Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 19:23 - ಪರಿಶುದ್ದ ಬೈಬಲ್‌

23 ಭಯಭಕ್ತಿಯು ಒಳ್ಳೆಯ ಜೀವನಕ್ಕೆ ನಡೆಸುತ್ತದೆ. ಅದು ಅವನಿಗೆ ತೃಪ್ತಿಯನ್ನೂ ಕೊಡುವುದು; ಕೇಡಿನಿಂದಲೂ ತಪ್ಪಿಸಿ ಕಾಪಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯೆಹೋವನ ಭಯವು ಜೀವದಾಯಕವು, ಭಯಭಕ್ತಿಯುಳ್ಳವನು ತೃಪ್ತನಾಗಿ ನೆಲೆಗೊಳ್ಳುವನು, ಅವನಿಗೆ ಕೇಡು ಸಂಭವಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಿಗೆ ಜೀವಪ್ರಾಪ್ತಿ; ಅಂಥವನು ಸಂತುಷ್ಟನಾಗಿ ಬಾಳುವನು, ಅವನಿಗೆ ಕೇಡು ಸಂಭವಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯೆಹೋವನ ಭಯವು ಜೀವದಾಯಕವು; [ಭಯಭಕ್ತಿಯುಳ್ಳವನು] ತೃಪ್ತನಾಗಿ ನೆಲೆಗೊಳ್ಳುವನು; ಅವನಿಗೆ ಕೇಡು ಸಂಭವಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಯೆಹೋವ ದೇವರ ಭಯವು ಜೀವದಾಯಕವು; ಆಗ ಅವನು ತೃಪ್ತನಾಗಿ ನೆಲೆಗೊಳ್ಳುವನು; ಅವನಿಗೆ ಕೇಡು ಸಂಭವಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 19:23
28 ತಿಳಿವುಗಳ ಹೋಲಿಕೆ  

ನೀತಿಗಾಗಿ ತವಕಪಡುವವರು ಧನ್ಯರು. ದೇವರು ಅವರನ್ನು ಸಂತೃಪ್ತಿಪಡಿಸುವನು.


ಸಜ್ಜನರು ಯೆಹೋವನಿಂದ ಕ್ಷೇಮವಾಗಿರುವರು. ಆದರೆ ದುರ್ಜನರಿಗೆ ಅನೇಕ ತೊಂದರೆಗಳಿರುತ್ತವೆ.


ಪ್ರತಿ ಮುಂಜಾನೆ ನಿನ್ನ ಪ್ರೀತಿಯಿಂದ ನಮ್ಮನ್ನು ತುಂಬಿಸು. ಆಗ ಜೀವಮಾನವೆಲ್ಲಾ ಉಲ್ಲಾಸಿಸಿ ಹರ್ಷಿಸುವೆವು.


ನೀನು ದೇಹವನ್ನು ಪಳಗಿಸಿಕೊಂಡರೆ ನಿನಗೆ ಕೆಲವು ರೀತಿಯಲ್ಲಿ ಸಹಾಯಕವಾಗುವುದು. ಆದರೆ ದೇವರ ಸೇವೆಯು ನಿನಗೆ ಎಲ್ಲಾ ರೀತಿಯಲ್ಲಿಯೂ ಸಹಾಯಕವಾಗುವುದು. ದೇವರ ಸೇವೆಯು ಇಹಪರಗಳೆರಡರಲ್ಲೂ ನಿನಗೆ ಆಶೀರ್ವಾದವನ್ನು ಉಂಟು ಮಾಡುವುದು.


ನೀವು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದರೆ ಬಹುಕಾಲ ಬದುಕುವಿರಿ. ಆದರೆ ಕೆಡುಕರು ತಮ್ಮ ಜೀವಮಾನದ ವರ್ಷಗಳನ್ನು ಕಳೆದುಕೊಳ್ಳುವರು.


ಆದರೆ ಯೆಹೋವನು ತನ್ನ ಭಕ್ತರನ್ನು ಪ್ರೀತಿಸುತ್ತಲೇ ಬಂದನು. ಇನ್ನು ಮುಂದೆಯೂ ಪ್ರೀತಿಸುತ್ತಲೇ ಇರುವನು. ಆತನು ಅವರ ಮಕ್ಕಳಿಗೂ ಮೊಮ್ಮಕ್ಕಳಿಗೂ ಒಳ್ಳೆಯವನಾಗಿರುವನು.


ದೇವರು ತನ್ನ ಭಕ್ತರನ್ನು ರಕ್ಷಿಸುವ ಕಾಲ ಸಮೀಪವಾಗಿದೆ. ನಾವು ಸ್ವದೇಶದಲ್ಲಿ ಗೌರವದೊಂದಿಗೆ ನೆಲೆಸುವ ಸಮಯ ಹತ್ತಿರವಾಗಿದೆ.


ದೇವರು ತನ್ನನ್ನು ಪ್ರೀತಿಸುವವರ ಒಳ್ಳೆಯದಕ್ಕಾಗಿ ಪ್ರತಿಯೊಂದು ಕಾರ್ಯವನ್ನೂ ಅನುಕೂಲ ಮಾಡುತ್ತಾನೆಂದು ನಮಗೆ ಗೊತ್ತಿದೆ. ಆ ಜನರನ್ನು ದೇವರೇ ಆರಿಸಿಕೊಂಡನು, ಏಕೆಂದರೆ ಅದು ಆತನ ಯೋಜನೆಯಾಗಿತ್ತು.


“ನನ್ನನ್ನು ಹಿಂಬಾಲಿಸುವವರ ಮೇಲೆ ಸೂರ್ಯನ ಪ್ರಕಾಶದಂತೆ ಶುಭವು ಪ್ರಕಾಶಿಸುವದು. ಸೂರ್ಯನ ಕಿರಣಗಳಂತೆ ಅದು ಗುಣಪಡಿಸುವ ಶಕ್ತಿಯನ್ನು ಹೊಂದುವದು. ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಸ್ವತಂತ್ರರಾಗಿಯೂ ಸಂತೋಷವಾಗಿಯೂ ಇರುವಿರಿ.


ನನ್ನ ಭಕ್ತರಿಗೆ ದೀರ್ಘಾಯುಷ್ಯವನ್ನು ನೀಡಿ ತೃಪ್ತಿಪಡಿಸುವೆನು; ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸಿ ಕಾಪಾಡುವೆನು.”


ಅವನು ಸುಖದಿಂದಿರುವನು. ಆತನು ವಾಗ್ದಾನ ಮಾಡಿದ ದೇಶವನ್ನು ಅವನ ಮಕ್ಕಳು ಅನುಭವಿಸುವರು.


ಯಾರಾದರೂ ನನಗೆ ತೊಂದರೆ ಮಾಡಲು ಪ್ರಯತ್ನಿಸಿದರೆ, ಪ್ರಭುವು ನನ್ನನ್ನು ರಕ್ಷಿಸುವನು. ಪ್ರಭುವು ನನ್ನನ್ನು ಸುರಕ್ಷಿತವಾಗಿ ತನ್ನ ಪರಲೋಕರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಪ್ರಭುವಿಗೆ ಮಹಿಮೆಯಾಗಲಿ.


ಯೆಹೋವನಲ್ಲಿಡುವ ಭಯಭಕ್ತಿಯು ಪರಿಶುದ್ಧವಾಗಿದೆ; ಅದು ಶಾಶ್ವತವಾದದ್ದು. ಯೆಹೋವನ ವಿಧಿಗಳು ಯಥಾರ್ಥವಾಗಿವೆ; ಅವು ಯಾವಾಗಲೂ ನ್ಯಾಯಾನುಸಾರವಾಗಿವೆ.


ಇಂತಿರಲು, ಜುದೇಯ, ಗಲಿಲಾಯ ಮತ್ತು ಸಮಾರ್ಯ ಪ್ರದೇಶಗಳಲ್ಲಿ ಇದ್ದ ಸಭೆಗಳಲ್ಲಿ ಶಾಂತಿ ನೆಲೆಸಿತು. ಪವಿತ್ರಾತ್ಮನ ಸಹಾಯದಿಂದ ಸಭೆಗಳು ಬಲವಾಗತೊಡಗಿದವು. ವಿಶ್ವಾಸಿಗಳು ತಾವು ಪ್ರಭುವನ್ನು ಗೌರವಿಸುವುದಾಗಿ ತಮ್ಮ ಜೀವಿತಗಳ ಮೂಲಕ ತೋರಿಸಿಕೊಟ್ಟರು. ಇದರಿಂದ ವಿಶ್ವಾಸಿಗಳ ಸಭೆಯು ಹೆಚ್ಚುಹೆಚ್ಚು ಬೆಳೆಯತೊಡಗಿತು.


ಯಾವ ಕೇಡೂ ನಿನಗೆ ಸಂಭವಿಸದು. ನಿನ್ನ ಮನೆಯಲ್ಲಿ ಯಾವ ರೋಗಗಳೂ ಇರದು.


ನೀತಿವಂತನು ನಿಜವಾಗಿಯೂ ಜೀವವನ್ನು ಹೊಂದಿಕೊಳ್ಳುವನು, ಆದರೆ ಕೆಡುಕನನ್ನು ಹಿಂಬಾಲಿಸುತ್ತಾ ಹೋಗುವವನು ಸಾವಿಗೀಡಾಗುವನು.


ದುರಾಶೆಯುಳ್ಳವನಿಗೆ ಅವನ ದುರಾಶೆಯೇ ಅವಮಾನಕರ. ಸುಳ್ಳು ಹೇಳುವುದಕ್ಕಿಂತ ಬಡವನಾಗಿರುವುದೇ ಮೇಲು.


ಆಗ ನೀನು ನಿರ್ಭಯದಿಂದ ಮಲಗಿಕೊಂಡು ಸುಖವಾಗಿ ನಿದ್ರಿಸುವೆ.


ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿದ್ದು ದೀನತೆಯಿಂದಿರು; ಆಗ ನೀನು ಐಶ್ವರ್ಯ, ಸನ್ಮಾನ ಮತ್ತು ನಿಜಜೀವವನ್ನು ಹೊಂದಿಕೊಳ್ಳುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು