Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 19:20 - ಪರಿಶುದ್ದ ಬೈಬಲ್‌

20 ಉಪದೇಶಕ್ಕೆ ಕಿವಿಗೊಟ್ಟು ಸರಿಪಡಿಸಿಕೊ. ಆಗ ನೀನು ಜ್ಞಾನಿಯಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಬುದ್ಧಿವಾದವನ್ನು ಕೇಳು, ಉಪದೇಶವನ್ನಾಲಿಸು, ಮುಂದೆ ಜ್ಞಾನಿಯಾಗುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಬುದ್ಧಿವಾದವನ್ನು ಕೇಳು, ತಿದ್ದುಪಾಟನ್ನು ಅಂಗೀಕರಿಸು; ಹಾಗೆ ಮಾಡಿದರೆ ಮುಂದಕ್ಕೆ ಜ್ಞಾನಿಯಾಗಿ ಬಾಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಬುದ್ಧಿವಾದವನ್ನು ಕೇಳು, ಉಪದೇಶವನ್ನಾಲಿಸು, ಮುಂದೆ ಜ್ಞಾನಿಯಾಗುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಬುದ್ಧಿವಾದವನ್ನು ಕೇಳಿ, ಶಿಕ್ಷಣವನ್ನು ಅಂಗೀಕರಿಸು; ಕಡೆಯಲ್ಲಿ ನೀನು ಜ್ಞಾನಿಯಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 19:20
21 ತಿಳಿವುಗಳ ಹೋಲಿಕೆ  

ಮೂಢನು ತನ್ನ ದಾರಿಯನ್ನೇ ಒಳ್ಳೆಯದೆಂದು ಭಾವಿಸಿಕೊಂಡಿರುತ್ತಾನೆ. ಜ್ಞಾನಿಯಾದರೋ ಉಪದೇಶಕ್ಕೆ ಕಿವಿಗೊಡುತ್ತಾನೆ.


ಮಕ್ಕಳೇ, ನಿಮ್ಮ ತಂದೆಯ ಉಪದೇಶಗಳಿಗೆ ಕಿವಿಗೊಡಿ, ಗಮನವಿಟ್ಟು ಅರ್ಥಮಾಡಿಕೊಳ್ಳಿರಿ.


ನನ್ನ ಮಗನೇ, ನಿನ್ನ ತಂದೆಯ ಬುದ್ಧಿಮಾತಿಗೆ ಕಿವಿಗೊಡು; ನಿನ್ನ ತಾಯಿಯ ಉಪದೇಶವನ್ನು ಅಲಕ್ಷಿಸಬೇಡ.


ಧೂಳಿನಷ್ಟು ಅಸಂಖ್ಯವಾದ ಯಾಕೋಬ್ಯರನ್ನು ಲೆಕ್ಕಿಸುವುದಕ್ಕೆ ಯಾರಿಂದಾದೀತು; ಇಸ್ರೇಲರ ಕಾಲು ಭಾಗವನ್ನಾದರೂ ಯಾರೂ ಲೆಕ್ಕಿಸಲಾರರು. ಸಜ್ಜನರಾದ ಅವರು ಸಾಯುವ ರೀತಿಯಲ್ಲೇ ನಾನೂ ಸಾಯಲು ಬಯಸುವೆ. ಅವರಿಗುಂಟಾಗುವ ಅಂತ್ಯ ನನಗೂ ಉಂಟಾಗಲಿ.”


ಪ್ರತಿ ಮುಂಜಾನೆ ನಿನ್ನ ಪ್ರೀತಿಯಿಂದ ನಮ್ಮನ್ನು ತುಂಬಿಸು. ಆಗ ಜೀವಮಾನವೆಲ್ಲಾ ಉಲ್ಲಾಸಿಸಿ ಹರ್ಷಿಸುವೆವು.


ಪವಿತ್ರರನ್ನೂ ಯಥಾರ್ಥರನ್ನೂ ಗಮನಿಸು. ಶಾಂತಿಪ್ರಿಯರು ಅನೇಕ ಸಂತಾನಗಳನ್ನು ಹೊಂದಿಕೊಳ್ಳುವರು.


ನಮ್ಮ ಜೀವಿತಗಳು ಕೊಂಚವೇ ಎಂಬುದನ್ನು ನಮಗೆ ಕಲಿಸು. ಆಗ ನಾವು ವಿವೇಕಿಗಳಾಗುವೆವು.


ನಿಮ್ಮ ಪೂರ್ವಿಕರು ನೋಡಿಲ್ಲದ ಮನ್ನವನ್ನು ಯೆಹೋವನು ನಿಮಗೆ ಮರುಭೂಮಿಯಲ್ಲಿ ತಿನ್ನಲು ಕೊಟ್ಟನು. ಯೆಹೋವನು ನಿಮ್ಮನ್ನು ಪರೀಕ್ಷಿಸಿದನು. ನೀವು ಒಳ್ಳೆಯ ಫಲಭರಿತವಾದ ಜೀವಿತವನ್ನು ನಡೆಸಬೇಕೆಂದು ಯೆಹೋವನು ನಿಮ್ಮನ್ನು ದೀನರನ್ನಾಗಿ ಮಾಡಿದನು.


ಅವರು ಬುದ್ಧಿವಂತರಾಗಿದ್ದಲ್ಲಿ ಅವರಿಗೆ ಏನು ಸಂಭವಿಸುವುದೆಂದು ಅವರು ತಿಳಿಯುತ್ತಿದ್ದರು.


ಈ ಜ್ಞಾನೋಕ್ತಿಗಳು ಯೋಗ್ಯವಾರ್ಗದಲ್ಲಿ ಜೀವಿಸಲು ಅಂದರೆ ಯಥಾರ್ಥವಾಗಿಯೂ ನ್ಯಾಯವಾಗಿಯೂ ಮತ್ತು ಒಳ್ಳೆಯವರಾಗಿಯೂ ಇರಲು ಉಪದೇಶಿಸುತ್ತವೆ.


ಒಳ್ಳೆಯ ಆಲೋಚನೆಗಳೂ ಒಳ್ಳೆಯ ತೀರ್ಪುಗಳೂ ನನ್ನವೇ. ವಿವೇಕವೂ ಸಾಮರ್ಥ್ಯವೂ ನನ್ನಲ್ಲಿವೆ.


ನನ್ನ ಉಪದೇಶಗಳನ್ನು ಕೇಳಿ ಜ್ಞಾನವಂತರಾಗಿರಿ. ಕಿವಿಗೊಡದಿರಬೇಡಿ!


ಮುಂಗೋಪಿಯು ತನ್ನ ಕೋಪಕ್ಕೆ ದಂಡ ಕೊಡಲೇಬೇಕು. ಕೊಡಬೇಕಾದ ದಂಡದಿಂದ ತಪ್ಪಿಸಿದರೆ, ಅವನು ಅದೇ ಕಾರ್ಯಗಳನ್ನು ಮತ್ತೆ ಮಾಡುವನು.


ಜ್ಞಾನವನ್ನು ಮತ್ತು ಶಿಕ್ಷಣವನ್ನು ಪಡೆದುಕೊಳ್ಳುವುದಕ್ಕೂ ಬುದ್ಧಿವಾದವನ್ನು ಗ್ರಹಿಸಿಕೊಳ್ಳುವುದಕ್ಕೂ ಈ ಜ್ಞಾನೋಕ್ತಿಗಳು ಸಹಾಯಕವಾಗಿವೆ.


ದುರಾಭಿಮಾನವು ಕೇವಲ ಜಗಳಕ್ಕೆ ಕಾರಣ. ಬುದ್ಧಿವಾದವನ್ನು ಕೇಳುವವರು ವಿವೇಕಿಗಳಾಗಿದ್ದಾರೆ.


ಶಿಕ್ಷೆಯನ್ನು ಒಪ್ಪದವನು ತನಗೇ ಕೇಡುಮಾಡಿಕೊಳ್ಳುತ್ತಾನೆ. ಗದರಿಕೆಯನ್ನು ಕೇಳುವವನು ತಿಳುವಳಿಕೆಯನ್ನು ಪಡೆದುಕೊಳ್ಳುವನು.


ಜೆರುಸಲೇಮ್ ನಗರವೇ, ಈ ಎಚ್ಚರಿಕೆಯ ನುಡಿಗಳನ್ನು ಕೇಳು. ನೀನು ಕೇಳದಿದ್ದರೆ ನಾನು ನಿನಗೆ ವಿಮುಖನಾಗುವೆ. ನಾನು ನಿನ್ನ ಪ್ರದೇಶವನ್ನು ಒಂದು ಮರಳುಗಾಡಾಗಿ ಮಾಡುತ್ತೇನೆ. ಅಲ್ಲಿ ಯಾರೂ ವಾಸಮಾಡಲು ಸಾಧ್ಯವಾಗದು.”


ನೀವು ಇದರಿಂದ ಪಾಠ ಕಲಿಯಬೇಕೆಂದು ಇದನ್ನೆಲ್ಲಾ ಹೇಳುತ್ತಿದ್ದೇನೆ. ನೀವು ನನ್ನನ್ನು ಗೌರವಿಸಿ ನನಗೆ ಭಯಪಡಬೇಕೆಂದು ನಾನು ಈ ವಿಷಯಗಳನ್ನು ತಿಳಿಸುತ್ತಿದ್ದೇನೆ. ನೀವು ಹೀಗೆ ಮಾಡುವುದಾದರೆ ನಿನ್ನ ಮನೆಯು ನಾಶವಾಗದು. ನೀವು ನನ್ನ ನಿಯಮಗಳನ್ನು ಅನುಸರಿಸುವದಾದರೆ ನಾನು ಆಲೋಚಿಸಿರುವ ಪ್ರಕಾರ ನಿಮ್ಮನ್ನು ಶಿಕ್ಷಿಸುವದಿಲ್ಲ.” ಆದರೆ ಆ ದುಷ್ಟ ಜನರು ತಮ್ಮ ಮಾರ್ಗವನ್ನು ಬಿಡದೆ ದುಷ್ಟತನದಲ್ಲಿಯೇ ಮುಂದುವರಿಯುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು