Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 23:9 - ಪರಿಶುದ್ದ ಬೈಬಲ್‌

9 ಮೂಢನಿಗೆ ಉಪದೇಶಿಸಲು ಪ್ರಯತ್ನಿಸಬೇಡ. ಅವನು ನಿನ್ನ ಜ್ಞಾನದ ಮಾತುಗಳನ್ನು ಗೇಲಿಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮೂಢನ ಸಂಗಡ ಮಾತನಾಡಬೇಡ, ನಿನ್ನ ಮಾತುಗಳ ವಿವೇಕವನ್ನು ತಿರಸ್ಕರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮೂಢನ ಸಂಗಡ ಮಾತನಾಡಬೇಡ; ನಿನ್ನ ಬುದ್ಧಿಮಾತನ್ನು ಅವನು ಮಾನ್ಯಮಾಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮೂಢನ ಸಂಗಡ ಮಾತಾಡಬೇಡ; ನಿನ್ನ ಮಾತುಗಳ ವಿವೇಕವನ್ನು ತಿರಸ್ಕರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಬುದ್ಧಿಹೀನರ ಸಂಗಡ ಮಾತಾಡಬೇಡ; ಏಕೆಂದರೆ ನಿನ್ನ ಜ್ಞಾನದ ಮಾತುಗಳನ್ನು ಅವರು ತಿರಸ್ಕರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 23:9
17 ತಿಳಿವುಗಳ ಹೋಲಿಕೆ  

“ಪರಿಶುದ್ಧವಾದ ವಸ್ತುಗಳನ್ನು ನಾಯಿಗಳಿಗೆ ಹಾಕಬೇಡಿ. ಅವು ಹಿಂದಕ್ಕೆ ತಿರುಗಿ ನಿಮ್ಮನ್ನು ಕಚ್ಚುತ್ತವೆ. ಹಂದಿಗಳ ಮುಂದೆ ನಿಮ್ಮ ಮುತ್ತುಗಳನ್ನು ಎಸೆಯಬೇಡಿ. ಅವು ಮುತ್ತುಗಳನ್ನು ತುಳಿದುಹಾಕುತ್ತವೆ.


ಯೆಹೋವನಲ್ಲಿಟ್ಟಿರುವ ಭಯಭಕ್ತಿಯೇ ಜ್ಞಾನದ ಮೂಲ. ಮೂರ್ಖರಾದರೋ ಜ್ಞಾನವನ್ನೂ ಶಿಕ್ಷೆಯನ್ನೂ ದ್ವೇಷಿಸುವರು.


ಅವರಲ್ಲಿ ಅನೇಕರು, “ಅವನೊಳಗೆ ದೆವ್ವವು ಸೇರಿಕೊಂಡು ಅವನನ್ನು ಹುಚ್ಚನನ್ನಾಗಿ ಮಾಡಿದೆ. ಅವನಿಗೆ ಏಕೆ ಕಿವಿಗೊಡುತ್ತೀರಿ?” ಎಂದು ಹೇಳಿದರು.


ಇದನ್ನು ಕೇಳಿ ಜೆರುಸಲೇಮಿನ ಜನರು ಮೌನವಾದರು. ಅವರು ಸೇನಾದಂಡನಾಯಕನಿಗೆ ಯಾವ ಉತ್ತರವನ್ನೂ ಕೊಡಲಿಲ್ಲ. ಯಾಕೆಂದರೆ ಹಿಜ್ಕೀಯನು ಅವರ ಸಂಗಡ ಮಾತಾಡಬಾರದೆಂದು ಹೇಳಿದ್ದನು.


ಯೇಸು ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಿದ್ದಾನೆ ಎಂಬ ಸಂಗತಿಯನ್ನು ಕೇಳಿದ ಆ ಜನರಲ್ಲಿ ಕೆಲವರು ಅಪಹಾಸ್ಯಮಾಡಿದರು. ಇತರರು, “ಈ ವಿಷಯದ ಬಗ್ಗೆ ನೀನು ಇನ್ನೊಮ್ಮೆ ಹೇಳಬಹುದು, ಆಗ ಕೇಳುತ್ತೇವೆ” ಎಂದು ಹೇಳಿದರು.


ಎಪಿಕೊರಿಯಾ ಮತ್ತು ಸ್ತೋಯಿಕ ತತ್ವಶಾಸ್ತ್ರಜ್ಞರಲ್ಲಿ ಕೆಲವರು ಅವನೊಂದಿಗೆ ವಾದಿಸಿದರು. ಅವರಲ್ಲಿ ಕೆಲವರು, “ಈ ಮನುಷ್ಯನಿಗೆ ತಾನು ಯಾವುದರ ಬಗ್ಗೆ ಮಾತಾಡುತ್ತಿದ್ದೇನೆ ಎಂಬುದೇ ನಿಜವಾಗಿಯೂ ತಿಳಿದಿಲ್ಲ. ಅವನು ಏನು ಹೇಳಲು ಪ್ರಯತ್ನಿಸುತ್ತಿದ್ದಾನೆ?” ಎಂದರು. ಯೇಸುವು ಸತ್ತವರೊಳಗಿಂದ ಜೀವಂತನಾಗಿ ಎದ್ದುಬಂದಿದ್ದಾನೆ ಎಂಬ ಸುವಾರ್ತೆಯನ್ನು ಪೌಲನು ಅವರಿಗೆ ಹೇಳುತ್ತಿದ್ದನು. ಆದ್ದರಿಂದ ಅವರು, “ಕೆಲವು ಬೇರೆ ದೇವರುಗಳ ಬಗ್ಗೆ ಅವನು ನಮಗೆ ಹೇಳುತ್ತಿರುವಂತೆ ತೋರುತ್ತಿದೆ” ಎಂದರು.


ಯೆಹೂದ್ಯರು ಆತನಿಗೆ, “ನಿನ್ನೊಳಗೆ ದೆವ್ವವಿದೆ ಎಂದು ಈಗ ನಮಗೆ ತಿಳಿಯಿತು! ಅಬ್ರಹಾಮನು ಮತ್ತು ಪ್ರವಾದಿಗಳು ಸಹ ಸತ್ತುಹೋದರು. ಆದರೆ ‘ನನ್ನ ಉಪದೇಶಕ್ಕೆ ವಿಧೇಯನಾಗುವವನು ಎಂದಿಗೂ ಸಾಯುವುದಿಲ್ಲ’ ಎಂದು ನೀನು ಹೇಳುತ್ತಿರುವೆ.


ಫರಿಸಾಯರು ಈ ಎಲ್ಲಾ ಸಂಗತಿಗಳನ್ನು ಕೇಳುತ್ತಿದ್ದರು. ಫರಿಸಾಯರೆಲ್ಲರು ಹಣದಾಸೆ ಉಳ್ಳವರಾಗಿದ್ದರಿಂದ ಅವರು ಯೇಸುವನ್ನು ಟೀಕಿಸಿದರು.


ಅಲ್ಲಿದ್ದ ಫರಿಸಾಯರು ಇದನ್ನು ಕೇಳಿ, “ಏನು? ನಮ್ಮನ್ನು ಸಹ ಕುರುಡರೆಂದು ಹೇಳುತ್ತಿರುವೆಯಾ?” ಎಂದು ಪ್ರಶ್ನಿಸಿದರು.


ಅಜ್ಞಾನಿಯೊಡನೆ ಸ್ನೇಹ ಬೆಳಸಬೇಡಿ; ನಿಮಗೆ ಉಪದೇಶಿಸಲು ಅವನಲ್ಲೇನೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು