Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 15:27 - ಪರಿಶುದ್ದ ಬೈಬಲ್‌

27 ದುರಾಶೆಪಡುವವನು ತನ್ನ ಕುಟುಂಬಕ್ಕೆ ಆಪತ್ತನ್ನು ಬರಮಾಡಿಕೊಳ್ಳುವನು. ಲಂಚ ತೆಗೆದುಕೊಳ್ಳದವನಿಗೆ ಯಾವ ಸಮಸ್ಯೆಯೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಸೂರೆಮಾಡುವವನು ಸ್ವಂತ ಮನೆಯನ್ನು ಬಾಧಿಸುವನು. ಲಂಚವನ್ನೊಪ್ಪದವನು ಸುಖವಾಗಿ ಬಾಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಸೂರೆಮಾಡುವವನು ಸ್ವಂತ ಮನೆಗೇ ಕೇಡುಮಾಡುತ್ತಾನೆ; ಲಂಚವನ್ನು ದ್ವೇಷಿಸುವವನು ಸುಖವಾಗಿ ಬಾಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಸೂರೆಮಾಡುವವನು ಸ್ವಂತ ಮನೆಯನ್ನು ಬಾಧಿಸುವನು. ಲಂಚವನ್ನೊಪ್ಪದವನು ಸುಖವಾಗಿ ಬಾಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ದುರಾಶೆಯುಳ್ಳವನು ತನ್ನ ಕುಟುಂಬವನ್ನು ಬಾಧಿಸುತ್ತಾನೆ. ಲಂಚವನ್ನು ಹಗೆಮಾಡುವವನು ಬದುಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 15:27
28 ತಿಳಿವುಗಳ ಹೋಲಿಕೆ  

ದುರಾಶೆಯುಳ್ಳವರು ತಾವು ದೋಚಿಕೊಳ್ಳುವ ವಸ್ತುಗಳಿಂದಲೇ ನಾಶವಾಗುವರು.


“ಲಂಚವನ್ನು ತೆಗೆದುಕೊಳ್ಳಕೂಡದು; ಲಂಚವು ಕಣ್ಣುಳ್ಳವರನ್ನು ಕುರುಡರನ್ನಾಗಿ ಮಾಡುತ್ತದೆ; ನಿರಪರಾಧಿಗೆ ಅನ್ಯಾಯ ಮಾಡುತ್ತದೆ.


ಕೆಲವು ಸಲ ಪಕ್ಷಿಯು ತಾನು ಇಡದ ಮೊಟ್ಟೆಗೆ ಕಾವು ಕೊಡುತ್ತದೆ. ಹಣಕ್ಕಾಗಿ ಮೋಸಮಾಡುವ ಮನುಷ್ಯನು ಆ ಪಕ್ಷಿಯಂತಿರುವನು, ಅವನು ತನ್ನ ಮಧ್ಯಪ್ರಾಯದಲ್ಲಿ ತನ್ನ ಹಣವನ್ನೆಲ್ಲಾ ಕಳೆದುಕೊಳ್ಳುವನು. ಅವನು ತನ್ನ ಅಂತ್ಯಕಾಲದಲ್ಲಿ ಮೂರ್ಖನಾಗಿ ಕಂಡುಬರುವನು.”


ತನ್ನ ಕುಟುಂಬಕ್ಕೆ ತೊಂದರೆ ಕೊಡುವವನಿಗೆ ಆಸ್ತಿಯು ದೊರೆಯುವುದಿಲ್ಲ. ಮೂಢನು ಬಲವಂತಕ್ಕೊಳಗಾಗಿ ಜ್ಞಾನಿಯ ಸೇವೆ ಮಾಡಬೇಕಾಗುವುದು.


ನೀವು ಯಾವಾಗಲೂ ಪಕ್ಷಪಾತವಿಲ್ಲದವರಾಗಿರಬೇಕು. ಜನರಿಂದ ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಮಾನ ಕೊಡಬಾರದು. ಹಣವು ಜ್ಞಾನಿಗಳನ್ನು ಕುರುಡುಮಾಡಿ ಅವರ ಬುದ್ಧಿಯನ್ನು ಮಂದ ಮಾಡುವುದು.


ಆದರೆ ನೀನು ಜನರೊಳಗೆ ದೇವಭಕ್ತರೂ ಲಂಚಮುಟ್ಟದವರೂ ಆಗಿರುವವರನ್ನು ಆರಿಸಿಕೊಳ್ಳಬೇಕು. ಅವರನ್ನು ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.


ರಾಜನು ನ್ಯಾಯವಂತನಾಗಿದ್ದರೆ ದೇಶವು ಬಲಿಷ್ಠವಾಗಿರುವುದು. ರಾಜನು ತನ್ನ ಐಶ್ವರ್ಯವನ್ನು ಹೆಚ್ಚಿಸಿಕೊಳ್ಳುವುದಕ್ಕಾಗಿ ವಿಪರೀತ ತೆರಿಗೆಗಳನ್ನು ಹಾಕಿದರೆ, ದೇಶವು ಹಾಳಾಗುವುದು.


ವಿವೇಕವಿಲ್ಲದ ಅಧಿಪತಿ ತನ್ನ ಅಧೀನದಲ್ಲಿರುವವರಿಗೆ ಕೇಡುಮಾಡುವನು. ಅನ್ಯಾಯದ ಹಣವನ್ನು ತೆಗೆದುಕೊಳ್ಳದ ಅಧಿಪತಿ ಬಹುಕಾಲ ಆಳುವನು.


ಸುಲಭವಾಗಿ ಬಾಚಿಕೊಂಡ ಸ್ವಾಸ್ತ್ಯವು ಕೊನೆಯಲ್ಲಿ ಆರ್ಶೀವಾದದಾಯಕವಾಗಿರುವುದಿಲ್ಲ.


ನೀತಿವಂತನು ನಿಜವಾಗಿಯೂ ಜೀವವನ್ನು ಹೊಂದಿಕೊಳ್ಳುವನು, ಆದರೆ ಕೆಡುಕನನ್ನು ಹಿಂಬಾಲಿಸುತ್ತಾ ಹೋಗುವವನು ಸಾವಿಗೀಡಾಗುವನು.


ಈಗ, ನಿನ್ನನ್ನೂ ನಿನ್ನ ಸಂತಾನದವರನ್ನೂ ಸದಾಕಾಲ ನಾಮಾನನ ರೋಗವು ಹಿಡಿದುಕೊಳ್ಳುವುದು. ನಿನಗೆ ಎಂದೆಂದಿಗೂ ಕುಷ್ಠರೋಗವಿರುವುದು!” ಎಂದು ಹೇಳಿದನು. ಗೇಹಜಿಯು ಎಲೀಷನನ್ನು ಬಿಟ್ಟುಹೋದಾಗ, ಗೇಹಜಿಯ ಚರ್ಮವು ಮಂಜುಗಡ್ಡೆಯಂತೆ ಬಿಳುಪಾಯಿತು! ಗೇಹಜಿಯು ಕುಷ್ಠರೋಗ ಪೀಡಿತನಾದನು.


ಅಲ್ಲದೆ ನಾವು ಉಳಿದೆಲ್ಲವನ್ನು ನಾಶಪಡಿಸಬೇಕೆಂಬುದನ್ನು ನೆನಪಿಡಿ. ಅವರ ವಸ್ತುಗಳನ್ನು ತೆಗೆದುಕೊಳ್ಳಬೇಡಿ. ನೀವು ಅವರ ವಸ್ತುಗಳನ್ನು ತೆಗೆದುಕೊಂಡರೆ ಮತ್ತು ಅವುಗಳನ್ನು ನಮ್ಮ ಪಾಳೆಯಕ್ಕೆ ತಂದರೆ ನೀವೇ ನಾಶವಾಗುವಿರಿ; ಇಸ್ರೇಲಿನ ಎಲ್ಲಾ ಜನರಿಗೆ ಕಷ್ಟವನ್ನುಂಟುಮಾಡುವಿರಿ.


ಅಂಥ ಅಸಹ್ಯ ವಿಗ್ರಹಗಳನ್ನು ನಿಮ್ಮ ಮನೆಯೊಳಗೆ ತರಲೂಬಾರದು, ಅವುಗಳನ್ನು ಬಯಸಲೂಬಾರದು; ನೀವು ಅವುಗಳನ್ನು ದ್ವೇಷಿಸಬೇಕು ಮತ್ತು ನಾಶಮಾಡಬೇಕು. ಇಲ್ಲವಾದರೆ ನೀವೂ ಅವುಗಳಂತೆಯೇ ನಾಶನಕ್ಕೆ ಗುರಿಯಾಗುವಿರಿ.


ಶ್ರೀಮಂತರಾಗಬೇಕೆನ್ನುವವರು ತಮ್ಮನ್ನು ತಾವೇ ಶೋಧನೆಗೆ ಗುರಿಪಡಿಸಿಕೊಳ್ಳುವರು. ಅವರು ಉರ್ಲಿನಲ್ಲಿ ಸಿಕ್ಕಿಹಾಕಿಕೊಂಡವರಾಗಿದ್ದಾರೆ. ಅವರು ಹಾನಿಕರವಾದ ಅನೇಕ ಮೂರ್ಖ ಆಸೆಗಳಲ್ಲಿ ಸಿಕ್ಕಿಬೀಳುವರು. ಅವು ಜನರನ್ನು ಹಾಳುಮಾಡಿ, ನಾಶಗೊಳಿಸುತ್ತವೆ.


ಹಣದಾಸೆಯು ಎಲ್ಲಾ ವಿಧವಾದ ಕೆಟ್ಟತನಕ್ಕೆ ಮೂಲವಾಗುತ್ತದೆ. ಕೆಲವು ಜನರು ಹೆಚ್ಚುಹೆಚ್ಚು ಹಣವನ್ನು ಗಳಿಸಿಕೊಳ್ಳುವುದಕ್ಕಾಗಿ ಸತ್ಯೋಪದೇಶವನ್ನು ತೊರೆದುಬಿಟ್ಟಿದ್ದಾರೆ. ಆದರೆ ಅವರು ತಮ್ಮನ್ನು ತಾವೇ ಹೆಚ್ಚು ವೇದನೆಗೆ ಗುರಿಪಡಿಸಿಕೊಂಡಿದ್ದಾರೆ.


ನಾನು ಇಲ್ಲಿದ್ದೇನೆ. ನಾನು ಯಾವ ತಪ್ಪುಗಳನ್ನಾದರೂ ಮಾಡಿದ್ದರೆ, ನೀವು ಯೆಹೋವನಿಗೆ ಮತ್ತು ಆತನು ಆರಿಸಿರುವ ರಾಜನಿಗೆ ಅವುಗಳನ್ನು ಹೇಳಲೇಬೇಕು. ನಾನು ಬೇರೊಬ್ಬರ ಹಸುವನ್ನಾಗಲಿ ಕತ್ತೆಯನ್ನಾಗಲಿ ಕದ್ದಿರುವೆನೇ? ನಾನು ಯಾರನ್ನಾದರೂ ನೋಯಿಸಿರುವೆನೇ? ವಂಚಿಸಿರುವೆನೇ? ನಾನು ತಪ್ಪುಮಾಡಲು ಯಾರಿಂದಲಾದರೂ ಹಣವನ್ನಾಗಲೀ ಪಾದರಕ್ಷೆಗಳನ್ನಾಗಲೀ ತೆಗೆದುಕೊಂಡಿರುವೆನೇ? ನಾನು ಈ ಕಾರ್ಯಗಳನ್ನು ಮಾಡಿರುವುದಾದರೆ ತಿಳಿಸಿ, ಅವುಗಳನ್ನು ಸರಿಪಡಿಸುತ್ತೇನೆ” ಎಂದು ಹೇಳಿದನು.


ಯೆಹೋವನು ದುರಾಲೋಚನೆಗಳನ್ನು ದ್ವೇಷಿಸುವನು; ಕನಿಕರದ ಮಾತುಗಳಲ್ಲಾದರೋ ಸಂತೋಷಪಡುವನು.


ಐಶ್ವರ್ಯವಂತನಾಗಬೇಕೆಂಬ ಪ್ರಯತ್ನದಲ್ಲಿ ನಿನ್ನ ಆರೋಗ್ಯವನ್ನು ಕಳೆದುಕೊಳ್ಳಬೇಡ. ನೀನು ಜ್ಞಾನಿಯಾಗಿದ್ದರೆ ತಾಳ್ಮೆಯಿಂದಿರುವೆ.


ದುರಾಶೆಯುಳ್ಳವನು ಜಗಳಗಳನ್ನು ಎಬ್ಬಿಸುತ್ತಾನೆ. ಯೆಹೋವನಲ್ಲಿ ಭರವಸೆ ಇಡುವವನಾದರೋ ಅಭಿವೃದ್ಧಿ ಹೊಂದುವನು.


ಆದ್ದರಿಂದ ಶಿಮ್ಮಿಯು ತಡಿಯನ್ನು ತನ್ನ ಕತ್ತೆಯ ಮೇಲೆ ಹಾಕಿಕೊಂಡು, ಗತ್‌ನ ರಾಜನಾದ ಆಕೀಷನ ಬಳಿಗೆ ಹೋದನು. ಅವನು ತನ್ನ ಗುಲಾಮರನ್ನು ಅಲ್ಲಿ ಕಂಡುಹಿಡಿದು ತನ್ನ ಮನೆಗೆ ಮತ್ತೆ ಕರೆದುಕೊಂಡು ಬಂದನು.


ಅವನು ಕೊಟ್ಟ ಸಾಲಕ್ಕೆ ಬಡ್ಡಿ ಕೇಳದವನೂ ನಿರಪರಾಧಿಗೆ ಕೇಡುಮಾಡಲು ಲಂಚ ತೆಗೆದುಕೊಳ್ಳದವನೂ ಆಗಿರಬೇಕು. ಹೀಗೆ ಜೀವಿಸುವವನು ದೇವರಿಗೆ ಸಮೀಪವಾಗಿಯೇ ಇರುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು