ಜ್ಞಾನೋಕ್ತಿಗಳು 18:19 - ಪರಿಶುದ್ದ ಬೈಬಲ್19 ಅವಮಾನಿತನಾದ ಸಹೋದರನನ್ನು ಗೆದ್ದುಕೊಳ್ಳುವುದು ಕೋಟೆಯುಳ್ಳ ಪಟ್ಟಣವನ್ನು ಗೆದ್ದುಕೊಳ್ಳುವುದಕ್ಕಿಂತಲೂ ಕಷ್ಟ, ಜಗಳಗಳು ಅರಮನೆಯ ಬಾಗಿಲಿನಂತೆ ಜನರನ್ನು ಪ್ರತ್ಯೇಕಗೊಳಿಸುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಬಲವಾದ ಪಟ್ಟಣವನ್ನು ಗೆಲ್ಲುವುದಕ್ಕಿಂತ ಅನ್ಯಾಯಹೊಂದಿದ ಸಹೋದರನನ್ನು ಗೆಲ್ಲುವುದು ಅಸಾಧ್ಯ, ಕೋಟೆಯ ಅಗುಳಿಗಳಂತೆ ಜಗಳಗಳು ಜನರನ್ನು ಅಗಲಿಸುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಸಹಾಯ ಹೊಂದಿದ ಸೋದರ ದುರ್ಗಕ್ಕಿಂತಲು ದುಸ್ತರ; ಅವನೊಡನೆ ಜಗಳ ಕೋಟೆ ಮನೆಗೆ ಹಾಕಿದ ಅಗುಳಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅನ್ಯಾಯಹೊಂದಿದ ಸಹೋದರನು ಬಲವಾದ ಪಟ್ಟಣಕ್ಕಿಂತಲೂ ಅಸಾಧ್ಯ; ಕೋಟೆಯ ಅಗುಳಿಗಳಂತೆ ಜಗಳಗಳು ಜನರನ್ನು ಅಗಲಿಸುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಬಲವಾದ ಪಟ್ಟಣವನ್ನು ಗೆಲ್ಲುವುದಕ್ಕಿಂತ ಬೇಸರಗೊಂಡ ಸಹೋದರನನ್ನು ಗೆಲ್ಲುವುದು ಕಷ್ಟಕರ; ಅವರ ಕಲಹಗಳು ಕೋಟೆಯ ಬಾಗಿಲಿಗೆ ಅಗುಳಿಗಳಂತೆ ಇವೆ. ಅಧ್ಯಾಯವನ್ನು ನೋಡಿ |
ಇಸ್ರೇಲಿನ ಜನರೆಲ್ಲರೂ ಹೊಸರಾಜನು ತಮ್ಮ ಮಾತಿಗೆ ಕಿವಿಗೊಡಲಿಲ್ಲವೆಂಬುದನ್ನು ನೋಡಿದರು. ಆದ್ದರಿಂದ ಜನರೆಲ್ಲರೂ ರಾಜನಿಗೆ, “ದಾವೀದನ ಕುಟುಂಬದಲ್ಲಿ ನಾವೆಲ್ಲರೂ ಭಾಗಿಗಳೇ? ಇಲ್ಲ! ಇಷಯನ ಭೂಮಿಯಲ್ಲಿ ನಮಗೇನಾದರೂ ಪಾಲು ಸಿಕ್ಕುತ್ತದೆಯೇ? ಇಲ್ಲ! ಇಸ್ರೇಲರೇ, ನಮ್ಮ ಮನೆಗಳಿಗೆ ನಾವು ಹೋಗೋಣ ನಡೆಯಿರಿ. ದಾವೀದನ ಮಗನು ತನ್ನ ಜನರನ್ನು ತಾನೇ ಆಳಲಿ!” ಎಂದು ಹೇಳಿದರು. ಇಸ್ರೇಲಿನ ಜನರೆಲ್ಲರೂ ಮನೆಗಳಿಗೆ ಹೋದರು.
ಆಗ ಅಬ್ಷಾಲೋಮನು ತನ್ನ ಸೇವಕರಿಗೆ ಈ ರೀತಿ ಆಜ್ಞೆ ಮಾಡಿದನು: “ಅಮ್ನೋನನನ್ನು ಗಮನಿಸುತ್ತಿರಿ. ಅವನು ಮತ್ತನಾಗಿ ಆನಂದಿಸುತ್ತಿರುವಾಗ ನಾನು ಆಜ್ಞೆಯನ್ನು ಕೊಡುತ್ತೇನೆ. ಆಗ ನೀವು ಅವನ ಮೇಲೆ ಆಕ್ರಮಣಮಾಡಿ ಕೊಲ್ಲಬೇಕು. ನಿಮಗೆ ಶಿಕ್ಷೆಯಾಗುತ್ತದೆ ಎಂಬ ಭಯವಿಲ್ಲದಿರಲಿ, ಯಾಕೆಂದರೆ ನೀವು ನನ್ನ ಆಜ್ಞೆಯನ್ನು ಪಾಲಿಸಿದಿರಷ್ಟೇ, ಆದ್ದರಿಂದ ಶಕ್ತರಾಗಿಯೂ ಧೈರ್ಯವಂತರಾಗಿಯೂ ಇರಿ” ಎಂದನು.
ದಾವೀದನು ಸೈನಿಕರೊಡನೆ ಮಾತಾಡುತ್ತಿರುವುದನ್ನು ಅವನ ಹಿರಿಯ ಅಣ್ಣ ಎಲೀಯಾಬನು ಕೇಳಿಸಿಕೊಂಡನು. ಎಲೀಯಾಬನು ದಾವೀದನ ಮೇಲೆ ಕೋಪಗೊಂಡು ಅವನಿಗೆ, “ನೀನು ಇಲ್ಲಿಗೆ ಬಂದದ್ದೇಕೆ? ಅಲ್ಲಿದ್ದ ಕೆಲವು ಕುರಿಗಳನ್ನು ಯಾರ ಬಳಿ ಬಿಟ್ಟಿರುವೆ? ನೀನು ಇಲ್ಲಿಗೆ ಏಕೆ ಬಂದಿರುವೆಯೆಂಬುದು ನನಗೆ ಗೊತ್ತು. ನಿನಗೆ ಹೇಳಿದ್ದನ್ನು ನೀನು ಮಾಡುವುದಿಲ್ಲ. ನೀನು ಕೇವಲ ಯುದ್ಧವನ್ನು ನೋಡುವುದಕ್ಕಾಗಿಯೇ ಇಲ್ಲಿಗೆ ಬಂದಿರುವೆ” ಎಂದು ಗದರಿಸಿದನು.