Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 16:2 - ಪರಿಶುದ್ದ ಬೈಬಲ್‌

2 ಜನರು ತಮ್ಮ ಕಾರ್ಯಗಳೆಲ್ಲಾ ಸರಿಯೆಂದು ಆಲೋಚಿಸಿಕೊಂಡರೂ ಅವುಗಳ ಉದ್ದೇಶಕ್ಕನುಸಾರವಾಗಿ ತೀರ್ಪು ಕೊಡುವವನು ಯೆಹೋವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಮನುಷ್ಯನ ನಡತೆಯೆಲ್ಲಾ ಸ್ವಂತ ದೃಷ್ಟಿಗೆ ಶುದ್ಧವಾಗಿದೆ, ಯೆಹೋವನು ಅಂತರಂಗವನ್ನೇ ಪರೀಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಮನುಷ್ಯನ ನಡತೆಯೆಲ್ಲಾ ಸ್ವಂತ ದೃಷ್ಟಿಗೆ ಶುದ್ಧ; ಆದರೆ ಅವನ ಅಂತರಂಗವನ್ನು ವೀಕ್ಷಿಸುವಂಥವನು ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಮನುಷ್ಯನ ನಡತೆಯೆಲ್ಲಾ ಸ್ವಂತ ದೃಷ್ಟಿಗೆ ಶುದ್ಧ; ಯೆಹೋವನು ಅಂತರಂಗವನ್ನೇ ಪರೀಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಮನುಷ್ಯನ ಮಾರ್ಗಗಳೆಲ್ಲಾ ತನ್ನ ದೃಷ್ಟಿಯಲ್ಲಿ ಶುದ್ಧವಾಗಿವೆ, ಆದರೆ ಯೆಹೋವ ದೇವರು ಅವನ ಉದ್ದೇಶಗಳನ್ನು ಪರೀಕ್ಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 16:2
23 ತಿಳಿವುಗಳ ಹೋಲಿಕೆ  

ತನ್ನ ನಡತೆ ಸರಿಯೆಂದು ಒಬ್ಬನು ಭಾವಿಸಿಕೊಳ್ಳಬಹುದು; ಆದರೆ ಉದ್ದೇಶಗಳಿಗನುಸಾರವಾಗಿ ತೀರ್ಪು ನೀಡುವವನು ಯೆಹೋವನೇ.


ಆದರೆ ಯೆಹೋವನು ಸಮುವೇಲನಿಗೆ, “ಎಲೀಯಾಬನ ಎತ್ತರವನ್ನಾಗಲಿ ರೂಪವನ್ನಾಗಲಿ ಪರಿಗಣಿಸಬೇಡ. ಯಾಕೆಂದರೆ ನಾನು ಅವನನ್ನು ತಿರಸ್ಕರಿಸಿದ್ದೇನೆ. ಮನುಷ್ಯರಾದರೋ ಹೊರತೋರಿಕೆಯನ್ನು ಪರಿಗಣಿಸುತ್ತಾರೆ; ಯೆಹೋವನಾದರೋ ಹೊರತೋರಿಕೆಯನ್ನು ನೋಡದೆ ಹೃದಯವನ್ನೇ ನೋಡುವವನಾಗಿದ್ದಾನೆ” ಎಂದು ಹೇಳಿದನು.


ಯೇಸು ಫರಿಸಾಯರಿಗೆ ಹೀಗೆಂದನು, “ನೀವು ಜನರ ಮುಂದೆ ನಿಮ್ಮನ್ನು ಒಳ್ಳೆಯವರೆಂದು ತೋರಿಸಿಕೊಳ್ಳುತ್ತೀರಿ. ಆದರೆ ನಿಜವಾಗಿಯೂ ನಿಮ್ಮ ಹೃದಯದಲ್ಲಿರುವುದು ದೇವರಿಗೆ ಗೊತ್ತು. ಜನರ ದೃಷ್ಟಿಯಲ್ಲಿ ಅಮೂಲ್ಯವಾದುವುಗಳು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿವೆ.


ಕೆಲವರು ತಮ್ಮನ್ನು ಶುದ್ಧರೆಂದು ಯೋಚಿಸುವರು. ಆದರೆ ಅವರು ತಮ್ಮ ಹೊಲಸಿನಿಂದ ಶುದ್ಧೀಕರಿಸಲ್ಪಟ್ಟಿಲ್ಲ.


ನಾನೇ ಯೆಹೋವನು, ನಾನು ಮನುಷ್ಯನ ಹೃದಯದ ಆಳವನ್ನು ನೋಡಬಲ್ಲೆ, ಮನುಷ್ಯನ ಬುದ್ಧಿಯನ್ನು ಪರೀಕ್ಷಿಸಬಲ್ಲೆ. ಆದ್ದರಿಂದ ಪ್ರತಿಯೊಬ್ಬ ಮನುಷ್ಯನಿಗೆ ತಕ್ಕ ಪ್ರತಿಫಲವನ್ನು ನಾನು ನಿರ್ಧರಿಸಬಲ್ಲೆ. ಪ್ರತಿಯೊಬ್ಬ ಮನುಷ್ಯನಿಗೆ ಅವನ ಕೆಲಸಕ್ಕೆ ತಕ್ಕಂತೆ ಸರಿಯಾಗಿ ಫಲವನ್ನು ಕೊಡುವೆನು.


“ಇದರ ಬಗ್ಗೆ ನನಗೆ ಗೊತ್ತಿರಲಿಲ್ಲ” ಎಂದು ನೀನು ಹೇಳಲಾಗದು. ಯೆಹೋವನಿಗೆ ಪ್ರತಿಯೊಂದು ತಿಳಿದಿದೆ. ನಿನ್ನ ಕಾರ್ಯಗಳ ಉದ್ದೇಶವೂ ಆತನಿಗೆ ತಿಳಿದಿದೆ. ಯೆಹೋವನು ನಿನ್ನನ್ನು ಗಮನಿಸಿ ನಿನ್ನ ಕಾರ್ಯಗಳಿಗೆ ಪ್ರತಿಫಲ ಕೊಡುವನು.


ಅವನು ತನ್ನನ್ನು ವಂಚಿಸಿಕೊಳ್ಳುವನು. ಅವನು ತನ್ನ ತಪ್ಪುಗಳನ್ನು ಕಾಣುವುದೂ ಇಲ್ಲ, ಅವುಗಳಿಗಾಗಿ ಕ್ಷಮೆಯನ್ನು ಕೇಳುವುದೂ ಇಲ್ಲ.


ಮನುಷ್ಯನ ಮಾರ್ಗಗಳು ಯೆಹೋವನಿಗೆ ಕಾಣುತ್ತಲೇ ಇವೆ; ಯೆಹೋವನು ಅವುಗಳನ್ನು ಪರೀಕ್ಷಿಸುತ್ತಾನೆ.


ಮನುಷ್ಯದೃಷ್ಟಿಗೆ ಸರಳವಾಗಿ ತೋರುವ ಒಂದು ಮಾರ್ಗವಿದೆ; ಆದರೆ ಅದರ ಅಂತ್ಯವು ಮರಣ.


ತೆಕೇಲ್ ಎಂದರೆ: ನೀನು ತಕ್ಕಡಿಯಲ್ಲಿ ತೂಗಲ್ಪಟ್ಟು ಕಡಿಮೆಯಾಗಿ ಕಂಡುಬಂದಿರುವೆ.


ಪ್ರಾಮಾಣಿಕತೆಯು ಒಳ್ಳೆಯವರ ಜೀವನ ಶೈಲಿ. ಅವರು ನೇರವಾದ ಮತ್ತು ಸತ್ಯವಾದ ಮಾರ್ಗವನ್ನು ಅನುಸರಿಸುವರು. ಯೆಹೋವನೇ, ನೀನು ಆ ಮಾರ್ಗವನ್ನು ಅನುಸರಿಸಲು ಸುಲಭವಾಗುವಂತೆ ಮಾಡುವೆ.


ನಾನು ಅವಳ ಹಿಂಬಾಲಕರನ್ನು ಕೊಲ್ಲುತ್ತೇನೆ. ಮನುಷ್ಯರ ಅಂತರಂಗವನ್ನೂ ಅವರ ಆಲೋಚನೆಗಳನ್ನೂ ತಿಳಿದಿರುವಾತನು ನಾನೇ ಎಂಬುದನ್ನು ಆಗ ಎಲ್ಲಾ ಸಭೆಗಳವರು ತಿಳಿದುಕೊಳ್ಳುವರು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ನೀಡುತ್ತೇನೆ.


“ಥುವತೈರದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ದೇವಕುಮಾರನು ಈ ಸಂಗತಿಗಳನ್ನು ಹೇಳುತ್ತಾನೆ. ಬೆಂಕಿಯ ಉರಿಯಂತೆ ಪ್ರಜ್ವಲಿಸುವ ಕಣ್ಣುಗಳೂ ಹೊಳೆಯುವ ತಾಮ್ರದಂತಿರುವ ಪಾದಗಳೂ ಇರುವಾತನು, ನಿನಗೆ ಇವುಗಳನ್ನು ಹೇಳುತ್ತಾನೆ.


ಇನ್ನು ಮುಂದೆ ಬಡಾಯಿಕೊಚ್ಚಬೇಡಿ! ಸೊಕ್ಕಿನ ಮಾತುಗಳನ್ನು ಆಡಬೇಡಿ! ಏಕೆಂದರೆ ಯೆಹೋವನು ಪ್ರತಿಯೊಂದನ್ನು ಬಲ್ಲನು. ಆತನು ಮನುಷ್ಯರನ್ನು ಮುನ್ನಡೆಸುತ್ತಾನೆ ಮತ್ತು ತೂಗಿ ನೋಡುತ್ತಾನೆ.


ಮೂಢನು ತನ್ನ ದಾರಿಯನ್ನೇ ಒಳ್ಳೆಯದೆಂದು ಭಾವಿಸಿಕೊಂಡಿರುತ್ತಾನೆ. ಜ್ಞಾನಿಯಾದರೋ ಉಪದೇಶಕ್ಕೆ ಕಿವಿಗೊಡುತ್ತಾನೆ.


ಯೆಹೋವನ ದೂತನು ಬಿಳಾಮನಿಗೆ, “ನೀನು ಮೂರು ಸಲವೂ ಕತ್ತೆಯನ್ನು ಹೊಡೆದದ್ದೇಕೆ? ನಿನ್ನ ಪ್ರಯಾಣವು ನನ್ನ ಚಿತ್ತಕ್ಕೆ ವಿರುದ್ಧವಾದದ್ದರಿಂದ ನಿನ್ನನ್ನು ತಡೆಯುವುದಕ್ಕೆ ನಾನೇ ಬಂದಿದ್ದೇನೆ.


ಅವರಲ್ಲಿ ಮೂನ್ನೂರು ಮಂದಿ ಗಂಡಸರು ಕೈಯಿಂದ ನೀರನ್ನು ಬಾಯಿಯವರೆಗೆ ತೆಗೆದುಕೊಂಡು ನಾಯಿಯಂತೆ ನೆಕ್ಕಿದರು. ಉಳಿದವರೆಲ್ಲರು ಬಗ್ಗಿ ಮೊಣಕಾಲೂರಿ ನೀರನ್ನು ಕುಡಿದರು.


(ಆ ಕಾಲದಲ್ಲಿ ಇಸ್ರೇಲರಿಗೆ ಅರಸನಿರಲಿಲ್ಲ. ಪ್ರತಿಯೊಬ್ಬರೂ ತಮಗೆ ಸರಿ ತೋರಿದಂತೆ ನಡೆದುಕೊಳ್ಳುತ್ತಿದ್ದರು.)


ಜನರು ಬೆಳ್ಳಿಬಂಗಾರವನ್ನು ಬೆಂಕಿಗೆ ಹಾಕಿ ಶುದ್ಧಮಾಡುವರು. ಆದರೆ ಮನುಷ್ಯರ ಹೃದಯಗಳನ್ನು ಶುದ್ಧಮಾಡುವವನು ಯೆಹೋವನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು