Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 16:22 - ಪರಿಶುದ್ದ ಬೈಬಲ್‌

22 ವಿವೇಕವು ವಿವೇಕಿಗಳಿಗೆ ನಿಜಜೀವವನ್ನು ಕೊಡುತ್ತದೆ. ಆದರೆ ಮೂಢರು ತಮ್ಮ ಮೂಢತನದಿಂದಲೇ ದಂಡಿಸಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ವಿವೇಕಿಗೆ ವಿವೇಕವೇ ಜೀವದ ಬುಗ್ಗೆ, ಮೂರ್ಖನಿಗೆ ಮೂರ್ಖತನವೇ ದಂಡನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ವಿವೇಕಿಗೆ ವಿವೇಕವೇ ಜೀವದ ಬುಗ್ಗೆ; ಮೂರ್ಖನಿಗೆ ಮೂರ್ಖತನವೇ ತಕ್ಕ ದಂಡನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ವಿವೇಕಿಗೆ ವಿವೇಕವೇ ಜೀವದ ಬುಗ್ಗೆ; ಮೂರ್ಖನಿಗೆ ಮೂರ್ಖತನವೇ ದಂಡನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ವಿವೇಕವು ವಿವೇಕಿಗಳಿಗೆ ಜೀವನದ ಬುಗ್ಗೆ, ಆದರೆ ಮೂರ್ಖತನವು ಮೂರ್ಖರಿಗೆ ಶಿಕ್ಷೆಯನ್ನು ತರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 16:22
16 ತಿಳಿವುಗಳ ಹೋಲಿಕೆ  

ಒಬ್ಬನಿಗೆ ಜೀವವನ್ನು ಕೊಡುವಂಥದ್ದು ದೈಹಿಕ ಸಂಗತಿಗಳಲ್ಲ. ಜೀವವನ್ನು ಕೊಡುವಂಥದ್ದು ದೇವರಾತ್ಮ. ನಾನು ನಿಮಗೆ ಹೇಳಿದ ಸಂಗತಿಗಳು ಆತ್ಮಿಕ ಸಂಗತಿಗಳಾಗಿವೆ. ಆದ್ದರಿಂದ ಈ ಸಂಗತಿಗಳೇ ಜೀವವನ್ನು ಕೊಡುತ್ತವೆ.


ಫರಿಸಾಯರಿಂದ ದೂರವಾಗಿರಿ. ಅವರೇ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸಲು ಹೋಗುತ್ತಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಹಳ್ಳದಲ್ಲಿ ಬೀಳುವರು” ಎಂದು ಉತ್ತರಕೊಟ್ಟನು.


ಜ್ಞಾನಿಯ ಉಪದೇಶಗಳು ಜೀವದ ಬುಗ್ಗೆಯಾಗಿವೆ; ಮರಣಕರವಾದ ಬಲೆಗಳಿಗೆ ಸಿಕ್ಕಿಕೊಳ್ಳದಂತೆ ಅವು ಸಹಾಯಮಾಡುತ್ತವೆ.


“ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನ ಮಾತನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅವನಿಗೆ ಅಪರಾಧಿಯೆಂಬ ತೀರ್ಪಾಗುವುದಿಲ್ಲ. ಅವನು ಈಗಾಗಲೇ ಮರಣವನ್ನು ದಾಟಿ ಜೀವಕ್ಕೆ ಪ್ರವೇಶಿಸಿದ್ದಾನೆ.


ಒಳ್ಳೆಯವನ ಮಾತುಗಳು ನೀರಿನ ಬುಗ್ಗೆಯಂತೆ ಜೀವದಾಯಕ. ಕೆಡುಕನ ಮಾತುಗಳಲ್ಲಿ ಕೆಟ್ಟದ್ದೇ ಅಡಗಿಕೊಂಡಿರುತ್ತದೆ.


ಸೀಮೋನ್ ಪೇತ್ರನು ಯೇಸುವಿಗೆ, “ಪ್ರಭುವೇ, ನಾವೆಲ್ಲಿಗೆ ಹೋಗೋಣ? ನಿತ್ಯಜೀವವನ್ನು ಕೊಡುವ ಸಂಗತಿಗಳು ನಿನ್ನಲ್ಲಿವೆ.


ಬಾಯಿಮಾತುಗಳು ಆಳವಾದ ನೀರಿನಂತಿರಲು ಸಾಧ್ಯ; ಆದರೆ ಜ್ಞಾನದ ಮೂಲವು ನುಗ್ಗಿಬರುವ ತೊರೆಯಂತಿದೆ.


ಒಳ್ಳೆಯವರು ಎಚ್ಚರಿಕೆಯಿಂದ ಯೋಚಿಸಿ ಉತ್ತರ ಕೊಡುವರು. ದುಷ್ಟರಾದರೋ ಯೋಚಿಸದೆ ಮಾತಾಡುವರು; ಅದರಿಂದ ಜನರಿಗೆ ಕೇವಲ ತೊಂದರೆಯಷ್ಟೇ.


ಜ್ಞಾನಿಯ ಮಾತನ್ನು ಜನರು ಕೇಳಬಯಸುತ್ತಾರೆ. ಮೂಢನು ಕೇವಲ ಮೂರ್ಖತನವನ್ನೇ ಮಾತಾಡುವನು.


ಯೆಹೋವನಲ್ಲಿರುವ ಭಯಭಕ್ತಿ ಜೀವದ ಬುಗ್ಗೆ. ಅದು ಮನುಷ್ಯನನ್ನು ಮರಣದ ಬಲೆಯಿಂದ ಕಾಪಾಡುತ್ತದೆ.


ಜ್ಞಾನವಿವೇಕಗಳು ನಿನಗೆ ಜೀವವನ್ನೂ ನಿನ್ನ ಜೀವಿತಕ್ಕೆ ಸೌಂದರ್ಯವನ್ನೂ ನೀಡುತ್ತವೆ.


ಜ್ಞಾನಿಯನ್ನು ಅವನ ಜ್ಞಾನದಿಂದಲೇ ಜನರು ಗುರುತಿಸುವರು. ಎಚ್ಚರಿಕೆಯಿಂದ ಮಾತಾಡುವವನು ಒಡಂಬಡಿಸುವನು.


ಜ್ಞಾನಿಯ ಹೃದಯವು ಅವನ ಬಾಯಿಗೆ ಮಾರ್ಗದರ್ಶನ. ಅವನ ಮಾತುಗಳು ಒಳ್ಳೆಯದಾಗಿವೆ; ಕೇಳಲು ಯೋಗ್ಯವಾಗಿವೆ.


ಮೂಢನು ಮಾತಿನಲ್ಲಿ ತನ್ನನ್ನೇ ನಾಶಪಡಿಸಿಕೊಳ್ಳುವನು. ಅವನ ಮಾತುಗಳೇ ಅವನಿಗೆ ಬಲೆಯಾಗುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು