Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 10:4 - ಪರಿಶುದ್ದ ಬೈಬಲ್‌

4 ಸೋಮಾರಿಯು ಬಡವನಾಗಿರುತ್ತಾನೆ. ಕಷ್ಟಪಟ್ಟು ಕೆಲಸ ಮಾಡುವವನು ಐಶ್ವರ್ಯವಂತನಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಜೋಲುಗೈ ದಾರಿದ್ರ್ಯ, ಚುರುಕು ಕೈ ತರುವುದು ಐಶ್ವರ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಜೋಲುಗೈ ತರುತ್ತದೆ ದಾರಿದ್ರ್ಯ; ಚುರುಕು ಕೈ ತರುತ್ತದೆ ಐಶ್ವರ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಜೋಲುಗೈ ದಾರಿದ್ರ್ಯ; ಚುರುಕುಗೈ ಐಶ್ವರ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಲಸ್ಯದ ಕೈ ದರಿದ್ರನನ್ನಾಗಿ ಮಾಡುವದು; ಆದರೆ ಚುರುಕಾದ ಕೈ ಐಶ್ವರ್ಯವನ್ನುಂಟು ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 10:4
19 ತಿಳಿವುಗಳ ಹೋಲಿಕೆ  

ಕಷ್ಟಪಟ್ಟು ದುಡಿಯುವವನ ಆಲೋಚನೆಗಳು ಲಾಭಕ್ಕೆ ನಡೆಸುತ್ತವೆ. ಆದರೆ ಆತುರತೆಯಲ್ಲೇ ಇರುವವನು ಬಡವನಾಗುವನು.


ಸೋಮಾರಿಯು ಬಿತ್ತನೆಕಾಲದಲ್ಲಿ ಬೀಜ ಬಿತ್ತುವುದಿಲ್ಲ; ಸುಗ್ಗಿಕಾಲದಲ್ಲಿ ಅವನಿಗೆ ಬೆಳೆಯೂ ಇರುವುದಿಲ್ಲ.


ಸೋಮಾರಿಗೆ ಗಾಢವಾದ ನಿದ್ರೆ. ಮೈಗಳ್ಳನಿಗೆ ಹಸಿವೆ.


ಸೋಮಾರಿಯ ಆಸೆಗಳೆಲ್ಲಾ ವ್ಯರ್ಥ. ಅವನೆಂದಿಗೂ ಅವುಗಳನ್ನು ಪಡೆಯಲಾರ. ಕಷ್ಟಪಟ್ಟು ದುಡಿಯುವವನು ತನ್ನ ಆಸೆಗಳನ್ನು ಈಡೇರಿಸಿಕೊಳ್ಳುವನು.


ಆದ್ದರಿಂದ, ನನ್ನ ಪ್ರಿಯ ಸಹೋದರ ಸಹೋದರಿಯರೇ, ದೃಢವಾಗಿರಿ, ನಿಶ್ಚಲರಾಗಿರಿ. ಪ್ರಭುವಿನ ಸೇವೆಗಾಗಿ ನಿಮ್ಮನ್ನು ಯಾವಾಗಲೂ ಸಂಪೂರ್ಣವಾಗಿ ಪ್ರತಿಷ್ಠಿಸಿಕೊಳ್ಳಿರಿ. ನೀವು ಪ್ರಭುವಿಗಾಗಿ ಪಡುವ ಪ್ರಯಾಸವು ಎಂದಿಗೂ ವ್ಯರ್ಥವಾಗುವುದಿಲ್ಲ.


ನಿದ್ರಾನಿರತನಾಗಿರಬೇಡ, ಬಡವನಾಗುವೆ. ನಿನ್ನ ಸಮಯವನ್ನು ದುಡಿಯಲು ಉಪಯೋಗಿಸಿಕೊಂಡರೆ ನಿನಗೆ ಊಟಕ್ಕೆ ಬೇಕಾದಷ್ಟಿರುವುದು.


ಕೆಲವರಿಗೆ ಊಟಮಾಡುವುದಕ್ಕೂ ಸೋಮಾರಿತನ. ಅವರು ಕೈಯನ್ನು ತಟ್ಟೆಗೆ ಹಾಕಿದರೂ ಊಟವನ್ನು ಬಾಯಿಗೆ ಹಾಕಿಕೊಳ್ಳುವುದಿಲ್ಲ.


ಕಷ್ಟಪಟ್ಟು ಕೆಲಸ ಮಾಡುವವನು ಅಧಿಪತಿಯಾಗುವನು. ಸೋಮಾರಿಯನ್ನು ಗುಲಾಮನನ್ನಾಗಿ ಮಾಡಲಾಗುವುದು.


ಉಚಿತವಾಗಿ ಕೊಡುವವನು ಅದಕ್ಕಿಂತಲೂ ಹೆಚ್ಚುಗಳಿಸುವನು. ಆದರೆ ಕೊಡಲೊಲ್ಲದವನು ಬಡವನಾಗುವನು.


ಈ ಲೋಕದ ಆಹಾರವು ಕೆಟ್ಟುಹೋಗುತ್ತದೆ ಮತ್ತು ಹಾಳಾಗುತ್ತದೆ. ಆದ್ದರಿಂದ ಅಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಬೇಡಿರಿ. ಆದರೆ ಎಂದಿಗೂ ಕೆಟ್ಟುಹೋಗದಂಥ ಮತ್ತು ನಿಮಗೆ ನಿತ್ಯಜೀವವನ್ನು ಕೊಡುವಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಿರಿ. ಮನುಷ್ಯಕುಮಾರನು ಆ ಆಹಾರವನ್ನು ನಿಮಗೆ ಕೊಡುವನು. ತಂದೆಯಾದ ದೇವರು ಆತನ ಮೇಲೆ ತನ್ನ ಅಧಿಕಾರದ ಮುದ್ರೆಯನ್ನು ಒತ್ತಿದ್ದಾನೆ” ಎಂದು ಹೇಳಿದನು.


ಒಬ್ಬನು ಕೆಲಸಮಾಡಲಾರದಷ್ಟು ತುಂಬ ಸೋಮಾರಿಯಾಗಿದ್ದರೆ, ಅವನ ಮನೆಯು ಸೋರಲಾರಂಭಿಸುವುದು; ಅದರ ಮೇಲ್ಛಾವಣಿಗೆಯು ಬೀಳತೊಡಗುವುದು.


ಬುದ್ಧಿವಂತನು ತಕ್ಕಕಾಲದಲ್ಲಿ ಬೆಳೆಯನ್ನು ಕೊಯ್ಯುತ್ತಾನೆ. ಸುಗ್ಗೀಕಾಲದಲ್ಲಿ ತೂಕಡಿಸುವವನು ನಾಚಿಕೆಗೆಟ್ಟವನು.


ಸೋಮಾರಿಯಾದ ಬೇಟೆಗಾರನು ಬೇಟೆಯಾಡುವುದಿಲ್ಲ. ಐಶ್ವರ್ಯವು ಕಷ್ಟಪಟ್ಟು ಕೆಲಸ ಮಾಡುವವನಿಗೆ ಬರುತ್ತದೆ.


ಸೋಮಾರಿಯು ನಾಶಮಾಡುವ ವ್ಯಕ್ತಿಯಂತಿದ್ದಾನೆ.


ಆ ದಿನ, ಇಸಾಕನ ಸೇವಕರು ಬಂದು, ತಾವು ತೋಡಿದ್ದ ಬಾವಿಯ ಬಗ್ಗೆ ಹೇಳುತ್ತಾ, “ಬಾವಿಯಲ್ಲಿ ನಮಗೆ ನೀರಿನ ಸೆಲೆ ಸಿಕ್ಕಿತು” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು