Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 21:25 - ಪರಿಶುದ್ದ ಬೈಬಲ್‌

25 ಸೋಮಾರಿಯ ಆಸೆ ಅವನನ್ನು ಉಪವಾಸದಿಂದ ಸಾಯಿಸುವುದು, ಯಾಕೆಂದರೆ ಅವನು ದುಡಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಸೋಮಾರಿಯ ಆಶೆಯು ಅವನನ್ನು ಕೊಲ್ಲುವುದು, ಅವನ ಕೈಗಳು ದುಡಿಯಲಾರವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಮೈಗಳ್ಳನನ್ನು ಕೊಲ್ಲುವುದು ಅವನ ಇಚ್ಛೆಯೆ; ಬಗ್ಗದು ಅವನ ಕೈ ದುಡಿಮೆಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಸೋಮಾರಿಯ ಆಶೆಯು ಅವನನ್ನು ಕೊಲ್ಲುವದು, ಅವನ ಕೈಗಳು ದುಡಿಯಲೊಲ್ಲವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಸೋಮಾರಿಯ ಆಸೆಯು ಅವನನ್ನು ಕೊಲ್ಲುತ್ತದೆ; ಅವನ ಕೈಗಳು ದುಡಿಯುವುದಕ್ಕೆ ನಿರಾಕರಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 21:25
13 ತಿಳಿವುಗಳ ಹೋಲಿಕೆ  

ಸೋಮಾರಿಯ ಆಸೆಗಳೆಲ್ಲಾ ವ್ಯರ್ಥ. ಅವನೆಂದಿಗೂ ಅವುಗಳನ್ನು ಪಡೆಯಲಾರ. ಕಷ್ಟಪಟ್ಟು ದುಡಿಯುವವನು ತನ್ನ ಆಸೆಗಳನ್ನು ಈಡೇರಿಸಿಕೊಳ್ಳುವನು.


ಕಷ್ಟಪಟ್ಟು ಕೆಲಸ ಮಾಡುವವನು ಅಧಿಪತಿಯಾಗುವನು. ಸೋಮಾರಿಯನ್ನು ಗುಲಾಮನನ್ನಾಗಿ ಮಾಡಲಾಗುವುದು.


“ಅದಕ್ಕೆ ಯಜಮಾನನು, ‘ನೀನು ಸೋಮಾರಿಯಾದ ಕೆಟ್ಟ ಸೇವಕ! ನಾನು ನೆಡದ ಕಡೆಯಲ್ಲಿ ರಾಶಿ ಮಾಡಿಕೊಳ್ಳುವವನೆಂದು ಮತ್ತು ಬೀಜ ಬಿತ್ತದ ಕಡೆಯಲ್ಲಿ ಕೊಯ್ಯುವವನೆಂದು ನಿನಗೆ ಗೊತ್ತಿತ್ತೇ?


ತಮ್ಮ ಆಲೋಚನೆಗಳಿಗೆ ಒಳ್ಳೆಯ ಕಾರಣಗಳನ್ನು ಕೊಡುವ ಏಳು ಜನರಿಗಿಂತಲೂ ತಾನು ಜ್ಞಾನಿಯೆಂದು ಸೋಮಾರಿಯು ಭಾವಿಸುವನು.


ಕೆಲವರಿಗೆ ಊಟಮಾಡುವುದಕ್ಕೂ ಸೋಮಾರಿತನ. ಅವರು ಕೈಯನ್ನು ತಟ್ಟೆಗೆ ಹಾಕಿದರೂ ಊಟವನ್ನು ಬಾಯಿಗೆ ಹಾಕಿಕೊಳ್ಳುವುದಿಲ್ಲ.


ಸೋಮಾರಿಗೆ ಎಲ್ಲೆಲ್ಲೂ ತೊಂದರೆ, ಯಥಾರ್ಥವಂತನಿಗೆ ಜೀವನ ಸರಾಗ.


ಸೋಮಾರಿಯಾದ ಬೇಟೆಗಾರನು ಬೇಟೆಯಾಡುವುದಿಲ್ಲ. ಐಶ್ವರ್ಯವು ಕಷ್ಟಪಟ್ಟು ಕೆಲಸ ಮಾಡುವವನಿಗೆ ಬರುತ್ತದೆ.


ಸೋಮಾರಿಯು ಬಿತ್ತನೆಕಾಲದಲ್ಲಿ ಬೀಜ ಬಿತ್ತುವುದಿಲ್ಲ; ಸುಗ್ಗಿಕಾಲದಲ್ಲಿ ಅವನಿಗೆ ಬೆಳೆಯೂ ಇರುವುದಿಲ್ಲ.


“ನಾನು ನನ್ನ ಮನೆಯಿಂದ ಹೊರಗೆ ಹೋಗಲಾರೆ. ಬೀದಿಯಲ್ಲಿ ಸಿಂಹವಿದೆ” ಎನ್ನುತ್ತಾನೆ ಸೋಮಾರಿ.


“ನಾನು ಕೆಲಸಕ್ಕೆ ಹೋಗಲಾರೆ. ಹೊರಗಡೆ ಸಿಂಹವಿದೆ. ಅದು ನನ್ನನ್ನು ಕೊಲ್ಲುತ್ತದೆ” ಎನ್ನುತ್ತಾನೆ ಸೋಮಾರಿ.


ತರುವಾಯ ಆ ಜನರು ಯೆಹೋಶುವನಲ್ಲಿಗೆ ಬಂದು, “ಆಯಿ ಒಂದು ದುರ್ಬಲ ಪ್ರದೇಶವಾಗಿದೆ, ಆ ಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ನಮ್ಮ ಎಲ್ಲ ಜನರು ಬೇಕಾಗುವುದಿಲ್ಲ. ಅಲ್ಲಿ ಯುದ್ಧ ಮಾಡಲು ಎರಡು ಅಥವಾ ಮೂರುಸಾವಿರ ಜನರನ್ನು ಕಳುಹಿಸಿದರೆ ಸಾಕು, ಇಡೀ ಸೈನ್ಯವನ್ನು ಉಪಯೋಗಿಸುವ ಅವಶ್ಯಕತೆ ಇಲ್ಲ. ಅಲ್ಲಿ ನಮ್ಮ ವಿರುದ್ಧ ಹೋರಾಡಬಲ್ಲ ಕೆಲವೇ ಜನರು ಇದ್ದಾರೆ” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು