Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 12:18 - ಪರಿಶುದ್ದ ಬೈಬಲ್‌

18 ದುಡುಕಿದ ಮಾತು ಖಡ್ಗದಂತೆ ನೋವು ಮಾಡುತ್ತದೆ; ಜ್ಞಾನಿಯ ಮಾತು ಗುಣಪಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಕತ್ತಿ ತಿವಿದ ಹಾಗೆ ದುಡುಕಿ ಮಾತನಾಡುವವರುಂಟು, ಜ್ಞಾನವಂತರ ಮಾತು ಸ್ವಸ್ಥತೆಯನ್ನು ತರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಕತ್ತಿ ಇರಿತದಂತೆ ದುಡುಕನ ಮಾತು; ಹುಣ್ಣಿಗೆ ಮದ್ದುಹಾಕಿದಂತೆ ಜ್ಞಾನಿಗಳ ಮಾತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಕತ್ತಿ ತಿವಿದ ಹಾಗೆ ದುಡುಕಿ ಮಾತಾಡುವವರುಂಟು; ಮತಿವಂತರ ಮಾತೇ ಮದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅಜಾಗರೂಕತೆಯ ಮಾತುಗಳು ಖಡ್ಗಗಳಂತೆ ಚುಚ್ಚುತ್ತವೆ, ಆದರೆ ಜ್ಞಾನವಂತರ ನಾಲಿಗೆಯು ಸ್ವಸ್ಥತೆಯನ್ನು ತರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 12:18
17 ತಿಳಿವುಗಳ ಹೋಲಿಕೆ  

ಸವಿನುಡಿಗಳು ಜೇನಿನಂತಿವೆ. ಅವು ಸ್ವೀಕಾರಕ್ಕೆ ಸುಲಭ; ಆರೋಗ್ಯಕ್ಕೆ ಉಪಯುಕ್ತ.


ಹಿತನುಡಿಗಳು ಜೀವವುಳ್ಳ ಮರದಂತಿವೆ. ಸುಳ್ಳು ಮಾತುಗಳು ಮನುಷ್ಯನ ಆತ್ಮವನ್ನು ಜಜ್ಜಿಹಾಕುತ್ತವೆ.


ನನ್ನ ಪ್ರಾಣವು ಅಪಾಯದಲ್ಲಿದೆ. ನನ್ನ ಶತ್ರುಗಳು ನನ್ನನ್ನು ಮುತ್ತಿಕೊಂಡಿದ್ದಾರೆ. ಅವರು ಸಿಂಹಗಳಂತಿದ್ದಾರೆ. ಅವರ ಹಲ್ಲುಗಳು ಬಾಣಗಳಂತಿವೆ; ಅವರ ನಾಲಿಗೆಗಳು ಹರಿತವಾದ ಖಡ್ಗಗಳಂತಿವೆ.


ಮೋಸಗಾರನೇ, ನಿನ್ನ ನಾಲಗೆಯು ಹರಿತವಾದ ಕ್ಷೌರ ಕತ್ತಿಯಂತಿದ್ದು ನಾಶನದ ಸಂಚುಗಳನ್ನೇ ಮಾಡುವುದು.


“ಜ್ಞಾನಿಗಳಾದ ಯೆಹೂದ್ಯರು ಏನು ನಡೆದಿದೆ ಎಂಬುದನ್ನು ತಿಳಿದುಕೊಳ್ಳಲು ಜನರಿಗೆ ಸಹಾಯ ಮಾಡುವರು. ಜ್ಞಾನಿಗಳಾದವರು ಸಹ ಅನೇಕ ಹಿಂಸೆಗಳಿಗೆ ತುತ್ತಾಗುವರು. ಕೆಲವು ಜನ ಜ್ಞಾನಿಗಳು ಕತ್ತಿಯಿಂದ ಕೊಲ್ಲಲ್ಪಡುವರು, ಕೆಲವರನ್ನು ಬೆಂಕಿಯಲ್ಲಿ ಹಾಕಲಾಗುವದು ಅಥವಾ ಬಂಧಿಸಲಾಗುವುದು. ಕೆಲವು ಯೆಹೂದ್ಯರ ಮನೆಯನ್ನು, ಆಸ್ತಿಪಾಸ್ತಿಯನ್ನು ಕಿತ್ತುಕೊಳ್ಳಲಾಗುವದು.


ನೆರೆಯವನ ವಿರುದ್ಧ ಸುಳ್ಳುಸಾಕ್ಷಿ ಹೇಳುವವನು ಅಪಾಯಕಾರಿ. ಅವನು ದೊಣ್ಣೆಯಂತೆಯೂ ಕತ್ತಿಯಂತೆಯೂ ಚೂಪಾದ ಬಾಣದಂತೆಯೂ ಇದ್ದಾನೆ.


ಜ್ಞಾನಿಯ ಮಾತುಗಳು ತಿಳುವಳಿಕೆಯನ್ನು ಹರಡುತ್ತವೆ. ಮೂಢರ ಮಾತುಗಳು ಕೇಳಲು ಯೋಗ್ಯವಲ್ಲ.


ಅಪನಂಬಿಗಸ್ತನಾದ ರಾಯಭಾರಿಯ ಸುತ್ತಲೂ ಕೇಡುಗಳಿವೆ. ನಂಬಿಗಸ್ತನಾದ ರಾಯಭಾರಿಗೆ ಸಮಾಧಾನವಿರುವುದು.


ನನ್ನ ಉಪದೇಶಕ್ಕೆ ಕಿವಿಗೊಡುವವರು ಜೀವವನ್ನು ಹೊಂದಿಕೊಳ್ಳುವರು. ನನ್ನ ಮಾತುಗಳು ದೇಹಕ್ಕೆ ಒಳ್ಳೆಯ ಆರೋಗ್ಯವನ್ನು ನೀಡುತ್ತವೆ.


ಅವರು ನನ್ನ ಬಗ್ಗೆ ಕಡುಸುಳ್ಳುಗಳನ್ನು ಹೇಳಿದ್ದಾರೆ. ಅವರ ನಾಲಿಗೆಗಳು ಹರಿತವಾದ ಖಡ್ಗಗಳಂತಿವೆ. ಅವರ ಮಾತುಗಳು ವಿಷಬಾಣಗಳಂತಿವೆ.


ನಗರದ ಬೀದಿಯ ಮಧ್ಯಭಾಗದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲಿಯೂ ಜೀವವೃಕ್ಷಗಳಿದ್ದ್ದವು. ಆ ಜೀವವೃಕ್ಷವು ಪ್ರತಿತಿಂಗಳು ಫಲವನ್ನು ಫಲಿಸುತ್ತಾ ವರ್ಷದಲ್ಲಿ ಹನ್ನೆರಡು ತರದ ಫಲಗಳನ್ನು ನೀಡುತ್ತದೆ. ಆ ವೃಕ್ಷದ ಎಲೆಗಳು ಜನಾಂಗದವರನ್ನು ಗುಣಪಡಿಸುತ್ತವೆ.


ಆತನು ತನ್ನ ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದುಕೊಂಡಿದ್ದನು. ಆತನ ಬಾಯೊಳಗಿನಿಂದ ಹರಿತವಾದ ಇಬ್ಬಾಯಿಖಡ್ಗವು ಹೊರಬರುತ್ತಿತ್ತು. ಆತನ ಮುಖವು ಮಧ್ಯಾಹ್ನದಲ್ಲಿ ಪ್ರಕಾಶಿಸುವ ಸೂರ್ಯನಂತಿತ್ತು.


ತಮ್ಮ ನಾಲಿಗೆಗಳೇ ಆಯುಧಗಳೆಂಬಂತೆ ಅಪಮಾನಕರವಾದ ನುಡಿಗಳನ್ನು ಬೊಗಳುತ್ತಾರೆ. ಯಾರು ಕೇಳಿಸಿಕೊಂಡರೂ ಅವರಿಗೆ ಚಿಂತೆಯಿಲ್ಲ.


ಸತ್ಯಸಾಕ್ಷಿಯು ನ್ಯಾಯವನ್ನು ಪ್ರತಿಪಾದಿಸುವನು. ಆದರೆ ಸುಳ್ಳುಸಾಕ್ಷಿಯು ಅನ್ಯಾಯವನ್ನು ಪ್ರಕಟಿಸುವನು.


ದೇವರೇ, ಪರಲೋಕದಲ್ಲಿ ನಿನ್ನ ಪ್ರಭಾವವು ಮೆರೆಯಲಿ. ನಿನ್ನ ಮಹಿಮೆಯು ಭೂಮಂಡಲವನ್ನೆಲ್ಲಾ ಆವರಿಸಿಕೊಳ್ಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು