Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 21:2 - ಪರಿಶುದ್ದ ಬೈಬಲ್‌

2 ತನ್ನ ನಡತೆ ಸರಿಯೆಂದು ಒಬ್ಬನು ಭಾವಿಸಿಕೊಳ್ಳಬಹುದು; ಆದರೆ ಉದ್ದೇಶಗಳಿಗನುಸಾರವಾಗಿ ತೀರ್ಪು ನೀಡುವವನು ಯೆಹೋವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನರನ ನಡತೆಯು ಸ್ವಂತ ದೃಷ್ಟಿಗೆ ಸರಿಯಾಗಿ ಕಾಣುತ್ತವೆ, ಯೆಹೋವನು ಹೃದಯಗಳನ್ನೇ ಪರೀಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಮಾನವರ ನಡವಳಿಕೆ ಅವರವರ ನೋಟಕ್ಕೆ ನೇರ; ಅವರ ಅಂತರಂಗವನ್ನು ವೀಕ್ಷಿಸಬಲ್ಲವನೋ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನರನ ನಡತೆಯು ಸ್ವಂತ ದೃಷ್ಟಿಗೆ ನೆಟ್ಟಗೆ; ಯೆಹೋವನು ಹೃದಯಗಳನ್ನೇ ಪರೀಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಮನುಷ್ಯನ ಪ್ರತಿಯೊಂದು ಮಾರ್ಗವು ಅವನ ದೃಷ್ಟಿಯಲ್ಲಿ ಸರಿಯಾಗಿದೆ; ಆದರೆ ಯೆಹೋವ ದೇವರು ಹೃದಯಗಳನ್ನು ಪರೀಕ್ಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 21:2
18 ತಿಳಿವುಗಳ ಹೋಲಿಕೆ  

ಜನರು ತಮ್ಮ ಕಾರ್ಯಗಳೆಲ್ಲಾ ಸರಿಯೆಂದು ಆಲೋಚಿಸಿಕೊಂಡರೂ ಅವುಗಳ ಉದ್ದೇಶಕ್ಕನುಸಾರವಾಗಿ ತೀರ್ಪು ಕೊಡುವವನು ಯೆಹೋವನೇ.


ಮನುಷ್ಯದೃಷ್ಟಿಗೆ ಸರಳವಾಗಿ ತೋರುವ ಒಂದು ಮಾರ್ಗವಿದೆ; ಆದರೆ ಅದರ ಅಂತ್ಯವು ಮರಣ.


ಯೇಸು ಫರಿಸಾಯರಿಗೆ ಹೀಗೆಂದನು, “ನೀವು ಜನರ ಮುಂದೆ ನಿಮ್ಮನ್ನು ಒಳ್ಳೆಯವರೆಂದು ತೋರಿಸಿಕೊಳ್ಳುತ್ತೀರಿ. ಆದರೆ ನಿಜವಾಗಿಯೂ ನಿಮ್ಮ ಹೃದಯದಲ್ಲಿರುವುದು ದೇವರಿಗೆ ಗೊತ್ತು. ಜನರ ದೃಷ್ಟಿಯಲ್ಲಿ ಅಮೂಲ್ಯವಾದುವುಗಳು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿವೆ.


ನಾನೇ ಯೆಹೋವನು, ನಾನು ಮನುಷ್ಯನ ಹೃದಯದ ಆಳವನ್ನು ನೋಡಬಲ್ಲೆ, ಮನುಷ್ಯನ ಬುದ್ಧಿಯನ್ನು ಪರೀಕ್ಷಿಸಬಲ್ಲೆ. ಆದ್ದರಿಂದ ಪ್ರತಿಯೊಬ್ಬ ಮನುಷ್ಯನಿಗೆ ತಕ್ಕ ಪ್ರತಿಫಲವನ್ನು ನಾನು ನಿರ್ಧರಿಸಬಲ್ಲೆ. ಪ್ರತಿಯೊಬ್ಬ ಮನುಷ್ಯನಿಗೆ ಅವನ ಕೆಲಸಕ್ಕೆ ತಕ್ಕಂತೆ ಸರಿಯಾಗಿ ಫಲವನ್ನು ಕೊಡುವೆನು.


ಕೆಲವರು ತಮ್ಮನ್ನು ಶುದ್ಧರೆಂದು ಯೋಚಿಸುವರು. ಆದರೆ ಅವರು ತಮ್ಮ ಹೊಲಸಿನಿಂದ ಶುದ್ಧೀಕರಿಸಲ್ಪಟ್ಟಿಲ್ಲ.


ಆದರೆ ಯೆಹೋವನು ಸಮುವೇಲನಿಗೆ, “ಎಲೀಯಾಬನ ಎತ್ತರವನ್ನಾಗಲಿ ರೂಪವನ್ನಾಗಲಿ ಪರಿಗಣಿಸಬೇಡ. ಯಾಕೆಂದರೆ ನಾನು ಅವನನ್ನು ತಿರಸ್ಕರಿಸಿದ್ದೇನೆ. ಮನುಷ್ಯರಾದರೋ ಹೊರತೋರಿಕೆಯನ್ನು ಪರಿಗಣಿಸುತ್ತಾರೆ; ಯೆಹೋವನಾದರೋ ಹೊರತೋರಿಕೆಯನ್ನು ನೋಡದೆ ಹೃದಯವನ್ನೇ ನೋಡುವವನಾಗಿದ್ದಾನೆ” ಎಂದು ಹೇಳಿದನು.


“ಇದರ ಬಗ್ಗೆ ನನಗೆ ಗೊತ್ತಿರಲಿಲ್ಲ” ಎಂದು ನೀನು ಹೇಳಲಾಗದು. ಯೆಹೋವನಿಗೆ ಪ್ರತಿಯೊಂದು ತಿಳಿದಿದೆ. ನಿನ್ನ ಕಾರ್ಯಗಳ ಉದ್ದೇಶವೂ ಆತನಿಗೆ ತಿಳಿದಿದೆ. ಯೆಹೋವನು ನಿನ್ನನ್ನು ಗಮನಿಸಿ ನಿನ್ನ ಕಾರ್ಯಗಳಿಗೆ ಪ್ರತಿಫಲ ಕೊಡುವನು.


ದೇವರ ವಾಕ್ಯವನ್ನು ಕೇವಲ ಕೇಳುವವರಾಗಿರದೆ ಅದನ್ನು ಕಾರ್ಯರೂಪಕ್ಕೆ ತನ್ನಿರಿ. ಇಲ್ಲವಾದರೆ ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳುವಿರಿ.


ಅವನು ತನ್ನನ್ನು ವಂಚಿಸಿಕೊಳ್ಳುವನು. ಅವನು ತನ್ನ ತಪ್ಪುಗಳನ್ನು ಕಾಣುವುದೂ ಇಲ್ಲ, ಅವುಗಳಿಗಾಗಿ ಕ್ಷಮೆಯನ್ನು ಕೇಳುವುದೂ ಇಲ್ಲ.


ಯಾವನಾದರೂ ತಾನು ಪ್ರಾಮುಖ್ಯನಲ್ಲದಿದ್ದರೂ ತನ್ನನ್ನು ಪ್ರಾಮುಖ್ಯನೆಂದು ಭಾವಿಸಿಕೊಂಡರೆ ಅವನು ತನ್ನನ್ನೇ ಮೋಸಪಡಿಸಿಕೊಳ್ಳುತ್ತಾನೆ. ಒಬ್ಬನು ತನ್ನನ್ನು ಮತ್ತೊಬ್ಬನೊಡನೆ ಹೋಲಿಸಿಕೊಳ್ಳಕೂಡದು.


ಅನೇಕರು ತಾವು ನಂಬಿಗಸ್ತರೆಂದು ಹೇಳಿಕೊಳ್ಳುತ್ತಾರೆ. ಆದರೆ ನಿಜವಾಗಿಯೂ ನಂಬಿಗಸ್ತನಾಗಿರುವ ಒಬ್ಬನನ್ನು ಕಂಡುಕೊಳ್ಳುವುದು ಬಹುಕಷ್ಟ.


ನಾನು ಅವಳ ಹಿಂಬಾಲಕರನ್ನು ಕೊಲ್ಲುತ್ತೇನೆ. ಮನುಷ್ಯರ ಅಂತರಂಗವನ್ನೂ ಅವರ ಆಲೋಚನೆಗಳನ್ನೂ ತಿಳಿದಿರುವಾತನು ನಾನೇ ಎಂಬುದನ್ನು ಆಗ ಎಲ್ಲಾ ಸಭೆಗಳವರು ತಿಳಿದುಕೊಳ್ಳುವರು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ನೀಡುತ್ತೇನೆ.


ಮೂಢನು ತನ್ನ ದಾರಿಯನ್ನೇ ಒಳ್ಳೆಯದೆಂದು ಭಾವಿಸಿಕೊಂಡಿರುತ್ತಾನೆ. ಜ್ಞಾನಿಯಾದರೋ ಉಪದೇಶಕ್ಕೆ ಕಿವಿಗೊಡುತ್ತಾನೆ.


ದೇವರು ನ್ಯಾಯವಾದ ಅಳತೆಮಾನಗಳಿಂದ ನನ್ನನ್ನು ತೂಗಿದರೆ, ನಾನು ನಿರಪರಾಧಿಯೆಂದು ಆತನಿಗೆ ಗೊತ್ತಾಗುವುದು.


ಜನರು ಬೆಳ್ಳಿಬಂಗಾರವನ್ನು ಬೆಂಕಿಗೆ ಹಾಕಿ ಶುದ್ಧಮಾಡುವರು. ಆದರೆ ಮನುಷ್ಯರ ಹೃದಯಗಳನ್ನು ಶುದ್ಧಮಾಡುವವನು ಯೆಹೋವನೇ.


ತೆಕೇಲ್ ಎಂದರೆ: ನೀನು ತಕ್ಕಡಿಯಲ್ಲಿ ತೂಗಲ್ಪಟ್ಟು ಕಡಿಮೆಯಾಗಿ ಕಂಡುಬಂದಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು