Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 2:2 - ಪರಿಶುದ್ದ ಬೈಬಲ್‌

2 ಜ್ಞಾನಕ್ಕೆ ಕಿವಿಗೊಡು; ಅದನ್ನು ಅರ್ಥಮಾಡಿಕೊಳ್ಳಲು ನಿನ್ನಿಂದಾದಷ್ಟು ಪ್ರಯತ್ನಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿನ್ನ ಕಿವಿಯನ್ನು ಜ್ಞಾನದ ಕಡೆಗೂ, ಹೃದಯವನ್ನು ವಿವೇಕದ ಕಡೆಗೂ ತಿರುಗಿಸು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಜ್ಞಾನದ ಕಡೆಗೆ ಕಿವಿಗೊಡು, ವಿವೇಕದ ಕಡೆಗೆ ಮನತಿರುಗಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಿನ್ನ ಕಿವಿಯನ್ನು ಜ್ಞಾನದ ಕಡೆಗೂ ಹೃದಯವನ್ನು ವಿವೇಕದ ಕಡೆಗೂ ತಿರುಗಿಸು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನೀನು ಜ್ಞಾನಕ್ಕೆ ಕಿವಿಗೊಟ್ಟು, ತಿಳುವಳಿಕೆಗೆ ನಿನ್ನ ಹೃದಯವನ್ನು ತಿರುಗಿಸು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 2:2
15 ತಿಳಿವುಗಳ ಹೋಲಿಕೆ  

ನಿನ್ನ ಉಪದೇಶಕರಿಗೆ ಕಿವಿಗೊಟ್ಟು ನಿನ್ನಿಂದ ಸಾಧ್ಯವಾದಷ್ಟು ಕಲಿತುಕೊ.


ಸ್ನೇಹಭಾವವಿಲ್ಲದವನು ಮಾಡುವುದೆಲ್ಲ ಸ್ವಾರ್ಥತೆಯಿಂದಲೇ, ಪ್ರತಿಯೊಂದು ಒಳ್ಳೆಯದರ ವಿರುದ್ಧವಾಗಿ ಅವನು ವಾದಿಸುತ್ತಾನೆ.


ನಮ್ಮ ಜೀವಿತಗಳು ಕೊಂಚವೇ ಎಂಬುದನ್ನು ನಮಗೆ ಕಲಿಸು. ಆಗ ನಾವು ವಿವೇಕಿಗಳಾಗುವೆವು.


ನನಗೆ ಕಿವಿಗೊಡುವ ಜನರೇ, ಲಾಲಿಸಿರಿ!”


ನಾನು ಹೇಳುವ ವಿಷಯಗಳಿಗೆ ಸರಿಯಾಗಿ ಕಿವಿಗೊಡಿರಿ. ನಿಮ್ಮ ಆತ್ಮಗಳು ಜೀವಿಸುವಂತೆ ನನ್ನ ಮಾತುಗಳನ್ನು ಕೇಳಿರಿ. ನನ್ನ ಬಳಿಗೆ ಬನ್ನಿರಿ, ನಾನು ನಿಮ್ಮೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ನಾನು ದಾವೀದನೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತೆ ಅದಿರುವುದು. ನಾನು ದಾವೀದನಿಗೆ ಅವನನ್ನು ಪ್ರೀತಿಸುವೆನೆಂದೂ ಅವನಿಗೆ ಪ್ರಾಮಾಣಿಕನಾಗಿರುವೆನೆಂದೂ ವಾಗ್ದಾನ ಮಾಡಿದ್ದೆನು. ಆ ಒಡಂಬಡಿಕೆಯನ್ನು ನೀವು ಖಂಡಿತವಾಗಿ ನಂಬಬಹುದು.


ಈ ಲೋಕದಲ್ಲಿ ಜನರ ಕಾರ್ಯಗಳನ್ನು ಎಚ್ಚರಿಕೆಯಿಂದ ಅಧ್ಯಯನ ಮಾಡಿದೆ. ಅವರು ಹಗಲುರಾತ್ರಿ ಕೆಲಸ ಮಾಡುವರು; ಕೆಲವೊಮ್ಮೆ ನಿದ್ರೆಯನ್ನೂ ಮಾಡುವುದಿಲ್ಲ.


ನಾನು ಇವುಗಳನ್ನೆಲ್ಲಾ ನೋಡಿ ಈ ಲೋಕದ ಕಾರ್ಯಗಳನ್ನು ಪರಿಶೀಲಿಸಿದೆನು. ಮನುಷ್ಯರು ಇನ್ನೊಬ್ಬರ ಮೇಲೆ ಅಧಿಪತಿಗಳಾಗಿರಲು ಪ್ರಯಾಸಪಡುತ್ತಾರೆ. ಇದು ಅವರಿಗೆ ಹಾನಿಕರ.


ನಿಜವಾದ ಜ್ಞಾನವನ್ನು ಕಂಡುಕೊಳ್ಳಲು ನಾನು ವ್ಯಾಸಂಗ ಮಾಡಿದೆ ಮತ್ತು ತುಂಬ ಕಷ್ಟಪಟ್ಟು ಪ್ರಯತ್ನಿಸಿದೆ. ಪ್ರತಿಯೊಂದಕ್ಕೂ ಕಾರಣವನ್ನು ಕಂಡುಕೊಳ್ಳಲು ನಾನು ಪ್ರಯತ್ನಿಸಿದೆ. ನಾನು ಕಲಿತಿದ್ದೇನು? ಕೆಡುಕನಾಗಿರುವುದು ಮೂಢತನ ಮತ್ತು ಮೂಢನಂತೆ ವರ್ತಿಸುವುದು ಹುಚ್ಚುತನ ಎಂಬುದನ್ನು ನಾನು ಕಲಿತುಕೊಂಡೆ.


ಈ ಯೆಹೂದ್ಯರು ಥೆಸಲೋನಿಕದ ಯೆಹೂದ್ಯರಿಗಿಂತಲೂ ಉತ್ತಮರಾಗಿದ್ದರು. ಪೌಲ ಸೀಲರು ಹೇಳಿದ ಸಂಗತಿಗಳನ್ನು ಇವರು ಬಹಳ ಸಂತೋಷದಿಂದ ಕೇಳಿದರು. ಮತ್ತು ಈ ಸಂಗತಿಗಳು ನಿಜವೇ ಎಂಬುದನ್ನು ತಿಳಿದುಕೊಳ್ಳಲು ಪವಿತ್ರ ಗ್ರಂಥವನ್ನು ಪ್ರತಿದಿನವೂ ಅಧ್ಯಯನ ಮಾಡಿದರು.


ಬುದ್ಧಿಗಾಗಿ ಮೊರೆಯಿಡು! ವಿವೇಕಕ್ಕಾಗಿ ಕೂಗಿಕೊ!


ಮಕ್ಕಳೇ, ನಿಮ್ಮ ತಂದೆಯ ಉಪದೇಶಗಳಿಗೆ ಕಿವಿಗೊಡಿ, ಗಮನವಿಟ್ಟು ಅರ್ಥಮಾಡಿಕೊಳ್ಳಿರಿ.


ನನ್ನ ಮಗನೇ, ನನ್ನ ಮಾತುಗಳಿಗೆ ಗಮನಕೊಡು. ನನ್ನ ನುಡಿಗಳಿಗೆ ಕಿವಿಗೊಡು.


ಆದರೆ ವ್ಯಭಿಚಾರ ಮಾಡುವವನು ಮೂರ್ಖನಾಗಿದ್ದಾನೆ. ಅದನ್ನು ಮಾಡುವವನು ತನ್ನನ್ನೇ ನಾಶಮಾಡಿಕೊಳ್ಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು