Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 17:8 - ಪರಿಶುದ್ದ ಬೈಬಲ್‌

8 ಲಂಚವು ಅದೃಷ್ಟ ಎಂದು ಭಾವಿಸಿಕೊಳ್ಳುವವರಿಗೆ, ಅವರು ಹೋದಲ್ಲೆಲ್ಲಾ ಅದೇ ಕಾರ್ಯಸಾಧಕದಂತೆ ಕಾಣುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕೊಡುವವನ ದೃಷ್ಟಿಗೆ ಲಂಚವು ಚಿಂತಾಮಣಿಯಾಗಿದೆ, ಎಲ್ಲಿ ಹೋದರೂ ಅವನಿಗೆ ಅನುಕೂಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಕೊಡುವವನ ಕಣ್ಣಿಗೆ ಲಂಚವು ಚಿಂತಾಮಣಿಯಂತೆ; ಎತ್ತ ತಿರುಗಿದರತ್ತ ಅದರಿಂದ ಜಯವಂತೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಕೊಡುವವನ ದೃಷ್ಟಿಗೆ ಲಂಚವು ಚಿಂತಾಮಣಿಯಾಗಿದೆ, ಎಲ್ಲಿ ಹೋದರೂ ಅವನಿಗೆ ಅನುಕೂಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಕೊಡುವವನ ಕಣ್ಣಿಗೆ ಲಂಚವು ಆಕರ್ಷಣೆಯಾಗಿದೆ; ಪ್ರತಿ ತಿರುವಿನಲ್ಲಿಯೂ ಯಶಸ್ಸು ಬರುತ್ತದೆ ಎಂದು ಅವರು ಭಾವಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 17:8
19 ತಿಳಿವುಗಳ ಹೋಲಿಕೆ  

“ಲಂಚವನ್ನು ತೆಗೆದುಕೊಳ್ಳಕೂಡದು; ಲಂಚವು ಕಣ್ಣುಳ್ಳವರನ್ನು ಕುರುಡರನ್ನಾಗಿ ಮಾಡುತ್ತದೆ; ನಿರಪರಾಧಿಗೆ ಅನ್ಯಾಯ ಮಾಡುತ್ತದೆ.


ಕೆಟ್ಟದ್ದನ್ನು ಎರಡೂ ಕೈಗಳಿಂದ ಮಾಡಲು ಜನರು ನಿಪುಣರಾಗಿದ್ದಾರೆ. ಅಧಿಕಾರಿಗಳು ಲಂಚ ಕೇಳುತ್ತಾರೆ. ನ್ಯಾಯಾಧೀಶರು ತಮ್ಮ ತೀರ್ಪು ಬದಲಾಯಿಸಲು ಹಣ ಕೇಳುತ್ತಾರೆ. “ಪ್ರಮುಖ ನಾಯಕರು” ನ್ಯಾಯವಾದ ಮತ್ತು ಜನರಿಗೆ ಹಿತವಾದ ತೀರ್ಮಾನವನ್ನು ಮಾಡುವದಿಲ್ಲ. ತಮ್ಮ ಇಷ್ಟಪ್ರಕಾರ ಅವರು ಮಾಡುತ್ತಿದ್ದಾರೆ.


ಯಾಕೆ ಹೀಗೆ? ಯಾಕೆಂದರೆ ನಿಮ್ಮ ಅನೇಕ ಪಾಪಕೃತ್ಯಗಳನ್ನು ನಾನು ಬಲ್ಲೆನು. ನೀವು ಭಯಂಕರ ಪಾಪಗಳನ್ನು ಮಾಡಿದ್ದೀರಿ. ನ್ಯಾಯವಂತರನ್ನು ಗಾಯಗೊಳಿಸಿದ್ದೀರಿ. ಅನ್ಯಾಯ ಮಾಡಲು ಹಣವನ್ನು ತೆಗೆದುಕೊಂಡಿದ್ದೀರಿ. ಬಡಜನರಿಗೆ ನ್ಯಾಯವನ್ನು ದೊರಕಿಸುವುದಿಲ್ಲ.


ನಿಮ್ಮನ್ನಾಳುವವರು ದಂಗೆಕೋರರಾಗಿದ್ದಾರೆ; ಕಳ್ಳರ ಮಿತ್ರರಾಗಿದ್ದಾರೆ; ಲಂಚಕೋರರಾಗಿದ್ದಾರೆ; ಹಣಕ್ಕಾಗಿ ಕೆಟ್ಟದ್ದನ್ನು ಮಾಡುತ್ತಾರೆ; ಹಣಕ್ಕಾಗಿ ಮೋಸ ಮಾಡುತ್ತಾರೆ. ಅನಾಥರಿಗೆ ಸಹಾಯ ಮಾಡದವರಾಗಿದ್ದಾರೆ; ವಿಧವೆಯರ ಅಗತ್ಯತೆಗಳಿಗೆ ಲಕ್ಷ್ಯ ಕೊಡದವರಾಗಿದ್ದಾರೆ.”


ನಿನ್ನ ಮೇಲೆ ಕೋಪಗೊಂಡಿರುವವನಿಗೆ ಒಂದು ಉಡುಗೊರೆಯನ್ನು ಗುಟ್ಟಾಗಿ ಕೊಡು. ಗುಟ್ಟಾಗಿ ಕೊಟ್ಟ ಉಡುಗೊರೆಯು ಮಹಾ ಕೋಪವನ್ನೂ ಅಡಗಿಸಬಲ್ಲದು.


ದುಷ್ಟನು ನ್ಯಾಯ ದೊರೆಯದಂತೆ ಮಾಡಲು ಗುಟ್ಟಾಗಿ ಲಂಚ ತೆಗೆದುಕೊಳ್ಳುವನು.


ನಂತರ ದಾವೀದನು ಅಬೀಗೈಲಳ ಕೊಡುಗೆಗಳನ್ನು ಸ್ವೀಕರಿಸಿ ಆಕೆಗೆ, “ಶಾಂತಿಯಿಂದ ಮನೆಗೆ ಹಿಂದಿರುಗು. ನಾನು ನಿನ್ನ ಮಾತುಗಳನ್ನು ಆಲಿಸಿದ್ದೇನೆ ಮತ್ತು ನೀನು ಕೇಳಿಕೊಂಡಿರುವುದನ್ನು ನೆರವೇರಿಸುತ್ತೇನೆ” ಎಂದು ಹೇಳಿದನು.


ನೀವು ಯಾವಾಗಲೂ ಪಕ್ಷಪಾತವಿಲ್ಲದವರಾಗಿರಬೇಕು. ಜನರಿಂದ ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಮಾನ ಕೊಡಬಾರದು. ಹಣವು ಜ್ಞಾನಿಗಳನ್ನು ಕುರುಡುಮಾಡಿ ಅವರ ಬುದ್ಧಿಯನ್ನು ಮಂದ ಮಾಡುವುದು.


ಅದಕ್ಕೆ ಅವರ ತಂದೆಯಾದ ಇಸ್ರೇಲನು, “ಇದು ನಿಜವಾಗಿಯೂ ಸತ್ಯವಾಗಿದ್ದರೆ, ನಿನ್ನೊಂದಿಗೆ ಬೆನ್ಯಾಮೀನನನ್ನು ಕರೆದುಕೊಂಡು ಹೋಗು. ಆದರೆ ರಾಜ್ಯಪಾಲನಿಗೆ ಶ್ರೇಷ್ಠವಾದ ಕೆಲವು ಉಡುಗೊರೆಗಳನ್ನು ತೆಗೆದುಕೊಂಡು ಹೋಗಿ. ನಮ್ಮ ನಾಡಿನಲ್ಲಿ ದೊರಕುವ ಜೇನು, ಆಕ್ರೋಡು, ಬಾದಾಮಿ, ಹಾಲುಮಡ್ಡಿ ಮತ್ತು ಗೋಲರಸ ಇವುಗಳನ್ನು ತೆಗೆದುಕೊಳ್ಳಿ.


ಯೆಹೋವನ ಸ್ವರವು ಆತನ ಶಕ್ತಿಯನ್ನೂ ಮಹಿಮೆಯನ್ನೂ ತೋರ್ಪಡಿಸುವುದು.


ಯೆಹೋವನೇ, ನಿನ್ನ ಪರಾಕ್ರಮಕ್ಕಾಗಿ ನಿನ್ನನ್ನು ಕೊಂಡಾಡುವೆನು. ನಿನ್ನ ಮಹತ್ವದ ಬಗ್ಗೆ ವಾದ್ಯ ನುಡಿಸುತ್ತಾ ಹಾಡುವೆವು.


ಸೂರ್ಯನು ಆಕಾಶದ ಒಂದು ಕಡೆಯಿಂದ ಉದಯಿಸಿ ಮತ್ತೊಂದು ಕೊನೆಗೆ ಓಡುತ್ತಾಹೋಗುವನು. ಅವನ ತಾಪಕ್ಕೆ ಯಾವುದೂ ಮರೆಯಾಗಿರಲಾರದು.


ಆತನು ಮೇಲಿನ ಲೋಕದಿಂದ ಕೈಚಾಚಿ ನನ್ನನ್ನು ರಕ್ಷಿಸಿದನು. ಆತನು ನನ್ನ ಕೈಹಿಡಿದು ನೀರಿನಿಂದ ಮೇಲೆತ್ತಿದನು.


ಹಣವು ಜ್ಞಾನಿಯನ್ನೂ ಮೂರ್ಖನನ್ನಾಗಿ ಮಾಡುವುದು. ಲಂಚವು ಅವನ ವಿವೇಕವನ್ನು ಕೆಡಿಸುವುದು.


ಯಾಕೋಬನು ಇನ್ನೂರು ಮೇಕೆಗಳನ್ನು, ಇಪ್ಪತ್ತು ಹೋತಗಳನ್ನು, ಇನ್ನೂರು ಕುರಿಗಳನ್ನು ಮತ್ತು ಇಪ್ಪತ್ತು ಟಗರುಗಳನ್ನು ತೆಗೆದುಕೊಂಡನು.


ಯಾಕೋಬನು ಏಸಾವನಿಗೆ ಉಡುಗೊರೆಗಳನ್ನು ಕಳುಹಿಸಿ ಆ ರಾತ್ರಿ ಪಾಳೆಯದಲ್ಲಿ ಉಳಿದುಕೊಂಡನು.


ಪ್ರಮುಖನನ್ನು ಭೇಟಿಯಾಗಬೇಕಿದ್ದರೆ, ಅವನಿಗೆ ಒಂದು ಉಡುಗೊರೆಯನ್ನು ಕೊಡು. ಆಗ ನೀನು ಅವನನ್ನು ಸುಲಭವಾಗಿ ಭೇಟಿಯಾಗಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು