Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 17:5 - ಪರಿಶುದ್ದ ಬೈಬಲ್‌

5 ಬಡವನನ್ನು ಗೇಲಿಮಾಡಿದರೆ ಅವನನ್ನು ನಿರ್ಮಿಸಿದ ದೇವರಿಗೇ ಅವಮಾನಮಾಡಿದಂತಾಗುವುದು. ಬೇರೊಬ್ಬನ ದುರಾವಸ್ಥೆಯಲ್ಲಿ ಸಂತೋಷಪಡುವವರಿಗೆ ದಂಡನೆಯು ಖಂಡಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಬಡವರನ್ನು ಹಾಸ್ಯಮಾಡುವವನು ಸೃಷ್ಟಿಕರ್ತನನ್ನೇ ಹೀನೈಸುವನು, ಪರರ ವಿಪತ್ತಿಗೆ ಹಿಗ್ಗುವವನು ದಂಡನೆಯನ್ನು ಹೊಂದದಿರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಬಡವರನ್ನು ಗೇಲಿಮಾಡುವವನು ತನ್ನ ಸೃಷ್ಟಿಕರ್ತನನ್ನೇ ಹೀನೈಸುತ್ತಾನೆ; ಪರರ ಕಷ್ಟದುಃಖಗಳನ್ನು ನೋಡಿ ಹಿಗ್ಗುವವನು ದಂಡನೆಗೆ ಗುರಿಯಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಬಡವರನ್ನು ಹಾಸ್ಯಮಾಡುವವನು ಸೃಷ್ಟಿಕರ್ತನನ್ನೇ ಹೀನೈಸುವನು; [ಪರರ] ವಿಪತ್ತಿಗೆ ಹಿಗ್ಗುವವನು ದಂಡನೆಯನ್ನು ಹೊಂದದಿರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಬಡವರನ್ನು ಹಾಸ್ಯಮಾಡುವವನು, ತನ್ನನ್ನು ಸೃಷ್ಟಿಸಿದ ಯೆಹೋವ ದೇವರನ್ನು ನಿಂದಿಸುತ್ತಾನೆ; ಬೇರೆಯವರ ವಿಪತ್ತುಗಳಿಗೆ ಸಂತೋಷಿಸುವವನು ಶಿಕ್ಷೆಯನ್ನು ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 17:5
13 ತಿಳಿವುಗಳ ಹೋಲಿಕೆ  

ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನಿಗೇ ಅವಮಾನ ಮಾಡುತ್ತಾನೆ. ಬಡವರಿಗೆ ಕರುಣೆ ತೋರುವವನು ತನ್ನ ಸೃಷ್ಟಿಕರ್ತನನ್ನೇ ಸನ್ಮಾನಿಸುತ್ತಾನೆ.


ಈ ಲೋಕದ ಐಶ್ವರ್ಯವನ್ನು ಹೊಂದಿರುವ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿದರೂ ಸಹಾಯ ಮಾಡದೆ ಹೋದರೆ, ಅವನಲ್ಲಿ ದೇವರ ಪ್ರೀತಿಯು ನೆಲೆಗೊಂಡಿಲ್ಲ. ಅವನೇಕೆ ಸಹಾಯ ಮಾಡಲಿಲ್ಲ? ಏಕೆಂದರೆ ಅವನ ಹೃದಯದಲ್ಲಿ ದೇವರ ಮೇಲೆ ಪ್ರೀತಿಯೇ ಇಲ್ಲ.


ಗರ್ವಿಷ್ಠರು ಯೆಹೋವನಿಗೆ ಅಸಹ್ಯ. ಆ ಗರ್ವಿಷ್ಠರಿಗೆ ಯೆಹೋವನ ದಂಡನೆ ಖಂಡಿತ.


“ನನ್ನ ವೈರಿಗಳು ನಾಶವಾದಾಗ ನಾನೆಂದೂ ಸಂತೋಷಪಡಲಿಲ್ಲ. ನನ್ನ ವೈರಿಗಳಿಗೆ ಕೇಡಾದಾಗ ನಾನೆಂದೂ ನಗಲಿಲ್ಲ.


ನೆರೆಯವರನ್ನು ತಿರಸ್ಕರಿಸುವುದು ತಪ್ಪು. ನೀವು ಸಂತೋಷದಿಂದ ಇರಬೇಕಾದರೆ ಬಡವರಿಗೆ ದಯೆತೋರಿಸಿ.


ಸಂತೋಷಪಡುವವರ ಸಂಗಡ ಸಂತೋಷಪಡಿರಿ. ದುಃಖಪಡುವವರೊಂದಿಗೆ ದುಃಖಪಡಿರಿ.


ಯೆಹೋವನೇ, ನಾನು ನಿನ್ನನ್ನು ಬಿಟ್ಟು ಓಡಿಹೋಗಲಿಲ್ಲ, ನಾನು ನಿನ್ನನ್ನು ಅನುಸರಿಸಿದೆನು. ನೀನು ಹೇಳಿದಂತೆ ನಾನು ಕುರುಬನಾದೆ. ಆ ಭಯಂಕರ ದಿನವು ಬರಲೆಂದು ನಾನು ಬಯಸಲಿಲ್ಲ. ಯೆಹೋವನೇ, ನಾನು ಹೇಳಿದ್ದೆಲ್ಲ ನಿನಗೆ ಗೊತ್ತಿದೆ. ಈಗ ನಡೆಯುತ್ತಿರುವುದನ್ನೆಲ್ಲಾ ನೀನು ನೋಡುತ್ತಿರುವೆ.


ನಿನ್ನ ಆಲಯಾಭಿಮಾನವು ನನ್ನನ್ನು ಬೆಂಕಿಯಂತೆ ದಹಿಸುತ್ತಿದೆ. ನಿನ್ನನ್ನು ಗೇಲಿಮಾಡುವ ಜನರಿಂದ ನನಗೆ ಅಪಮಾನವಾಗುತ್ತಿದೆ.


ಯಾಕೆಂದರೆ ನನ್ನ ಪರಿಶುದ್ಧ ಪರ್ವತದಲ್ಲಿ ರಕ್ತವನ್ನು ಸುರಿಸಿದೆ. ನೀನು ಹುಟ್ಟಲೇ ಇಲ್ಲ ಎಂಬುದಾಗಿ ಅನಿಸುವದು. ಆದ್ದರಿಂದ ಇತರ ಜನಾಂಗಗಳು ನಿನ್ನ ರಕ್ತವನ್ನು ಸುರಿಸುತ್ತವೆ. ನೀನು ಕೊನೆಗೊಳ್ಳುವೆ.


ಅಮ್ಮೋನಿಯರಿಗೆ ಹೀಗೆ ಹೇಳು: ‘ನನ್ನ ಒಡೆಯನಾದ ಯೆಹೋವನ ಮಾತುಗಳನ್ನು ಕೇಳಿರಿ. ಆತನು ಹೇಳುವುದೇನೆಂದರೆ, ನನ್ನ ಪವಿತ್ರಾಲಯವು ಅಪವಿತ್ರಗೊಂಡಾಗಲೂ ಇಸ್ರೇಲ್ ದೇಶವು ನಾಶವಾದಾಗಲೂ ಯೆಹೂದದ ಜನರು ಸೆರೆ ಒಯ್ಯಲ್ಪಟ್ಟಾಗಲೂ ನೀವು ಸಂತೋಷಪಟ್ಟಿರಿ.


ನೀನು ನಾಚಿಕೆಯಿಂದ ಮುಚ್ಚಲ್ಪಡುವೆ, ನಿರಂತರಕ್ಕೂ ನಾಶವಾಗುವೆ. ಯಾಕೆಂದರೆ ನೀನು ನಿನ್ನ ಸಹೋದರನಾದ ಯಾಕೋಬನೊಂದಿಗೆ ಕ್ರೂರವಾಗಿ ನಡೆದುಕೊಂಡೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು