Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 21:24 - ಪರಿಶುದ್ದ ಬೈಬಲ್‌

24 ಗರ್ವಿಷ್ಠನೂ ದುರಾಭಿಮಾನಿಯೂ ಆಗಿರುವವನಿಗೆ ಗೇಲಿಗಾರನೆಂದು ಹೆಸರು. ಅವನ ನಡತೆಯು ಗರ್ವದ ಮದದಿಂದ ಕೂಡಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “ಧರ್ಮನಿಂದಕ” ಎನ್ನಿಸಿಕೊಳ್ಳುವವನು ಸೊಕ್ಕೇರಿದ ಅಹಂಕಾರಿಯಾಗಿ, ಗರ್ವ ಮತ್ತು ಮದದಿಂದ ಪ್ರವರ್ತಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಸೊಕ್ಕೇರಿದ ಗರ್ವಿ ಕುಚೋದ್ಯನೆನಿಸಿಕೊಳ್ಳುವನು; ಅಹಂಕಾರ, ಮದಮತ್ಸರಗಳಿಂದ ಅವನು ವರ್ತಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಧರ್ಮನಿಂದಕನೆನಿಸಿಕೊಳ್ಳುವ ಸೊಕ್ಕೇರಿದ ಅಹಂಕಾರಿಯು ಗರ್ವಮದದಿಂದ ಪ್ರವರ್ತಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಸೊಕ್ಕೇರಿ ಗರ್ವದಲ್ಲಿ ವರ್ತಿಸುವವನ ಹೆಸರು ಅಹಂಕಾರಿ ಮತ್ತು ಪರಿಹಾಸ್ಯಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 21:24
15 ತಿಳಿವುಗಳ ಹೋಲಿಕೆ  

ಯಾವನು ದುಷ್ಟರ ಮಾರ್ಗವನ್ನು ಅನುಸರಿಸದೆ, ಪಾಪಿಗಳಂತೆ ಜೀವಿಸದೆ, ದೇವರಿಗೆ ಅವಿಧೇಯರಾದ ಜನರೊಂದಿಗೆ ಸೇರದೆ ಇರುವನೋ ಅವನೇ ಭಾಗ್ಯವಂತನು.


ದುರಾಭಿಮಾನಿಯು ಶಿಕ್ಷೆಗೆ ಗುರಿಯಾಗಿ ದಂಡಿಸಲ್ಪಡುವನು; ಮೂಢನು ತನಗಾಗಿ ಕಾದಿರುವ ದಂಡನೆಯನ್ನು ಅನುಭವಿಸುವನು.


ಗರ್ವಿಯು ಬೇಗನೆ ಹಾಳಾಗುವನು; ದೀನನಾದರೋ ಸನ್ಮಾನವನ್ನು ಹೊಂದುವನು.


“ನೀವು ಮೂಢಜನರು. ಇನ್ನೆಷ್ಟುಕಾಲ ನೀವು ನಿಮ್ಮ ಮೂಢತನದಲ್ಲಿ ಆನಂದಿಸುವಿರಿ? ಇನ್ನೆಷ್ಟುಕಾಲ ನೀವು ವಿವೇಕವನ್ನು ಹಾಸ್ಯಮಾಡಬೇಕೆಂದಿದ್ದೀರಿ? ಇನ್ನೆಷ್ಟುಕಾಲ ನೀವು ಜ್ಞಾನವನ್ನು ದ್ವೇಷ ಮಾಡಬೇಕೆಂದಿದ್ದೀರಿ?


ಜ್ಞಾನಿಗಳು ತನಗೆ ಮೋಸಮಾಡಿದರೆಂಬುದು ತಿಳಿದಾಗ ಹೆರೋದನು ಬಹಳ ಕೋಪಗೊಂಡನು. ಆ ಮಗು ಹುಟ್ಟಿದ ಸಮಯವನ್ನು ಹೆರೋದನು ಜ್ಞಾನಿಗಳಿಂದ ತಿಳಿದುಕೊಂಡಿದ್ದನು. ಆ ಮಗು ಹುಟ್ಟಿ ಎರಡು ವರ್ಷಗಳಾಗಿದ್ದವು. ಆದ್ದರಿಂದ ಹೆರೋದನು ಬೆತ್ಲೆಹೇಮಿನಲ್ಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿದ್ದ ಎರಡು ವರ್ಷದ ಮತ್ತು ಅವರಿಗಿಂತ ಚಿಕ್ಕವರಾದ ಗಂಡುಮಕ್ಕಳನ್ನೆಲ್ಲಾ ಕೊಲ್ಲಬೇಕೆಂದು ಆಜ್ಞಾಪಿಸಿದನು.


“ಮೋವಾಬಿನ ಸೊಕ್ಕಿನ ಬಗ್ಗೆ ನಾವು ಕೇಳಿದ್ದೇವೆ. ಅವನಿಗೆ ತುಂಬ ಸೊಕ್ಕು ಬಂದಿತ್ತು. ತಾನೇ ಮುಖ್ಯವಾದವನೆಂದು ಅವನು ಭಾವಿಸಿದ್ದನು. ಅವನು ಯಾವಾಗಲೂ ಬಡಾಯಿಕೊಚ್ಚಿಕೊಳ್ಳುತ್ತಿದ್ದನು. ಅವನು ತುಂಬಾ ಸೊಕ್ಕಿನವನಾಗಿದ್ದನು.”


ಮೋವಾಬಿನ ಜನರು ತುಂಬ ಹೆಚ್ಚಳಪಡುವವರೂ ಜಂಬದವರೂ ಎಂದು ನಾವು ಕೇಳಿದ್ದೇವೆ. ಇವರು ಹಿಂಸಕರಾಗಿದ್ದಾರೆ; ಬಡಾಯಿ ಕೊಚ್ಚುವವರಾಗಿದ್ದಾರೆ, ಅವರ ಬಡಾಯಿ ಕೇವಲ ಮಾತುಗಳಷ್ಟೇ.


ಅಹಂಕಾರಿಯು ನಾಶನದ ಅಪಾಯದಲ್ಲಿದ್ದಾನೆ. ದುರಾಭಿಮಾನಿಯು ಸೋಲಿನ ಅಪಾಯದಲ್ಲಿದ್ದಾನೆ.


ಗರ್ವದ ಕಣ್ಣು, ಸುಳ್ಳಾಡುವ ನಾಲಿಗೆ, ನಿರಪರಾಧಿಗಳನ್ನು ಕೊಲ್ಲುವ ಕೈ.


ಯಾರು ಗರ್ವದಿಂದ ಬೇರೆಯವರನ್ನು ಗೇಲಿಮಾಡುತ್ತಾರೋ ಅವರನ್ನು ಯೆಹೋವನೂ ಗೇಲಿಮಾಡುತ್ತಾನೆ. ದೀನರಿಗಾದರೋ ಆತನ ಕರುಣೆ ದೊರೆಯುವುದು.


ಮೂಢನ ಆಲೋಚನೆಗಳೆಲ್ಲಾ ಪಾಪಮಯ. ದುರಾಭಿಮಾನಿಯು ಜನರಿಗೆ ಅಸಹ್ಯ.


ಇದು ಕ್ರೂರಿಗಳೂ ದುಷ್ಟರೂ ನಾಶವಾದಾಗ ಆಗುವದು. ಕೆಟ್ಟಕಾರ್ಯಗಳನ್ನು ಮಾಡುವದರಲ್ಲಿ ಸಂತೋಷಿಸುವವರು ಇಲ್ಲದೆ ಹೋದಾಗ ಆ ಕಾರ್ಯಗಳು ನಡಿಯುವವು.


ಯೆಹೋವನು ಹೇಳಿದ್ದು: “ಒಬ್ಬನನ್ನು ದ್ರಾಕ್ಷಾರಸವು ಮೋಸಪಡಿಸಬಹುದು. ಅದೇ ರೀತಿಯಲ್ಲಿ ಬಲಿಷ್ಠನ ಗರ್ವವು ಅವನನ್ನು ಮೋಸಪಡಿಸಬಹುದು. ಆದರೆ ಅವನಿಗೆ ಸಮಾಧಾನ ಸಿಕ್ಕುವುದಿಲ್ಲ. ಅವನು ಮರಣದಂತಿರುವನು. ಅವನಿಗೆ ಯಾವಾಗಲೂ ಹೆಚ್ಚೆಚ್ಚು ಬೇಕು. ಮರಣದಂತೆ ಅವನಿಗೆ ತೃಪ್ತಿಯೇ ಇರದು. ಅವನು ಜನಾಂಗಗಳನ್ನು ಸೋಲಿಸುತ್ತಲೇ ಇರುವನು. ಆ ಜನರನ್ನು ತನ್ನ ಕೈದಿಗಳನ್ನಾಗಿ ಮಾಡುತ್ತಲೇ ಇರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು