Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 19:7 - ಪರಿಶುದ್ದ ಬೈಬಲ್‌

7 ಬಡವನಿಗೆ ಅವನ ಕುಟುಂಬವು ವಿರುದ್ಧವಾಗುವುದು; ಅವನ ಸ್ನೇಹಿತರೆಲ್ಲಾ ಮುಖತಿರುವಿಕೊಂಡು ಅವನಿಗೆ ದೂರವಾಗುವರು. ಆ ಬಡವನು ಸಹಾಯಕ್ಕಾಗಿ ಬೇಡಿಕೊಂಡರೂ ಅವನ ಸಮೀಪಕ್ಕೆ ಯಾರೂ ಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಬಡವನನ್ನು ಬಂಧುಗಳೆಲ್ಲಾ ಹಗೆಮಾಡುವರು, ಹೌದು, ಮಿತ್ರರೂ ಅವನಿಗೆ ದೂರವಾಗುವರು. ಅವರ ಬರೀ ಮಾತುಗಳನ್ನು ನಂಬಿ ಹಿಂಬಾಲಿಸಿದರೆ ಏನೂ ಸಿಕ್ಕದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಬಡವನನ್ನು ಬಂಧುಗಳೆಲ್ಲರು ಹಗೆಮಾಡುವರು; ಮಿತ್ರರೋ ಖರೆಯಾಗಿ ಅವನಿಗೆ ದೂರವಾಗುವರು; ಹಿಂಬಾಲಿಸಿ ಬರುವವರು ಅವನ ಬಾಯಿಮಾತನ್ನು ನಂಬರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಬಡವನನ್ನು ಬಂಧುಗಳೆಲ್ಲಾ ಹಗೆಮಾಡುವರು; ಹೌದು, ವಿುತ್ರರೂ ಅವನಿಗೆ ದೂರವಾಗುವರು. [ಅವರ] ಬರೀ ಮಾತುಗಳನ್ನು [ನಂಬಿ] ಹಿಂಬಾಲಿಸಿದರೆ ಏನೂ ಸಿಕ್ಕದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಬಡವನ ಬಂಧುಗಳೆಲ್ಲರು ಅವನನ್ನು ಹಗೆ ಮಾಡುತ್ತಾರೆ; ತನ್ನ ಸ್ನೇಹಿತರು ತನ್ನಿಂದ ಎಷ್ಟೋ ಹೆಚ್ಚಾಗಿ ದೂರ ಹೋಗುತ್ತಾರಲ್ಲವೇ? ಮಾತುಗಳಿಂದ ಅವನು ಮೊರೆಯಿಟ್ಟು ಹಿಂಬಾಲಿಸಿದರೂ ಅವನಿಗೆ ಏನೂ ದೊರಕದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 19:7
15 ತಿಳಿವುಗಳ ಹೋಲಿಕೆ  

ಐಶ್ವರ್ಯವಂತನಿಗೆ ಅನೇಕ ಸ್ನೇಹಿತರಿರುವರು; ಬಡವನಿಗೆ ಇದ್ದ ಸ್ನೇಹಿತರೂ ಬಿಟ್ಟುಹೋಗುವರು.


ಬಡವರಿಗೆ ಸಹಾಯಮಾಡದವನು ತಾನೇ ಕೊರತೆಯಲ್ಲಿರುವಾಗ ಯಾರೂ ಅವನಿಗೆ ಸಹಾಯ ಮಾಡುವುದಿಲ್ಲ.


ಬಡವನು ವಿನಯದಿಂದ ಬೇಡಿಕೊಳ್ಳುವನು; ಐಶ್ವರ್ಯವಂತನು ಬಿರುಸಾಗಿ ಉತ್ತರಕೊಡುವನು.


ನಾನು ಅಸ್ವಸ್ಥನಾಗಿರುವುದರಿಂದ ನನ್ನ ಸ್ನೇಹಿತರಾಗಲಿ ನೆರೆಯವರಾಗಲಿ ನನ್ನನ್ನು ನೋಡಲು ಬರುವುದಿಲ್ಲ. ನನ್ನ ಕುಟುಂಬದವರು ನನ್ನ ಸಮೀಪಕ್ಕೂ ಬರುವುದಿಲ್ಲ.


ಆದರೆ ಬಡವನಿಗೆ ನೀವು ಗೌರವವನ್ನೇ ತೋರುವುದಿಲ್ಲ. ಶ್ರೀಮಂತ ಜನರು ಯಾವಾಗಲೂ ನಿಮ್ಮ ಬದುಕನ್ನು ತಮ್ಮ ಹಿಡಿತದಲ್ಲಿ ಇಟ್ಟುಕೊಂಡಿದ್ದಾರೆಂಬುದು ನಿಮಗೆ ತಿಳಿದಿದೆ. ನಿಮ್ಮನ್ನು ನ್ಯಾಯಾಲಯಕ್ಕೆ ಕೊಂಡೊಯ್ಯುವವರು ಅವರೇ.


ಬಡವನು ತನ್ನ ನೆರೆಯವನಿಂದಲೂ ತಿರಸ್ಕರಿಸಲ್ಪಡುವನು. ಐಶ್ವರ್ಯವಂತನಿಗಾದರೋ ಅನೇಕ ಮಂದಿ ಸ್ನೇಹಿತರು.


ಯೆಹೋವನೇ, ಸ್ನೇಹಿತರೆಲ್ಲರನ್ನೂ ಪ್ರಿಯರನ್ನೂ ನೀನು ನನ್ನಿಂದ ದೂರಮಾಡಿದೆ. ಕೇವಲ ಕತ್ತಲೆಯೊಂದೇ ನನ್ನೊಂದಿಗೆ ಉಳಿದುಕೊಂಡಿದೆ.


ಸ್ನೇಹಿತರು ನನ್ನನ್ನು ತೊರೆದುಬಿಟ್ಟರು. ಹೊಲೆಯಾದ ಮನುಷ್ಯನಂತೆ ಅವರೆಲ್ಲರೂ ನನ್ನನ್ನು ದೂರ ಮಾಡಿದ್ದಾರೆ. ನನ್ನನ್ನು ಮನೆಯೊಳಗೆ ದೊಬ್ಬಿ ಬೀಗ ಹಾಕಿದ್ದಾರೆ; ನಾನು ಹೊರಗೆ ಹೋಗಲಾರೆನು.


ಐಶ್ವರ್ಯವು ಸಾಹುಕಾರನನ್ನು ಕಾಪಾಡುತ್ತದೆ. ಬಡತನವಾದರೋ ಬಡವನನ್ನು ನಾಶಗೊಳಿಸುತ್ತದೆ.


ನನ್ನ ವೈರಿಗಳು ಬಲೆಗಳನ್ನು ಒಡ್ಡಿದ್ದಾರೆ; ನನ್ನ ನಾಶನದ ಕುರಿತು ಅವರು ಮಾತಾಡುತ್ತಿದ್ದಾರೆ; ದಿನವೆಲ್ಲಾ ಕುತಂತ್ರವನ್ನು ಮಾಡುತ್ತಿದ್ದಾರೆ.


ನಿನ್ನ ಸ್ನೇಹಿತರನ್ನೂ ನಿನ್ನ ತಂದೆಯ ಸ್ನೇಹಿತರನ್ನೂ ಮರೆಯಬೇಡ. ಕಷ್ಟಬಂದಾಗ ಸಹಾಯ ಕೇಳಲು ಬಹುದೂರವಿರುವ ನಿನ್ನ ಸಹೋದರನ ಮನೆಗೆ ಹೋಗುವುದಕ್ಕಿಂತ ನಿನ್ನ ಸಮೀಪದಲ್ಲಿರುವ ನೆರೆಯವನನ್ನು ಕೇಳುವುದೇ ಉತ್ತಮ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು