Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 12:25 - ಪರಿಶುದ್ದ ಬೈಬಲ್‌

25 ಚಿಂತೆಯು ಮನುಷ್ಯನ ಸಂತೋಷವನ್ನು ತೆಗೆದುಹಾಕುತ್ತದೆ; ಕನಿಕರದ ಮಾತು ಮನುಷ್ಯನನ್ನು ಸಂತೋಷಗೊಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಕಳವಳವು ಮನಸ್ಸನ್ನು ಕುಗ್ಗಿಸುವುದು, ಕನಿಕರದ ಮಾತು ಅದನ್ನು ಹಿಗ್ಗಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಚಿಂತೆ ಮನಸ್ಸನ್ನು ಕುಗ್ಗಿಸುತ್ತದೆ; ಸವಿಮಾತು ಅದನ್ನು ಹಿಗ್ಗಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಕಳವಳವು ಮನಸ್ಸನ್ನು ಕುಗ್ಗಿಸುವದು; ಕನಿಕರದ ಮಾತು ಅದನ್ನು ಹಿಗ್ಗಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆತಂಕವು ಹೃದಯವನ್ನು ಕುಗ್ಗಿಸುವುದು, ಆದರೆ ಕನಿಕರದ ಮಾತು ಹುರಿದುಂಬಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 12:25
19 ತಿಳಿವುಗಳ ಹೋಲಿಕೆ  

ಸವಿನುಡಿಗಳು ಜೇನಿನಂತಿವೆ. ಅವು ಸ್ವೀಕಾರಕ್ಕೆ ಸುಲಭ; ಆರೋಗ್ಯಕ್ಕೆ ಉಪಯುಕ್ತ.


ಸಂತೋಷವಾಗಿರುವವನ ಮುಖದಲ್ಲಿ ಆನಂದ ಎದ್ದುಕಾಣುವುದು. ದುಃಖಗೊಂಡಿರುವವನ ಆತ್ಮದಲ್ಲಿ ವ್ಯಥೆ ಎದ್ದುಕಾಣುವುದು.


ಸಂತೋಷವು ಒಳ್ಳೆಯ ಔಷಧಿಯಂತಿದೆ. ಆದರೆ ದುಃಖವು ಕಾಯಿಲೆಯಂತಿದೆ.


ನನ್ನ ಒಡೆಯನಾದ ಯೆಹೋವನು ನನಗೆ ಬೋಧಿಸುವ ಸಾಮರ್ಥ್ಯವನ್ನು ಅನುಗ್ರಹಿಸಿದ್ದಾನೆ. ಈಗ ನಾನು ದುಃಖದಲ್ಲಿರುವ ಈ ಜನರಿಗೆ ಬೋಧಿಸುತ್ತಿದ್ದೇನೆ. ಪ್ರತೀ ಮುಂಜಾನೆ ವಿದ್ಯಾರ್ಥಿಯೋ ಎಂಬಂತೆ ಆತನು ನನ್ನನ್ನು ಎಬ್ಬಿಸಿ ನನಗೆ ಬೋಧಿಸುತ್ತಾನೆ.


ಸಮರ್ಪಕವಾದ ಉತ್ತರ ಸಂತೋಷವನ್ನು ಉಂಟುಮಾಡುವುದು; ತಕ್ಕ ಸಮಯದಲ್ಲಿ ಸಮಯೋಚಿತವಾದ ಮಾತು ಅತ್ಯುತ್ತಮ.


ಆಗ ನನ್ನೊಡನೆ ಮಾತಾಡುತ್ತಿದ್ದ ದೇವದೂತನಿಗೆ ಯೆಹೋವನು ಉತ್ತರಿಸಿ ಅವನನ್ನು ಒಳ್ಳೆಯ ಆದರಣೆಯ ಮಾತುಗಳಿಂದ ಸಂತೈಸಿದನು.


ದುಡುಕಿದ ಮಾತು ಖಡ್ಗದಂತೆ ನೋವು ಮಾಡುತ್ತದೆ; ಜ್ಞಾನಿಯ ಮಾತು ಗುಣಪಡಿಸುತ್ತದೆ.


ಪರಿಮಳತೈಲ ಮತ್ತು ಧೂಪ ನಿನ್ನನ್ನು ಸಂತೋಷಗೊಳಿಸುತ್ತವೆ; ಆದರೆ ಸ್ನೇಹಿತನ ಮಧುರವಾದ ಉಪದೇಶದಿಂದ ಸ್ವಂತ ನಿರ್ಧಾರಕ್ಕಿಂತಲೂ ಹೆಚ್ಚು ಆನಂದವಾಗುವುದು.


ನನ್ನ ಆತ್ಮವೇ, ನೀನು ವ್ಯಸನದಿಂದಿರುವುದೇಕೆ? ಗಲಿಬಿಲಿಗೊಂಡಿರುವುದೇಕೆ? ದೇವರನ್ನು ನಿರೀಕ್ಷಿಸು; ನನ್ನ ರಕ್ಷಕನೂ ದೇವರೂ ಆಗಿರುವ ಆತನನ್ನು ಸ್ತುತಿಸುತ್ತಲೇ ಇರುವೆನು.


ಅಸ್ವಸ್ಥನನ್ನು ಅವನ ಮನಸ್ಸು ಜೀವಂತವಾಗಿಡಬಲ್ಲದು. ಆದರೆ ಮುರಿದ ಆತ್ಮವನ್ನು ಯಾರು ಸಹಿಸಿಕೊಳ್ಳಬಲ್ಲರು?


ನೀನು ಸರಿಸಮಯದಲ್ಲಿ ಒಳ್ಳೆಯದನ್ನು ಹೇಳಿದರೆ, ಅದು ಬೆಳ್ಳಿಯ ತಟ್ಟೆಯಲ್ಲಿರುವ ಚಿನ್ನದ ಸೇಬಿನಂತಿರುವುದು.


ನಾನು ಬಾಗಿ ಕುಗ್ಗಿಹೋಗಿದ್ದೇನೆ. ನಾನು ದಿನವೆಲ್ಲಾ ನಿರುತ್ಸಾಹನಾಗಿದ್ದೇನೆ.


ಬಡಜನರ ದಿನಗಳೆಲ್ಲಾ ದುಃಖಕರ. ಸಂತೋಷದ ಹೃದಯದಲ್ಲಿ ಸದಾ ಔತಣ.


ಅವನವನ ವ್ಯಥೆಯು ಅವನವನಿಗೆ ಮಾತ್ರ ತಿಳಿದಿದೆ. ಹಾಗೆಯೇ ಅವನವನ ಸಂತೋಷವು ಅವನವನಿಗೆ ಮಾತ್ರ ತಿಳಿದಿರುತ್ತದೆ.


ಸನ್ಮಾರ್ಗಿಯು ತನ್ನ ನೆರೆಯವನಿಗೆ ಒಳ್ಳೆಯ ಮಾರ್ಗವನ್ನು ತೋರಿಸುತ್ತಾನೆ; ದುರ್ಮಾರ್ಗಿಯು ಬೇರೆಯವರನ್ನು ದಾರಿ ತಪ್ಪಿಸುವನು.


ನಗುಮುಖವು ಜನರನ್ನು ಸಂತೋಷಗೊಳಿಸುವುದು; ಒಳ್ಳೆಯ ಸುದ್ದಿಯಿಂದ ಜನರ ಆರೋಗ್ಯ ಹೆಚ್ಚುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು