Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:12 - ಪರಿಶುದ್ದ ಬೈಬಲ್‌

12 ಒಳ್ಳೆಯದೆಂದು ಜನರು ಭಾವಿಸಿಕೊಂಡಿರುವ ಮಾರ್ಗವೊಂದುಂಟು. ಆದರೆ ಅದರ ಅಂತ್ಯ ಮರಣವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮನುಷ್ಯನ ದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು. ಅದು ಕಟ್ಟಕಡೆಗೆ ಮರಣಮಾರ್ಗವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಒಂದು ಮಾರ್ಗ ಒಬ್ಬನಿಗೆ ನೇರವೆಂದು ತೋರಬಹುದು; ಕೊನೆಗೆ ಅದು ಮರಣಕ್ಕೊಯ್ಯುವ ಹಾದಿಯಾಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮನುಷ್ಯದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು. ಅದು ಕಟ್ಟಕಡೆಗೆ ಮರಣಮಾರ್ಗವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಮನುಷ್ಯ ದೃಷ್ಟಿಗೆ ಸರಿ ತೋರುವ ಒಂದು ಮಾರ್ಗವಿದೆ, ಆದರೆ ಅದರ ಅಂತ್ಯವು ಮರಣದ ಮಾರ್ಗಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:12
11 ತಿಳಿವುಗಳ ಹೋಲಿಕೆ  

ಮನುಷ್ಯದೃಷ್ಟಿಗೆ ಸರಳವಾಗಿ ತೋರುವ ಒಂದು ಮಾರ್ಗವಿದೆ; ಆದರೆ ಅದರ ಅಂತ್ಯವು ಮರಣ.


ಮೂಢನು ತನ್ನ ದಾರಿಯನ್ನೇ ಒಳ್ಳೆಯದೆಂದು ಭಾವಿಸಿಕೊಂಡಿರುತ್ತಾನೆ. ಜ್ಞಾನಿಯಾದರೋ ಉಪದೇಶಕ್ಕೆ ಕಿವಿಗೊಡುತ್ತಾನೆ.


ಯಾವನಾದರೂ ತಾನು ಪ್ರಾಮುಖ್ಯನಲ್ಲದಿದ್ದರೂ ತನ್ನನ್ನು ಪ್ರಾಮುಖ್ಯನೆಂದು ಭಾವಿಸಿಕೊಂಡರೆ ಅವನು ತನ್ನನ್ನೇ ಮೋಸಪಡಿಸಿಕೊಳ್ಳುತ್ತಾನೆ. ಒಬ್ಬನು ತನ್ನನ್ನು ಮತ್ತೊಬ್ಬನೊಡನೆ ಹೋಲಿಸಿಕೊಳ್ಳಕೂಡದು.


ನೀವು ದುಷ್ಕೃತ್ಯಗಳನ್ನು ಮಾಡಿದಿರಿ. ಈಗ ನೀವು ಆ ಕಾರ್ಯಗಳ ವಿಷಯದಲ್ಲಿ ನಾಚಿಕೆಪಡುತ್ತೀರಿ. ಆ ಕಾರ್ಯಗಳು ನಿಮಗೆ ಸಹಾಯ ಮಾಡಿದವೇ? ಇಲ್ಲ. ಆ ಕಾರ್ಯಗಳು ಆತ್ಮಿಕ ಮರಣವನ್ನು ಮಾತ್ರ ಉಂಟುಮಾಡುತ್ತವೆ.


“ಸ್ವರ್ಗಕ್ಕೆ ನಡೆಸುವ ಕಿರಿದಾದ ಬಾಗಿಲಿನ ಮೂಲಕ ಹೋಗಲು ಪ್ರಯಾಸಪಡಿರಿ! ಅನೇಕ ಜನರು ಅದರ ಮೂಲಕ ಹೋಗಲು ಪ್ರಯತ್ನಿಸುತ್ತಾರೆ. ಆದರೆ ಅವರಿಂದ ಆಗುವುದಿಲ್ಲ.


ಕೆಲವರು ತಮ್ಮನ್ನು ಶುದ್ಧರೆಂದು ಯೋಚಿಸುವರು. ಆದರೆ ಅವರು ತಮ್ಮ ಹೊಲಸಿನಿಂದ ಶುದ್ಧೀಕರಿಸಲ್ಪಟ್ಟಿಲ್ಲ.


ದೇವರ ವಾಕ್ಯವನ್ನು ಕೇವಲ ಕೇಳುವವರಾಗಿರದೆ ಅದನ್ನು ಕಾರ್ಯರೂಪಕ್ಕೆ ತನ್ನಿರಿ. ಇಲ್ಲವಾದರೆ ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳುವಿರಿ.


ಅಸತ್ಯವಾದ ಸಂಗತಿಗಳನ್ನು ಹೇಳಿ ನಿಮ್ಮನ್ನು ಮೋಸಪಡಿಸಲು ಯಾರಿಗೂ ಅವಕಾಶ ಕೊಡಬೇಡಿ. ಆ ಕೆಟ್ಟಸಂಗತಿಗಳ ನಿಮಿತ್ತ ದೇವರ ಕೋಪವು ಆತನಿಗೆ ವಿಧೇಯರಾಗದ ಜನರ ಮೇಲೆ ಬರುತ್ತದೆ.


ಯಾರೊಬ್ಬಾಮನು ತನ್ನಲ್ಲೇ, “ಜನರು ಜೆರುಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಹೋಗುವುದನ್ನೇ ಮುಂದುವರಿಸಿದರೆ, ಆಗ ಅವರು ದಾವೀದನ ಕುಟುಂಬವೇ ನಮ್ಮನ್ನು ಆಳಲಿ ಎಂದು ಅಪೇಕ್ಷೆಪಡಬಹುದು. ಜನರು ಯೆಹೂದದ ರಾಜನಾದ ರೆಹಬ್ಬಾಮನನ್ನೇ ಮತ್ತೆ ಅನುಸರಿಸಬಹುದು. ನಂತರ ಅವರು ನನ್ನನ್ನು ಕೊಂದುಬಿಡಬಹುದು.” ಅಂದುಕೊಂಡನು.


ಬಳಿಕ ರಾಜನು ಈಗ ತಾನೇನು ಮಾಡಬೇಕೆಂದು ತನ್ನ ಸಲಹೆಗಾರರನ್ನು ಕೇಳಿದನು. ಅವರು ತಮ್ಮ ಸಲಹೆಯನ್ನು ಅವನಿಗೆ ನೀಡಿದರು. ಯಾರೊಬ್ಬಾಮನು ಎರಡು ಬಂಗಾರದ ಕರುಗಳನ್ನು ಮಾಡಿಸಿ ಜನರಿಗೆ, “ನೀವು ಆರಾಧಿಸಲು ಜೆರುಸಲೇಮಿಗೆ ಹೋಗಲೇಬಾರದು. ಇಸ್ರೇಲರೇ, ನಿಮ್ಮನ್ನು ಈಜಿಪ್ಟಿನಿಂದ ಹೊರತಂದ ದೇವರುಗಳು ಇಲ್ಲಿವೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು