Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 13:13 - ಪರಿಶುದ್ದ ಬೈಬಲ್‌

13 ಬುದ್ಧಿಮಾತನ್ನು ಕೇಳದವನು ತನಗೆ ತೊಂದರೆಯನ್ನು ಬರಮಾಡಿಕೊಳ್ಳುವನು. ಬುದ್ಧಿವಾದವನ್ನು ಗೌರವಿಸುವವನು ಪ್ರತಿಫಲವನ್ನು ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ದೇವರ ವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು, ಆಜ್ಞೆಯನ್ನು ಭಯಭಕ್ತಿಯಿಂದ ಕೈಕೊಳ್ಳುವವನು ಸಫಲವನ್ನು ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ದೇವವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು; ಆಜ್ಞೆಯನ್ನು ನಿಷ್ಠೆಯಿಂದ ಪಾಲಿಸುವವನು ಫಲಪಡೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 [ದೇವರ] ವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು; ಆಜ್ಞೆಯನ್ನು ಭಯಭಕ್ತಿಯಿಂದ ಕೈಕೊಳ್ಳುವವನು ಸುಫಲವನ್ನು ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ದೇವರ ವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು; ಆಜ್ಞೆಗೆ ಭಯಪಡುವವನು ಪ್ರತಿಫಲ ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 13:13
26 ತಿಳಿವುಗಳ ಹೋಲಿಕೆ  

ಆ ಮನುಷ್ಯನು ಯೆಹೋವನ ಮಾತನ್ನು ತಾತ್ಸಾರಮಾಡಿ ಆತನ ಆಜ್ಞೆಯನ್ನು ಮೀರಿದ್ದರಿಂದ ಕುಲದಿಂದ ತೆಗೆದುಹಾಕಲ್ಪಡಲೇಬೇಕು. ಅವನು ತನ್ನ ಪಾಪದ ಫಲವನ್ನು ಅನುಭವಿಸಲಿ.”


ನೀವು ಎಚ್ಚರವಾಗಿರಿ! ನೀವು ದುಡಿದು ಸಂಪಾದಿಸಿದ್ದನ್ನು ಕಳೆದುಕೊಳ್ಳಬೇಡಿ. ನೀವು ಎಚ್ಚರಿಕೆಯಿಂದ ಇರುವುದಾದರೆ, ನಿಮಗೆ ಬರಬೇಕಾದ ಪೂರ್ಣಫಲವನ್ನು ಹೊಂದಿಕೊಳ್ಳುವಿರಿ.


ಆದರೆ ಆತನ ಜನರು ಪ್ರವಾದಿಗಳನ್ನು ಹಾಸ್ಯಮಾಡಿದರು; ಅವರ ಮಾತುಗಳನ್ನು ಕೇಳಲು ನಿರಾಕರಿಸಿದರು; ದೇವರ ಸಂದೇಶವನ್ನು ದ್ವೇಷಿಸಿದರು. ಆಗ ದೇವರ ಕೋಪವು ಅವರ ಮೇಲೆ ಉರಿಯತೊಡಗಿತು. ಅದನ್ನು ನಿಲ್ಲಿಸಲು ಯಾರಿಗೂ ಸಾಧ್ಯವಾಗಲಿಲ್ಲ.


ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುವವರಿಗೆ ಸಂಪೂರ್ಣ ಸಮಾಧಾನವಿರುವುದು. ಅವರನ್ನು ಯಾವುದೂ ಬೀಳಿಸಲಾರದು.


“‘ಆದರೆ ಇಸ್ರೇಲ್ ಜನರು ಅಡವಿಯಲ್ಲಿರುವಾಗ ನನಗೆ ವಿರುದ್ಧವಾಗಿ ತಿರುಗಿಬಿದ್ದರು. ನನ್ನ ಆಜ್ಞೆಗಳನ್ನು ಅವರು ಅನುಸರಿಸಲಿಲ್ಲ. ನನ್ನ ನಿಯಮಗಳಿಗೆ ವಿಧೇಯರಾಗಲು ನಿರಾಕರಿಸಿದರು. ಆ ಆಜ್ಞೆಗಳೆಲ್ಲಾ ನ್ಯಾಯವಾದವುಗಳೇ. ಒಬ್ಬನು ಆ ಆಜ್ಞೆಗಳಿಗೆ ವಿಧೇಯನಾದರೆ ಅವನು ಬಾಳುವನು. ನಾನು ನೇಮಿಸಿದ ಸಬ್ಬತ್ ದಿವಸಗಳನ್ನು ವಿಶೇಷವಾಗಿ ಅಲಕ್ಷ್ಯ ಮಾಡಿದರು. ಆ ದಿವಸಗಳಲ್ಲಿ ಅವರು ಎಷ್ಟೋ ಸಾರಿ ಕೆಲಸ ಮಾಡಿದರು. ನನ್ನ ರೌದ್ರದ ತೀವ್ರತೆಯನ್ನು ಅವರು ಅರಿತುಕೊಳ್ಳಲೆಂದು ನಾನು ಅವರನ್ನು ಅಡವಿಯಲ್ಲಿ ದಂಡಿಸಿ ನಾಶಮಾಡಲು ಆಲೋಚಿಸಿಕೊಂಡೆನು.


ಆತನ ಉಪದೇಶಗಳು ಆತನ ಸೇವಕನನ್ನು ಎಚ್ಚರಿಸುತ್ತವೆ; ಅವುಗಳನ್ನು ಕೈಕೊಂಡು ನಡೆದರೆ ಒಳ್ಳೆಯದಾಗುವುದು.


“‘ಇಸ್ರೇಲ್ ಜನರು ನನ್ನ ಆಜ್ಞೆಗಳಿಗೆ ವಿಧೇಯರಾಗಲು ನಿರಾಕರಿಸಿದರು. ನನ್ನ ಕಟ್ಟಳೆಗಳನ್ನು ಅವರು ಅನುಸರಿಸಲಿಲ್ಲ. ನಾನು ನೇಮಿಸಿದ ಸಬ್ಬತ್ ದಿವಸಗಳನ್ನು ಆಚರಿಸಲಿಲ್ಲ. ಅವರ ಮನಸ್ಸು ಆ ಹೊಲಸು ದೇವರುಗಳ ಮೇಲೆ ನೆಟ್ಟಿದ್ದರಿಂದ ಅವರು ಹಾಗೆಲ್ಲಾ ಮಾಡಿದರು.


“‘ಇಸ್ರೇಲ್ ಜನರು ನನ್ನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. ನನ್ನ ಕಟ್ಟಳೆಗಳಿಗೆ ವಿಧೇಯರಾಗಲು ನಿರಾಕರಿಸಿದರು. ನಾನು ನೇಮಿಸಿದ ಸಬ್ಬತ್ ದಿವಸಗಳನ್ನು ಅಲಕ್ಷ್ಯಮಾಡಿದರು. ಮತ್ತು ಅವರ ಪೂರ್ವಿಕರ ಹೊಲಸು ವಿಗ್ರಹಗಳನ್ನು ಪೂಜಿಸಿದರು.


ನಾನೇ ಎಲ್ಲವನ್ನು ಉಂಟುಮಾಡಿದೆನು. ನಾನು ಸೃಷ್ಟಿಸಿದ್ದರಿಂದ ಅವು ಅಸ್ತಿತ್ವದಲ್ಲಿವೆ.” ಇವು ಯೆಹೋವನ ನುಡಿಗಳು. “ಎಂಥ ಜನರನ್ನು ನಾನು ಪರಿಪಾಲಿಸುತ್ತೇನೆಂದು ಕೇಳುವಿರಾ? ಬಡವರ ವಿಷಯದಲ್ಲಿ ನಾನು ಚಿಂತಿಸುತ್ತೇನೆ. ದುಃಖಿಸುವ ಜನರಿಗಾಗಿ ನಾನು ಚಿಂತಿಸುತ್ತೇನೆ. ನನ್ನ ಮಾತುಗಳಿಗೆ ವಿಧೇಯರಾಗುವವರಿಗಾಗಿ ನಾನು ಚಿಂತಿಸುತ್ತೇನೆ.


ಪಾಪಿಗಳು ಹೋದಲ್ಲೆಲ್ಲಾ ಕೇಡು ಅವರನ್ನು ಹಿಂಬಾಲಿಸುವುದು. ಸಜ್ಜನರಿಗಾದರೋ ಒಳ್ಳೆಯದೇ ಆಗುತ್ತದೆ.


ನೀವು ನನಗೆ ಮುಖ ತಿರುವಿಕೊಂಡಿರಿ; ನನ್ನ ಸಲಹೆಗಳನ್ನೆಲ್ಲ ಕಡೆಗಣಿಸಿದಿರಿ; ನನ್ನ ತಿದ್ದುಪಾಟನ್ನು ತಿರಸ್ಕರಿಸಿದಿರಿ.


ಆತನು ದೊಡ್ಡವರೂ ಚಿಕ್ಕವರೂ ಎಂದೆನ್ನದೆ ತನ್ನ ಭಕ್ತರನ್ನೆಲ್ಲಾ ಆಶೀರ್ವದಿಸುವನು.


“ಅದಕ್ಕೆ ಅಬ್ರಹಾಮನು ಅವನಿಗೆ, ‘ಇಲ್ಲ! ನಿನ್ನ ಸಹೋದರರು ಮೋಶೆಯ ಮತ್ತು ಪ್ರವಾದಿಗಳ ನುಡಿಗಳನ್ನು ಕೇಳುವುದಿಲ್ಲವಾದರೆ, ಸತ್ತವರೊಳಗಿಂದ ಜೀವಿತನಾಗಿ ಎದ್ದುಬಂದವನ ಮಾತನ್ನೂ ಅವರು ಕೇಳುವುದಿಲ್ಲ’” ಎಂದು ಹೇಳಿದನು.


ದೇವರನ್ನು ಅನುಸರಿಸುವ ಭಕ್ತರು ಒಬ್ಬರಿಗೊಬ್ಬರು ಮಾತನಾಡಿಕೊಳ್ಳಲು ಯೆಹೋವನು ಆಲೈಸಿದನು. ಆತನ ಮುಂದೆ ದೇವಜನರ ಹೆಸರುಗಳನ್ನು ಬರೆದಿರುವ ಒಂದು ಪುಸ್ತಕವಿತ್ತು. ಯೆಹೋವನ ಹೆಸರನ್ನು ಘನಪಡಿಸುವವರ ಹೆಸರುಗಳು ಅದರಲ್ಲಿದ್ದವು.


ಸಂತೋಷಪಡಿರಿ, ಆನಂದಿಸಿರಿ. ಪರಲೋಕದಲ್ಲಿ ನಿಮಗಾಗಿ ಕಾದಿರುವ ಹೆಚ್ಚಿನ ಪ್ರತಿಫಲವನ್ನು ನೀವು ಹೊಂದುವಿರಿ. ನಿಮಗಿಂತ ಮುಂಚೆ ಜೀವಿಸಿದ್ದ ಪ್ರವಾದಿಗಳಿಗೂ ಜನರು ಹೀಗೆಯೇ ಮಾಡಿದರು.


ಹೋಷಾಯನ ಮಗನಾದ ಅಜರ್ಯನೂ ಕಾರೇಹನ ಮಗನಾದ ಯೋಹಾನಾನನೂ ಮತ್ತು ಇನ್ನೂ ಕೆಲವರು ದುರಹಂಕಾರಿಗಳಾಗಿದ್ದರು ಮತ್ತು ಹಟಮಾರಿಗಳಾಗಿದ್ದರು. ಈ ಜನರು ಯೆರೆಮೀಯನ ಮೇಲೆ ಕೋಪಗೊಂಡು, “ಯೆರೆಮೀಯನೇ, ನೀನು ಸುಳ್ಳು ಹೇಳುತ್ತಿರುವೆ. ನಮ್ಮ ದೇವರಾದ ಯೆಹೋವನು ನಮಗೆ, ‘ನೀವು ಈಜಿಪ್ಟಿಗೆ ವಾಸಮಾಡಲು ಹೋಗಬಾರದು’ ಎಂದು ಹೇಳುವದಕ್ಕಾಗಿ ನಿನ್ನನ್ನು ಕಳುಹಿಸಿಲ್ಲ.


ಈಗ ನಾವು ದೇವರ ಮುಂದೆ ಅನ್ಯರಾದ ಹೆಂಡತಿಯರನ್ನೂ ಅವರ ಮಕ್ಕಳನ್ನೂ ತೊರೆದುಬಿಡುತ್ತೇವೆಂದು ಒಡಂಬಡಿಕೆ ಮಾಡೋಣ. ಹೀಗೆ ಮಾಡುವುದರಿಂದ ಎಜ್ರನ ಮತ್ತು ದೇವರ ಕಟ್ಟಳೆಗಳನ್ನು ಗೌರವಿಸುವವರ ಸಲಹೆಯನ್ನು ನಾವು ಅನುಸರಿಸುವವರಾಗಿರುತ್ತೇವೆ; ನಾವು ದೇವರ ಕಟ್ಟಳೆಗೆ ವಿಧೇಯರಾಗುತ್ತೇವೆ.


ಫರೋಹನ ಅಧಿಕಾರಿಗಳಲ್ಲಿ ಕೆಲವರು ಯೆಹೋವನ ಸಂದೇಶಕ್ಕೆ ಕಿವಿಗೊಟ್ಟು ತಮ್ಮ ಎಲ್ಲಾ ಪಶುಗಳನ್ನೂ ಗುಲಾಮರನ್ನೂ ಮನೆಯೊಳಗೆ ಸೇರಿಸಿಕೊಂಡರು.


ನಿರೀಕ್ಷೆಯು ನೆರವೇರದಿದ್ದರೆ ಹೃದಯವು ವ್ಯಸನವಾಗಿರುವುದು. ಬಯಸಿದ್ದು ನೆರವೇರಿದರೆ ಆನಂದವು ತುಂಬಿಕೊಳ್ಳುವುದು.


ಆಜ್ಞೆಗಳಿಗೆ ವಿಧೇಯನಾಗುವವನು ತನ್ನ ಪ್ರಾಣವನ್ನು ಸಂರಕ್ಷಿಸಿಕೊಳ್ಳುವನು. ಆದರೆ ತನ್ನ ನಡತೆಯ ಬಗ್ಗೆ ನಿರ್ಲಕ್ಷ್ಯದಿಂದಿರುವವನು ಸಾವಿಗೀಡಾಗುವನು.


ಯೆಹೋವನೇ, ಯಾವನೂ ತನ್ನ ತಪ್ಪುಗಳನ್ನೆಲ್ಲಾ ತಿಳಿದುಕೊಳ್ಳುವುದಿಲ್ಲ. ಆದ್ದರಿಂದ ಗುಪ್ತ ಪಾಪಗಳನ್ನು ಮಾಡಲು ನನ್ನನ್ನು ಬಿಟ್ಟುಬಿಡಬೇಡ.


ಉಪದೇಶವನ್ನು ಗಮನವಿಟ್ಟು ಕೇಳುವವನು ಅದರ ಲಾಭ ಹೊಂದುವನು; ಯೆಹೋವನಲ್ಲಿ ಭರವಸೆ ಇಡುವವನು ಆಶೀರ್ವಾದ ಹೊಂದುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು