Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 21:6 - ಪರಿಶುದ್ದ ಬೈಬಲ್‌

6 ನೀನು ಮೋಸದಿಂದ ಐಶ್ವರ್ಯವಂತನಾದರೆ, ಆ ಐಶ್ವರ್ಯವು ಬಹುಬೇಗನೆ ಇಲ್ಲವಾಗುತ್ತದೆ. ನಿನ್ನ ಐಶ್ವರ್ಯವು ನಿನ್ನನ್ನು ಮರಣಕ್ಕೆ ನಡೆಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಸುಳ್ಳಿನಿಂದ ಸಿಕ್ಕಿದ ಸಂಪತ್ತು ಹಬೆಯಂತೆ ಅಸ್ಥಿರ, ಮೃತ್ಯುಪಾಶದಂತೆ ನಾಶಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಹಬೆಯಂತೆ ನಾಪತ್ತೆ ಸುಳ್ಳಿನಿಂದ ಸಿಕ್ಕಿದ ಸಂಪತ್ತು; ಮೃತ್ಯುಪಾಶದಂತೆ ಅದೊಂದು ವಿಪತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಸುಳ್ಳಿನಿಂದ ಸಿಕ್ಕಿದ ಸಂಪತ್ತು ಹಬೆಯಂತೆ ಅಸ್ಥಿರ, ಮೃತ್ಯುಪಾಶದಂತೆ [ನಾಶಕರ].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಸುಳ್ಳಿನ ನಾಲಿಗೆಯಿಂದ ಸಂಪಾದಿಸಿದ ಸಂಪತ್ತು ಕ್ಷಣಿಕ ಆವಿಯಂತೆಯೂ ಮೃತ್ಯುಪಾಶದಂತೆಯೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 21:6
12 ತಿಳಿವುಗಳ ಹೋಲಿಕೆ  

ಮೋಸದಿಂದ ಸಂಪಾದಿಸಿದ ಹಣವು ಕ್ಷಯಿಸಿ ಹೋಗುವುದು. ದುಡಿದು ಸಂಪಾದಿಸಿದ ಹಣ ಹೆಚ್ಚುತ್ತಾ ಹೋಗುವುದು.


ಅನ್ಯಾಯದ ಹಣವು ನಿಷ್ಪ್ರಯೋಜಕವಾಗಿದೆ. ನೀತಿಯ ಜೀವಿತವು ಮರಣದಿಂದ ರಕ್ಷಿಸಬಲ್ಲದು.


ಸುಲಭವಾಗಿ ಬಾಚಿಕೊಂಡ ಸ್ವಾಸ್ತ್ಯವು ಕೊನೆಯಲ್ಲಿ ಆರ್ಶೀವಾದದಾಯಕವಾಗಿರುವುದಿಲ್ಲ.


ಕೆಲವು ಸಲ ಪಕ್ಷಿಯು ತಾನು ಇಡದ ಮೊಟ್ಟೆಗೆ ಕಾವು ಕೊಡುತ್ತದೆ. ಹಣಕ್ಕಾಗಿ ಮೋಸಮಾಡುವ ಮನುಷ್ಯನು ಆ ಪಕ್ಷಿಯಂತಿರುವನು, ಅವನು ತನ್ನ ಮಧ್ಯಪ್ರಾಯದಲ್ಲಿ ತನ್ನ ಹಣವನ್ನೆಲ್ಲಾ ಕಳೆದುಕೊಳ್ಳುವನು. ಅವನು ತನ್ನ ಅಂತ್ಯಕಾಲದಲ್ಲಿ ಮೂರ್ಖನಾಗಿ ಕಂಡುಬರುವನು.”


ಆದರೆ ನನ್ನನ್ನು ಕಂಡುಕೊಳ್ಳಲಾರದವನು ತನಗೇ ಕೇಡುಮಾಡಿಕೊಳ್ಳುವನು. ನನ್ನನ್ನು ದ್ವೇಷಿಸುವ ಜನರೆಲ್ಲರೂ ಮರಣವನ್ನು ಪ್ರೀತಿಸುವರು.”


ಸುಳ್ಳುಹೇಳದಂತೆ ನನಗೆ ಸಹಾಯಮಾಡು. ನನ್ನನ್ನು ತುಂಬ ಐಶ್ವರ್ಯವಂತನನ್ನಾಗಿಯೂ ಮಾಡಬೇಡ; ತುಂಬ ಬಡವನನ್ನಾಗಿಯೂ ಮಾಡಬೇಡ; ಅನುದಿನಕ್ಕೆ ಬೇಕಾದವುಗಳನ್ನು ಮಾತ್ರ ಕೊಡು.


ಕೇಡನ್ನು ಬಿತ್ತುವವನು ಕೇಡನ್ನು ಕೊಯ್ಯುವನು. ಅವನ ದುಷ್ಟಶಕ್ತಿಯು ನಾಶವಾಗುವುದು.


ಆ ಸುಳ್ಳುಬೋಧಕರಿಗೆ ಬೇಕಾಗಿರುವುದು ಕೇವಲ ನಿಮ್ಮ ಹಣವಷ್ಟೆ. ಆದ್ದರಿಂದ ಅವರು ನಿಜವಲ್ಲದ ಸಂಗತಿಗಳನ್ನು ನಿಮಗೆ ಹೇಳಿ ನಿಮ್ಮನ್ನು ಬಳಸಿಕೊಳ್ಳುತ್ತಾರೆ. ಆದರೆ ಬಹಳ ಹಿಂದಿನಿಂದಲೇ ಆ ಸುಳ್ಳುಬೋಧಕರ ವಿರುದ್ಧವಾದ ತೀರ್ಪು ಸಿದ್ಧವಾಗಿದೆ. ಅವರನ್ನು ನಾಶಪಡಿಸುವಾತನಿಂದ (ದೇವರಿಂದ) ಅವರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.


ನಿನ್ನ ವಸ್ತುವನ್ನು ಖರೀದಿಮಾಡುವವನು, “ಇದು ಚೆನ್ನಾಗಿಲ್ಲ! ಬೆಲೆಯೂ ಜಾಸ್ತಿ!” ಎಂದು ಹೇಳುವನು. ಬಳಿಕ ತನ್ನ ಚೌಕಾಸಿಯ ಬಗ್ಗೆ ಬೇರೆಯವರ ಮುಂದೆ ಹೊಗಳಿಕೊಳ್ಳುವನು.


ಆ ಜನರ ಬೋಧನೆ ತಪ್ಪೆಂದು ನಿರೂಪಿಸಲು ಮತ್ತು ಉಪಯೋಗವಿಲ್ಲದ ಆ ಸಂಗತಿಗಳನ್ನು ಬೋಧಿಸದಂತೆ ಮಾಡಲು ಸಭಾಹಿರಿಯನು ಸಮರ್ಥನಾಗಿರಬೇಕು. ಅವರು ಉಪದೇಶ ಮಾಡಬಾರದ ಸಂಗತಿಗಳನ್ನು ಉಪದೇಶಿಸುತ್ತಾ ಇಡೀ ಕುಟುಂಬಗಳನ್ನೇ ಸಂಪೂರ್ಣವಾಗಿ ನಾಶಗೊಳಿಸುತ್ತಿದ್ದಾರೆ. ಅವರು ಜನರನ್ನು ವಂಚಿಸಿ, ಹಣವನ್ನು ಸಂಪಾದಿಸುವುದಕ್ಕೋಸ್ಕರ ಆ ಸಂಗತಿಗಳನ್ನು ಉಪದೇಶಿಸುತ್ತಿದ್ದಾರೆ.


ನಿಮ್ಮ ದಂಗೆಕೋರತನದ ಮಾರ್ಗಗಳನ್ನೆಲ್ಲ ತೊರೆದುಬಿಟ್ಟು ನಿಮ್ಮ ಹೃದಯವನ್ನೂ ಸ್ವಭಾವವನ್ನೂ ನೂತನ ಮಾಡಿಕೊಳ್ಳಿರಿ. ಇಸ್ರೇಲ್ ಜನರೇ, ನೀವು ಮರಣವನ್ನು ಬರಮಾಡಿಕೊಳ್ಳುವುದೇಕೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು