Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 24:2 - ಪರಿಶುದ್ದ ಬೈಬಲ್‌

2 ಅವರು ಕೇಡು ಮಾಡಲು ತಮ್ಮ ಹೃದಯಗಳಲ್ಲಿ ಆಲೋಚಿಸಿಕೊಳ್ಳುವರು; ಅವರು ಕೇಡನ್ನೇ ಕುರಿತು ಮಾತಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವರ ಮನಸ್ಸು ಹಿಂಸೆಯನ್ನು ಯೋಚಿಸುತ್ತಿರುವುದು, ಅವರ ತುಟಿಯು ಹಾನಿಯನ್ನು ಪ್ರಸ್ತಾಪಿಸುತ್ತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವರ ಮನಸ್ಸು ಯೋಚಿಸುವುದು ಹಿಂಸೆಯನ್ನು, ಅವರ ತುಟಿ ಪ್ರಸ್ತಾಪಿಸುವುದು ಹಾನಿಯನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವರ ಮನಸ್ಸು ಹಿಂಸೆಯನ್ನು ಯೋಚಿಸುತ್ತಿರುವದು, ಅವರ ತುಟಿಯು ಹಾನಿಯನ್ನು ಪ್ರಸ್ತಾಪಿಸುತ್ತಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಏಕೆಂದರೆ ಅವರ ಹೃದಯವು ಹಿಂಸೆಯನ್ನು ಯೋಜಿಸುತ್ತದೆ; ಅವರ ತುಟಿಗಳು ಹಾನಿಯನ್ನು ಪ್ರಸ್ತಾಪಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 24:2
21 ತಿಳಿವುಗಳ ಹೋಲಿಕೆ  

ಅವರು ಯಾವಾಗಲೂ ಶಪಿಸುತ್ತಾರೆ; ಕೆಟ್ಟ ಮಾತುಗಳನ್ನು ಆಡುತ್ತಾರೆ, ಕುಯುಕ್ತಿಗಳನ್ನು ಮಾಡುತ್ತಾರೆ.


ಕೆಲವರು ದುಷ್ಕೃತ್ಯಗಳನ್ನು ಮಾಡುವುದಕ್ಕಾಗಿಯೇ ಆಲೋಚಿಸುತ್ತಿರುವರು. ಅವರು ಸಂಚುಗಳನ್ನು ಮಾಡುತ್ತಾ ಸುಳ್ಳಾಡುವರು.


ನನ್ನನ್ನು ಆ ಕೆಟ್ಟವರೊಂದಿಗೆ ಲೆಕ್ಕಿಸಬೇಡ. ಅವರು ತಮ್ಮ ನೆರೆಯವರಿಗೆ “ಸಮಾಧಾನವಾಗಲಿ” ಎಂದು ಹರಸಿದರೂ ಅವರ ವಿರೋಧವಾಗಿ ಸಂಚುಗಳನ್ನು ಮಾಡುತ್ತಾರೆ.


ನೆರೆಯವನ ಬಗ್ಗೆ ಯಾರೂ ಸತ್ಯವನ್ನಾಡುವದಿಲ್ಲ. ಜನರು ನ್ಯಾಯಾಲಯಗಳಲ್ಲಿ ಪರಸ್ಪರ ವ್ಯಾಜ್ಯ ಮಾಡುವರು. ತಾವು ಗೆಲ್ಲಬೇಕೆಂಬ ಉದ್ದೇಶದಿಂದ ಸುಳ್ಳುಸಾಕ್ಷಿಯ ಮೇಲೆ ಅವಲಂಬಿಸುವರು. ಅವರು ಒಬ್ಬರ ಮೇಲೊಬ್ಬರು ಸುಳ್ಳು ಹೇಳುತ್ತಾರೆ; ಅವರು ಕೇಡಿನಿಂದ ತುಂಬಿದವರಾಗಿದ್ದು ಕೇಡನ್ನೇ ಹೆರುತ್ತಾರೆ.


ಅವರು ಗರ್ಭಧರಿಸಿ ಕೆಡುಕನ್ನೇ ಹೆರುವರು. ಅವರ ಗರ್ಭದಲ್ಲಿರುವ ಮಗುವು ಮೋಸಕರವಾದದ್ದು.”


ಅವನಿಗೆ, “ನೀನು ಸೈತಾನನ ಮಗ! ಪ್ರತಿಯೊಂದು ಒಳ್ಳೆಯದಕ್ಕೂ ನೀನು ಶತ್ರು! ನೀನು ದುಷ್ಟತಂತ್ರಗಳಿಂದಲೂ ಸುಳ್ಳುಗಳಿಂದಲೂ ತುಂಬಿದವನಾಗಿರುವೆ. ಪ್ರಭುವಿನ ಸತ್ಯಗಳನ್ನು ಸುಳ್ಳುಗಳನ್ನಾಗಿ ಪರಿವರ್ತಿಸಲು ನೀನು ಯಾವಾಗಲೂ ಪ್ರಯತ್ನಿಸುತ್ತಿರುವೆ!


ಸೌಲನು ತನ್ನ ವಿರುದ್ಧವಾಗಿ ಉಪಾಯಗಳನ್ನು ಮಾಡುತ್ತಿದ್ದಾನೆಂಬುದು ದಾವೀದನಿಗೆ ತಿಳಿಯಿತು. ಆಗ ದಾವೀದನು ಯಾಜಕನಾದ ಎಬ್ಯಾತಾರನಿಗೆ, “ಎಫೋದನ್ನು ತೆಗೆದುಕೊಂಡು ಬಾ” ಎಂದನು.


ಕೆಟ್ಟದ್ದನ್ನು ಎರಡೂ ಕೈಗಳಿಂದ ಮಾಡಲು ಜನರು ನಿಪುಣರಾಗಿದ್ದಾರೆ. ಅಧಿಕಾರಿಗಳು ಲಂಚ ಕೇಳುತ್ತಾರೆ. ನ್ಯಾಯಾಧೀಶರು ತಮ್ಮ ತೀರ್ಪು ಬದಲಾಯಿಸಲು ಹಣ ಕೇಳುತ್ತಾರೆ. “ಪ್ರಮುಖ ನಾಯಕರು” ನ್ಯಾಯವಾದ ಮತ್ತು ಜನರಿಗೆ ಹಿತವಾದ ತೀರ್ಮಾನವನ್ನು ಮಾಡುವದಿಲ್ಲ. ತಮ್ಮ ಇಷ್ಟಪ್ರಕಾರ ಅವರು ಮಾಡುತ್ತಿದ್ದಾರೆ.


ಅವನು ಕೆಡುಕ. ಎಲ್ಲಾ ಸಮಯಗಳಲ್ಲಿ ಅವನು ಕೆಡುಕನ್ನೇ ಆಲೋಚಿಸುತ್ತಾನೆ; ಎಲ್ಲೆಲ್ಲೂ ತೊಂದರೆ ಮಾಡುತ್ತಾನೆ.


ಅವರು ಕೇಡುಮಾಡಬೇಕೆಂದಿದ್ದಾರೆ. ಅವರು ಯಾವಾಗಲೂ ಜಗಳವೆಬ್ಬಿಸುತ್ತಾರೆ.


ರಾತ್ರಿಯಲ್ಲಿ, ಅವನು ಕೇಡನ್ನೇ ಆಲೋಚಿಸುವನು. ಮರುದಿನ ಮುಂಜಾನೆ ಎದ್ದಾಗ, ಒಳ್ಳೆಯದನ್ನು ಮಾಡದೆ ಕೇಡನ್ನು ಮಾಡಲು ಸಿದ್ಧನಾಗಿರುವನು.


ಕೇಡುಮಾಡುವವನನ್ನು ಜನರು “ಕೆಡುಕ” ಎಂದು ಕರೆಯುವರು.


ನನ್ನ ವೈರಿಗಳು ಬಲೆಗಳನ್ನು ಒಡ್ಡಿದ್ದಾರೆ; ನನ್ನ ನಾಶನದ ಕುರಿತು ಅವರು ಮಾತಾಡುತ್ತಿದ್ದಾರೆ; ದಿನವೆಲ್ಲಾ ಕುತಂತ್ರವನ್ನು ಮಾಡುತ್ತಿದ್ದಾರೆ.


ದುರಾಲೋಚನೆ ಮಾಡುವ ಹೃದಯ, ಕೇಡುಮಾಡಲು ಓಡುವ ಕಾಲು.


ಇಸ್ರೇಲಿನ ಪರಿಶುದ್ಧನು ಹೇಳುವುದೇನೆಂದರೆ, “ಯೆಹೋವನಿಂದ ಬರುವ ಸಂದೇಶವನ್ನು ಅಂಗೀಕರಿಸಲು ನೀವು ನಿರಾಕರಿಸುತ್ತೀರಿ. ನೀವು ನಿಮ್ಮ ಯುದ್ಧಗಳಿಂದಲೂ ಸುಳ್ಳಾಡುವದರಿಂದಲೂ ನಿಮಗೆ ಸಹಾಯ ಸಿಗುವದೆಂದು ಭರವಸೆಯಿಂದಿದ್ದೀರಿ.


“ಯೆಹೋಯಾಕೀಮನೇ, ನಿನಗೆ ಲಾಭದಾಯಕವಾದದ್ದು ಮಾತ್ರ ನಿನ್ನ ಕಣ್ಣಿಗೆ ಕಾಣುತ್ತದೆ. ನೀನು ಯಾವಾಗಲೂ ನಿನಗೆ ಹೆಚ್ಚು ಲಾಭ ಬರುವದನ್ನು ನೋಡುವೆ. ನೀನು ನಿರಪರಾಧಿಗಳನ್ನು ಕೊಲ್ಲಲು ಸಿದ್ಧನಾಗಿರುವೆ. ನೀನು ಬೇರೆಯವರ ವಸ್ತುಗಳನ್ನು ಅಪಹರಿಸಲು ಸಿದ್ಧನಾಗಿರುವೆ.”


ನನ್ನ ಮಗನೇ, ಪಾಪ ಮಾಡಬಯಸುವವರು ನಿನಗೆ ದುಷ್ಪ್ರೇರಣೆ ಮಾಡಿದರೆ ಅವರನ್ನು ಹಿಂಬಾಲಿಸಕೂಡದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು