Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 11:13 - ಪರಿಶುದ್ದ ಬೈಬಲ್‌

13 ಗುಟ್ಟು ರಟ್ಟುಮಾಡುವವನನ್ನು ನಂಬಲಾಗದು. ಆದರೆ ನಂಬಿಗಸ್ತನು ವಿಷಯಗಳನ್ನು ರಹಸ್ಯವಾಗಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಚಾಡಿಕೋರನು ಗುಟ್ಟನ್ನು ರಟ್ಟು ಮಾಡುವನು, ನಂಬಿಗಸ್ತನು ಸಂಗತಿಗಳನ್ನು ಗುಪ್ತವಾಗಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಚಾಡಿಕೋರನು ಗುಟ್ಟನ್ನು ರಟ್ಟುಮಾಡುವನು; ನಂಬಿಕಸ್ತನು ಅದನ್ನು ಮುಚ್ಚಿ ಮರೆಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಚಾಡಿಕೋರನು ಗುಟ್ಟು ರಟ್ಟುಮಾಡುವನು; ನಂಬಿಗಸ್ತನು ಸಂಗತಿಯನ್ನು ಗುಪ್ತಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಚಾಡಿಕೋರನು ರಹಸ್ಯಗಳನ್ನು ಬಹಿರಂಗಪಡಿಸುತ್ತಾನೆ, ಆದರೆ ನಂಬಿಗಸ್ತನು ಆ ಸಂಗತಿಯನ್ನು ಮುಚ್ಚುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 11:13
14 ತಿಳಿವುಗಳ ಹೋಲಿಕೆ  

ಬೇರೆಯವರ ಬಗ್ಗೆ ಸುಳ್ಳುಸುದ್ದಿ ಹಬ್ಬಿಸುವವನನ್ನು ನಂಬಬೇಡ; ಅತಿಯಾಗಿ ಮಾತಾಡುವವನ ಸ್ನೇಹಿತನೂ ಆಗಬೇಡ.


ನೀನು ನಿನ್ನ ನೆರೆಯವನೊಂದಿಗೆ ವಾಗ್ವಾದ ಮಾಡಿದ್ದರೆ, ಗುಟ್ಟಾದ ವಿಷಯಗಳನ್ನು ಬೇರೊಬ್ಬನಿಗೆ ಪ್ರಕಟಿಸಬೇಡ.


ಬೇರೆ ಜನರ ವಿರುದ್ಧ ಚಾಡಿ ಹೇಳಬಾರದು. ನಿಮ್ಮ ನೆರೆಯವನ ಪ್ರಾಣವನ್ನು ಅಪಾಯಕ್ಕೆ ಈಡುಮಾಡುವ ಯಾವ ಕಾರ್ಯವನ್ನೂ ನೀವು ಮಾಡಬಾರದು. ನಾನೇ ಯೆಹೋವನು!


ಇದಲ್ಲದೆ, ಅವರು ಮನೆಮನೆಗೆ ಅಲೆಯುತ್ತಾ ತಮ್ಮ ಕಾಲವನ್ನು ಕಳೆಯಲಾರಂಭಿಸುತ್ತಾರೆ; ಹರಟೆ ಮಾತುಗಳನ್ನಾಡುತ್ತಾ ಇತರರ ಜೀವನದಲ್ಲಿ ತಲೆಹಾಕಿ ಕಾಲಹರಣ ಮಾಡುತ್ತಾರೆ; ಹೇಳಬಾರದ ಸಂಗತಿಗಳನ್ನೆಲ್ಲ ಹೇಳುತ್ತಾರೆ.


ಅದಕ್ಕೆ ಅವರು, “ನಮ್ಮ ಪ್ರಾಣವನ್ನಾದರೂ ಕೊಟ್ಟು ನಿಮ್ಮ ಪ್ರಾಣ ಉಳಿಸುತ್ತೇವೆ. ಆದರೆ ನೀವು ಇದನ್ನು ಯಾರಿಗೂ ಹೇಳಬೇಡಿ. ಯೆಹೋವನು ಈ ದೇಶವನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ನಿಮಗೆ ದಯೆ ತೋರುತ್ತೇವೆ. ನೀನು ನಮ್ಮನ್ನು ನಂಬಬಹುದು” ಎಂದರು.


ಆ ರಾಜ್ಯಾಧಿಕಾರಿಗಳು ಅವನನ್ನು ಪ್ರಶ್ನಿಸುವದಕ್ಕಾಗಿ ಯೆರೆಮೀಯನಲ್ಲಿಗೆ ಬಂದರು. ರಾಜನು ಆಜ್ಞಾಪಿಸಿದಂತೆ ಯೆರೆಮೀಯನು ಅವರಿಗೆ ಎಲ್ಲವನ್ನು ಹೇಳಿದನು. ಆಗ ಆ ಅಧಿಕಾರಿಗಳು ಯೆರೆಮೀಯನನ್ನು ಬಿಟ್ಟುಹೋದರು. ಯೆರೆಮೀಯನ ಮತ್ತು ರಾಜನ ಸಂಭಾಷಣೆಯನ್ನು ಯಾರೂ ಕೇಳಿರಲಿಲ್ಲ.


ಸತ್ಯಸಾಕ್ಷಿಯು ಸುಳ್ಳು ಹೇಳುವುದಿಲ್ಲ. ಆದರೆ ಸುಳ್ಳು ಸಾಕ್ಷಿಯು ಸುಳ್ಳನ್ನೇ ಹೇಳುವುದು.


ನಾನು ನಿನಗೆ ಈ ಪ್ರಮಾಣವನ್ನು ಮಾಡಿದ್ದೇವೆ. ಆದರೆ ಇದನ್ನು ನೀನು ಯಾರಿಗೂ ಹೇಳಕೂಡದು; ಒಂದುವೇಳೆ ಹೇಳಿದರೆ, ನಾವು ಈ ಪ್ರಮಾಣದಿಂದ ಮುಕ್ತರಾಗುತ್ತೇವೆ” ಎಂದು ಹೇಳಿದರು.


ಬುದ್ಧಿಹೀನನು ಇತರರನ್ನು ಹೀನೈಸುತ್ತಾನೆ. ಆದರೆ ಬುದ್ಧಿವಂತನು ಮೌನವಾಗಿರುತ್ತಾನೆ.


ಜಾಣನು ತನ್ನ ಜ್ಞಾನದ ಬಗ್ಗೆ ಜಂಬಕೊಚ್ಚಿಕೊಳ್ಳುವುದಿಲ್ಲ. ಆದರೆ ಮೂಢನು ದುಡುಕಿ ಮಾತಾಡಿ ತಾನು ಮೂಢನೆಂದು ತೋರಿಸಿಕೊಳ್ಳುತ್ತಾನೆ.


ಜ್ಞಾನಿಗೆ ಅವನ ಜ್ಞಾನವೇ ಸನ್ಮಾನವನ್ನು ತರುತ್ತದೆ. ತನಗೆ ತಪ್ಪು ಮಾಡಿದವರನ್ನು ಕ್ಷಮಿಸುವುದು ಅವನ ಸದ್ಗುಣವಾಗಿದೆ.


ಅತಿಯಾಗಿ ಮಾತಾಡುವವನು ತನ್ನನ್ನೇ ತೊಂದರೆಗೆ ಸಿಕ್ಕಿಸಿಕೊಳ್ಳುತ್ತಾನೆ. ವಿವೇಕಿಯು ಮೌನವಾಗಿರಲು ಕಲಿತುಕೊಳ್ಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು