Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 11:21 - ಪರಿಶುದ್ದ ಬೈಬಲ್‌

21 ದುಷ್ಟರಿಗೆ ದಂಡನೆ ಖಂಡಿತ. ಶಿಷ್ಟರಿಗೆ ಬಿಡುಗಡೆ ನಿಶ್ಚಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ದುಷ್ಟನಿಗೆ ದಂಡನೆ ಖಂಡಿತ, ಶಿಷ್ಟವಂಶಕ್ಕೆ ರಕ್ಷಣೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ದುಷ್ಟನಿಗೆ ದಂಡನೆ ಕಟ್ಟಿಟ್ಟ ಬುತ್ತಿ; ಶಿಷ್ಟ ಸಂತಾನಕ್ಕೆ ಸಿಗುವುದು ಮುಕ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ದುಷ್ಟನಿಗೆ ದಂಡನೆ ಖಂಡಿತ; ಶಿಷ್ಟವಂಶಕ್ಕೆ ರಕ್ಷಣೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ದುಷ್ಟನಿಗೆ ಶಿಕ್ಷೆ ತಪ್ಪುವುದಿಲ್ಲ; ನೀತಿವಂತರ ವಂಶವು ಬಿಡುಗಡೆ ಹೊಂದುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 11:21
15 ತಿಳಿವುಗಳ ಹೋಲಿಕೆ  

ಈ ವಾಗ್ದಾನವನ್ನು ನಿಮಗೂ ನಿಮ್ಮ ಮಕ್ಕಳಿಗೂ ಬಹು ದೂರದಲ್ಲಿರುವ ಜನರಿಗೂ ಕೊಡಲಾಗಿದೆ. ನಮ್ಮ ದೇವರಾದ ಪ್ರಭುವು ತನ್ನ ಬಳಿಗೆ ಕರೆಯುವ ಪ್ರತಿಯೊಬ್ಬರಿಗೂ ಈ ವಾಗ್ದಾನವನ್ನು ಕೊಟ್ಟಿದ್ದಾನೆ” ಎಂದು ಹೇಳಿದನು.


ಒಂದೇ ಜನಾಂಗವಾಗುವ ಬಯಕೆಯನ್ನು ನಾನು ಅವರಲ್ಲಿ ಉಂಟುಮಾಡುವೆನು. ಅವರು ತಮ್ಮ ಜೀವಮಾನವೆಲ್ಲಾ ನನ್ನನ್ನು ಆರಾಧಿಸಬೇಕೆಂಬ ಬಯಕೆಯನ್ನು ಹೊಂದಿರುವರು. ಹೌದು, ಅವರ ಬಯಕೆಯೂ ಅವರ ಮಕ್ಕಳ ಬಯಕೆಯೂ ಇದೇ ಆಗಿರುವುದು.


ಗರ್ವಿಷ್ಠರು ಯೆಹೋವನಿಗೆ ಅಸಹ್ಯ. ಆ ಗರ್ವಿಷ್ಠರಿಗೆ ಯೆಹೋವನ ದಂಡನೆ ಖಂಡಿತ.


ನೀತಿವಂತನು ಬೇರೆಯವರಿಗೆ ಉದಾರವಾಗಿ ಕೊಡುವನು. ಅವನ ಮಕ್ಕಳು ಆಶೀರ್ವಾದ ಹೊಂದುವರು.


ಒಳ್ಳೆಯವನಲ್ಲಿ ತನ್ನ ಮಕ್ಕಳಿಗೂ ಮೊಮ್ಮಕ್ಕಳಿಗೂ ಕೊಡಲು ಐಶ್ವರ್ಯವಿರುವುದು. ಕಟ್ಟಕಡೆಯಲ್ಲಿ, ಕೆಡುಕರು ಹೊಂದಿರುವದೆಲ್ಲಾ ಒಳ್ಳೆಯವರ ಪಾಲಾಗುವುದು.


“ದುಷ್ಕೃತ್ಯವನ್ನು ಮಾಡುವವರು ಬಹಳ ಮಂದಿಯೆಂದು ಅವರ ಜೊತೆಯಲ್ಲಿ ಸೇರಿಕೊಳ್ಳಬೇಡಿ. ಬಹಳ ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳದಿರಿ.


ನಾನು ಕೋಪಗೊಂಡಿಲ್ಲ. ಆದರೆ ಯುದ್ಧ ನಡೆಯುತ್ತಿರುವಾಗ ಯಾರಾದರೂ ಮುಳ್ಳುಬೇಲಿಯನ್ನು ಹಾಕಿದರೆ, ನಾನು ಮುನ್ನುಗ್ಗಿ ಅದನ್ನು ಸುಟ್ಟುಹಾಕುವೆನು.


ಕೆಡುಕರು ಯೆಹೋವನಿಗೆ ಅಸಹ್ಯರು. ಆದರೆ ಸನ್ಮಾರ್ಗಿಗಳು ಆತನ ಮೆಚ್ಚಿಕೆಗೆ ಪಾತ್ರರಾಗಿದ್ದಾರೆ.


ಅವಿವೇಕಳಿಗೆ ಸೌಂದರ್ಯವು ಹಂದಿಯ ಮೂಗಿನಲ್ಲಿರುವ ಸುಂದರವಾದ ಚಿನ್ನದ ಮೂಗುತಿಯಂತಿರುವುದು.


ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಅನೇಕ ಯೆಹೂದಿ ಸ್ತ್ರೀಯರು ಬೇರೆ ದೇವರುಗಳಿಗೆ ನೈವೇದ್ಯಗಳನ್ನು ಅರ್ಪಿಸುತ್ತಿದ್ದರು. ಅವರ ಗಂಡಂದಿರಿಗೆ ಅದು ಗೊತ್ತಿತ್ತು. ಆದರೆ ಅವರು ಅದನ್ನು ತಡೆಯಲಿಲ್ಲ. ಯೆಹೂದದ ಜನರ ಒಂದು ದೊಡ್ಡ ಗುಂಪು ಸೇರಿತ್ತು. ಅವರು ಈಜಿಪ್ಟಿನ ದಕ್ಷಿಣಭಾಗದಲ್ಲಿ ವಾಸಿಸುವ ಯೆಹೂದಿಗಳಾಗಿದ್ದರು. ಅನ್ಯದೇವರುಗಳಿಗೆ ನೈವೇದ್ಯವನ್ನು ಅರ್ಪಿಸುತ್ತಿದ್ದ ಸ್ತ್ರೀಯರ ಗಂಡಂದಿರು ಯೆರೆಮೀಯನಿಗೆ ಹೀಗೆಂದರು:


“ನೀವು ಮೋಸದ ಕಾರ್ಯಕ್ಕೆ ದೂರವಿರಬೇಕು. ನಿರಪರಾಧಿಯೂ ನೀತಿವಂತನೂ ಆಗಿರುವ ವ್ಯಕ್ತಿಗೆ ಮರಣದಂಡನೆ ವಿಧಿಸಕೂಡದು. ಅಂಥ ದುಷ್ಟಕಾರ್ಯ ಮಾಡಿದವನಿಗೆ ನಾನು ದಂಡನೆಯನ್ನು ವಿಧಿಸೇ ವಿಧಿಸುವೆನು.


ಯೋಬನೇ, ಈಗಲಾದರೋ ನೀನು ದೋಷಿಯೆಂದು ನಿರ್ಣಯಿಸಲ್ಪಟ್ಟಿರುವೆ; ದುಷ್ಟನಂತೆ ದಂಡಿಸಲ್ಪಟ್ಟಿರುವೆ.


ಸಜ್ಜನರು ಯೆಹೋವನಿಂದ ಕ್ಷೇಮವಾಗಿರುವರು. ಆದರೆ ದುರ್ಜನರಿಗೆ ಅನೇಕ ತೊಂದರೆಗಳಿರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು