Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 16:10 - ಪರಿಶುದ್ದ ಬೈಬಲ್‌

10 ರಾಜನ ಮಾತು ದೇವರಿಂದ ಬಂದ ಸಂದೇಶದಂತಿದೆ. ಅವನ ತೀರ್ಮಾನ ಯಾವಾಗಲೂ ನ್ಯಾಯವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ರಾಜನ ತುಟಿಗಳಲ್ಲಿ ದೈವೋಕ್ತಿ, ನ್ಯಾಯತೀರಿಸುವುದರಲ್ಲಿ ಅವನ ಬಾಯಿ ತಪ್ಪಿಹೋಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ದೈವೋಕ್ತಿ ಹೊರಡುವುದು ಅರಸನ ಬಾಯಿಂದ; ತಪ್ಪುಮಾಡದು ಅವನ ಬಾಯಿ ತೀರ್ಪು ನೀಡುವಾಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ರಾಜನ ತುಟಿಗಳಲ್ಲಿ ದೈವೋಕ್ತಿ; ನ್ಯಾಯತೀರಿಸುವದರಲ್ಲಿ ಅವನ ಬಾಯಿ ತಪ್ಪಿಹೋಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅರಸನ ತುಟಿಗಳಲ್ಲಿ ದೈವೋಕ್ತಿ. ನ್ಯಾಯತೀರ್ಪಿನಲ್ಲಿ ಅವನ ಬಾಯಿಯು ದೋಷ ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 16:10
17 ತಿಳಿವುಗಳ ಹೋಲಿಕೆ  

ಯೋಸೇಫನು ಅವರಿಗೆ, “ನೀವು ಹೀಗೇಕೆ ಮಾಡಿದಿರಿ? ನಾನು ಶಕುನ ನೋಡಿ ರಹಸ್ಯಗಳನ್ನು ತಿಳಿದುಕೊಳ್ಳಬಲ್ಲೆನೆಂಬುದು ನಿಮಗೆ ಗೊತ್ತಿರಲಿಲ್ಲವೇ?” ಎಂದು ಕೇಳಿದನು.


ಈ ಬಟ್ಟಲಿನಲ್ಲಿ ನನ್ನ ಒಡೆಯನು ಕುಡಿಯುತ್ತಾನೆ. ದೇವರಿಗೆ ಪ್ರಶ್ನೆಗಳನ್ನು ಕೇಳಲು ಅವನು ಈ ಬಟ್ಟಲನ್ನೇ ಉಪಯೋಗಿಸುವನು. ನೀವು ಅವನ ಬಟ್ಟಲನ್ನು ಕದ್ದುಕೊಂಡು ತಪ್ಪುಮಾಡಿದಿರಿ’ ಎಂದು ಹೇಳು” ಎಂಬುದಾಗಿ ತಿಳಿಸಿದನು.


ನೀನು ಯೆಹೋವನ ಬಳಿಗೆ ಸಹಾಯಕ್ಕಾಗಿ ಹೋಗಬೇಕು. ದೇವರು ನಕ್ಷತ್ರಪುಂಜಗಳನ್ನು ನಿರ್ಮಿಸಿದ್ದಾನೆ. ಆತನು ಕತ್ತಲೆಯನ್ನು ಮುಂಜಾನೆಯ ಬೆಳಕನ್ನಾಗಿ ಮಾಡುತ್ತಾನೆ. ಹಗಲನ್ನು ಕಾರ್ಗತ್ತಲೆಯನ್ನಾಗಿ ಮಾರ್ಪಡಿಸುತ್ತಾನೆ. ಆತನು ಸಮುದ್ರದ ನೀರನ್ನು ಕರೆದು ಭೂಮಿಯ ಮೇಲೆ ಹೊಯ್ಯುತ್ತಾನೆ. ಆತನ ಹೆಸರು ಯೆಹೋವನು. ಆತನು ಒಂದು ಬಲವಾದ ನಗರವನ್ನು ರಕ್ಷಿಸಿ ಇನ್ನೊಂದನ್ನು ನಾಶನಕ್ಕೆ ಒಪ್ಪಿಸುತ್ತಾನೆ.” ನೀನು ಒಳ್ಳೆಯತನವನ್ನು ವಿಷಕಾರಿಯನ್ನಾಗಿ ಮಾಡಿದಿ. ನ್ಯಾಯವನ್ನು ಕೊಲೆಮಾಡಿದಿ. ಅದು ನೆಲದ ಮೇಲೆ ಬೀಳುವಂತೆ ಮಾಡಿದಿ.


ಅವರು ವಾಗ್ದಾನ ಮಾಡುತ್ತಾರೆ. ಆದರೆ ಅದು ಕೇವಲ ಸುಳ್ಳು, ಅವರು ಕೊಟ್ಟ ಮಾತನ್ನು ನಡಿಸುವದಿಲ್ಲ. ಬೇರೆ ದೇಶಗಳವರೊಂದಿಗೆ ಅವರು ಒಪ್ಪಂದ ಮಾಡುತ್ತಾರೆ. ದೇವರು ಆ ಒಪ್ಪಂದವನ್ನು ಒಪ್ಪುವುದಿಲ್ಲ. ಅವರ ನ್ಯಾಯಾಧೀಶರು ಉತ್ತ ಹೊಲದಲ್ಲಿ ಬೆಳೆಯುವ ವಿಷದ ಹಣಜಿಯಂತಿದ್ದಾರೆ.


ಸೊಲೊಮೋನನ ತೀರ್ಪಿನ ವಿಚಾರವು ಇಸ್ರೇಲಿನ ಜನರಿಗೆ ತಿಳಿಯಿತು. ಅವನು ವಿವೇಕಿಯಾದುದರಿಂದ ಅವರು ಅವನನ್ನು ಗೌರವಿಸಿದರು ಮತ್ತು ಸನ್ಮಾನಿಸಿದರು. ಅವನು ದೇವರ ಜ್ಞಾನದಿಂದ ಸಮಂಜಸವಾದ ತೀರ್ಪು ನೀಡುತ್ತಾನೆಂದು ಅವರು ಕಂಡುಕೊಂಡರು.


ಕುದುರೆಗಳು ಬಂಡೆಗಳ ಮೇಲೆ ಓಡುವವೋ? ಇಲ್ಲ! ಬಂಡೆಗಳನ್ನು ಊಳಲು ನಿಮ್ಮ ಹಸುಗಳನ್ನು ಉಪಯೋಗಿಸುವಿರೋ? ಇಲ್ಲ! ಆದರೆ ನೀವು ಎಲ್ಲವನ್ನು ತಿರುವುಮುರುವು ಮಾಡುತ್ತೀರಿ. ಒಳ್ಳೆಯತನವನ್ನು ನೀವು ವಿಷವಾಗಿ ಮಾಡಿದ್ದೀರಿ. ನ್ಯಾಯವನ್ನು ಕಹಿಯಾದ ವಿಷವನ್ನಾಗಿ ಮಾಡಿದ್ದೀರಿ.


ಶಕ್ತಿಪೂರ್ಣನಾದ ರಾಜನು ನ್ಯಾಯವನ್ನು ಪ್ರೀತಿಸುವನು. ದೇವರೇ, ನೀತಿಯನ್ನು ಸೃಷ್ಟಿಸಿದಾತನು ನೀನೇ. ಯಾಕೋಬ್ಯರಲ್ಲಿ ನ್ಯಾಯನೀತಿಗಳನ್ನು ಸ್ಥಾಪಿಸಿದವನು ನೀನೇ.


ಬಲಶಾಲಿಯಾದ ಉಜ್ಜೀಯನಲ್ಲಿ ನಾಶಕರವಾದ ಗರ್ವವು ಸೇರಿತು. ಅವನು ತನ್ನ ದೇವರಾದ ಯೆಹೋವನಿಗೆ ದ್ರೋಹ ಮಾಡಿದನು. ಅವನು ದೇವಾಲಯದೊಳಗೆ ಧೂಪವೇದಿಕೆಯಲ್ಲಿ ತಾನೇ ಧೂಪವನ್ನು ಹಾಕಲು ಹೋದನು.


ರಾಜನು ನನ್ನನ್ನೂ ನನ್ನ ಮಗನನ್ನೂ ಕೊಲ್ಲಲು ಇಚ್ಛಿಸುವ ವ್ಯಕ್ತಿಯಿಂದ ನಮ್ಮಿಬ್ಬರನ್ನೂ ರಕ್ಷಿಸಬಹುದು; ದೇವರು ನಮಗೆ ಕೊಟ್ಟಿರುವ ಸ್ವಾಸ್ತ್ಯವನ್ನು ನಮ್ಮಿಂದ ಕಸಿದುಕೊಳ್ಳದಂತೆ ಕಾಪಾಡಬಹುದು.’


ರಾಜನು ನ್ಯಾಯವಂತನಾಗಿದ್ದರೆ ದೇಶವು ಬಲಿಷ್ಠವಾಗಿರುವುದು. ರಾಜನು ತನ್ನ ಐಶ್ವರ್ಯವನ್ನು ಹೆಚ್ಚಿಸಿಕೊಳ್ಳುವುದಕ್ಕಾಗಿ ವಿಪರೀತ ತೆರಿಗೆಗಳನ್ನು ಹಾಕಿದರೆ, ದೇಶವು ಹಾಳಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು