Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 19:3 - ಪರಿಶುದ್ದ ಬೈಬಲ್‌

3 ಮೂಢನ ಮೂಢತನವು ಅವನ ಜೀವನವನ್ನೇ ನಾಶಪಡಿಸುತ್ತದೆ. ಆದರೆ ಅವನು ದೂಷಿಸುವುದು ಯೆಹೋವನನ್ನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮನುಷ್ಯನು ಮೂರ್ಖತನದಿಂದ ತನ್ನ ಗತಿಯನ್ನು ಕೆಡಿಸಿಕೊಂಡು, ಯೆಹೋವನ ಮೇಲೆ ಕುದಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಮನುಷ್ಯನ ಬಾಳಿನ ಅಳಿವು ತನ್ನ ಮೂರ್ಖತನದಿಂದ; ಆದರೂ ಅವನು ಸಿಡಿದೇಳುವುದು ಸರ್ವೇಶ್ವರನ ವಿರುದ್ಧ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಮನುಷ್ಯನು ಮೂರ್ಖತನದಿಂದ ತನ್ನ ಗತಿಯನ್ನು ಕೆಡಿಸಿಕೊಂಡು ಯೆಹೋವನ ಮೇಲೆ ಕುದಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಮನುಷ್ಯನ ಬುದ್ಧಿಹೀನತೆ ಅವನ ದುರ್ಗತಿಗೆ ದಾರಿಯಾಗಿದೆ, ಆದರೂ ಅವನ ಹೃದಯವು ಯೆಹೋವ ದೇವರಿಗೆ ವಿರೋಧವಾಗಿ ಉರಿಗೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 19:3
21 ತಿಳಿವುಗಳ ಹೋಲಿಕೆ  

ಯೆಹೋವನಲ್ಲಿ ಭರವಸವಿಟ್ಟು ಆತನ ಸಹಾಯಕ್ಕಾಗಿ ಕಾದುಕೊಂಡಿರು. ಕೆಡುಕರ ಅಭಿವೃದ್ಧಿಯನ್ನು ಕಂಡು ಉರಿಗೊಳ್ಳಬೇಡ. ಕೆಡುಕರ ಕುಯುಕ್ತಿಗಳು ನೆರವೇರಿದರೂ ಹೊಟ್ಟೆಕಿಚ್ಚುಪಡಬೇಡ.


ಯಥಾರ್ಥವಂತರಿಗೆ ಸರಳತೆಯು ಮಾರ್ಗದರ್ಶಕ. ಕೆಡುಕರು ತಮ್ಮ ಮೋಸಕೃತ್ಯಗಳ ಮೂಲಕ ತಮ್ಮನ್ನೇ ನಾಶಮಾಡಿಕೊಳ್ಳುತ್ತಾರೆ.


ದುಷ್ಟರನ್ನು ನೋಡಿ ಉರಿಗೊಳ್ಳಬೇಡ. ಕೆಡುಕರನ್ನು ಕಂಡು ಹೊಟ್ಟೆಕಿಚ್ಚುಪಡಬೇಡ.


ಎಲೀಷನು ಹಿರಿಯರೊಂದಿಗೆ ಇನ್ನೂ ಮಾತನಾಡುತ್ತಿರುವಾಗ ಸಂದೇಶಕನು ಅವನ ಬಳಿಗೆ ಬಂದನು. ಅವನ ಸಂದೇಶವು ಹೀಗಿತ್ತು: “ಈ ಆಪತ್ತು ಯೆಹೋವನಿಂದಲೇ ಬಂದಿದೆ! ನಾನೇಕೆ ಆತನನ್ನು ನಿರೀಕ್ಷಿಸಿಕೊಂಡಿರಬೇಕು?”


ಅವಿಧೇಯತೆಯು ಮಾಟಮಂತ್ರಗಳಷ್ಟೇ ಪಾಪಪೂರಿತವಾದುದು. ಮೊಂಡುತನದಿಂದ ತನ್ನ ಇಷ್ಟದಂತೆ ಮಾಡುವುದು ವಿಗ್ರಹಾರಾಧನೆಯಷ್ಟೇ ಪಾಪಪೂರಿತವಾದುದು. ನೀನು ಯೆಹೋವನ ಆಜ್ಞೆಗಳಿಗೆ ವಿಧೇಯನಾಗಲಿಲ್ಲ. ಈ ಕಾರಣದಿಂದ ಈಗ ಯೆಹೋವನು ನಿನ್ನನ್ನು ರಾಜನನ್ನಾಗಿ ಸ್ವೀಕರಿಸಿಕೊಳ್ಳುವುದಿಲ್ಲ” ಎಂದು ಸೌಲನಿಗೆ ಉತ್ತರಿಸಿದನು.


ಸಮುವೇಲನು, “ನೀನು ಬುದ್ಧಿಹೀನಕೃತ್ಯವನ್ನು ಮಾಡಿದೆ. ನಿನ್ನ ದೇವರಾದ ಯೆಹೋವನ ಆಜ್ಞೆಗೆ ನೀನು ವಿಧೇಯನಾಗಲಿಲ್ಲ. ನೀನು ಯೆಹೋವನ ಆಜ್ಞೆಗೆ ವಿಧೇಯನಾಗಿದ್ದರೆ, ನಿನ್ನ ಕುಟುಂಬವು ಇಸ್ರೇಲನ್ನು ಶಾಶ್ವತವಾಗಿ ಆಳುವಂತೆ ಯೆಹೋವನು ಮಾಡುತ್ತಿದ್ದನು.


ದುಷ್ಟನು ದುಷ್ಟತೆಯ ಬಗ್ಗೆ ಮಾತನಾಡುವನು. ದುಷ್ಕೃತ್ಯಗಳನ್ನು ಮಾಡಲು ತನ್ನ ಹೃದಯದಲ್ಲಿ ಆಲೋಚಿಸುವನು. ದುಷ್ಟನು ಯೆಹೋವನ ಬಗ್ಗೆ ಕೆಟ್ಟವುಗಳನ್ನು ಹೇಳುತ್ತಾನೆ. ಹಸಿದವರಿಗೆ ಆಹಾರವನ್ನು ತಿನ್ನುವದಕ್ಕಾಗಲಿ ಬಾಯಾರಿದವರಿಗೆ ನೀರನ್ನು ಕುಡಿಯುವದಕ್ಕಾಗಲಿ ಅವನು ಬಿಡುವದಿಲ್ಲ.


ನೀನು ದೇವರ ಮೇಲೆ ಕೋಪಗೊಂಡು ನಿನ್ನ ಬಾಯಿಂದ ಅಂತಹ ಮಾತುಗಳನ್ನು ಸುರಿಸುತ್ತಿರುವೆ!


ಜೀವಂತವಾಗಿರುವ ಯಾವ ವ್ಯಕ್ತಿಯೇ ಆಗಲಿ ತನ್ನ ಪಾಪಗಳ ನಿಮಿತ್ತ ಯೆಹೋವನ ಶಿಕ್ಷೆಗೆ ಗುರಿಯಾಗುವಾಗ ದೂರು ಹೇಳಕೂಡದು.


ದೇವರು ಹೇಳಿದ್ದೇನೆಂದರೆ: “ಒಂದುವೇಳೆ ನೀವು ಹೇಳಬಹುದು: ‘ನನ್ನ ಒಡೆಯನಾದ ದೇವರ ಕ್ರಮವು ದೃಢವಾಗಿಲ್ಲ.’ ಆದರೆ, ಇಸ್ರೇಲಿನ ಜನರೇ, ಕೇಳಿರಿ. ನಿಮ್ಮ ನಡತೆಯೇ ದೃಢವಾಗಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು