Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 20:25 - ಪರಿಶುದ್ದ ಬೈಬಲ್‌

25 ನೀನು ದೇವರಿಗೆ ಹರಕೆ ಮಾಡುವ ಮೊದಲೇ ಎಚ್ಚರಿಕೆಯಿಂದ ಯೋಚಿಸು. ಹರಕೆ ಮಾಡಿದ ಮೇಲೆ ಹರಕೆ ಮಾಡಬಾರದಾಗಿತ್ತು ಎಂದು ಹೇಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 “ಇದು ದೇವರಿಗಾಗಿ” ಎಂದು ದುಡುಕಿ ಹರಕೆಮಾಡುವುದು, ಹರಕೆಯನ್ನು ಹೊತ್ತಮೇಲೆ ವಿಚಾರಮಾಡುವುದು ಮನುಷ್ಯನಿಗೆ ಉರುಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ದುಡುಕಿ ದೇವರಿಗೆ ಮುಡಿಪುಕಟ್ಟುವುದು, ಹರಕೆ ಹೊತ್ತ ಮೇಲೆ ವಿಚಾರಮಾಡುವುದು, ಉರುಳಿಗೆ ಸಿಕ್ಕಿಕೊಂಡಂತೆ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ದುಡುಕಿ ಮುಡುಪುಕಟ್ಟುವದು ಮನುಷ್ಯನಿಗೆ ಉರುಲು; ಹರಕೆಹೊತ್ತ ಮೇಲೆ ವಿಚಾರಪಡಬೇಕಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ದುಡುಕಿ ಪ್ರತಿಷ್ಠೆಗಾಗಿ ದೇವರಿಗೆ ಹರಕೆ ಮಾಡಿಕೊಂಡು ಆಮೇಲೆ ವಿಚಾರಿಸುವುದು ಉರುಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 20:25
15 ತಿಳಿವುಗಳ ಹೋಲಿಕೆ  

“‘ನೀವಿಟ್ಟ ಆಣೆಯನ್ನು ಮೀರಬೇಡಿರಿ. ಪ್ರಭುವಿಗೆ ನೀವಿಟ್ಟ ಆಣೆಗಳನ್ನು ಕೈಗೊಳ್ಳಲೇಬೇಕು’ ಎಂದು ನಮ್ಮ ಪೂರ್ವಿಕರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಿ.


“ಒಬ್ಬನು ಯೆಹೋವನ ಪರಿಶುದ್ಧ ವಸ್ತುಗಳ ವಿಷಯದಲ್ಲಿ ಮೀರಿ ನಡೆದು ತಿಳಿಯದೆ ತಪ್ಪು ಮಾಡಿದರೆ ಅವನು ಅಂಗದೋಷವಿಲ್ಲದ ಟಗರನ್ನು ತರಬೇಕು. ಇದು ಅವನಿಗಾಗಿ ಯೆಹೋವನಿಗೆ ಸಮರ್ಪಣೆಯಾಗುವ ದೋಷಪರಿಹಾರಕ ಯಜ್ಞ. ನೀವು ಅಧಿಕೃತ ಅಳತೆಯನ್ನು ಉಪಯೋಗಿಸಿ ಟಗರಿನ ಬೆಲೆಯನ್ನು ಗೊತ್ತುಮಾಡಬೇಕು.”


ಮೂಢನು ಮಾತಿನಲ್ಲಿ ತನ್ನನ್ನೇ ನಾಶಪಡಿಸಿಕೊಳ್ಳುವನು. ಅವನ ಮಾತುಗಳೇ ಅವನಿಗೆ ಬಲೆಯಾಗುತ್ತವೆ.


ಗಮನವಿಟ್ಟು ಕೇಳದೆ ಉತ್ತರಿಸುವವನು ಮೂಢನೇ ಸರಿ; ಅವನು ನಾಚಿಕೆಗೆ ಒಳಗಾಗುವನು.


ದೇವರಿಗೆ ಹರಕೆ ಮಾಡುವಾಗ ಎಚ್ಚರಿಕೆಯಿಂದಿರಿ. ನೀವು ದೇವರೊಂದಿಗೆ ಮಾತಾಡುವಾಗ ಎಚ್ಚರಿಕೆಯಿಂದಿರಿ. ನಿಮ್ಮ ಮನೋದ್ವೇಗಗಳು ನಿಮ್ಮನ್ನು ಮಾತಿನಲ್ಲಿ ದುಡುಕಿಸದಂತೆ ನೋಡಿಕೊಳ್ಳಿ. ದೇವರು ಪರಲೋಕದಲ್ಲಿರುವುದರಿಂದ ಮತ್ತು ನೀವು ಈ ಲೋಕದಲ್ಲಿರುವುದರಿಂದ ನಿಮ್ಮ ಮಾತುಗಳು ಮಿತವಾಗಿರಲಿ. ಈ ನುಡಿ ಸತ್ಯವಾದದ್ದೇ:


ನೀವು ಹರಕೆ ಮಾಡಿಕೊಳ್ಳದಿದ್ದರೆ ಪಾಪಮಾಡುವುದಿಲ್ಲ.


ಆದರೆ ನೀವು ಮಾಡಿದ ಹರಕೆಯನ್ನು ಪೂರೈಸಬೇಕು. ನೀವು ಹರಕೆ ಮಾಡುವಂತೆ ದೇವರು ನಿಮ್ಮನ್ನು ಬಲವಂತ ಮಾಡಲಿಲ್ಲವಲ್ಲಾ. ಆದ್ದರಿಂದ ನೀವು ವಾಗ್ದಾನ ಮಾಡಿದ್ದನ್ನು ಪೂರೈಸಬೇಕು.


“ಒಬ್ಬನ ತೋಟದೊಳಗಿಂದ ನೀವು ಹಾದುಹೋಗುತ್ತಿರುವಾಗ ನಿಮಗೆ ಬೇಕಾಗುವಷ್ಟು ಹಣ್ಣನ್ನು ಕಿತ್ತು ತಿನ್ನಿ. ಆದರೆ ನೀವು ಮಕ್ಕರಿಯಲ್ಲಿ ತುಂಬಿಸಿಕೊಂಡು ಹೋಗಬಾರದು.


ಆ ಯುವತಿಯರ ತಂದೆಗಳಾಗಲಿ ಸಹೋದರರಾಗಲಿ ನಮ್ಮಲ್ಲಿಗೆ ಬಂದು ದೂರು ಹೇಳುತ್ತಾರೆ. ಆಗ ನಾವು ಅವರಿಗೆ, ‘ಬೆನ್ಯಾಮೀನ್ಯರ ಗಂಡಸರಿಗೆ ದಯೆತೋರಿಸಿರಿ; ಅವರು ಆ ಸ್ತ್ರೀಯರನ್ನು ಮದುವೆಯಾಗಲಿ. ಅವರು ನಿಮ್ಮಿಂದ ನಿಮ್ಮ ಹೆಣ್ಣುಮಕ್ಕಳನ್ನು ತೆಗೆದುಕೊಂಡು ಹೋಗಿರುವರೇ ಹೊರತು ಯುದ್ಧವೇನೂ ಮಾಡಿಲ್ಲ. ಅವರು ಕನ್ಯೆಯರನ್ನು ತೆಗೆದುಕೊಂಡು ಹೋದದ್ದರಿಂದ ನೀವು ದೇವರೆದುರಿಗೆ ಮಾಡಿದ ಪ್ರತಿಜ್ಞೆಯನ್ನು ಮುರಿದಂತಾಗುವುದಿಲ್ಲ. ನಿಮ್ಮ ಕನ್ಯೆಯರನ್ನು ಅವರಿಗೆ ಕೊಡುವುದಿಲ್ಲವೆಂದು ನೀವು ಪ್ರತಿಜ್ಞೆ ಮಾಡಿದ್ದೀರಿ. ನೀವು ಬೆನ್ಯಾಮೀನ್ಯರಿಗೆ ನಿಮ್ಮ ಕನ್ಯೆಯರನ್ನು ಕೊಟ್ಟಿಲ್ಲ. ಆದರೆ ಅವರು ನಿಮ್ಮ ಕನ್ಯೆಯರನ್ನು ತೆಗೆದುಕೊಂಡು ಹೋದರು. ಆದ್ದರಿಂದ ನೀವು ನಿಮ್ಮ ಪ್ರತಿಜ್ಞೆಯನ್ನು ಮುರಿಯಲಿಲ್ಲ’ ಎಂದು ಹೇಳುತ್ತೇವೆ” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು