Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:28 - ಪರಿಶುದ್ದ ಬೈಬಲ್‌

28 ಅಧಿಕ ಜನಸಂಖ್ಯೆಯು ರಾಜನಿಗೆ ಗೌರವ. ಪ್ರಜೆಗಳೇ ಇಲ್ಲದಿದ್ದರೆ ರಾಜನಿಗೆ ಬೆಲೆಯೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಪ್ರಜೆಗಳ ವೃದ್ಧಿ ರಾಜನ ಮಹಿಮೆ, ಪ್ರಜೆಗಳ ನಾಶ ಪ್ರಭುವಿಗೆ ಭಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಪ್ರಜೆಗಳ ಬಹುಸಂಖ್ಯೆ ಅರಸನಿಗೆ ಅತಿ ಹಿರಿಮೆ; ಪ್ರಜೆಗಳ ಕೊರತೆ ರಾಜಕುವರನಿಗೂ ಅಂಜಿಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಪ್ರಜೆಗಳ ವೃದ್ಧಿ ರಾಜನ ಮಹಿಮೆ; ಪ್ರಜೆಗಳ ಕ್ಷಯ ಪ್ರಭುವಿಗೆ ಭಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಜನಸಮೂಹದಲ್ಲಿ ಅರಸನ ಘನತೆ ಇದೆ. ಆದರೆ ಜನರ ಕೊರತೆಯಲ್ಲಿ ರಾಜಪುತ್ರನ ನಾಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:28
11 ತಿಳಿವುಗಳ ಹೋಲಿಕೆ  

ಅರಾಮ್ಯರ ರಾಜನು ಯೆಹೋವಾಹಾಜನ ಸೇನೆಯನ್ನು ಸೋಲಿಸಿದನು. ಅರಾಮ್ಯರ ರಾಜನು ಐವತ್ತು ಮಂದಿ ರಾಹುತರನ್ನು, ಹತ್ತು ರಥಗಳನ್ನು ಮತ್ತು ಹತ್ತು ಸಾವಿರ ಭೂಸೈನಿಕರನ್ನು ಬಿಟ್ಟು ಉಳಿದವರೆಲ್ಲರನ್ನು ಸುಗ್ಗಿಯ ಕಾಲದಲ್ಲಿ ಗಾಳಿಗೆ ಹಾರಿಹೋಗುವ ಹೊಟ್ಟಿನಂತೆ ನಾಶಮಾಡಿದನು.


ಆದ್ದರಿಂದ ಫರೋಹನು ತನ್ನ ಜನರಿಗೆಲ್ಲಾ, “ಇಬ್ರಿಯರಿಗೆ ಹುಟ್ಟುವ ಗಂಡುಕೂಸುಗಳನ್ನೆಲ್ಲಾ ನೈಲ್ ನದಿಗೆ ಎಸೆದುಬಿಡಬೇಕು. ಆದರೆ ಎಲ್ಲಾ ಹೆಣ್ಣುಮಕ್ಕಳು ಬದುಕಲಿ” ಎಂದು ಆಜ್ಞಾಪಿಸಿದನು.


ಇಸ್ರೇಲರೂ ಯುದ್ಧಕ್ಕೆ ಸಿದ್ಧರಾದರು. ಇಸ್ರೇಲಿನ ಜನರು ಅರಾಮ್ಯದ ಸೇನೆಯೊಡನೆ ಹೋರಾಡಲು ಹೋದರು. ಅವರು ಅರಾಮ್ಯದ ಪಾಳೆಯಕ್ಕೆ ಎದುರಾಗಿ ತಮ್ಮ ಪಾಳೆಯ ಮಾಡಿಕೊಂಡರು. ಶತ್ರುಗಳಿಗೆ ಹೋಲಿಸಿದರೆ ಇಸ್ರೇಲರು ಆಡುಗಳ ಎರಡು ಚಿಕ್ಕಮಂದೆಯಂತೆ ಕಾಣುತ್ತಿದ್ದರು. ಆದರೆ ಅರಾಮ್ಯದ ಸೈನಿಕರು ಎಲ್ಲಾ ಪ್ರದೇಶವನ್ನು ವ್ಯಾಪಿಸಿದ್ದರು.


ಈಜಿಪ್ಟಿನವರು ಇಸ್ರೇಲರಿಂದ ಪ್ರಯಾಸಕರವಾದ ಕೆಲಸಗಳನ್ನು ಬಲವಂತವಾಗಿ ಮಾಡಿಸಿದಷ್ಟೂ ಇಸ್ರೇಲರು ಹೆಚ್ಚು ಹರಡಿಕೊಂಡದ್ದರಿಂದ ಈಜಿಪ್ಟಿನ ಜನರು ಇಸ್ರೇಲರಿಗೆ ಹೆಚ್ಚೆಚ್ಚಾಗಿ ಭಯಪಟ್ಚರು.


ಈಗ ಮೇಲೆದ್ದು ನಿನ್ನ ಸೇವಕರೊಂದಿಗೆ ಮಾತನಾಡು; ಅವರನ್ನು ಪ್ರೋತ್ಸಾಹಿಸು. ಯೆಹೋವನಾಣೆ, ಈ ಕಾರ್ಯವನ್ನು ಮಾಡಲು ನೀನಿಂದು ಹೊರಗೆ ಹೋಗದಿದ್ದರೆ, ರಾತ್ರಿಯ ವೇಳೆಗೆ ನಿನ್ನೊಂದಿಗೆ ಯಾವ ಮನುಷ್ಯನೂ ಉಳಿಯುವುದಿಲ್ಲ. ನೀನು ನಿನ್ನ ಚಿಕ್ಕಂದಿನಿಂದ ಈವರೆಗೆ ಅನುಭವಿಸಿದ ಸಂಕಷ್ಟಗಳಲ್ಲೆಲ್ಲ ಇದು ತೀರ ಕೆಟ್ಟದಾಗಿರುತ್ತದೆ” ಎಂದು ಹೇಳಿದನು.


ಯೆಹೋವನಲ್ಲಿರುವ ಭಯಭಕ್ತಿ ಜೀವದ ಬುಗ್ಗೆ. ಅದು ಮನುಷ್ಯನನ್ನು ಮರಣದ ಬಲೆಯಿಂದ ಕಾಪಾಡುತ್ತದೆ.


ತಾಳ್ಮೆಯುಳ್ಳವನು ತುಂಬಾ ಜಾಣ. ಮುಂಗೋಪಿಯು ತಾನು ಮೂಢ ಎಂಬುದನ್ನು ತೋರಿಸಿಕೊಳ್ಳುತ್ತಾನೆ.


ಆದರೆ ಯೋವಾಬನು ರಾಜನಿಗೆ, “ಅಲ್ಲಿ ಎಷ್ಟು ಜನರಿದ್ದಾರೆಂಬುದು ಅಗತ್ಯವಿಲ್ಲ. ನಿನ್ನ ದೇವರಾದ ಯೆಹೋವನು ಈಗ ಇರುವುದಕ್ಕಿಂತ ನೂರರಷ್ಟು ಹೆಚ್ಚು ಜನರನ್ನು ದಯಪಾಲಿಸಲಿ! ಈ ಕಾರ್ಯವು ಸಂಭವಿಸುವುದನ್ನು ನಿನ್ನ ಕಣ್ಣುಗಳಿಂದಲೇ ನೋಡು. ಆದರೆ ನೀನು ಈ ಕಾರ್ಯವನ್ನು ಮಾಡಬೇಕೆಂದಿರುವುದೇಕೆ?” ಎಂದು ಕೇಳಿದನು.


ಜೆರುಸಲೇಮೇ, ಮುಖವೆತ್ತಿ ನೋಡು. ಉತ್ತರ ದಿಕ್ಕಿನಿಂದ ಬರುವ ಶತ್ರುಗಳನ್ನು ನೋಡು. ನಿನ್ನ ಮಂದೆ ಎಲ್ಲಿದೆ? ದೇವರು ನಿನಗೆ ಆ ಸುಂದರವಾದ ಮಂದೆಯನ್ನು ದಯಪಾಲಿಸಿದನು. ನೀನು ಆ ಮಂದೆಯನ್ನು ನೋಡಿಕೊಳ್ಳಬೇಕಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು