Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 17:12 - ಪರಿಶುದ್ದ ಬೈಬಲ್‌

12 ಮೂಢಕಾರ್ಯಗಳಲ್ಲಿ ನಿರತನಾಗಿರುವ ಮೂಢನನ್ನು ಭೇಟಿಯಾಗುವುದಕ್ಕಿಂತ ತನ್ನ ಮರಿಗಳನ್ನು ಕಳೆದುಕೊಂಡು ಕೋಪದಿಂದಿರುವ ತಾಯಿಕರಡಿಗೆ ಎದುರಾಗುವುದೇ ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮೂರ್ಖತನದಲ್ಲಿ ಮುಳುಗಿರುವ ಮೂಢನನ್ನು ಎದುರಾಗುವುದಕ್ಕಿಂತಲೂ, ಮರಿಗಳನ್ನು ಕಳೆದುಕೊಂಡ ಕರಡಿಯನ್ನು ಎದುರಾಗುವುದು ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಮೂರ್ಖತನದಲ್ಲಿ ಮುಳುಗಿರುವ ಮೂಢನಿಗೆ ಎದುರಾಗುವುದಕ್ಕಿಂತಲು ಮರಿಗಳನ್ನು ಕಳೆದುಕೊಂಡ ಕರಡಿಗೆ ಎದುರಾಗುವುದು ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮೂರ್ಖತನದಲ್ಲಿ ಮುಣುಗಿರುವ ಮೂಢನಿಗೆ ಎದುರಾಗುವದಕ್ಕಿಂತಲೂ ಮರಿಗಳನ್ನು ಕಳೆದುಕೊಂಡ ಕರಡಿಗೆ ಎದುರಾಗುವದು ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ತನ್ನ ಮೂಢತೆಯಲ್ಲಿರುವ ಬುದ್ಧಿಹೀನನನ್ನು ಸಂಧಿಸುವುದಕ್ಕಿಂತ ಮರಿಗಳನ್ನು ಕಳೆದುಕೊಂಡ ಕರಡಿಯನ್ನು ಸಂಧಿಸುವುದು ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 17:12
8 ತಿಳಿವುಗಳ ಹೋಲಿಕೆ  

ತನ್ನ ಮರಿಗಳನ್ನು ಕಳೆದುಕೊಂಡ ಕರಡಿಯಂತೆ ಅವರ ಮೇಲರಗಿ ಅವರನ್ನು ಗಾಯಗೊಳಿಸಿ ಅವರ ಎದೆಯನ್ನು ಸೀಳಿ ಬಿಡುವೆನು. ನಾನು ಸಿಂಹದಂತೆಯೂ ಕ್ರೂರ ಮೃಗದಂತೆಯೂ ಅವರನ್ನು ಸೀಳಿ ತಿಂದುಬಿಡುವೆನು.”


ಅವನು ಮಾತನ್ನು ಮುಂದುವರಿಸಿ, “ನಿನ್ನ ತಂದೆಯು ಮತ್ತು ಅವನ ಜನರು ಶೂರರೆಂಬುದು ನಿನಗೆ ತಿಳಿದಿದೆ. ಕಾಡಿನಲ್ಲಿ ತನ್ನ ಮರಿಗಳನ್ನು ಕಳೆದುಕೊಂಡ ಕರಡಿಯಂತೆ ಅವರು ರೋಷವುಳ್ಳವರಾಗಿದ್ದಾರೆ. ನಿನ್ನ ತಂದೆಯು ಒಬ್ಬ ನುರಿತ ಹೋರಾಟಗಾರ. ಅವನು ಜನರೊಂದಿಗೆ ರಾತ್ರಿಯಲ್ಲಿ ಇರುವುದಿಲ್ಲ.


ಜ್ಞಾನಿಗಳು ತನಗೆ ಮೋಸಮಾಡಿದರೆಂಬುದು ತಿಳಿದಾಗ ಹೆರೋದನು ಬಹಳ ಕೋಪಗೊಂಡನು. ಆ ಮಗು ಹುಟ್ಟಿದ ಸಮಯವನ್ನು ಹೆರೋದನು ಜ್ಞಾನಿಗಳಿಂದ ತಿಳಿದುಕೊಂಡಿದ್ದನು. ಆ ಮಗು ಹುಟ್ಟಿ ಎರಡು ವರ್ಷಗಳಾಗಿದ್ದವು. ಆದ್ದರಿಂದ ಹೆರೋದನು ಬೆತ್ಲೆಹೇಮಿನಲ್ಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿದ್ದ ಎರಡು ವರ್ಷದ ಮತ್ತು ಅವರಿಗಿಂತ ಚಿಕ್ಕವರಾದ ಗಂಡುಮಕ್ಕಳನ್ನೆಲ್ಲಾ ಕೊಲ್ಲಬೇಕೆಂದು ಆಜ್ಞಾಪಿಸಿದನು.


ಬಲಹೀನರನ್ನು ಆಳುವ ಕೆಡುಕನು ಗರ್ಜಿಸುವ ಸಿಂಹದಂತಿರುವನು; ಮೇಲೆರಗಲಿರುವ ಕರಡಿಯಂತಿರುವನು.


ಕಲ್ಲು ಭಾರ, ಮರಳು ಭಾರ, ಮೂಢನಿಂದಾಗುವ ಕೇಡು ಇವೆರಡಕ್ಕಿಂತಲೂ ಬಹು ಭಾರ.


ಎಲೀಷನು ಹಿಂದಕ್ಕೆ ತಿರುಗಿ ಅವರನ್ನು ನೋಡಿ ಅವರಿಗೆ ಕೇಡಾಗುವಂತೆ ಯೆಹೋವನನ್ನು ಕೇಳಿಕೊಂಡನು. ಆಗ ಕಾಡಿನಿಂದ ಎರಡು ಕರಡಿಗಳು ಹೊರಗೆ ಬಂದು ಅವರ ಮೇಲೆರಗಿ ನಲವತ್ತೆರಡು ಮಂದಿ ಬಾಲಕರನ್ನು ಸೀಳಿಹಾಕಿದವು.


ದುಷ್ಟನಿಗೆ ದೇವರ ವಿರುದ್ಧ ದಂಗೆ ಏಳುವುದಕ್ಕೆ ಇಷ್ಟ. ಕೊನೆಯಲ್ಲಿ ದೇವರು ತನ್ನ ದೂತನನ್ನು ಕಳುಹಿಸಿ ಅವನನ್ನು ದಂಡಿಸುವನು.


ಜ್ಞಾನಿಯು ಮೂಢನೊಂದಿಗೆ ನ್ಯಾಯಾಲಯಕ್ಕೆ ಹೋದರೆ, ಮೂಢನು ಕೇವಲ ಆರ್ಭಟಿಸುವನು; ಹುಚ್ಚುಚ್ಚಾಗಿ ಕೂಗಾಡುವನು; ಅವರಿಗೆ ಪರಿಹಾರ ದೊರೆಯುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು