Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 15:30 - ಪರಿಶುದ್ದ ಬೈಬಲ್‌

30 ನಗುಮುಖವು ಜನರನ್ನು ಸಂತೋಷಗೊಳಿಸುವುದು; ಒಳ್ಳೆಯ ಸುದ್ದಿಯಿಂದ ಜನರ ಆರೋಗ್ಯ ಹೆಚ್ಚುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಹಸನ್ಮುಖ ಹೃದಯಕ್ಕೆ ಆನಂದ, ಶುಭಸಮಾಚಾರ ದೇಹಕ್ಕೆ ಆರೋಗ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಹಸನ್ಮುಖ ಕಂಡಾಗ ಹೃದಯಕ್ಕೆ ಆನಂದ; ಶುಭಸಮಾಚಾರದಿಂದ ದೇಹಕ್ಕೆ ಉತ್ತೇಜನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಕಣ್ಣಿಗೆ ಬಿದ್ದ ಬೆಳಕು ಹೃದಯಕ್ಕೆ ಆನಂದ; ಕಿವಿಗೆ ಬಿದ್ದ ಒಳ್ಳೇ ಸುದ್ದಿ ಎಲುಬಿಗೆ ಪುಷ್ಟಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಹರ್ಷಚಿತ್ತದ ನೋಟವು ಹೃದಯಕ್ಕೆ ಸಂತೋಷವನ್ನು ತರುತ್ತದೆ. ಒಳ್ಳೆಯ ವಾರ್ತೆಯು ಎಲುಬುಗಳನ್ನು ಪುಷ್ಟಿಗೊಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 15:30
14 ತಿಳಿವುಗಳ ಹೋಲಿಕೆ  

ಯೆಹೋವನು ಯಾವಾಗಲೂ ನಿಮ್ಮನ್ನು ನಡೆಸುವನು. ಒಣನೆಲದಲ್ಲಿ ನಿಮ್ಮ ಆತ್ಮಗಳನ್ನು ತೃಪ್ತಿಪಡಿಸುವನು. ನಿಮ್ಮ ಎಲುಬುಗಳಿಗೆ ಬಲವನ್ನು ಕೊಡುವನು. ನೀರಿನಿಂದ ತೇವವಾಗಿರುವ ತೋಟದಂತೆ ನೀವು ಇರುವಿರಿ. ನಿತ್ಯವೂ ನೀರಿರುವ ಬುಗ್ಗೆಯಂತೆ ನೀವಿರುವಿರಿ.


ಬಹುದೂರದ ಒಳ್ಳೆಯ ಸುದ್ದಿಯು ಬಾಯಾರಿದವನಿಗೆ ಕೊಟ್ಟ ತಣ್ಣನೆ ನೀರಿನಂತಿರುವುದು.


ಅಲ್ಲಿ ರಾತ್ರಿಯೆಂಬುದೇ ಇರುವುದಿಲ್ಲ. ಜನರಿಗೆ ದೀಪದ ಬೆಳಕಾಗಲಿ ಸೂರ್ಯನ ಬೆಳಕಾಗಲಿ ಬೇಕಾಗುವುದಿಲ್ಲ. ಪ್ರಭುವಾದ ದೇವರೇ ಅವರಿಗೆ ಬೆಳಕನ್ನು ನೀಡುತ್ತಾನೆ. ಅವರು ಯುಗಯುಗಾಂತರಗಳಲ್ಲಿ ರಾಜರುಗಳಂತೆ ಆಳುತ್ತಾರೆ.


ನಗರದ ಮೇಲೆ ಸೂರ್ಯನಾಗಲಿ ಚಂದ್ರನಾಗಲಿ ಪ್ರಕಾಶಿಸುವ ಅಗತ್ಯವಿರಲಿಲ್ಲ. ದೇವರ ಪ್ರಭಾವವೇ ಆ ನಗರಕ್ಕೆ ಬೆಳಕನ್ನು ನೀಡುತ್ತಿತ್ತು. ಕುರಿಮರಿಯಾದಾತನು ನಗರಕ್ಕೆ ದೀಪವಾಗಿದ್ದನು.


ಬೆಳಕು ಹಿತ! ಸೂರ್ಯನ ಬೆಳಕು ನೋಡಲು ಚೆಂದ.


ಸಂತೋಷವು ಒಳ್ಳೆಯ ಔಷಧಿಯಂತಿದೆ. ಆದರೆ ದುಃಖವು ಕಾಯಿಲೆಯಂತಿದೆ.


ಶಿಷ್ಟನು ಪ್ರಕಾಶಮಾನವಾದ ಬೆಳಕಿನಂತಿರುವನು. ದುಷ್ಟನಾದರೋ ನಂದಿಹೋಗುತ್ತಿರುವ ಬೆಳಕಿನಂತಿರುವನು.


ಯೆಹೋವನೇ, ನಿನ್ನ ಸದ್ಭಕ್ತರು ನಿಜವಾಗಿಯೂ ಸಂತೋಷವಾಗಿದ್ದಾರೆ. ಅವರು ನಿನ್ನ ಕರುಣೆಯ ಬೆಳಕಿನಲ್ಲಿ ವಾಸಿಸುತ್ತಿದ್ದಾರೆ.


“ಈಗಲಾದರೋ ನೀನು ನಮ್ಮ ಮೇಲೆ ದಯೆ ತೋರಿಸಿರುವೆ. ಸೆರೆಯಲ್ಲಿದ್ದ ನಿನ್ನ ಜನರಲ್ಲಿ ಕೆಲವರು ಅಲ್ಲಿಂದ ತಪ್ಪಿಸಿಕೊಂಡು ನಿನ್ನ ಪರಿಶುದ್ಧ ದೇಶದಲ್ಲಿ ವಾಸಿಸುವಂತೆ ಮಾಡಿರುವೆ; ಗುಲಾಮತನದಿಂದ ನಮ್ಮನ್ನು ಬಿಡುಗಡೆ ಮಾಡಿ ಹೊಸಜೀವ ಕೊಟ್ಟಿರುವೆ.


ನೀನು ಹೀಗೆ ಮಾಡುವುದಾದರೆ, ಅದು ನಿನ್ನ ದೇಹಕ್ಕೆ ಒಳ್ಳೆಯ ಆರೋಗ್ಯವನ್ನೂ ನಿನ್ನ ಎಲುಬುಗಳಿಗೆ ಹೊಸ ಶಕ್ತಿಯನ್ನೂ ಕೊಡುವುದು.


ಯೆಹೋವನು ದುಷ್ಟರಿಗೆ ಬಹುದೂರ. ಶಿಷ್ಟರ ಪ್ರಾರ್ಥನೆಯನ್ನಾದರೋ ಆತನು ಯಾವಾಗಲೂ ಕೇಳುತ್ತಾನೆ.


ತನ್ನ ತಪ್ಪನ್ನು ಎಚ್ಚರಿಕೆಯಿಂದ ಕೇಳುವವನು ಬಹು ಜ್ಞಾನಿ.


ಚಿಂತೆಯು ಮನುಷ್ಯನ ಸಂತೋಷವನ್ನು ತೆಗೆದುಹಾಕುತ್ತದೆ; ಕನಿಕರದ ಮಾತು ಮನುಷ್ಯನನ್ನು ಸಂತೋಷಗೊಳಿಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು