Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 19:1 - ಪರಿಶುದ್ದ ಬೈಬಲ್‌

1 ಸುಳ್ಳುಹೇಳುವ ಮತ್ತು ಮೋಸಮಾಡುವ ಮೂಢನಾಗಿರುವುದಕ್ಕಿಂತ, ಬಡವನಾಗಿಯೂ ಯಥಾರ್ಥನಾಗಿಯೂ ಇರುವುದು ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕಪಟವಾಗಿ ಮಾತನಾಡುವ ಮೂಢನಿಗಿಂತಲೂ, ನಿರ್ದೋಷಿಯಾಗಿ ನಡೆಯುವ ದರಿದ್ರನೇ ಶ್ರೇಷ್ಠ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಕಪಟವಾಗಿ ಮಾತಾಡುವ ಮೂಢನಿಗಿಂತ ನಿರ್ದೋಷಿಯಾಗಿ ನಡೆವ ಬಡವನೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಕಪಟವಾಗಿ ಮಾತಾಡುವ ಮೂಢನಿಗಿಂತಲೂ ನಿರ್ದೋಷವಾಗಿ ನಡೆಯುವ ದರಿದ್ರನೇ ಶ್ರೇಷ್ಠ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಬುದ್ಧಿಹೀನನ ವಕ್ರ ತುಟಿಗಳಿಗಿಂತ, ನಿರ್ದೋಷವಾಗಿ ನಡೆಯುವ ಬಡವನು ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 19:1
16 ತಿಳಿವುಗಳ ಹೋಲಿಕೆ  

ಮೋಸದಿಂದ ಐಶ್ವರ್ಯವಂತರಾಗುವುದಕ್ಕಿಂತ ಯಥಾರ್ಥವಾಗಿದ್ದು ಬಡವರಾಗಿರುವುದೇ ಮೇಲು.


ಒಬ್ಬನು ಪ್ರಪಂಚವನ್ನೆಲ್ಲಾ ಗಳಿಸಿಕೊಂಡು ತನ್ನ ಆತ್ಮವನ್ನೇ ಕಳೆದುಕೊಂಡರೆ ಅದರಿಂದ ಅವನಿಗೇನು ಪ್ರಯೋಜನ? ಮನುಷ್ಯನು ತನ್ನ ಆತ್ಮವನ್ನು ಕೊಂಡುಕೊಳ್ಳಲು ಏನನ್ನು ತಾನೇ ಕೊಡಬಲ್ಲನು?


ಅನ್ಯಾಯದಿಂದ ಹೆಚ್ಚು ಸಂಪಾದಿಸುವುದಕ್ಕಿಂತ ನ್ಯಾಯವಾಗಿ ಸ್ವಲ್ಪ ಸಂಪಾದಿಸುವುದೇ ಉತ್ತಮ.


ದುರಾಶೆಯುಳ್ಳವನಿಗೆ ಅವನ ದುರಾಶೆಯೇ ಅವಮಾನಕರ. ಸುಳ್ಳು ಹೇಳುವುದಕ್ಕಿಂತ ಬಡವನಾಗಿರುವುದೇ ಮೇಲು.


ಸಧರ್ಮಿಯು ಒಳ್ಳೆಯ ರೀತಿಯಲ್ಲಿ ಜೀವಿಸುತ್ತಾನೆ; ಅವನ ಮಕ್ಕಳಿಗೆ ಆಶೀರ್ವಾದವಾಗುವುದು.


ಬಹಳ ಐಶ್ವರ್ಯವನ್ನು ಹೊಂದಿದ್ದು ಸಮಾಧಾನವಿಲ್ಲದೆ ಇರುವುದಕ್ಕಿಂತ ಸ್ವಲ್ಪ ಐಶ್ವರ್ಯವನ್ನು ಹೊಂದಿದ್ದು ಯೆಹೋವನಲ್ಲಿ ಭಯಭಕ್ತಿಯಿಂದಿರುವುದೇ ಮೇಲು.


ಸನ್ಮಾರ್ಗಿಯು ಯೆಹೋವನಲ್ಲಿ ಭಯಭಕ್ತಿಯಿಂದಿರುವನು. ವಕ್ರಮಾರ್ಗಿಯು ಆತನನ್ನು ಕಡೆಗಣಿಸುವನು.


ನಿಮ್ಮ ಕೈಗಳು ಮಲಿನವಾಗಿವೆ; ಅವು ರಕ್ತಮಯವಾಗಿವೆ. ನಿಮ್ಮ ಬೆರಳುಗಳು ಅಪರಾಧಗಳಿಂದ ಅಶುದ್ಧವಾಗಿವೆ. ನಿಮ್ಮ ಬಾಯಿಗಳಿಂದ ನೀವು ಸುಳ್ಳಾಡುತ್ತೀರಿ. ನಿಮ್ಮ ನಾಲಿಗೆಯು ಕೆಟ್ಟ ಮಾತುಗಳನ್ನಾಡುತ್ತದೆ.


ನೀತಿವಂತನು ಬೇರೆಯವರಿಗೆ ಉದಾರವಾಗಿ ಕೊಡುವನು. ಅವನ ಮಕ್ಕಳು ಆಶೀರ್ವಾದ ಹೊಂದುವರು.


ಸನ್ಮಾರ್ಗಿಯು ತನ್ನ ನೆರೆಯವನಿಗೆ ಒಳ್ಳೆಯ ಮಾರ್ಗವನ್ನು ತೋರಿಸುತ್ತಾನೆ; ದುರ್ಮಾರ್ಗಿಯು ಬೇರೆಯವರನ್ನು ದಾರಿ ತಪ್ಪಿಸುವನು.


ನಾನಾದರೋ ನಿರಪರಾಧಿ. ನನಗೆ ಕರುಣೆತೋರಿ ನನ್ನನ್ನು ರಕ್ಷಿಸು.


ನೀನು ಕಳುಹಿಸಿದ ಜನರನ್ನು ನಾನು ನೋಡಲಿಲ್ಲ. ಒಡೆಯನೇ, ಮೂರ್ಖನಾದ ಆ ಮನುಷ್ಯನ ಮೇಲೆ ಯಾವ ಲಕ್ಷ್ಯವನ್ನೂ ಇಡಬೇಡ. ಅವನು ತನ್ನ ಹೆಸರಿಗೆ ತಕ್ಕಂತೆ ಇದ್ದಾನೆ. ಅವನ ಹೆಸರಿನ ಅರ್ಥವೂ ‘ಮೂರ್ಖ’ ಮತ್ತು ಅವನು ನಿಜವಾಗಿಯೂ ಮೂರ್ಖ.


ಈಗ ಅದರ ಬಗ್ಗೆ ಯೋಚಿಸಿ ನೀನು ಮಾಡಬೇಕಾದದ್ದನ್ನು ತೀರ್ಮಾನಿಸು. ಮೂರ್ಖನಾದ ನಾಬಾಲನೊಂದಿಗೆ ಮಾತಾಡಿ ಅವನ ಮನಸ್ಸನ್ನು ಬದಲಾಯಿಸುವುದು ಅಸಾಧ್ಯ. ನಮ್ಮ ಒಡೆಯನಿಗೂ ಅವನ ಕುಟುಂಬಕ್ಕೂ ಭೀಕರವಾದ ಕೇಡು ಬರಲಿದೆ” ಎಂದು ಹೇಳಿದನು.


ಸತ್ಯವನ್ನು ಸೊಟ್ಟಗೆ ಮಾಡದಿರು; ಸುಳ್ಳನ್ನು ಹೇಳದಿರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು