ಜ್ಞಾನೋಕ್ತಿಗಳು 16:20 - ಪರಿಶುದ್ದ ಬೈಬಲ್20 ಉಪದೇಶವನ್ನು ಗಮನವಿಟ್ಟು ಕೇಳುವವನು ಅದರ ಲಾಭ ಹೊಂದುವನು; ಯೆಹೋವನಲ್ಲಿ ಭರವಸೆ ಇಡುವವನು ಆಶೀರ್ವಾದ ಹೊಂದುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ದೇವರ ವಾಕ್ಯವನ್ನು ಸ್ಮರಿಸುವವನು ಸುಕ್ಷೇಮವನ್ನು ಪಡೆಯುವನು, ಯೆಹೋವನಲ್ಲಿ ಭರವಸವಿಡುವವನು ಭಾಗ್ಯವಂತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ದೇವರ ವಾಕ್ಯ ಸ್ಮರಿಸುವವನು ಸುಕ್ಷೇಮದಿಂದ ಬಾಳುವನು; ಸರ್ವೇಶ್ವರನಲ್ಲಿ ಭರವಸೆ ಇಡುವವನು ಭಾಗ್ಯವಂತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 [ದೇವರ] ವಾಕ್ಯವನ್ನು ಸ್ಮರಿಸುವವನು ಸುಕ್ಷೇಮವನ್ನು ಪಡೆಯುವನು; ಯೆಹೋವನಲ್ಲಿ ಭರವಸವಿಡುವವನು ಭಾಗ್ಯವಂತನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಕಾರ್ಯವನ್ನು ಜ್ಞಾನದಿಂದ ನಡೆಸುವವನು ಒಳ್ಳೆಯದನ್ನು ಪಡೆಯುವನು. ಯೆಹೋವ ದೇವರಲ್ಲಿ ಭರವಸೆ ಇಡುವವನು ಧನ್ಯನು. ಅಧ್ಯಾಯವನ್ನು ನೋಡಿ |
ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್ನೆಗೋ ಇವರುಗಳ ದೇವರಿಗೆ ಸ್ತೋತ್ರವಾಗಲಿ. ಅವರ ದೇವರು ತನ್ನ ದೂತನನ್ನು ಕಳುಹಿಸಿ ತನ್ನ ಸೇವಕರನ್ನು ಬೆಂಕಿಯಿಂದ ರಕ್ಷಿಸಿದ್ದಾನೆ. ಈ ಮೂರು ಜನರು ತಮ್ಮ ದೇವರ ಮೇಲೆ ವಿಶ್ವಾಸವಿಟ್ಟರು. ಅವರು ನನ್ನ ಆಜ್ಞೆಯನ್ನು ಪಾಲಿಸಲು ಒಪ್ಪಲಿಲ್ಲ. ಬೇರೆ ಯಾವ ದೇವರನ್ನೂ ಪೂಜಿಸುವುದಕ್ಕೆ ಅಥವಾ ಸೇವಿಸುವುದಕ್ಕೆ ಬದಲಾಗಿ ಸಾಯಲು ಅವರು ಸಿದ್ಧರಾಗಿದ್ದರು.