Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 19:29 - ಪರಿಶುದ್ದ ಬೈಬಲ್‌

29 ದುರಾಭಿಮಾನಿಯು ಶಿಕ್ಷೆಗೆ ಗುರಿಯಾಗಿ ದಂಡಿಸಲ್ಪಡುವನು; ಮೂಢನು ತನಗಾಗಿ ಕಾದಿರುವ ದಂಡನೆಯನ್ನು ಅನುಭವಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಧರ್ಮನಿಂದಕರಿಗೆ ದಂಡನೆಯ ತೀರ್ಪು ಸಿದ್ಧ, ಮೂಢರ ಬೆನ್ನಿಗೆ ಪೆಟ್ಟು ಖಂಡಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಕುಚೋದ್ಯನಿಗೆ ಕಾದಿದೆ ನ್ಯಾಯತೀರ್ಪು; ದಡ್ಡನ ಬೆನ್ನಿಗೆ ಬೀಳಲಿದೆ ದೊಣ್ಣೆಪೆಟ್ಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಧರ್ಮನಿಂದಕರಿಗೆ [ದಂಡನೆಯ] ತೀರ್ಪು ಸಿದ್ಧ, ಮೂಢರ ಬೆನ್ನಿಗೆ ಪೆಟ್ಟು ಖಂಡಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಪರಿಹಾಸ್ಯಗಾರರಿಗೆ ನ್ಯಾಯ ತೀರ್ಪುಗಳೂ, ಬುದ್ಧಿಹೀನರ ಬೆನ್ನಿಗೆ ಪೆಟ್ಟುಗಳೂ ಸಿದ್ಧವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 19:29
17 ತಿಳಿವುಗಳ ಹೋಲಿಕೆ  

ಕುದುರೆಗೆ ಚಬುಕಬೇಕು. ಹೇಸರಕತ್ತೆಗೆ ಕಡಿವಾಣಬೇಕು. ಮೂಢನಿಗೆ ಹೊಡೆತಬೇಕು.


ಬುದ್ಧಿವಂತನು ವಿವೇಕದಿಂದ ಮಾತಾಡುತ್ತಾನೆ. ಆದರೆ ಬುದ್ಧಿಹೀನನಿಗೆ ಹೊಡೆತ ಬೀಳುವುದು.


ನೀನು ಜ್ಞಾನಿಯಾಗಿದ್ದರೆ ನಿನ್ನ ಜ್ಞಾನವು ನಿನಗೇ ಲಾಭಕರ. ಆದರೆ ನೀನು ದುರಾಭಿಮಾನದಿಂದ ಬೇರೆಯವರನ್ನು ಗೇಲಿಮಾಡಿದರೆ ನಿನ್ನನ್ನೇ ಕಷ್ಟಕ್ಕೆ ಗುರಿಮಾಡಿಕೊಳ್ಳುವೆ.


ಪ್ರಭುವು ತಾನು ಪ್ರೀತಿಸುವವನನ್ನೇ ದಂಡಿಸುತ್ತಾನೆ; ಯಾರನ್ನು ಮಗನೆಂದು ಒಪ್ಪಿಕೊಳ್ಳುವನೋ ಅವನನ್ನು ದಂಡಿಸುತ್ತಾನೆ.”


ಇದು ಕ್ರೂರಿಗಳೂ ದುಷ್ಟರೂ ನಾಶವಾದಾಗ ಆಗುವದು. ಕೆಟ್ಟಕಾರ್ಯಗಳನ್ನು ಮಾಡುವದರಲ್ಲಿ ಸಂತೋಷಿಸುವವರು ಇಲ್ಲದೆ ಹೋದಾಗ ಆ ಕಾರ್ಯಗಳು ನಡಿಯುವವು.


ಈಗ ನೀವು ಆ ವಿಷಯಗಳೊಂದಿಗೆ ಯುದ್ಧ ಮಾಡಬಾರದು. ನೀವು ಹಾಗೆ ಮಾಡಿದ್ದಲ್ಲಿ ನಿಮ್ಮ ಸುತ್ತಲಿರುವ ಹಗ್ಗವು ಇನ್ನೂ ಬಿಗಿಯಾಗುವದು. ನಾನು ಕೇಳಿರುವ ಮಾತುಗಳು ಬದಲಾಗವು. ಯಾಕೆಂದರೆ ಅವು ಸರ್ವಶಕ್ತನಾದ ಯೆಹೋವನ ಮಾತುಗಳು. ಆತನು ಪ್ರಪಂಚವನ್ನು ಆಳುವಾತನು. ಆ ಸಂಗತಿಗಳೆಲ್ಲವೂ ಸಂಭವಿಸುವವು.


ಮೂಢನು ವಾದಕ್ಕೆ ಇಳಿಯುತ್ತಾನೆ; ಅವನ ಮಾತುಗಳು ಜಗಳವನ್ನು ಎಬ್ಬಿಸಿ, ಏಟಿಗಾಗಿ ಕೇಳಿಕೊಳ್ಳುತ್ತವೆ.


ಮೂಢನಿಗೆ ಮನವರಿಕೆ ಮಾಡಲು ನೂರು ಏಟುಗಳು ಬೇಕಾದರೂ ಜ್ಞಾನಿಗೆ ಒಂದೇ ಗದರಿಕೆಯು ಸಾಕು.


ಆ ಯೌವನಸ್ಥನು ಬಲೆಗೆ ಸಿಕ್ಕಿಕೊಳ್ಳುವುದಕ್ಕಾಗಿ ಆಕೆಯನ್ನು ತಕ್ಷಣವೇ ಹಿಂಬಾಲಿಸಿದನು. ಕೊಯ್ಯಲು ಎಳೆದೊಯ್ಯುವ ಹೋರಿಯಂತೆಯೂ ಬೇಟೆಗಾರನು ಬಾಣ ಹೂಡಿ ಎದೆಗೆ ಗುರಿಮಾಡಿದಾಗ ಜಿಗಿದುಕೊಂಡು ಹೋಗುವ ಜಿಂಕೆಯಂತೆಯೂ ಬಲೆಯೊಳಗೆ ಹಾರಿ ಹೋಗುವ ಪಕ್ಷಿಯಂತೆಯೂ ಅವನಿದ್ದನು. ತಾನು ಅಪಾಯದಲ್ಲಿರುವುದು ಅವನಿಗೆ ತಿಳಿದಿರಲಿಲ್ಲ.


ಯಾರು ಗರ್ವದಿಂದ ಬೇರೆಯವರನ್ನು ಗೇಲಿಮಾಡುತ್ತಾರೋ ಅವರನ್ನು ಯೆಹೋವನೂ ಗೇಲಿಮಾಡುತ್ತಾನೆ. ದೀನರಿಗಾದರೋ ಆತನ ಕರುಣೆ ದೊರೆಯುವುದು.


ನ್ಯಾಯಾಧೀಶರು ಒಬ್ಬನಿಗೆ ಕೊರಡೆ ಏಟು ಕೊಡಬೇಕೆಂದು ತೀರ್ಮಾನಿಸಿದರೆ ಅವನು ಆ ಶಿಕ್ಷೆ ಹೊಂದುವವನನ್ನು ಬೋರಲು ಮಲಗಿಸಿ ನ್ಯಾಯಾಧೀಶನ ಕಣ್ಣು ಮುಂದೆ ಅವನಿಗೆ ಕೊರಡೆ ಏಟು ಹೊಡಿಸಬೇಕು. ಅವನ ಅಪರಾಧಕ್ಕನುಸಾರವಾಗಿ ಕೊರಡೆ ಏಟುಗಳ ಸಂಖ್ಯೆಯು ಏರುವದು.


ಯಾವನು ದುಷ್ಟರ ಮಾರ್ಗವನ್ನು ಅನುಸರಿಸದೆ, ಪಾಪಿಗಳಂತೆ ಜೀವಿಸದೆ, ದೇವರಿಗೆ ಅವಿಧೇಯರಾದ ಜನರೊಂದಿಗೆ ಸೇರದೆ ಇರುವನೋ ಅವನೇ ಭಾಗ್ಯವಂತನು.


ಎಲೀಷನು ಹಿಂದಕ್ಕೆ ತಿರುಗಿ ಅವರನ್ನು ನೋಡಿ ಅವರಿಗೆ ಕೇಡಾಗುವಂತೆ ಯೆಹೋವನನ್ನು ಕೇಳಿಕೊಂಡನು. ಆಗ ಕಾಡಿನಿಂದ ಎರಡು ಕರಡಿಗಳು ಹೊರಗೆ ಬಂದು ಅವರ ಮೇಲೆರಗಿ ನಲವತ್ತೆರಡು ಮಂದಿ ಬಾಲಕರನ್ನು ಸೀಳಿಹಾಕಿದವು.


“ನೀವು ಮೂಢಜನರು. ಇನ್ನೆಷ್ಟುಕಾಲ ನೀವು ನಿಮ್ಮ ಮೂಢತನದಲ್ಲಿ ಆನಂದಿಸುವಿರಿ? ಇನ್ನೆಷ್ಟುಕಾಲ ನೀವು ವಿವೇಕವನ್ನು ಹಾಸ್ಯಮಾಡಬೇಕೆಂದಿದ್ದೀರಿ? ಇನ್ನೆಷ್ಟುಕಾಲ ನೀವು ಜ್ಞಾನವನ್ನು ದ್ವೇಷ ಮಾಡಬೇಕೆಂದಿದ್ದೀರಿ?


ಆದ್ದರಿಂದ ನಿಮ್ಮ ಕಷ್ಟದಲ್ಲಿ ನಾನು ನಗುವೆನು; ಅಪಾಯವು ನಿಮಗೆ ಬಡಿಯುವಾಗ ನಿಮ್ಮನ್ನು ಗೇಲಿ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು