Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 19:12 - ಪರಿಶುದ್ದ ಬೈಬಲ್‌

12 ರಾಜನ ಕೋಪವು ಸಿಂಹ ಘರ್ಜನೆಯಂತಿರುತ್ತದೆ. ರಾಜನಿಗೆ ನಿನ್ನ ಮೇಲಿರುವ ಸಂತೋಷವು ತುಂತುರು ಮಳೆಯಂತಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ರಾಜನ ರೋಷವು ಸಿಂಹದ ಗರ್ಜನೆ, ಅವನ ದಯೆಯು ಪೈರಿನ ಇಬ್ಬನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ರಾಜನ ರೋಷ ಸಿಂಹದ ಗರ್ಜನೆಯು; ಅವನ ದಯೆ ಹುಲ್ಲಿನ ಮೇಲಣ ಇಬ್ಬನಿಯು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ರಾಜನ ರೋಷವು ಸಿಂಹದ ಗರ್ಜನೆ; ಅವನ ದಯೆಯು ಪೈರಿನ ಇಬ್ಬನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅರಸನ ಕೋಪವು ಸಿಂಹದ ಘರ್ಜನೆಯಂತಿದೆ; ಆದರೆ ಅವನ ದಯೆಯು ಹುಲ್ಲಿನ ಮೇಲಿರುವ ಇಬ್ಬನಿಯಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 19:12
19 ತಿಳಿವುಗಳ ಹೋಲಿಕೆ  

ಇಸ್ರೇಲಿಗೆ ನಾನು ಇಬ್ಬನಿಯಂತಿರುವೆನು. ನೆಲದಾವರೆಯಂತೆ ಇಸ್ರೇಲ್ ಅರಳುವನು. ಲೆಬನೋನಿನ ದೇವದಾರು ವೃಕ್ಷಗಳಂತೆ ಸೊಂಪಾಗಿ ಬೆಳೆಯುವನು.


ರಾಜನ ಕೋಪವು ಸಿಂಹದ ಘರ್ಜನೆಯಂತಿದೆ. ರಾಜನನ್ನು ಕೋಪಗೊಳಿಸಿದರೆ ಪ್ರಾಣಕ್ಕೆ ಹಾನಿ.


ಬಲಹೀನರನ್ನು ಆಳುವ ಕೆಡುಕನು ಗರ್ಜಿಸುವ ಸಿಂಹದಂತಿರುವನು; ಮೇಲೆರಗಲಿರುವ ಕರಡಿಯಂತಿರುವನು.


ಅದು ಹೆರ್ಮೋನ್ ಪರ್ವತದಿಂದ ಹುಟ್ಟಿ ಚೀಯೋನ್ ಪರ್ವತದ ಮೇಲೆ ಬೀಳುವ ದಟ್ಟವಾದ ಮಂಜಿನಂತಿರುವುದು. ಯೆಹೋವನು ನಿತ್ಯಜೀವವೆಂಬ ತನ್ನ ಆಶೀರ್ವಾದವನ್ನು ಅನುಗ್ರಹಿಸಿದ್ದು ಚೀಯೋನಿನಲ್ಲಿಯೇ.


ಆದರೆ ಜನಾಂಗಗಳಲ್ಲಿ ಚದರಿರುವ ಇಸ್ರೇಲಿನ ಅಳಿದುಳಿದವರು ಯೆಹೋವನಿಂದ ಹೊರಡುವ ಮಂಜಿನಂತಿರುವರು. ಅದು ಯಾರನ್ನೂ ಕಾಯುವದಿಲ್ಲ. ಅವರು ಹುಲ್ಲಿನ ಮೇಲೆ ಬಿದ್ದಿರುವ ಮಳೆಯಂತಿರುವರು. ಆ ಮಳೆಯು ಯಾರನ್ನೂ ಕಾಯುವದಿಲ್ಲ.


ಆಗ ರಾಜನು ದಾನಿಯೇಲನ ಮೇಲೆ ದೋಷಾರೋಪಣೆಯನ್ನು ಮಾಡಿದ ಜನರನ್ನು ಸಿಂಹಗಳ ಗುಹೆಗೆ ಕರೆತರಬೇಕೆಂದು ಆಜ್ಞಾಪಿಸಿದನು. ಆ ಜನರನ್ನೂ ಅವರ ಹೆಂಡತಿಮಕ್ಕಳನ್ನೂ ಸಹಿತವಾಗಿ ಸಿಂಹಗಳ ಗುಹೆಯಲ್ಲಿ ಎಸೆಯಲಾಯಿತು. ಅವರು ಗುಹೆಯ ನೆಲಕ್ಕೆ ಮುಟ್ಟುವ ಮೊದಲೇ ಸಿಂಹಗಳು ಅವರನ್ನು ಎಳೆದುಕೊಂಡವು. ಸಿಂಹಗಳು ಅವರ ದೇಹಗಳನ್ನು ತಿಂದು ಎಲುಬುಗಳನ್ನು ಅಗಿದುಹಾಕಿದವು.


ಹಲವಾರು ಜನಾಂಗದ ಮತ್ತು ಭಾಷೆಯ ಜನರು ಅವನಿಗೆ ತುಂಬ ಹೆದರುತ್ತಿದ್ದರು. ಏಕೆಂದರೆ ಮಹೋನ್ನತನಾದ ದೇವರು ಅವನನ್ನು ಬಹುದೊಡ್ಡ ರಾಜನನ್ನಾಗಿ ಮಾಡಿದ್ದನು. ನೆಬೂಕದ್ನೆಚ್ಚರನು ಯಾರನ್ನಾದರೂ ಕೊಲ್ಲಬೇಕೆಂದು ಇಚ್ಛಿಸಿದರೆ ಅವನನ್ನು ಕೊಲ್ಲಿಸಿಬಿಡುತ್ತಿದ್ದನು; ತನಗೆ ಬೇಕಾದವರನ್ನು ಉಳಿಸುತ್ತಿದ್ದನು; ತನ್ನ ಮನಸ್ಸಿಗೆ ಬಂದವರನ್ನು ಏರಿಸುತ್ತಿದ್ದನು; ತನ್ನ ಮನಸ್ಸಿಗೆ ಬಂದವರನ್ನು ಇಳಿಸುತ್ತಿದ್ದನು.


ಆಜ್ಞೆಗಳನ್ನು ಕೊಡಲು ರಾಜನಿಗೆ ಅಧಿಕಾರವಿದೆ. ಅವನನ್ನು ಬಲವಂತ ಮಾಡಲು ಯಾರಿಗೂ ಸಾಧ್ಯವಿಲ್ಲ.


ಹುಲ್ಲುಗಾವಲಿನ ಮೇಲೆ ಸುರಿಯುವ ಮಳೆಯಂತೆಯೂ ಭೂಮಿಯನ್ನು ಹದಗೊಳಿಸುವ ಹಿತವಾದ ಮಳೆಯಂತೆಯೂ ನೀನು ಅವನಿಗೆ ಸಹಾಯಕನಾಗಿರು.


ಅರಸನು ಹೂತೋಟದಿಂದ ಹಿಂದಿರುಗಿ ಕೋಣೆಯೊಳಗೆ ಬಂದಾಗ ಹಾಮಾನನು ಆಸನದ ಮೇಲೆ ಒರಗಿದ್ದ ಎಸ್ತೇರ್ ರಾಣಿಯ ಆಸನದ ಮೇಲೆ ಬೀಳುವದನ್ನು ಕಂಡನು. ಅರಸನು ಸಿಟ್ಟು ತುಂಬಿದವನಾಗಿ, “ನನ್ನ ಮುಂದೆಯೇ ನೀನು ರಾಣಿಯ ಮೇಲೆ ಕೈಮಾಡುತ್ತೀಯಾ?” ಎಂದು ಕೇಳಿದನು.


ಹೊತ್ತಾರೆಯ ಬೆಳಕಿನ ಕಿರಣಗಳಂತೆಯೂ ಮೋಡಗಳೇ ಇಲ್ಲದ ಮುಂಜಾನೆಯಂತೆಯೂ ಮಳೆ ಬಿದ್ದನಂತರ ಬರುವ ಸೂರ್ಯನ ಬೆಳಕಿನಂತೆಯೂ ಗರಿಕೆಯನ್ನು ನೆಲದಿಂದ ಮೂಡಿಸುವ ಮಳೆಯಂತೆಯೂ ಇದ್ದಾನೆ.’


ಯೆಹೋವನು ನಿನಗೆ ಬೇಕಾದಷ್ಟು ಮಳೆಯನ್ನು ಕೊಡಲಿ; ನಿನಗೆ ಸಾರವುಳ್ಳ ಭೂಮಿಯೂ ಮಹಾಸುಗ್ಗಿಗಳೂ ಮತ್ತು ದ್ರಾಕ್ಷಾರಸವೂ ದೊರೆಯಲಿ.


ಇಸ್ರೇಲ್ ಸುರಕ್ಷಿತವಾಗಿ ಜೀವಿಸುವುದು. ಯಾಕೋಬನ ಬಾವಿ ಅವರ ವಶದಲ್ಲಿದೆ. ಧಾನ್ಯದ ಮತ್ತು ದ್ರಾಕ್ಷಾರಸದ ದೇಶವು ಅವರಿಗೆ ದೊರಕುತ್ತದೆ. ಆ ದೇಶಕ್ಕೆ ಅಧಿಕವಾಗಿ ಮಳೆ ಸುರಿಯುವುದು.


ಯೆಹೋವನು ಹೀಗೆನ್ನುತ್ತಾನೆ: “ನನಗಾಗಿ ಸಿದ್ಧಪಡಿಸಲ್ಪಟ್ಟ ಸ್ಥಳದಲ್ಲಿ ಮೌನವಾಗಿದ್ದು ಇವುಗಳನ್ನೆಲ್ಲಾ ವೀಕ್ಷಿಸುವೆನು. ಬೇಸಿಗೆಯ ಮಧ್ಯಾಹ್ನದ ಹೊತ್ತಿನಲ್ಲಿ ಜನರು ವಿಶ್ರಮಿಸುತ್ತಿರುವರು. ಅದು ಬೇಸಿಗೆಯ ಸುಗ್ಗಿಕಾಲವಾಗಿರುವದು; ಮಳೆ ಇರುವದಿಲ್ಲ, ಕೇವಲ ಮುಂಜಾನೆಯ ಇಬ್ಬನಿ ಇರುವದು.


ಆಸ್ಥಾನಸೇವಕರು ವಷ್ಟಿರಾಣಿಗೆ ರಾಜಾಜ್ಞೆಯನ್ನು ತಿಳಿಸಿದಾಗ ಆಕೆಯು ಬರಲು ನಿರಾಕರಿಸಿದಳು. ಇದರಿಂದ ರಾಜನು ಕೋಪೋದ್ರಿಕ್ತನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು