Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 13:18 - ಪರಿಶುದ್ದ ಬೈಬಲ್‌

18 ಶಿಕ್ಷೆಯನ್ನು ಕಡೆಗಣಿಸುವವನು ಬಡವನಾಗುವನು; ಅವಮಾನ ಹೊಂದುವನು. ತಿದ್ದುಪಡಿಯನ್ನು ಸ್ವೀಕರಿಸಿಕೊಳ್ಳುವವನು ಗೌರವವನ್ನೂ ಐಶ್ವರ್ಯವನ್ನೂ ಪಡೆದುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಶಿಕ್ಷೆಯನ್ನು ತ್ಯಜಿಸುವವನಿಗೆ ಬಡತನ ಮತ್ತು ಅವಮಾನ, ಗದರಿಕೆಯನ್ನು ಗಮನಿಸುವವನಿಗೆ ಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಶಿಕ್ಷೆಯನ್ನು ಉಪೇಕ್ಷಿಸುವವನಿಗೆ ಕಾದಿದೆ ಬಡತನ ಹಾಗು ಅವಮಾನ; ಗದರಿಕೆಯನ್ನು ಗಮನಿಸುವವ ಹೊಂದುವನು ಸನ್ಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಶಿಕ್ಷೆಯನ್ನು ತ್ಯಜಿಸುವವನಿಗೆ ಬಡತನ ಮತ್ತು ಅವಮಾನ; ಗದರಿಕೆಯನ್ನು ಗಮನಿಸುವವನಿಗೆ ಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಬೋಧನೆಯನ್ನು ಕಡೆಗಣಿಸುವವನಿಗೆ ಬಡತನವೂ, ಅವಮಾನವೂ ಬರುವುವು; ಗದರಿಕೆಯನ್ನು ಗಮನಿಸುವವನು ಸನ್ಮಾನ ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 13:18
15 ತಿಳಿವುಗಳ ಹೋಲಿಕೆ  

ಮೂರ್ಖನು ತಂದೆಯ ಬುದ್ಧಿಮಾತನ್ನು ತಿರಸ್ಕರಿಸುವನು. ಬುದ್ಧಿಮಾತನ್ನು ಸ್ವೀಕರಿಸಿಕೊಳ್ಳುವವನು ಜ್ಞಾನಿಯಾಗುತ್ತಾನೆ.


ಶಿಸ್ತನ್ನು ಇಷ್ಟಪಡುವವನು ಕಲಿಯಲು ಇಷ್ಟಪಡುತ್ತಾನೆ; ತಿದ್ದುಪಡಿಯನ್ನು ದ್ವೇಷಿಸುವವನು ಬುದ್ಧಿಹೀನ.


ಜ್ಞಾನಿಯು ನಿನಗೆ ಕೊಡುವ ಎಚ್ಚರಿಕೆಯು ಚಿನ್ನದ ಉಂಗುರಗಳಿಗಿಂತಲೂ ಬಂಗಾರದ ಆಭರಣಗಳಿಗಿಂತಲೂ ಹೆಚ್ಚು ಬೆಲೆ ಬಾಳುತ್ತದೆ.


ಬುದ್ಧಿಮಾತನ್ನು ಕೇಳದವನು ತನಗೆ ತೊಂದರೆಯನ್ನು ಬರಮಾಡಿಕೊಳ್ಳುವನು. ಬುದ್ಧಿವಾದವನ್ನು ಗೌರವಿಸುವವನು ಪ್ರತಿಫಲವನ್ನು ಹೊಂದುವನು.


ಉದಾರಿಯ ಸ್ನೇಹಿತರಾಗಿರಲು ಅನೇಕರಿಗೆ ಆಸೆ. ದಾನಶೂರನಿಗೆ ಸ್ನೇಹಿತರಾಗಿರಲು ಎಲ್ಲರಿಗೂ ಆಸೆ.


ನೀನು ಜ್ಞಾನಿಗೆ ಉಪದೇಶಿಸಿದರೆ ಅವನು ಮತ್ತಷ್ಟು ಜ್ಞಾನಿಯಾಗುವನು. ನೀನು ನೀತಿವಂತನಿಗೆ ಬೋಧಿಸಿದರೆ, ಅವನು ಮತ್ತಷ್ಟು ತಿಳುವಳಿಕೆಯನ್ನು ಪಡೆದುಕೊಳ್ಳುವನು.


ದೇವರು ಮಾತನಾಡುವಾಗ ಆಲಿಸದೆ ಇರಬೇಡಿ. ಆತನು ಇಸ್ರೇಲರಿಗೆ ಈ ಲೋಕದಲ್ಲಿ ಎಚ್ಚರಿಕೆ ನೀಡಿದಾಗ, ಅವರು ಆತನ ಮಾತನ್ನು ಕೇಳಲಿಲ್ಲ. ಆದರೆ ಅವರು ತಪ್ಪಿಸಿಕೊಳ್ಳಲಾಗಲಿಲ್ಲ. ಈಗ ದೇವರು ಪರಲೋಕದಿಂದ ಮಾತಾಡುತ್ತಿದ್ದಾನೆ. ಆತನ ಮಾತನ್ನು ಆಲಿಸದ ಜನರು ಹೇಗೆ ತಪ್ಪಿಸಿಕೊಳ್ಳಲಾದೀತು?


ನೀತಿವಂತನು ನನ್ನನ್ನು ಸರಿಪಡಿಸಿದರೆ ಅದು ನನಗೇ ಒಳ್ಳೆಯದು. ನಿನ್ನ ಭಕ್ತರು ನನ್ನನ್ನು ಗದರಿಸಿದರೆ ಅದು ನನಗೇ ಒಳ್ಳೆಯದು. ಆದರೆ ಕೆಟ್ಟವರ ಕೆಟ್ಟಕೃತ್ಯಗಳ ವಿರೋಧವಾಗಿ ನಾನು ಯಾವಾಗಲೂ ಪ್ರಾರ್ಥಿಸುತ್ತೇನೆ.


ಒಬ್ಬನು ತಾನು ಅಪೇಕ್ಷಿಸಿದ್ದನ್ನು ಪಡೆದುಕೊಂಡರೆ, ಅದರ ಮೇಲೆ ಅವನಿಗೆ ಬಹಳ ಇಷ್ಟವಿರುವುದು. ಮೂಢರು ಕೇಡಿಗೆ ವಿಮುಖರಾಗಲು ಅಸಹ್ಯಪಡುತ್ತಾರೆ.


ಶಿಷ್ಟನು ತೃಪ್ತಿಯಾಗುವಷ್ಟು ತಿನ್ನುವನು. ಆದರೆ ದುಷ್ಟನು ಹಸಿವೆಯಿಂದಿರುವನು.


ಮೂಢರ ಹೊಗಳಿಕೆಗಿಂತ ಜ್ಞಾನಿಗಳ ಗದರಿಕೆಯೇ ಉತ್ತಮ.


ನಾವು ತಂದುಕೊಂಡ ಅವಮಾನದಲ್ಲಿ ಬಿದ್ದಿರೋಣ. ನಮ್ಮ ನಾಚಿಕೆಯು ಕಂಬಳಿಯು ಹೊದಿಸಿದಂತೆ ನಮ್ಮನ್ನು ಮುಚ್ಚಿಬಿಡಲಿ. ನಾವು ನಮ್ಮ ದೇವರಾದ ಯೆಹೋವನ ವಿಷಯದಲ್ಲಿ ಪಾಪಮಾಡಿದ್ದೇವೆ. ನಾವು ಮತ್ತು ನಮ್ಮ ಪೂರ್ವಿಕರು ಪಾಪಮಾಡಿದ್ದೇವೆ. ನಮ್ಮ ಬಾಲ್ಯದಿಂದ ಇಂದಿನವರೆಗೆ ನಾವು ನಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಪಾಲಿಸಲಿಲ್ಲ’” ಎಂದು ಮೊರೆಯಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು