Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:23 - ಪರಿಶುದ್ದ ಬೈಬಲ್‌

23 ಕಷ್ಟಪಟ್ಟು ದುಡಿದರೆ, ಸಮೃದ್ಧಿಯಿರುವುದು. ಕೇವಲ ಮಾತಾಡಿದರೆ ಬಡತನ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಶ್ರಮೆಯಿಂದ ಸಮೃದ್ಧಿ, ಹರಟೆಯಿಂದ ಕೊರತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ದುಡಿಮೆಯಿಂದ ಸದಾ ಲಾಭವುಂಟು; ಬರಿ ಮಾತಿನಿಂದ ಬಡತನ ಬರುವುದುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಶ್ರಮೆಯಿಂದ ಸಮೃದ್ಧಿ; ಹರಟೆಯಿಂದ ಕೊರತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಎಲ್ಲಾ ಪ್ರಯಾಸದಲ್ಲಿ ಲಾಭವಿದೆ, ಹರಟೆ ಮಾತು ಬಡತನಕ್ಕೆ ಮಾತ್ರ ದಾರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:23
12 ತಿಳಿವುಗಳ ಹೋಲಿಕೆ  

ಕಷ್ಟಪಟ್ಟು ದುಡಿಯುವವನಿಗೆ ಬೇಕಾದಷ್ಟು ಆಹಾರವಿರುವುದು. ನನಸಾಗದ ಕನಸುಗಳನ್ನೇ ಆಲೋಚಿಸಿಕೊಂಡಿರುವವನು ಬಡವನಾಗಿಯೇ ಇರುವನು.


ಕಷ್ಟಪಟ್ಟು ಕೆಲಸ ಮಾಡುವವನು ಅಧಿಪತಿಯಾಗುವನು. ಸೋಮಾರಿಯನ್ನು ಗುಲಾಮನನ್ನಾಗಿ ಮಾಡಲಾಗುವುದು.


“ಅನೇಕ ಚಿಂತೆಗಳಿಂದ ದುಸ್ವಪ್ನಗಳಾಗುವಂತೆ ಮೂಢನು ಅನೇಕ ಮಾತುಗಳನ್ನಾಡುವನು.”


ಈ ಲೋಕದ ಆಹಾರವು ಕೆಟ್ಟುಹೋಗುತ್ತದೆ ಮತ್ತು ಹಾಳಾಗುತ್ತದೆ. ಆದ್ದರಿಂದ ಅಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಬೇಡಿರಿ. ಆದರೆ ಎಂದಿಗೂ ಕೆಟ್ಟುಹೋಗದಂಥ ಮತ್ತು ನಿಮಗೆ ನಿತ್ಯಜೀವವನ್ನು ಕೊಡುವಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಿರಿ. ಮನುಷ್ಯಕುಮಾರನು ಆ ಆಹಾರವನ್ನು ನಿಮಗೆ ಕೊಡುವನು. ತಂದೆಯಾದ ದೇವರು ಆತನ ಮೇಲೆ ತನ್ನ ಅಧಿಕಾರದ ಮುದ್ರೆಯನ್ನು ಒತ್ತಿದ್ದಾನೆ” ಎಂದು ಹೇಳಿದನು.


ಸತ್ಯವನ್ನು ಅಡಗಿಸಿಕೊಳ್ಳುವವನು ತೊಂದರೆಯನ್ನು ಉಂಟುಮಾಡುವನು. ಧೈರ್ಯದಿಂದ ಮಾತಾಡುವವನು ಸಮಾಧಾನಕರನು.


ಇದಲ್ಲದೆ, ಅವರು ಮನೆಮನೆಗೆ ಅಲೆಯುತ್ತಾ ತಮ್ಮ ಕಾಲವನ್ನು ಕಳೆಯಲಾರಂಭಿಸುತ್ತಾರೆ; ಹರಟೆ ಮಾತುಗಳನ್ನಾಡುತ್ತಾ ಇತರರ ಜೀವನದಲ್ಲಿ ತಲೆಹಾಕಿ ಕಾಲಹರಣ ಮಾಡುತ್ತಾರೆ; ಹೇಳಬಾರದ ಸಂಗತಿಗಳನ್ನೆಲ್ಲ ಹೇಳುತ್ತಾರೆ.


ದುರ್ಮಾರ್ಗಿಯು ದಾರಿ ತಪ್ಪುವನು. ಒಳ್ಳೆಯದನ್ನು ಮಾಡಲು ಪ್ರಯತ್ನಿಸುವವನು ಪ್ರೀತಿಗೂ ಭರವಸೆಗೂ ಪಾತ್ರನಾಗುವನು.


ಜ್ಞಾನಿಗಳಿಗೆ ದೊರೆಯುವ ಪ್ರತಿಫಲ ಐಶ್ವರ್ಯ. ಜ್ಞಾನಹೀನರಿಗೆ ದೊರೆಯುವ ಪ್ರತಿಫಲ ಮೂಢತನ.


ಕಾರ್ಮಿಕರು ಬಂಡೆಗಳಲ್ಲಿ ಸುರಂಗಗಳನ್ನು ಕೊರೆದು ಬಂಡೆಯ ಭಂಡಾರಗಳನ್ನು ನೋಡುವರು.


ದುಡಿಯುವವನಿಗೆ ಅವನ ಪ್ರಯಾಸದಿಂದ ಲಾಭವೇನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು