Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 16:14 - ಪರಿಶುದ್ದ ಬೈಬಲ್‌

14 ರಾಜನು ಕೋಪದಿಂದಿರುವಾಗ ಯಾರನ್ನಾದರೂ ಕೊಂದರೂ ಕೊಲ್ಲಬಹುದು. ಆದರೆ ಜ್ಞಾನಿಯು ಆತನ ಕೋಪವನ್ನು ಶಮನಗೊಳಿಸಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ರಾಜನ ಕೋಪ ಮೃತ್ಯುವಿನ ದೂತ, ಜಾಣನು ಅದನ್ನು ಶಮನಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಭೂಪನ ಕೋಪ ಮೃತ್ಯುವಿನ ದೂತ; ಅದನ್ನು ಶಮನಪಡಿಸಲು ಜಾಣನು ಶಕ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಭೂಪನ ಕೋಪ ಮೃತ್ಯುವಿನ ದೂತ; ಜಾಣನು ಅದನ್ನು ಶಮನಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅರಸನ ಕೋಪವು ಮೃತ್ಯುವಿನ ದೂತರಂತೆ ಇರುತ್ತದೆ, ಆದರೆ ಜ್ಞಾನಿಯು ಅದನ್ನು ಶಮನಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 16:14
18 ತಿಳಿವುಗಳ ಹೋಲಿಕೆ  

ರಾಜನ ಕೋಪವು ಸಿಂಹದ ಘರ್ಜನೆಯಂತಿದೆ. ರಾಜನನ್ನು ಕೋಪಗೊಳಿಸಿದರೆ ಪ್ರಾಣಕ್ಕೆ ಹಾನಿ.


ರಾಜನ ಕೋಪವು ಸಿಂಹ ಘರ್ಜನೆಯಂತಿರುತ್ತದೆ. ರಾಜನಿಗೆ ನಿನ್ನ ಮೇಲಿರುವ ಸಂತೋಷವು ತುಂತುರು ಮಳೆಯಂತಿರುತ್ತದೆ.


ಆದ್ದರಿಂದ ಕ್ರಿಸ್ತನ ಪರವಾಗಿ ಮಾತಾಡಲು ನಮ್ಮನ್ನು ಕಳುಹಿಸಲಾಗಿದೆ. ಇದು, ದೇವರು ನಮ್ಮ ಮೂಲಕವಾಗಿ ಜನರನ್ನು ಕರೆಯುವಂತಿದೆ. ದೇವರೊಂದಿಗೆ ಸಮಾಧಾನವಾಗಿರಿ ಎಂದು ನಾವು ನಿಮ್ಮನ್ನು ಬೇಡಿಕೊಳ್ಳುವಾಗ ಕ್ರಿಸ್ತನ ಪರವಾಗಿ ಮಾತಾಡುವವರಾಗಿದ್ದೇವೆ.


ಟೈರ್ ಮತ್ತು ಸಿದೋನ್ ಪಟ್ಟಣಗಳ ಜನರ ಮೇಲೆ ಹೆರೋದನು ಬಹು ಕೋಪಗೊಂಡಿದ್ದನು. ಆ ಜನರೆಲ್ಲರೂ ಹೆರೋದನನ್ನು ಭೇಟಿಯಾಗಲು ಒಟ್ಟಾಗಿ ಹೋದರು. ಅವರು ಬ್ಲಾಸ್ತನನ್ನು ತಮ್ಮ ಕಡೆಗೆ ಒಲಿಸಿಕೊಂಡರು. ಬ್ಲಾಸ್ತನು ರಾಜನ ವೈಯಕ್ತಿಕ ಸೇವಕನಾಗಿದ್ದನು. ಆ ಜನರು ತಮ್ಮೊಂದಿಗೆ ಶಾಂತಿಸಂಧಾನ ಮಾಡಿಕೊಳ್ಳಬೇಕೆಂದು ಹೆರೋದನನ್ನು ಕೇಳಿಕೊಂಡರು. ಯಾಕೆಂದರೆ ಅವರ ನಾಡಿಗೆ ಹೆರೋದನ ನಾಡಿನಿಂದ ಆಹಾರವನ್ನು ತರಿಸಿಕೊಳ್ಳಬೇಕಾಗಿತ್ತು.


ಆದ್ದರಿಂದ ರಾಜನು ಯೋಹಾನನ ತಲೆಯನ್ನು ಕತ್ತರಿಸಿ ತರಲು ಒಬ್ಬ ಸೈನಿಕನನ್ನು ಕಳುಹಿಸಿದನು. ಸೈನಿಕನು ಸೆರೆಮನೆಗೆ ಹೋಗಿ ಯೋಹಾನನ ತಲೆಯನ್ನು ಕತ್ತರಿಸಿ,


ನಿನ್ನ ಯಜಮಾನನು ನಿನ್ನ ಮೇಲೆ ಕೋಪಗೊಂಡ ಮಾತ್ರಕ್ಕೆ ನಿನ್ನ ಉದ್ಯೋಗವನ್ನು ಬಿಡಬೇಡ. ನೀನು ತಾಳ್ಮೆಯಿಂದ ಸಹಾಯಕನಾಗಿದ್ದರೆ ದೊಡ್ಡ ತಪ್ಪುಗಳನ್ನು ಸಹ ನೀನು ಸರಿಪಡಿಸಲು ಸಾಧ್ಯ.


ದುಷ್ಟನಿಗೆ ದೇವರ ವಿರುದ್ಧ ದಂಗೆ ಏಳುವುದಕ್ಕೆ ಇಷ್ಟ. ಕೊನೆಯಲ್ಲಿ ದೇವರು ತನ್ನ ದೂತನನ್ನು ಕಳುಹಿಸಿ ಅವನನ್ನು ದಂಡಿಸುವನು.


ಫರೋಹನು ತನ್ನ ಭಕ್ಷ್ಯಗಾರನ ಮೇಲೆಯೂ ಪಾನದಾಯಕನ ಮೇಲೆಯೂ ಕೋಪಗೊಂಡನು.


ಮುಂಗೋಪಿಯು ಜಗಳವನ್ನು ಎಬ್ಬಿಸುವನು. ತಾಳ್ಮೆಯುಳ್ಳವನು ಶಾಂತಿಯನ್ನು ಸ್ಥಾಪಿಸುವನು.


ರಾಜರಿಗೆ ಸತ್ಯವನ್ನು ಕೇಳಲು ಇಷ್ಟ, ಸುಳ್ಳಾಡದ ಜನರೂ ಇಷ್ಟ.


ರಾಜನು ಸಂತೋಷದಿಂದಿರುವಾಗ ಎಲ್ಲರ ಜೀವನವು ಉತ್ತಮವಾಗಿರುವುದು. ರಾಜನು ನಿನ್ನನ್ನು ಮೆಚ್ಚಿಕೊಂಡರೆ, ಅದು ನಿನ್ನ ಪಾಲಿಗೆ ಮೋಡದಿಂದ ಸುರಿಯುವ ಮುಂಗಾರು ಮಳೆಯಂತಿರುವುದು.


ದುರಾಭಿಮಾನಿಗಳು ಇಡೀ ಪಟ್ಟಣವನ್ನೇ ಬೇಸರಗೊಳಿಸುವರು. ಜ್ಞಾನಿಗಳಾದರೋ ಕೋಪದ ಜ್ವಾಲೆಗಳನ್ನು ನಂದಿಸುವರು.


ಅರಸನು ಕೋಪೋದ್ರಿಕ್ತನಾಗಿ, ಪಾನಪಾತ್ರೆಯನ್ನು ಅಲ್ಲಿಯೇ ಬಿಟ್ಟು ಎದ್ದು ಹೂತೋಟಕ್ಕೆ ಹೋದನು. ಹಾಮಾನನು ಕೋಣೆಯಲ್ಲಿಯೇ ಉಳಿದು ತನ್ನ ಪ್ರಾಣವನ್ನು ಉಳಿಸಬೇಕೆಂದು ಎಸ್ತೇರ್ ರಾಣಿಯನ್ನು ಬೇಡುತ್ತಿದ್ದನು. ಯಾಕೆಂದರೆ ರಾಜನು ತನ್ನನ್ನು ಕೊಲ್ಲಲು ತೀರ್ಮಾನಿಸಿರುವುದು ಅವನಿಗೆ ಅರಿವಾಯಿತು.


ಅನೇಕರು ಅಧಿಪತಿಯಿಂದ ಸಹಾಯ ಬಯಸುವರು. ಆದರೆ ನ್ಯಾಯ ದೊರೆಯುವುದು ಯೆಹೋವನಿಂದಲೇ.


ಆಗ ದಾನಿಯೇಲನು ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಹೋಗಿ ತನಗೆ ಸ್ವಲ್ಪ ಸಮಯ ಕೊಡುವುದಾದರೆ ತಾನು ಅರಸನ ಕನಸನ್ನೂ ಅದರ ಅರ್ಥವನ್ನೂ ತಿಳಿಸುವುದಾಗಿ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು