Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 11:28 - ಪರಿಶುದ್ದ ಬೈಬಲ್‌

28 ಐಶ್ವರ್ಯದ ಮೇಲೆ ಭರವಸೆಯಿಟ್ಟಿರುವವನು ಎಲೆಯಂತೆ ಉದುರಿಹೋಗುವನು. ಆದರೆ ಸಧರ್ಮಿಯು ಚಿಗುರಿದ ಎಲೆಯಂತೆ ಬೆಳೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಧನವನ್ನೇ ನಂಬಿದವನು ಬಿದ್ದುಹೋಗುವನು, ಸದ್ಧರ್ಮಿಯು ಕುಡಿಯ ಹಾಗೆ ಚಿಗುರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ದ್ರವ್ಯವನ್ನು ನಂಬಿದವನು ಉದುರಿಹೋಗುವನು; ದೈವಭಕ್ತನು ಕುಡಿಯಂತೆ ಚಿಗುರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಧನವನ್ನೇ ನಂಬಿದವನು ಬಿದ್ದು ಹೋಗುವನು; ಸದ್ಧರ್ಮಿಯು ಕುಡಿಯ ಹಾಗೆ ಚಿಗುರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ತನ್ನ ಐಶ್ವರ್ಯದಲ್ಲಿ ಭರವಸೆ ಇಡುವವನು ಬಿದ್ದುಹೋಗುವನು, ಆದರೆ ನೀತಿವಂತರು ಹಸಿರೆಲೆಯ ಹಾಗೆ ಚಿಗುರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 11:28
13 ತಿಳಿವುಗಳ ಹೋಲಿಕೆ  

ಇಹಲೋಕದ ವಿಷಯಗಳಲ್ಲಿ ಶ್ರೀಮಂತರಾಗಿರುವ ಜನರಿಗೆ ಈ ಆಜ್ಞೆಗಳನ್ನು ತಿಳಿಸು. ಗರ್ವಪಡದಂತೆಯೂ ಹಣವನ್ನು ಅವಲಂಬಿಸಿಕೊಳ್ಳದೆ ದೇವರಲ್ಲೇ ನಿರೀಕ್ಷೆಯಿಡುವಂತೆಯೂ ಅವರಿಗೆ ತಿಳಿಸು. ಹಣವು ಭರವಸೆಗೆ ಯೋಗ್ಯವಲ್ಲ. ದೇವರಾದರೋ ನಮ್ಮ ಸಂತೋಷಕ್ಕಾಗಿ ಸಮಸ್ತವನ್ನು ನಮಗೆ ಧಾರಾಳವಾಗಿ ದಯಪಾಲಿಸುತ್ತಾನೆ.


ಆ ಮನುಷ್ಯನು ನೀರಿನ ಸಮೀಪದಲ್ಲಿ ನೆಟ್ಟಿರುವ, ಆಳವಾಗಿ ಬೇರೂರಿ ನೀರಿನ ಸೆಲೆಗಳನ್ನು ತಲುಪಿರುವ, ಉಷ್ಣಕ್ಕೆ ಹೆದರದ, ಯಾವಾಗಲೂ ಹಸಿರೆಲೆಗಳಿಂದ ಸೊಂಪಾದ, ಮಳೆ ಬೀಳದ ವರ್ಷದಲ್ಲಿಯೂ ಚಿಂತಿಸದ, ಯಾವಾಗಲೂ ಫಲಭರಿತವಾಗಿರುವ ಮರದಂತೆ ಇರುವನು.


ಅವನು ನೀರಿನ ಕಾಲುವೆಗಳ ಬಳಿಯಲ್ಲಿ ಹುಲುಸಾಗಿ ಬೆಳೆದಿರುವ ಮರದಂತಿರುವನು. ಆ ಮರವು ತಕ್ಕಕಾಲದಲ್ಲಿ ಫಲಿಸುವುದು; ಬಾಡದ ಎಲೆಗಳಿಂದ ಯಾವಾಗಲೂ ತುಂಬಿರುವುದು; ಅಂತೆಯೇ ಅವನ ಕಾರ್ಯಗಳೆಲ್ಲಾ ಸಫಲವಾಗುವವು.


ಅನ್ಯಾಯದಿಂದ ಸಂಪಾದಿಸಿದ್ದರಲ್ಲಿ ನಂಬಿಕೆ ಇಡಬೇಡಿ. ಕದ್ದವಸ್ತುಗಳಲ್ಲಿ ಜಂಬಪಡಬೇಡಿ. ಐಶ್ವರ್ಯವು ಅಧಿಕವಾಗುತ್ತಿದ್ದರೂ ಅದರಲ್ಲಿ ಮನಸ್ಸಿಡಬೇಡಿ.


“ನಿನ್ನ ಜನರೆಲ್ಲಾ ನೀತಿಯಲ್ಲಿ ಜೀವಿಸುವರು. ಅವರು ಭೂಮಿಗೆ ಶಾಶ್ವತವಾದ ಬಾಧ್ಯಸ್ತರಾಗುವರು. ಆ ಜನರನ್ನು ನಾನೇ ನಿರ್ಮಿಸಿದೆನು. ನಾನು ನನ್ನ ಸ್ವಂತ ಕೈಗಳಿಂದ ನಿರ್ಮಿಸಿದ ಆಶ್ಚರ್ಯಕರವಾದ ಸಸಿಗಳಂತೆ ಅವರಿರುವರು.


ಐಶ್ವರ್ಯವು ಸಾಹುಕಾರನನ್ನು ಕಾಪಾಡುತ್ತದೆ. ಬಡತನವಾದರೋ ಬಡವನನ್ನು ನಾಶಗೊಳಿಸುತ್ತದೆ.


ಅವರು ತಮ್ಮ ಸ್ವಂತ ಬಲದಲ್ಲಿಯೂ ಐಶ್ವರ್ಯದಲ್ಲಿಯೂ ಭರವಸೆಯಿಟ್ಟಿದ್ದಾರೆ; ಅವರು ಬುದ್ಧಿಹೀನರಾಗಿದ್ದಾರೆ.


“ಆದರೆ ದೇವರು ಅವನಿಗೆ, ‘ನೀನು ಬುದ್ಧಿಹೀನ! ಈ ರಾತ್ರಿ ನೀನು ಸಾಯುವೆ! ಈಗ ಹೇಳು, ನೀನು ಕೂಡಿಟ್ಟ ಪದಾರ್ಥಗಳ ಗತಿ ಏನಾಗುವುದು? ಅವು ಯಾರ ಪಾಲಾಗುತ್ತವೆ?’ ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು