Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 24:15 - ಪರಿಶುದ್ದ ಬೈಬಲ್‌

15 ಒಳ್ಳೆಯವನಿಂದ ಕದ್ದುಕೊಳ್ಳುವ ಅಥವಾ ಅವನ ಮನೆಯನ್ನೇ ತೆಗೆದುಕೊಳ್ಳುವ ಕಳ್ಳನಂತೆ ಇರಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ದುಷ್ಟನೇ, ಶಿಷ್ಟನ ಮನೆಗೆ ಹೊಂಚುಹಾಕಬೇಡ, ಅವನ ನಿವಾಸವನ್ನು ಸೂರೆಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ದುಷ್ಟನೇ, ನೀತಿವಂತನ ಮನೆಗೆ ಕನ್ನಹಾಕಬೇಡ; ಅವನು ಕೂಡಿಸಿದ್ದನ್ನು ಕೊಳ್ಳೆಹೊಡೆಯಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ದುಷ್ಟನೇ, ಶಿಷ್ಟನ ಮನೆಗೆ ಹೊಂಚುಹಾಕಬೇಡ; ಅವನ ನಿವಾಸವನ್ನು ಸೂರೆಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ದುಷ್ಟನೇ, ನೀತಿವಂತನ ನಿವಾಸಕ್ಕೆ ಹೊಂಚು ಹಾಕಬೇಡ; ಅವನ ವಿಶ್ರಾಂತಿಯ ಸ್ಥಳವನ್ನು ಸೂರೆಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 24:15
16 ತಿಳಿವುಗಳ ಹೋಲಿಕೆ  

ಯೆಹೂದ್ಯರು ಸೌಲನಿಗಾಗಿ ಎದುರುನೋಡುತ್ತಾ ನಗರದ ದ್ವಾರಗಳನ್ನು ಹಗಲಿರುಳು ಕಾಯುತ್ತಿದ್ದರು. ಆದರೆ ಅವರ ಯೋಜನೆ ಸೌಲನಿಗೆ ತಿಳಿಯಿತು.


ಜನರು ನನ್ನ ವಿರುದ್ಧ ಕೆಲಸ ಮಾಡುತ್ತಿದ್ದಾರೆಂಬುದನ್ನು ಯೆಹೋವನು ನನಗೆ ತೋರಿಸುವ ಮುಂಚೆ ನಾನು ವಧೆಗಾಗಿ ತೆಗೆದುಕೊಂಡು ಹೋದ ಸಾಧುಕುರಿಯಂತೆ ಇದ್ದೆನು. ಅವರು ನನ್ನ ವಿರೋಧಿಗಳೆಂದು ನಾನು ತಿಳಿದುಕೊಂಡಿರಲಿಲ್ಲ. ಅವರು ನನ್ನ ಬಗ್ಗೆ ಹೀಗೆ ಹೇಳುತ್ತಿದ್ದರು: “ಮರವನ್ನು ಮತ್ತು ಅದರ ಫಲಗಳನ್ನು ನಾಶಮಾಡೋಣ; ಅವನನ್ನು ಕೊಂದುಬಿಡೋಣ; ಜನರು ಅವನನ್ನು ಮರೆತುಬಿಡುವರು.”


ನನ್ನ ಜನರು ಮನೋಹರವಾಗಿರುವ ಶಾಂತಿಮಯವಾದ ಭೂಮಿಯಲ್ಲಿಯೂ ಸುರಕ್ಷಿತವಾದ ಗುಡಾರಗಳಲ್ಲಿಯೂ ಪ್ರಶಾಂತವಾದ ಮತ್ತು ನಿಶಬ್ದವಾದ ಸ್ಥಳಗಳಲ್ಲಿಯೂ ವಾಸಿಸುವರು.


ಆ ಗರ್ವಿಷ್ಠರು ನನಗೆ ಉರುಲನ್ನು ಒಡ್ಡಿದ್ದಾರೆ; ನನ್ನನ್ನು ಹಿಡಿಯಲು ಬಲೆಯನ್ನು ಹಾಸಿದ್ದಾರೆ; ನನ್ನ ದಾರಿಯಲ್ಲಿ ಬೋನನ್ನು ಇಟ್ಟಿದ್ದಾರೆ.


ಅಲ್ಲದೆ ಪೌಲನನ್ನು ಜೆರುಸಲೇಮಿಗೆ ಮರಳಿ ಕಳುಹಿಸಿಕೊಡಬೇಕೆಂದು ಅವರು ಫೆಸ್ತನನ್ನು ಕೇಳಿಕೊಂಡರು. ಅವರು ಪೌಲನನ್ನು ಮಾರ್ಗದಲ್ಲೇ ಕೊಲ್ಲಬೇಕೆಂಬ ಯೋಜನೆ ಮಾಡಿಕೊಂಡಿದ್ದರು.


ಆದರೆ ಈ ಯೋಜನೆಯ ಬಗ್ಗೆ ಪೌಲನ ಸೋದರಳಿಯನಿಗೆ ತಿಳಿಯಿತು. ಅವನು ಸೈನ್ಯದ ಕೋಟೆಯೊಳಗೆ ಹೋಗಿ ಈ ಯೋಜನೆಯ ಬಗ್ಗೆ ಪೌಲನಿಗೆ ತಿಳಿಸಿದನು.


ಆ ಸಭೆಯಲ್ಲಿ ಅವರು ಯೇಸುವನ್ನು ಉಪಾಯದಿಂದ ಬಂಧಿಸಿ ಕೊಲ್ಲಲು ಸಮಾಲೋಚಿಸಿದರು.


ಬಹುಕಾಲದ ಹಿಂದೆ ನಿನ್ನ ಪೂರ್ವಿಕರು ಜಮೀನಿಗೆ ಹಾಕಿದ ಮೇರೆಗಲ್ಲನ್ನು ಎಂದಿಗೂ ಜರುಗಿಸಬೇಡ.


ನಿನಗೆ, “ನಮ್ಮ ಜೊತೆ ಬಾ! ನಾವು ಅಲ್ಲಿ ಅವಿತುಕೊಂಡಿದ್ದು ಯಾರನ್ನಾದರೂ ಕೊಲೆಮಾಡೋಣ; ಕೆಲವು ನಿರಪರಾಧಿಗಳ ಮೇಲೆ ನಿಷ್ಕಾರಣವಾಗಿ ಆಕ್ರಮಣ ಮಾಡಿ


ಇಗೋ, ನನ್ನನ್ನು ಕೊಲ್ಲಲು ಬಲಿಷ್ಠರು ಹೊಂಚುಹಾಕಿದ್ದ್ದಾರೆ. ಆದರೆ ನಾನು ಪಾಪವನ್ನಾಗಲಿ ಅಪರಾಧವನ್ನಾಗಲಿ ಮಾಡಿಲ್ಲ.


ಅವರು ಒಟ್ಟುಗೂಡಿ ನನ್ನನ್ನು ಕೊಲ್ಲಲು ನನ್ನ ಹೆಜ್ಜೆಯನ್ನೇ ಹಿಂಬಾಲಿಸಿಕೊಂಡು ಬರುತ್ತಾರೆ.


ಕೆಡುಕರಾದರೋ ನೀತಿವಂತರಿಗೆ ಕೇಡುಮಾಡಲು ಹೊಂಚುಹಾಕುವರು.


ಸೌಲನು ಮತ್ತು ಆ ಸೇವಕನು ಬೆಟ್ಟದ ಮೇಲೆ ನಡೆಯುತ್ತಾ ಆ ಪಟ್ಟಣಕ್ಕೆ ಹೋದರು. ಆ ದಾರಿಯಲ್ಲಿ ಅವರು ಕೆಲವು ಸ್ತ್ರೀಯರನ್ನು ಸಂಧಿಸಿದರು. ಆ ಸ್ತ್ರೀಯರು ನೀರನ್ನು ತರಲು ಹೋಗುತ್ತಿದ್ದರು. ಸೌಲನು ಮತ್ತು ಆ ಸೇವಕನು, “ದರ್ಶಿಯು ಇಲ್ಲಿರುವನೇ?” ಎಂದು ಆ ಯುವತಿಯರನ್ನು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು