Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 22:7 - ಪರಿಶುದ್ದ ಬೈಬಲ್‌

7 ಬಡವನು ಐಶ್ವರ್ಯವಂತನಿಗೆ ಗುಲಾಮನಾಗಿದ್ದಾನೆ. ಸಾಲ ತೆಗೆದುಕೊಳ್ಳುವವನು ಸಾಲಕೊಡುವವನಿಗೆ ಸೇವಕನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಬಲ್ಲಿದನು ಬಡವನಿಗೆ ಒಡೆಯ, ಸಾಲಗಾರನು ಸಾಲಕೊಟ್ಟವನಿಗೆ ಸೇವಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಬಲ್ಲಿದನು ಬಡವನಿಗೆ ಒಡೆಯ; ಸಾಲಗಾರನು ಸಾಲಕೊಟ್ಟವನಿಗೆ ಸೇವಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಬಲ್ಲಿದನು ಬಡವನಿಗೆ ಒಡೆಯ; ಸಾಲಗಾರನು ಸಾಲಕೊಟ್ಟವನಿಗೆ ಸೇವಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಐಶ್ವರ್ಯವಂತನು ಬಡವನ ಮೇಲೆ ಆಳುತ್ತಾನೆ; ಸಾಲಗಾರನು ಸಾಲಕೊಟ್ಟವನಿಗೆ ಗುಲಾಮನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 22:7
16 ತಿಳಿವುಗಳ ಹೋಲಿಕೆ  

ಒಂದು ದಿನ ಪ್ರವಾದಿಮಂಡಲಿಯವರಲ್ಲೊಬ್ಬನ ಪತ್ನಿಯು ಗೋಳಾಡುತ್ತಾ ಎಲೀಷನಲ್ಲಿಗೆ ಹೋಗಿ, “ನನ್ನ ಗಂಡನು ನಿನಗೆ ಸೇವಕನಂತಿದ್ದನು. ಈಗ ನನ್ನ ಗಂಡ ಸತ್ತಿದ್ದಾನೆ! ಅವನು ಯೆಹೋವನಲ್ಲಿ ಭಯಭಕ್ತಿ ಉಳ್ಳವನಾಗಿದ್ದದು ನಿನಗೆ ತಿಳಿದಿದೆ. ಆದರೆ ಅವನು ಒಬ್ಬ ಮನುಷ್ಯನಿಗೆ ಹಣವನ್ನು ಕೊಡಬೇಕಾಗಿದೆ. ಈಗ ಆ ಮನುಷ್ಯನು ನನ್ನ ಎರಡು ಗಂಡುಮಕ್ಕಳನ್ನು ತೆಗೆದುಕೊಂಡು ತನ್ನ ಗುಲಾಮರನ್ನಾಗಿ ಮಾಡಿಕೊಳ್ಳಲು ಬರುತ್ತಿದ್ದಾನೆ!” ಎಂದು ಹೇಳಿದಳು.


ಐಶ್ವರ್ಯವಂತರಾಗಲು ಬಡವರನ್ನು ಹಿಂಸಿಸುವವರಿಗೂ ಐಶ್ವರ್ಯವಂತರಿಗೆ ಉಡುಗೊರೆಗಳನ್ನು ಕೊಡುವವರಿಗೂ ಕೊರತೆಯೇ ಗತಿ.


ಬಡವನು ವಿನಯದಿಂದ ಬೇಡಿಕೊಳ್ಳುವನು; ಐಶ್ವರ್ಯವಂತನು ಬಿರುಸಾಗಿ ಉತ್ತರಕೊಡುವನು.


ಆದರೆ ಬಡವನಿಗೆ ನೀವು ಗೌರವವನ್ನೇ ತೋರುವುದಿಲ್ಲ. ಶ್ರೀಮಂತ ಜನರು ಯಾವಾಗಲೂ ನಿಮ್ಮ ಬದುಕನ್ನು ತಮ್ಮ ಹಿಡಿತದಲ್ಲಿ ಇಟ್ಟುಕೊಂಡಿದ್ದಾರೆಂಬುದು ನಿಮಗೆ ತಿಳಿದಿದೆ. ನಿಮ್ಮನ್ನು ನ್ಯಾಯಾಲಯಕ್ಕೆ ಕೊಂಡೊಯ್ಯುವವರು ಅವರೇ.


ಆ ಸೇವಕನು ತನ್ನ ಯಜಮಾನನಾದ ರಾಜನಿಗೆ ಹಣವನ್ನು ಕೊಡಲು ಸಮರ್ಥನಾಗಿರಲಿಲ್ಲ. ಆದ್ದರಿಂದ ಆ ಸೇವಕನನ್ನು ಮತ್ತು ಅವನಲ್ಲಿದ್ದ ಪ್ರತಿಯೊಂದನ್ನೂ ಅವನ ಹೆಂಡತಿ ಮತ್ತು ಮಕ್ಕಳ ಸಮೇತವಾಗಿ ಮಾರಿ, ಬಂದ ಹಣವನ್ನೆಲ್ಲಾ ಕೊಡಬೇಕಾದ ಸಾಲಕ್ಕೆ ವಜಾ ಮಾಡಬೇಕೆಂದು ರಾಜನು ಆಜ್ಞಾಪಿಸಿದನು.


ಅಸಹಾಯಕರಾದ ಬಡವರಿಂದ ಕದ್ದುಕೊಳ್ಳಬೇಡ; ನ್ಯಾಯಾಲಯದಲ್ಲಿ ಅವರಿಗೆ ಅನ್ಯಾಯಮಾಡಬೇಡ.


ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನಿಗೇ ಅವಮಾನ ಮಾಡುತ್ತಾನೆ. ಬಡವರಿಗೆ ಕರುಣೆ ತೋರುವವನು ತನ್ನ ಸೃಷ್ಟಿಕರ್ತನನ್ನೇ ಸನ್ಮಾನಿಸುತ್ತಾನೆ.


ಶ್ರೀಮಂತ ಜನರೇ, ಕೇಳಿರಿ! ನಿಮಗೆ ಮಹಾಕಷ್ಟವು ಬರಲಿರುವುದರಿಂದ ಗೋಳಾಡಿರಿ, ದುಃಖಪಡಿರಿ.


ಬಡಜನರಿಗೆ ಸಾಲ ಸಂದಾಯ ಮಾಡಲು ಸಾಧ್ಯವಾಗದಿರುವದರಿಂದ ಅವರನ್ನು ನಾವು ಗುಲಾಮರನ್ನಾಗಿ ತೆಗೆದುಕೊಳ್ಳೋಣ. ಒಂದು ಜೊತೆ ಚಪ್ಪಲಿಯ ಕ್ರಯಕೊಟ್ಟು ಅವರನ್ನು ಖರೀದಿಸೋಣ. ಮತ್ತು ನೆಲದಲ್ಲಿ ಬಿದ್ದ ಗೋದಿಯನ್ನು ಒಟ್ಟುಗೂಡಿಸಿ ಮಾರೋಣ.”


ನನ್ನ ಮಾತುಗಳನ್ನು ಕೇಳಿರಿ! ಜನರೇ, ನೀವು ಬಡವರ ಮೇಲೆ ನಡೆದಾಡುತ್ತೀರಿ. ಈ ದೇಶದ ಬಡಜನರನ್ನು ನಾಶಮಾಡುತ್ತೀರಿ.


ಸಮಾರ್ಯದ ಪರ್ವತಗಳಲ್ಲಿರುವ ಬಾಷಾನಿನ ದನಗಳೇ, ನನ್ನ ಮಾತಿಗೆ ಕಿವಿಗೊಡಿರಿ. ನೀವು ಬಡ ಜನರನ್ನು ಹಿಂಸಿಸಿ ಜಜ್ಜುತ್ತೀರಿ. ನಿಮ್ಮ ಗಂಡಂದಿರ ಹತ್ತಿರ, “ನಮಗೆ ಕುಡಿಯಲಿಕ್ಕೆ ತಂದುಕೊಡು” ಎಂದು ಹೇಳುತ್ತೀರಿ.


ಆ ಸಮಯದಲ್ಲಿ ಸಾಧಾರಣ ಜನರಿಗೂ ಯಾಜಕವರ್ಗದವರಿಗೂ ವ್ಯತ್ಯಾಸವಿರದು. ಸೇವಕರಿಗೂ ಅವರ ಯಜಮಾನರಿಗೂ ವ್ಯತ್ಯಾಸವಿರದು. ದಾಸಿಯರಿಗೂ ಅವರ ಯಜಮಾನಿಯರಿಗೂ ವ್ಯತ್ಯಾಸವಿರದು. ಮಾರುವವರಿಗೂ ಕೊಳ್ಳುವವರಿಗೂ ವ್ಯತ್ಯಾಸವಿರದು. ಸಾಲಕೊಡುವವರಿಗೂ ಸಾಲ ತೆಗೆದುಕೊಳ್ಳುವವರಿಗೂ ವ್ಯತ್ಯಾಸವಿರದು. ಬಡ್ಡಿಹಾಕುವವನಿಗೂ ಬಡ್ಡಿಕೊಡುವವನಿಗೂ ವ್ಯತ್ಯಾಸವಿರದು.


ಜನರು ನಿಮ್ಮ ಹೊಲಗಳಲ್ಲಿ ಕೆಲಸ ಮಾಡಿದರೂ ನೀವು ಅವರಿಗೆ ಕೂಲಿಯನ್ನು ಕೊಡಲಿಲ್ಲ. ಅವರು ನಿಮ್ಮ ವಿರುದ್ಧವಾಗಿ ಗೋಳಾಡುತ್ತಿದ್ದಾರೆ. ಅವರು ನಿಮ್ಮ ಬೆಳೆಗಳ ಸುಗ್ಗಿಯನ್ನು ಮಾಡಿದರು. ಈಗ ಪರಲೋಕ ಸೇನೆಯ ಅಧಿಪತಿಯಾದ ಪ್ರಭುವು ಅವರ ಗೋಳಾಟವನ್ನು ಕೇಳಿಸಿಕೊಂಡಿದ್ದಾನೆ.


ಯೆಹೋವನು ಹೇಳುವುದೇನೆಂದರೆ, “ಅನೇಕ ಅಪರಾಧಗಳನ್ನು ಮಾಡಿದ ಇಸ್ರೇಲನ್ನು ನಾನು ಖಂಡಿತವಾಗಿಯೂ ದಂಡಿಸುವೆನು. ಯಾಕೆಂದರೆ ಅವರು ಸ್ವಲ್ಪ ಬೆಳ್ಳಿಗಾಗಿ ಒಳ್ಳೆಯವರನ್ನೂ ಮತ್ತು ನಿರಪರಾಧಿಗಳನ್ನೂ ಮಾರಿದರು; ಒಂದು ಜೊತೆ ಕೆರಗಳ ಕ್ರಯಕ್ಕೆ ಬಡ ಜನರನ್ನು ಮಾರಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು