Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:8 - ಪರಿಶುದ್ದ ಬೈಬಲ್‌

8 ಜಾಣರು ಜ್ಞಾನಿಗಳಾಗಿದ್ದಾರೆ; ಅವರು ವಿವೇಚಿಸಿ ಕಾರ್ಯಗಳನ್ನು ಮಾಡುತ್ತಾರೆ, ಮೂಢರು ಬುದ್ಧಿಹೀನರಾಗಿದ್ದಾರೆ; ತಾವು ಮೋಸದಿಂದ ಬದುಕಬಲ್ಲೆವು ಎಂದು ಅವರು ಯೋಚಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಸನ್ಮಾರ್ಗವನ್ನು ಗ್ರಹಿಸಿಕೊಳ್ಳುವುದೇ ಜಾಣನ ಜ್ಞಾನ, ಮೂಢರ ಮೂರ್ಖತನ ಮೋಸಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ವಿವೇಕಿಯ ಜ್ಞಾನ ಸನ್ಮಾರ್ಗದಲ್ಲಿ ನಡೆಸುತ್ತದೆ; ಮೂಢರ ಮೂರ್ಖತನ ಮೋಸಗೊಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮಾರ್ಗವನ್ನು ಗ್ರಹಿಸಿಕೊಳ್ಳುವದೇ ಜಾಣನ ಜ್ಞಾನ; ಮೂಢರ ಮೂರ್ಖತನ ಮೋಸಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಜಾಣನ ಜ್ಞಾನವು ತನ್ನ ಮಾರ್ಗಗಳಿಗೆ ಆಲೋಚನೆ ನೀಡುತ್ತದೆ. ಮೂಢರ ಬುದ್ಧಿಹೀನತೆಯು ಮೋಸಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:8
21 ತಿಳಿವುಗಳ ಹೋಲಿಕೆ  

ನಿಮ್ಮ ಜೀವಿತಗಳ ಬಗ್ಗೆ ಮೂರ್ಖರಾಗಿರದೆ ದೇವರ ಚಿತ್ತವೇನೆಂಬುದನ್ನು ತಿಳಿದುಕೊಳ್ಳಿರಿ.


ದುಷ್ಟರು ಮತ್ತು ದುರ್ಬೋಧಕರು ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ದಿನದಿಂದ ದಿನಕ್ಕೆ ಕೀಳುಮಟ್ಟಕ್ಕೆ ಇಳಿಯುತ್ತಿದ್ದಾರೆ.


ನಿಮ್ಮಲ್ಲಿ ಜ್ಞಾನವಂತರಾಗಲಿ ಬದ್ಧಿವಂತರಾಗಲಿ ಇದ್ದಾರೋ? ಅಂಥವನು ತನ್ನ ಜ್ಞಾನವನ್ನು ಯೋಗ್ಯವಾಗಿ ಬದುಕುವುದರ ಮೂಲಕ ತೋರ್ಪಡಿಸಲಿ. ಅವನು ಒಳ್ಳೆಯ ಕಾರ್ಯಗಳನ್ನು ದೀನತೆಯಿಂದ ಮಾಡಲಿ. ಜ್ಞಾನಿಯಾದವನು ಕೊಚ್ಚಿಕೊಳ್ಳುವುದಿಲ್ಲ.


ನೀವು ನಿಮ್ಮ ಹಿಂದಿನ ಕೆಟ್ಟ ನಡತೆಯನ್ನು ಬಿಟ್ಟುಬಿಡಬೇಕೆಂಬುದನ್ನು ಅಂದರೆ ನಿಮ್ಮ ಹಳೆಯ ಸ್ವಭಾವವನ್ನು ತೊರೆದುಬಿಡಬೇಕೆಂಬುದನ್ನು ಕಲಿತುಕೊಂಡಿರಿ. ಜನರು ತಾವು ಮಾಡ ಬಯಸುವ ದುಷ್ಕೃತ್ಯಗಳಿಂದ ವಂಚಿತರಾಗಿರುವುದರಿಂದ ಆ ಹಳೆಯ ಸ್ವಭಾವವು ದಿನದಿಂದ ದಿನಕ್ಕೆ ಮತ್ತಷ್ಟು ಕೆಟ್ಟು ಹೋಗುತ್ತದೆ.


ಕೆಡುಕನು ತಾತ್ಕಾಲಿಕವಾದ ಲಾಭವನ್ನು ಮಾಡಿಕೊಳ್ಳುತ್ತಾನೆ. ಆದರೆ ನೀತಿವಂತನು ಯೋಗ್ಯವಾದ ಪ್ರತಿಫಲವನ್ನು ಹೊಂದಿಕೊಳ್ಳುವನು.


ನಾನು ನೀತಿಮಾರ್ಗದಲ್ಲಿಯೂ ನ್ಯಾಯಮಾರ್ಗದಲ್ಲಿಯೂ ನಡೆಯುತ್ತೇನೆ.


ಆಗ ನೀನು ಒಳ್ಳೆಯದನ್ನೂ ನ್ಯಾಯನೀತಿಗಳನ್ನೂ ಸನ್ಮಾರ್ಗಗಳನ್ನೂ ಅರ್ಥಮಾಡಿಕೊಳ್ಳುವೆ.


ನಿನ್ನ ಕೈಗಳು ನನ್ನನ್ನು ರೂಪಿಸಿದವು. ನಿನ್ನ ಆಜ್ಞೆಗಳನ್ನು ಕಲಿತುಕೊಳ್ಳಲು ನನಗೆ ಸಹಾಯಿಸು.


ನಿನ್ನ ಕಟ್ಟಳೆಗಳಿಗೆ ನಾನು ಯಾವಾಗಲೂ ವಿಧೇಯನಾಗಿದ್ದರೆ,


ಯೆಹೋವನ ಮೇಲಿರುವ ಭಯಭಕ್ತಿಗಳಿಂದಲೇ ಜ್ಞಾನವು ಆರಂಭವಾಗುತ್ತದೆ. ಆತನಲ್ಲಿ ಭಯಭಕ್ತಿಯುಳ್ಳವರು ಜ್ಞಾನಪೂರ್ಣರಾಗಿದ್ದಾರೆ. ಆತನಿಗೆ ಸದಾಕಾಲ ಸ್ತೋತ್ರವಾಗಲಿ.


ಜೆರುಸಲೇಮೇ, ಮುಖವೆತ್ತಿ ನೋಡು. ಉತ್ತರ ದಿಕ್ಕಿನಿಂದ ಬರುವ ಶತ್ರುಗಳನ್ನು ನೋಡು. ನಿನ್ನ ಮಂದೆ ಎಲ್ಲಿದೆ? ದೇವರು ನಿನಗೆ ಆ ಸುಂದರವಾದ ಮಂದೆಯನ್ನು ದಯಪಾಲಿಸಿದನು. ನೀನು ಆ ಮಂದೆಯನ್ನು ನೋಡಿಕೊಳ್ಳಬೇಕಾಗಿತ್ತು.


ಮುಂಜಾನೆಯಲ್ಲಿ ನಿನ್ನ ಶಾಶ್ವತ ಪ್ರೀತಿಯನ್ನು ನನಗೆ ತೋರಿಸು. ನಾನು ನಿನ್ನಲ್ಲಿ ಭರವಸವಿಟ್ಟಿದ್ದೇನೆ. ನಾನು ಮಾಡಬೇಕಾದವುಗಳನ್ನು ನನಗೆ ತೋರಿಸು. ನಾನು ನನ್ನ ಜೀವವನ್ನು ನಿನ್ನ ಕೈಗಳಲ್ಲಿ ಇಟ್ಟಿದ್ದೇನೆ!


ಏಕೆಂದರೆ ಈ ಲೋಕದ ಜ್ಞಾನವು ದೇವರಿಗೆ ಮೂರ್ಖತನವಾಗಿದೆ. “ದೇವರು ಜಾಣರನ್ನು ಅವರ ಕುತಂತ್ರದ ಮಾರ್ಗಗಳಲ್ಲೇ ಹಿಡಿದುಕೊಳ್ಳುವನು” ಎಂದು ಪವಿತ್ರ ಗ್ರಂಥದಲ್ಲಿ ಬರೆಯಲಾಗಿದೆ.


ಮೂಢನಿಗೆ ಮೂಢತನದಲ್ಲಿ ಸಂತೋಷ. ಜ್ಞಾನಿಯು ಎಚ್ಚರಿಕೆಯಿಂದಿದ್ದು ಒಳ್ಳೆಯದನ್ನು ಮಾಡುವನು.


ಶಿಷ್ಟರ ಆಲೋಚನೆ ನ್ಯಾಯವಾಗಿವೆ. ದುಷ್ಟರ ಉಪದೇಶ ಮೋಸಕರ.


ಆಗ ಬೆಳಕು ಕತ್ತಲೆಗಿಂತ ಉತ್ತಮವಾಗಿರುವಂತೆ ಜ್ಞಾನವು ಮೂಢತನಕ್ಕಿಂತ ಉತ್ತಮವಾಗಿದೆ ಎಂಬುದನ್ನು ಅರಿತುಕೊಂಡೆನು.


ಯಾಕೆಂದರೆ ಮೂಢನು ಸಾಯುವಂತೆ ಜ್ಞಾನಿಯೂ ಸಾಯುವುದರಿಂದ ಜನರು ಜ್ಞಾನಿಯನ್ನಾಗಲಿ ಮೂಢನನ್ನಾಗಲಿ ಸದಾಕಾಲ ಜ್ಞಾಪಿಸಿಕೊಳ್ಳುವುದಿಲ್ಲ. ಅವರ ಕಾರ್ಯಗಳನ್ನು ಮುಂದಿನ ಕಾಲದ ಜನರು ಮರೆತುಬಿಡುವರು. ಆದ್ದರಿಂದ ಜ್ಞಾನಿಗೂ ಮೂಢನಿಗೂ ಯಾವ ವ್ಯತ್ಯಾಸವೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು