಿದರೆ, ವಾಗ್ದಾನಮಾಡಲ್ಪಟ್ಟ ಭೂಮಿಯನ್ನು ಜನರು ಪಡೆದುಕೊಳ್ಳುವರು. ಆದರೆ ಅವರು ಶಪಿಸಿದರೆ, ಜನರು ನಾಶವಾಗುವರು.


ಯೆಹೋವನಲ್ಲಿ ಭರವಸವಿಟ್ಟಿರುವವರು ಚೀಯೋನ್ ಪರ್ವತದಂತಿರುವರು. ಅವರೆಂದಿಗೂ ಕದಲದೆ ಶಾಶ್ವತವಾಗಿರುವರು.


ಆಪತ್ತು ಬಂದಾಗ ದುಷ್ಟನು ನಾಶವಾಗುವನು. ಆದರೆ ಒಳ್ಳೆಯವನು ಸದಾಕಾಲ ಬಲವಾಗಿ ನಿಲ್ಲುವನು.


ನಾನು ಯೆಹೋವನನ್ನು ಯಾವಾಗಲೂ ನನ್ನ ಎದುರಿನಲ್ಲೇ ಇಟ್ಟುಕೊಂಡಿದ್ದೇನೆ; ಆತನು ನನ್ನ ಬಲಗಡೆಯಲ್ಲಿರುವುದರಿಂದ ನಾನೆಂದಿಗೂ ಕದಲುವುದಿಲ್ಲ.


ಯೆಹೂದ್ಯ ಯಾಜಕರು ಮತ್ತು ನಾಯಕರು, “ಅವನು ಖಂಡಿತವಾಗಿ ಆ ದುಷ್ಟಜನರನ್ನು ಕೊಂದು ಸುಗ್ಗಿಕಾಲದಲ್ಲಿ ತನ್ನ ಪಾಲನ್ನು ತನಗೆ ಕೊಡುವ ರೈತರಿಗೆ ಅದನ್ನು ಗುತ್ತಿಗೆಗೆ ಕೊಡುತ್ತಾನೆ” ಎಂದು ಹೇಳಿದರು.


ಅವನೆಂದಿಗೂ ಬೀಳುವುದಿಲ್ಲ. ನೀತಿವಂತನನ್ನು ಜನರು ಸದಾಕಾಲ ಜ್ಞಾಪಿಸಿಕೊಳ್ಳುವರು.


ದೇವರು ನಿನ್ನನ್ನು ಶಾಶ್ವತವಾಗಿ ನಾಶಮಾಡುವನು, ಗಿಡವನ್ನು ಬೇರು ಸಹಿತ ಕಿತ್ತುಹಾಕುವಂತೆ ಆತನು ನಿನ್ನನ್ನು ಹಿಡಿದು ನಿನ್ನ ಮನೆಯೊಳಗಿಂದ ಕಿತ್ತು ಬೀಸಾಡುವನು.


ನೀತಿವಂತರು ಸನ್ಮಾರ್ಗದಲ್ಲಿ ಜೀವಿಸುವರು. ನಿರಪರಾಧಿಗಳು ಸದ್ಗುಣದಲ್ಲಿ ಬಲವಾಗುತ್ತಲೇ ಇರುವರು.


ಅವನು ಕೊಟ್ಟ ಸಾಲಕ್ಕೆ ಬಡ್ಡಿ ಕೇಳದವನೂ ನಿರಪರಾಧಿಗೆ ಕೇಡುಮಾಡಲು ಲಂಚ ತೆಗೆದುಕೊಳ್ಳದವನೂ ಆಗಿರಬೇಕು. ಹೀಗೆ ಜೀವಿಸುವವನು ದೇವರಿಗೆ ಸಮೀಪವಾಗಿಯೇ ಇರುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು