Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 13:8 - ಪರಿಶುದ್ದ ಬೈಬಲ್‌

8 ಐಶ್ವರ್ಯವಂತರು ತಮ್ಮ ಜೀವವನ್ನು ಕಾಪಾಡಿಕೊಳ್ಳಲು ಈಡುಕೊಡಬೇಕಾಗುವುದು. ಆದರೆ ಬಡವನಿಗೆ ಅಂಥಾ ಯಾವ ಬೆದರಿಕೆಗಳೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಧನವಂತನ ಪ್ರಾಣರಕ್ಷಣೆಗೆ ಅವನ ಧನವೇ ಕ್ರಯ, ಬಡವನಿಗೆ ಯಾವ ಬೆದರಿಕೆಯೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಹಣವಂತನ ಪ್ರಾಣರಕ್ಷಣೆಗೆ ಅವನ ಹಣವೇ ಈಡು; ಬಡವನಿಗೆ ಈಡಿನ ಬೆದರಿಕೆಯೂ ಇರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಧನವಂತನ ಪ್ರಾಣರಕ್ಷಣೆಗೆ ಅವನ ಧನವೇ ಈಡು; ಬಡವನಿಗೆ ಯಾವ ಬೆದರಿಕೆಯೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಐಶ್ವರ್ಯವಂತನ ಪ್ರಾಣದ ವಿಮೋಚನೆಯು ಅವನ ಐಶ್ವರ್ಯದಿಂದಲೇ; ಆದರೆ ಬಡವನು ಬೆದರಿಕೆಗಳಿಗೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 13:8
15 ತಿಳಿವುಗಳ ಹೋಲಿಕೆ  

ಒಬ್ಬನು ಪ್ರಪಂಚವನ್ನೆಲ್ಲಾ ಗಳಿಸಿಕೊಂಡು ತನ್ನ ಆತ್ಮವನ್ನೇ ಕಳೆದುಕೊಂಡರೆ ಅದರಿಂದ ಅವನಿಗೇನು ಪ್ರಯೋಜನ? ಮನುಷ್ಯನು ತನ್ನ ಆತ್ಮವನ್ನು ಕೊಂಡುಕೊಳ್ಳಲು ಏನನ್ನು ತಾನೇ ಕೊಡಬಲ್ಲನು?


ಅದಕ್ಕೆ ಸೈತಾನನು, “ಚರ್ಮಕ್ಕೆ ಚರ್ಮ! ಎಂಬಂತೆ ಮನುಷ್ಯನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೆ ತನ್ನ ಸರ್ವಸ್ವವನ್ನೂ ಕೊಡುವನು.


ನನ್ನ ಪಟ್ಟಣದೊಳಗೆ ಬರೇ ದೀನದರಿದ್ರರೇ ವಾಸಮಾಡುವರು. ಅವರು ಯೆಹೋವನ ಹೆಸರಿನಲ್ಲಿ ಭರವಸೆ ಇಡುವವರಾಗಿರುವರು.


ಆದರೆ ಉಳಿದ ಹತ್ತು ಜನರು ಇಷ್ಮಾಯೇಲನಿಗೆ, “ನಮ್ಮನ್ನು ಕೊಲ್ಲಬೇಡ, ನಮ್ಮಲ್ಲಿ ಗೋಧಿ, ಜವೆಗೋಧಿ, ಎಣ್ಣೆ ಮತ್ತು ಜೇನುತುಪ್ಪ ಇವೆ. ನಾವು ಆ ವಸ್ತುಗಳನ್ನು ಒಂದು ಹೊಲದಲ್ಲಿ ಬಚ್ಚಿಟ್ಟಿದ್ದೇವೆ” ಎಂದು ಹೇಳಿದರು. ಆದ್ದರಿಂದ ಇಷ್ಮಾಯೇಲನು ಆ ಹತ್ತು ಮಂದಿಯನ್ನು ಬಿಟ್ಟುಬಿಟ್ಟನು. ಅವನು ಬೇರೆಯವರೊಂದಿಗೆ ಅವರನ್ನು ಕೊಲ್ಲಲಿಲ್ಲ.


ಆದರೆ ಬಾಬಿಲೋನ್ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾದ ನೆಬೂಜರದಾನನು ಯೆಹೂದದ ಕೆಲ ಬಡಜನರನ್ನು ಅಲ್ಲಿಯೇ ಬಿಟ್ಟನು. ಆ ಜನಗಳಿಗೆ ಯಾವ ಆಸ್ತಿಪಾಸ್ತಿ ಇದ್ದಿರಲಿಲ್ಲ. ಆದ್ದರಿಂದ ಅಂದು ನೆಬೂಜರದಾನನು ಯೆಹೂದದ ಆ ಬಡಜನರಿಗೆ ದ್ರಾಕ್ಷಿತೋಟಗಳನ್ನು ಮತ್ತು ಹೊಲಗಳನ್ನು ಕೊಟ್ಟನು.


ಏನೇ ಕೊಟ್ಟರೂ, ಎಷ್ಟೇ ಹಣ ಕೊಟ್ಟರೂ ಅವನ ಕೋಪವನ್ನು ತಡೆಯಲಾಗುವುದಿಲ್ಲ.


ಸಾಮಾನ್ಯ ಜನರಲ್ಲಿ ತೀರ ಬಡವರಾದ ಜನರನ್ನು ಮಾತ್ರ ನೆಬೂಜರದಾನನು ಅಲ್ಲಿಯೇ ನೆಲೆಸಲು ಬಿಟ್ಟನು. ಆ ಬಡಜನರು ಅಲ್ಲಿಯೇ ನೆಲೆಸಿ, ಬೇಸಾಯಮಾಡಿ ದ್ರಾಕ್ಷಿಯನ್ನು ಬೆಳೆಯಲು ಅವರನ್ನು ಬಿಟ್ಟುಬಿಟ್ಟನು.


ನೆಬೂಕದ್ನೆಚ್ಚರನು ಜೆರುಸಲೇಮಿನ ಜನರನ್ನೆಲ್ಲಾ ಸೆರೆಹಿಡಿದನು. ಅವನು ಎಲ್ಲಾ ನಾಯಕರನ್ನು ಮತ್ತು ಹಣವಂತರನ್ನು ಸೆರೆಹಿಡಿದನು. ಅವನು ಹತ್ತು ಸಾವಿರ ಜನರನ್ನು ಸೆರೆಯಾಳುಗಳನ್ನಾಗಿ ಒಯ್ದನು. ನೆಬೂಕದ್ನೆಚ್ಚರನು ನುರಿತ ತಜ್ಞರನ್ನು ಮತ್ತು ಕಮ್ಮಾರರನ್ನು ಕರೆದೊಯ್ದನು. ಸಾಮಾನ್ಯ ಜನರನ್ನೂ ಕಡುಬಡವರನ್ನೂ ಬಿಟ್ಟು ಉಳಿದ ಯಾರನ್ನೂ ಬಿಡಲಿಲ್ಲ.


ಆದರೆ ಸತ್ತವನ ಕುಟುಂಬದವರು ಅವನಿಂದ ಹಣವನ್ನು ಕೇಳಿದರೆ ಮತ್ತು ಅವನು ಹಣವನ್ನು ಕೊಟ್ಟರೆ, ಅವನು ತನ್ನ ಜೀವವನ್ನು ಬಿಡಿಸಿಕೊಂಡಂತಾಗುವುದು. ಆಗ ಆ ಎತ್ತಿನ ಮಾಲೀಕನನ್ನು ಕೊಲ್ಲಬಾರದು. ಆದರೆ ನ್ಯಾಯಾಧಿಪತಿಗಳು ತೀರ್ಮಾನಿಸುವಷ್ಟು ಹಣವನ್ನು ಅವನು ಕೊಡಬೇಕು.


ಕೆಲವರು ಐಶ್ವರ್ಯವಂತರಂತೆ ನಟಿಸುತ್ತಾರೆ, ಆದರೆ ಅವರಲ್ಲೇನೂ ಇರುವುದಿಲ್ಲ. ಕೆಲವರು ಬಡವರಂತೆ ವರ್ತಿಸುತ್ತಾರೆ. ಆದರೆ ಅವರು ನಿಜವಾಗಿಯೂ ಐಶ್ವರ್ಯವಂತರು.


ಶಿಷ್ಟನು ಪ್ರಕಾಶಮಾನವಾದ ಬೆಳಕಿನಂತಿರುವನು. ದುಷ್ಟನಾದರೋ ನಂದಿಹೋಗುತ್ತಿರುವ ಬೆಳಕಿನಂತಿರುವನು.


ಜ್ಞಾನಿಗಳಿಗೆ ದೊರೆಯುವ ಪ್ರತಿಫಲ ಐಶ್ವರ್ಯ. ಜ್ಞಾನಹೀನರಿಗೆ ದೊರೆಯುವ ಪ್ರತಿಫಲ ಮೂಢತನ.


ಆಹಾರಕ್ಕಿಂತ ಪ್ರಾಣ ಹೆಚ್ಚು ಪ್ರಾಮುಖ್ಯವಾದದ್ದು. ಬಟ್ಟೆಗಿಂತಲೂ ದೇಹ ಹೆಚ್ಚು ಪ್ರಾಮುಖ್ಯವಾದದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು