Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 24:25 - ಪರಿಶುದ್ದ ಬೈಬಲ್‌

25 ಆದರೆ ನ್ಯಾಯಾಧೀಶನು ಅಪರಾಧಿಯನ್ನು ದಂಡಿಸಿದರೆ, ಜನರೆಲ್ಲರೂ ಅವನನ್ನು ಮೆಚ್ಚಿಕೊಳ್ಳುವರು; ಅವನಿಗೆ ಮಹಾ ಆಶೀರ್ವಾದ ದೊರೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ದುಷ್ಟನನ್ನು ಗದರಿಸುವವರಿಗಾದರೋ ಶುಭವಾಗುವುದು, ಸುಖಕರವಾದ ಆಶೀರ್ವಾದವೂ ಲಭಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ತಪ್ಪುಮಾಡಿದವರನ್ನು ದಂಡಿಸುವವರಿಗೆ ಶುಭವಾಗುವುದು, ಸುಖಕರವಾದ ಆಶೀರ್ವಾದವು ಅವರಿಗೆ ಲಭಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ದುಷ್ಟನನ್ನು ಗದರಿಸುವವರಿಗಾದರೋ ಶುಭವಾಗುವದು, ಸುಖಕರವಾದ ಆಶೀರ್ವಾದವೂ ಲಭಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದರೆ ತಪ್ಪುಮಾಡಿದವರನ್ನು ತಿದ್ದುವವರಿಗೆ ಶುಭವಾಗುವುದು; ಅವರ ಮೇಲೆ ಒಳ್ಳೆಯ ಆಶೀರ್ವಾದವು ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 24:25
16 ತಿಳಿವುಗಳ ಹೋಲಿಕೆ  

ಪಾಪ ಮಾಡುವ ಜನರನ್ನು ಸಭೆಯಲ್ಲಿ ಎಲ್ಲರ ಎದುರಿನಲ್ಲಿಯೇ ಗದರಿಸು. ಆಗ ಇತರರಿಗೂ ಎಚ್ಚರಿಕೆ ನೀಡಿದಂತಾಗುವುದು.


ಗದರಿಸುವವನು ಸ್ವಲ್ಪಕಾಲದ ನಂತರ ಮುಖಸ್ತುತಿ ಮಾಡುವವನಿಗಿಂತಲೂ ಹೆಚ್ಚಾಗಿ ಗೌರವಿಸಲ್ಪಡುವನು.


ಈ ಸಂಗತಿಗಳನ್ನು ಜನರಿಗೆ ತಿಳಿಸಲು ನಿನಗೆ ಸಂಪೂರ್ಣ ಅಧಿಕಾರವಿದೆ. ಜನರನ್ನು ಬಲಗೊಳಿಸಲು ಈ ಅಧಿಕಾರವನ್ನು ಬಳಸಿಕೊಂಡು, ಅವರು ಮಾಡಬೇಕಾದುದನ್ನು ತಿಳಿಸು. ನೀನು ಮುಖ್ಯನಾದವನಲ್ಲವೆಂದು ಯಾರೂ ನಿನ್ನನ್ನು ಪರಿಗಣಿಸದಂತೆ ನೋಡಿಕೊ.


ಪ್ರವಾದಿಯು ಹೇಳಿದ ಮಾತುಗಳು ಸತ್ಯವಾಗಿವೆ. ಆದ್ದರಿಂದ ಅವರು ಮಾಡುತ್ತಿರುವ ತಪ್ಪುಗಳನ್ನು ಅವರಿಗೆ ತಿಳಿಸು. ನೀನು ಅವರ ವಿಷಯದಲ್ಲಿ ಕಟ್ಟುನಿಟ್ಟಾಗಿರಬೇಕು. ಆಗ ಅವರು ತಮ್ಮ ನಂಬಿಕೆಯಲ್ಲಿ ದೃಢವಾಗಿದ್ದು,


ಯೋಹಾನನು ಹೆರೋದನಿಗೆ, “ಹೆರೋದ್ಯಳನ್ನು ನೀನು ಇಟ್ಟುಕೊಂಡಿರುವುದು ಸರಿಯಲ್ಲ” ಎಂದು ಹೇಳುತ್ತಿದ್ದುದೇ ಈ ಸೆರೆವಾಸಕ್ಕೆ ಕಾರಣ.


ಪ್ರಧಾನ ಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲಿ ಒಬ್ಬನು ಹೊರೋನಿನ ಸನ್ಬಲ್ಲಟನಿಗೆ ಅಳಿಯನಾದನು. ನಾನು ಅವನನ್ನು ಆ ಸ್ಥಳದಿಂದ ಹೊರಗೆ ಓಡಿಸಿಬಿಟ್ಟೆನು.


“ನೀವು ತಪ್ಪು ಕೆಲಸಮಾಡಿದಿರಿ” ಎಂದು ಅವರನ್ನು ಶಪಿಸಿದೆನು. ಕೆಲವರಿಗೆ ಹೊಡೆದೆನು; ಕೆಲವರ ಕೂದಲು ಎಳೆದು ಕಿತ್ತುಬಿಟ್ಟೆನು. ದೇವರ ಹೆಸರಿನಲ್ಲಿ ಪ್ರತಿಜ್ಞೆ ಮಾಡಲು ಅವರನ್ನು ಒತ್ತಾಯಪಡಿಸಿ, “ನೀವು ಆ ಜನರ ಹೆಣ್ಣುಮಕ್ಕಳನ್ನು ಮದುವೆಯಾಗಬಾರದು. ಅನ್ಯರ ಹೆಣ್ಣುಮಕ್ಕಳು ನಿಮ್ಮ ಗಂಡುಮಕ್ಕಳನ್ನು ಮದುವೆಯಾಗದಂತೆ ನೋಡಿಕೊಳ್ಳಿರಿ.


ನಾನು ಯೆಹೂದ ಪ್ರಾಂತದ ಗೌರವಸ್ಥ ಜನರಿಗೆ, “ಇದು ತಪ್ಪು, ನೀವು ತಪ್ಪು ಕೆಲಸ ಮಾಡುತ್ತಿದ್ದೀರಿ. ನೀವು ಸಬ್ಬತ್ ದಿನವನ್ನು ಅಶುದ್ಧವನ್ನಾಗಿ ಮಾಡುತ್ತಿದ್ದೀರಿ. ಅದನ್ನು ಸಾಮಾನ್ಯ ದಿನದಂತೆ ಮಾಡುತ್ತಿದ್ದೀರಿ.


ಏಲಿಯ ಕುಟುಂಬವನ್ನು ನಿತ್ಯದಂಡನೆಗೆ ಗುರಿಪಡಿಸುತ್ತೇನೆಂದು ನಾನು ಏಲಿಗೆ ಹೇಳಿರುವೆನು. ಏಲಿಯ ಮಕ್ಕಳು ನನಗೆ ವಿರೋಧವಾಗಿ ಮಾತಾಡಿದ್ದರಿಂದ ಮತ್ತು ಕೆಟ್ಟಕಾರ್ಯಗಳನ್ನು ಮಾಡಿದ್ದರಿಂದ ನಾನು ಇದನ್ನು ಮಾಡುತ್ತೇನೆ. ಅಲ್ಲದೆ ಅವರನ್ನು ಹತೋಟಿಯಲ್ಲಿಡಲು ಏಲಿಗೆ ಸಾಧ್ಯವಾಗಲಿಲ್ಲ.


“ನೀವು ನಿಮ್ಮ ಸಹೋದರನನ್ನು ಮನಸ್ಸಿನಲ್ಲಿ ದ್ವೇಷಿಸಬಾರದು. ನಿಮ್ಮ ಸಹೋದರನು ಏನಾದರೂ ತಪ್ಪುಮಾಡಿದರೆ, ಅವನೊಡನೆ ಅದರ ಕುರಿತು ಮಾತಾಡು. ಅವನ ಅಪರಾಧದಲ್ಲಿ ನೀವು ಪಾಲುಹೊಂದದಂತೆ ನೇರವಾಗಿ ಗದರಿಸಿ. ಆಗ ನೀವು ಅವನನ್ನು ಕ್ಷಮಿಸಬಹುದು.


ಸುವಾರ್ತೆಯನ್ನು ಜನರಿಗೆ ತಿಳಿಸು. ಕಾಲವು ಅನುಕೂಲವಾಗಿದ್ದರೂ ಅನಾನುಕೂಲವಾಗಿದ್ದರೂ ಬೋಧನೆಯನ್ನು ಮುಂದುವರಿಸು. ಜನರು ಮಾಡಬೇಕಾದುದನ್ನು ಅವರಿಗೆ ತಿಳಿಸು. ಅವರು ತಪ್ಪು ಮಾಡಿದಾಗ ಅದನ್ನು ಅವರಿಗೆ ತೋರಿಸಿಕೊಡು. ಅವರನ್ನು ಗದರಿಸು, ಇವುಗಳನ್ನು ಬಹಳ ತಾಳ್ಮೆಯಿಂದಲೂ ಎಚ್ಚರಿಕೆಯಿಂದಲೂ ಮಾಡು.


ಯಥಾರ್ಥವಾದ ಉತ್ತರ ಜನರೆಲ್ಲರನ್ನು ಸಂತೋಷಗೊಳಿಸುವುದು; ಅದು ತುಟಿಯ ಮೇಲಿನ ಮುದ್ದಿನಂತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು