Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 11:10 - ಪರಿಶುದ್ದ ಬೈಬಲ್‌

10 ಸಜ್ಜನರಿಗೆ ಜಯವಾದರೆ ನಗರಕ್ಕೆಲ್ಲ ಸಂತಸ. ಕೆಡುಕರು ನಾಶವಾದರೆ ಜನರು ಜಯಘೋಷ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಸಜ್ಜನರು ಸುಖಿಗಳಾದರೆ ಪಟ್ಟಣಕ್ಕೆ ಉಲ್ಲಾಸ, ದುರ್ಜನರು ಹಾಳಾದರೆ ಜಯಘೋಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸಜ್ಜನರು ಸುಖಿಗಳಾದರೆ ಊರಿಗೆ ಉಲ್ಲಾಸ; ದುರ್ಜನರು ಹಾಳಾದರೆ ಮಾಡುವರು ಜಯಘೋಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಸಜ್ಜನರು ಸುಖಿಗಳಾದರೆ ಪಟ್ಟಣಕ್ಕೆ ಉಲ್ಲಾಸ; ದುರ್ಜನರು ಹಾಳಾದರೆ ಜಯಘೋಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನೀತಿವಂತರು ಅಭಿವೃದ್ಧಿಹೊಂದಿದರೆ, ಪಟ್ಟಣವು ಉಲ್ಲಾಸಿಸುತ್ತದೆ; ದುಷ್ಟರು ನಾಶವಾದರೆ, ಜಯೋತ್ಸವ ಉಂಟಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 11:10
14 ತಿಳಿವುಗಳ ಹೋಲಿಕೆ  

ಒಳ್ಳೆಯವರು ನಾಯಕರಾದಾಗ ಎಲ್ಲರಿಗೂ ಸಂತೋಷ. ಆದರೆ ಕೆಡುಕನು ಅಧಿಪತಿಯಾದಾಗ ಎಲ್ಲರೂ ಅಡಗಿಕೊಳ್ಳುವರು.


“ಯೆಹೋವನೇ, ನಿನ್ನ ವೈರಿಗಳೆಲ್ಲಾ ಹೀಗೇ ಸಾಯಲಿ; ಆದರೆ ನಿನ್ನನ್ನು ಪ್ರೀತಿಸುವವರೆಲ್ಲರೂ ಬಲವಾಗಿದ್ದು ಉದಯಿಸುವ ಸೂರ್ಯನಂತೆ ಬೆಳಗಲಿ!” ನಲವತ್ತು ವರ್ಷಗಳವರೆಗೆ ದೇಶದಲ್ಲಿ ಶಾಂತಿ ನೆಲೆಸಿತ್ತು.


ಕೆಡುಕನು ಅಧಿಕಾರಕ್ಕೆ ಬಂದರೆ, ಜನರೆಲ್ಲರೂ ಅಡಗಿಕೊಳ್ಳುವರು. ಕೆಡುಕನು ಸೋತುಹೋದಾಗ ಒಳ್ಳೆಯವರು ಮತ್ತೆ ಆಳುವರು.


ದುಷ್ಟನು ಓಡಿಹೋಗುತ್ತಿರಲು ಜನರು ಚಪ್ಪಾಳೆ ತಟ್ಟುವರು; ಅವನ ಮನೆಯೊಳಗಿಂದ ಓಡಿಹೋಗುತ್ತಿರಲು ಜನರು ಸೀಟಿ ಹೊಡೆಯುವರು.”


ಮಿರ್ಯಾಮಳು ಅವರ ಹಾಡಿಗೆ ಹೀಗೆ ಪಲ್ಲವಿ ಹಾಡಿದಳು: “ಯೆಹೋವನಿಗೆ ಗಾನಮಾಡಿರಿ; ಆತನು ಮಹಾಜಯಶಾಲಿಯಾದನು. ಕುದುರೆಗಳನ್ನೂ ರಾಹುತರನ್ನೂ ಸಮುದ್ರದೊಳಗೆ ಮುಳುಗಿಸಿ ನಾಶಮಾಡಿದನು…”


ಜನರೆಲ್ಲರೂ ಬಹಳ ಹರ್ಷಗೊಂಡರು. ನಗರದಲ್ಲಿ ಸಮಾಧಾನವಿತ್ತು. ರಾಜನ ಅರಮನೆಯ ಹತ್ತಿರ ರಾಣಿಯಾದ ಅತಲ್ಯಳನ್ನು ಖಡ್ಗದಿಂದ ಕೊಂದಿದ್ದರು.


ಪಟ್ಟಣವು ತನ್ನಲ್ಲಿ ವಾಸವಾಗಿರುವ ಯಥಾರ್ಥವಂತರ ಆಶೀರ್ವಾದದಿಂದ ಏಳಿಗೆ ಹೊಂದುವುದು. ಕೆಡುಕರ ಮಾತುಗಳು ಪಟ್ಟಣವನ್ನು ನಾಶಮಾಡುತ್ತವೆ.


ಅಧಿಪತಿಯು ಒಳ್ಳೆಯವನಾಗಿರುವಾಗ ಜನರೆಲ್ಲರೂ ಸಂತೋಷವಾಗಿರುವರು. ಕೆಡುಕನು ಆಳುವಾಗ ಜನರೆಲ್ಲರೂ ಸಂಕಟಪಡುವರು.


ಅವನು ಮುಂಭಾಗದ ಪ್ರವೇಶ ದ್ವಾರದಲ್ಲಿದ್ದ ರಾಜಸ್ತಂಭದ ಬಳಿ ನಿಂತಿದ್ದನು. ಸೇನಾಧಿಪತಿಗಳೂ ಅವರ ಜನರೂ ತುತ್ತೂರಿಯನ್ನು ಊದಿ ರಾಜನ ಬಳಿಯಲ್ಲಿಯೇ ನಿಂತಿದ್ದರು. ದೇಶದ ಪ್ರಜೆಗಳು ಸಂತೋಷದಿಂದ ತುತ್ತೂರಿಯನ್ನೂದಿದರು. ಗಾಯಕರು ವಾದ್ಯಗಳನ್ನು ಬಾರಿಸುತ್ತಿದ್ದರು. ಅವರು ಜನರನ್ನು ಸ್ತೋತ್ರಗೀತೆಯಲ್ಲಿ ನಡಿಸುತ್ತಿದ್ದರು. ಇದೆಲ್ಲವನ್ನು ಅತಲ್ಯಳು ನೋಡಿ ತನ್ನ ಬಟ್ಟೆಯನ್ನು ಹರಿದು, “ದ್ರೋಹ, ದ್ರೋಹ” ಎಂದು ಕಿರುಚಿದಳು.


ದೇಶದ ಎಲ್ಲಾ ಜನರು ಸಂತೋಷಭರಿತರಾದರು. ಅತಲ್ಯಳನ್ನು ಸಾಯಿಸಿದ್ದರಿಂದ ದೇಶದಲ್ಲಿ ಶಾಂತಿ ನೆಲೆಸಿತು.


ಆಗ ಭೂಮ್ಯಾಕಾಶಗಳು ಮತ್ತು ಅವುಗಳಲ್ಲಿರುವ ಸಮಸ್ತ ವಸ್ತುಗಳು ಬಾಬಿಲೋನಿನ ಬಗ್ಗೆ ಹರ್ಷಧ್ವನಿ ಮಾಡುವವು. ಏಕೆಂದರೆ ಸೈನ್ಯವು ಉತ್ತರದಿಂದ ಬಂದಿತು, ಬಾಬಿಲೋನಿನ ವಿರುದ್ಧ ಯುದ್ಧಮಾಡಿತು” ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು