Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 19:2 - ಪರಿಶುದ್ದ ಬೈಬಲ್‌

2 ಯಾವುದೇ ಕಾರ್ಯದಲ್ಲಿ ಉತ್ಸುಕತೆಯೊಂದೇ ಸಾಲದು, ತಿಳುವಳಿಕೆಯೂ ಬೇಕು. ಯಾವುದೇ ಕಾರ್ಯದಲ್ಲಿ ದುಡುಕದಿರಿ; ಇಲ್ಲವಾದರೆ, ತಪ್ಪಾದೀತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ತಿಳಿವಳಿಕೆಯಿಲ್ಲದೆ ಕೋರುವುದು ಯುಕ್ತವಲ್ಲ, ದುಡುಕುವ ಕಾಲು ದಾರಿತಪ್ಪುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅರಿವಿಲ್ಲದ ಹುರುಪು ಸರಿಯಲ್ಲ; ದುಡುಕುವ ಕಾಲು ದಾರಿತಪ್ಪುವುದು ದಿಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ತಿಳುವಳಿಕೆಯಿಲ್ಲದೆ ಕೋರುವದು ಅಯುಕ್ತ; ದುಡುಕುವ ಕಾಲು ದಾರಿ ತಪ್ಪುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಪರಿಜ್ಞಾನವಿಲ್ಲದ ಆಸಕ್ತಿಯು ಯುಕ್ತವಲ್ಲ; ತನ್ನ ಹೆಜ್ಜೆಗಳಲ್ಲಿ ದುಡುಕುವವನು ದಾರಿ ತಪ್ಪುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 19:2
18 ತಿಳಿವುಗಳ ಹೋಲಿಕೆ  

ಕಷ್ಟಪಟ್ಟು ದುಡಿಯುವವನ ಆಲೋಚನೆಗಳು ಲಾಭಕ್ಕೆ ನಡೆಸುತ್ತವೆ. ಆದರೆ ಆತುರತೆಯಲ್ಲೇ ಇರುವವನು ಬಡವನಾಗುವನು.


ನಿಮಗಾಗಿ ನಾನು ಪ್ರಾರ್ಥಿಸುವುದೇನೆಂದರೆ: ನೀವು ಪ್ರೀತಿಯಲ್ಲಿ ವೃದ್ಧಿಯಾಗುತ್ತಾ ಜ್ಞಾನವಂತರೂ ತಿಳುವಳಿಕೆಯುಳ್ಳವರೂ ಆಗಬೇಕು.


ವಿವೇಚಿಸದೆ ಮಾತಾಡುವವನನ್ನು ನೀನು ಕಂಡಿರುವಿಯೋ? ಅವನಿಗಿಂತಲೂ ಮೂಢನಿಗೇ ಹೆಚ್ಚು ನಿರೀಕ್ಷೆಯಿದೆ.


ನಾನು ಯೆಹೂದ್ಯರ ಬಗ್ಗೆ ಹೀಗೆ ಹೇಳಬಲ್ಲೆನು: ಅವರು ದೇವರನ್ನು ಹಿಂಬಾಲಿಸಲು ನಿಜವಾಗಿಯೂ ಪ್ರಯತ್ನಿಸುತ್ತಾರೆ. ಆದರೆ ಅವರಿಗೆ ಸರಿಯಾದ ಮಾರ್ಗ ಗೊತ್ತಿಲ್ಲ.


ಜನರು ತಂದೆಯನ್ನು ಮತ್ತು ನನ್ನನ್ನು ತಿಳಿದಿಲ್ಲದ ಕಾರಣ ಇವುಗಳನ್ನು ಮಾಡುವರು.


“ನನ್ನ ಜನರು ಅಜ್ಞಾನಿಗಳಾಗಿರುವುದರಿಂದ ಅವರು ನಾಶವಾಗುವರು, ನೀವು ಕಲಿಯಲು ನಿರಾಕರಿಸುತ್ತೀರಿ. ಆದ್ದರಿಂದ ನೀವು ನನ್ನ ಯಾಜಕರಾಗಿರಲು ನಾನು ನಿರಾಕರಿಸುತ್ತೇನೆ. ನಿಮ್ಮ ದೇವರ ಕಟ್ಟಳೆಗಳನ್ನು ನೀವು ಮರೆತುಬಿಟ್ಟಿರುವಿರಿ. ಆದ್ದರಿಂದ ನಾನು ನಿಮ್ಮ ಮಕ್ಕಳನ್ನು ಮರೆತುಬಿಡುವೆನು.


ಇದಕ್ಕೋಸ್ಕರವಾಗಿಯೇ, ನನ್ನ ಒಡೆಯನಾದ ಯೆಹೋವನು ಹೀಗೆನ್ನುವನು: “ಚೀಯೋನಿನಲ್ಲಿ ನಾನು ಒಂದು ಮೂಲೆಗಲ್ಲು ಇಡುವೆನು, ಇದು ಬಹು ಅಮೂಲ್ಯವಾದ ಕಲ್ಲು. ಈ ವಿಶೇಷವಾದ ಕಲ್ಲಿನ ಮೇಲೆ ಎಲ್ಲವೂ ಕಟ್ಟಲ್ಪಡುವದು. ಆ ಕಲ್ಲಿನ ಮೇಲೆ ಭರವಸವಿಡುವ ಯಾವನು ಆಶಾಭಂಗಪಡುವುದಿಲ್ಲ.


ನಂಬಿಗಸ್ತನು ಬಹಳವಾಗಿ ಆಶೀರ್ವದಿಸಲ್ಪಡುವನು. ಐಶ್ವರ್ಯವಂತನಾಗುವುದಕ್ಕಾಗಿಯೇ ಪ್ರಯತ್ನಿಸುವವನು ದಂಡನೆ ಹೊಂದುವನು.


ಪ್ರಸಂಗಿಯು ತುಂಬ ಜ್ಞಾನಿಯಾಗಿದ್ದನು. ಪ್ರಸಂಗಿಯು ಅನೇಕ ಜ್ಞಾನೋಪದೇಶಗಳನ್ನು ತುಂಬ ಎಚ್ಚರಿಕೆಯಿಂದ ಅಧ್ಯಯನ ಮಾಡಿ ಕ್ರಮಪಡಿಸಿದನು.


ಮುಂಗೋಪಿಯಾಗಿರಬೇಡ. ಯಾಕೆಂದರೆ ಕೋಪವು ಕೇವಲ ಮೂಢತನ.


ಜಿಪುಣನು ಐಶ್ವರ್ಯವಂತನಾಗಲು ಆತುರಪಡುವನು: ಆದರೆ ತಾನು ಬೇಗನೆ ಬಡವನಾಗಲಿರುವುದನ್ನು ಅವನು ಗ್ರಹಿಸಿಕೊಳ್ಳಲಾರನು.


ನೀನು ಕಂಡ ಯಾವುದನ್ನಾದರೂ ನ್ಯಾಯಾಧೀಶನಿಗೆ ತಿಳಿಸಲು ಆತುರಪಡಬೇಡ. ನೀನು ತಪ್ಪಿತಸ್ಥನೆಂದು ಬೇರೊಬ್ಬನು ಹೇಳಿದರೆ, ನಿನಗೆ ಅವಮಾನವಾಗುವುದು.


ತಾಳ್ಮೆಯುಳ್ಳವನು ತುಂಬಾ ಜಾಣ. ಮುಂಗೋಪಿಯು ತಾನು ಮೂಢ ಎಂಬುದನ್ನು ತೋರಿಸಿಕೊಳ್ಳುತ್ತಾನೆ.


ಅವರು ಕೇಡುಮಾಡುವುದಕ್ಕೆ ಯಾವಾಗಲೂ ಸಿದ್ಧರಾಗಿದ್ದಾರೆ. ಜನರನ್ನು ಕೊಲ್ಲುವುದಕ್ಕೆ ಯಾವಾಗಲೂ ಆತುರಪಡುತ್ತಾರೆ.


ಒಳ್ಳೆಯವನ ಮಾತುಗಳು ಅನೇಕರಿಗೆ ಸಹಾಯಮಾಡುತ್ತವೆ. ಮೂಢನ ಮೂಢತನವಾದರೋ ಅನೇಕರನ್ನು ಕೊಲ್ಲುವುದು.


ದ್ರಾಕ್ಷಿಬಳ್ಳಿ ಒಣಗಿಹೋಗುವದು. ಅದರ ಕೊಂಬೆಗಳು ಮುರಿದುಬೀಳುವವು. ಹೆಂಗಸರು ಆ ಕೊಂಬೆಗಳನ್ನು ಸೌದೆಯಾಗಿ ಉಪಯೋಗಿಸುವರು. ಜನರು ತಿಳಿದುಕೊಳ್ಳುವದಕ್ಕೆ ಮನಸ್ಸು ಕೊಡುವದಿಲ್ಲ. ಆದ್ದರಿಂದ ಅವರ ನಿರ್ಮಾಣಿಕನಾದ ದೇವರು ಅವರನ್ನು ಸಂತೈಸುವದಿಲ್ಲ. ಅವರ ನಿರ್ಮಾಣಿಕನು ಅವರಿಗೆ ದಯೆ ತೋರುವದಿಲ್ಲ.


“ನಾನು ಸುಳ್ಳು ಹೇಳಲಿಲ್ಲ; ಜನರಿಗೆ ಮೋಸಮಾಡಲು ಪ್ರಯತ್ನಿಸಲೂ ಇಲ್ಲ.


ಒಬ್ಬನು ಅಡಿಗೆಯ ಸೊಪ್ಪಿಗಾಗಿ ತೋಟಕ್ಕೆ ಹೋದನು. ಅಲ್ಲಿ ಅವನು ಒಂದು ಕಾಡುಬಳ್ಳಿಯಿಂದ ಕಾಡುಸೋರೆ ಕಾಯಿಗಳನ್ನು ಕಿತ್ತುಕೊಂಡು, ಅವುಗಳನ್ನು ತನ್ನ ಮೇಲಂಗಿಯ ಜೇಬಿನಲ್ಲಿ ತುಂಬಿಸಿಕೊಂಡನು. ನಂತರ ಅವನು ಬಂದು, ಆ ಕಾಡುಸೋರೆ ಕಾಯಿಗಳನ್ನು ಪಾತ್ರೆಯಲ್ಲಿ ಹಾಕಿದನು. ಆದರೆ ಪ್ರವಾದಿಗಳ ಗುಂಪಿಗೆ ಅವು ಯಾವ ಜಾತಿಯ ಸೋರೆಕಾಯಿಗಳೆಂಬುದು ತಿಳಿದಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು