Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 24:31 - ಪರಿಶುದ್ದ ಬೈಬಲ್‌

31 ಆ ಹೊಲಗಳಲ್ಲಿ ಮುಳ್ಳುಗಿಡಗಳೂ ಉಪಯೋಗವಿಲ್ಲದ ಸಸಿಗಳೂ ಬೆಳೆಯುತ್ತಿದ್ದವು. ಹೊಲಗಳ ಸುತ್ತಲೂ ಇದ್ದ ಗೋಡೆ ಒಡೆದುಹೋಗಿತ್ತು; ಕುಸಿದು ಬೀಳುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆಹಾ, ಮುಳ್ಳುಗಿಡಗಳು ಅದರಲ್ಲಿ ಹರಡಿಕೊಂಡಿದ್ದವು, ಕಳೆಗಳು ಅದನ್ನು ಮುಚ್ಚಿದ್ದವು, ಅದರ ಕಲ್ಲಿನ ಗೋಡೆಯು ಹಾಳಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅವುಗಳಲ್ಲಿ ಮುಳ್ಳುಗಿಡಗಳು ಹರಡಿಕೊಂಡಿದ್ದವು, ಕಳೆಗಳು ಮುಚ್ಚಿಕೊಂಡಿದ್ದವು, ಕಲ್ಲಿನಗೋಡೆ ಹಾಳಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆಹಾ, ಮುಳ್ಳುಗಿಡಗಳು ಅದರಲ್ಲಿ ಹರಡಿಕೊಂಡಿದ್ದವು; ಕಳೆಗಳು ಅದನ್ನು ಮುಚ್ಚಿದ್ದವು, ಅದರ ಕಲ್ಲಿನ ಗೋಡೆಯು ಹಾಳಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆಗ ಇಗೋ, ಹೊಲವೆಲ್ಲವೂ ಮುಳ್ಳು ಗಿಡಗಳಿಂದ ಬೆಳೆದು ಕಳೆಗಳು ಅವುಗಳನ್ನು ಮುಚ್ಚಿ ಅದರ ಕಲ್ಲಿನ ಗೋಡೆಯು ಬಿದ್ದುಹೋಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 24:31
16 ತಿಳಿವುಗಳ ಹೋಲಿಕೆ  

ಒಬ್ಬನು ಕೆಲಸಮಾಡಲಾರದಷ್ಟು ತುಂಬ ಸೋಮಾರಿಯಾಗಿದ್ದರೆ, ಅವನ ಮನೆಯು ಸೋರಲಾರಂಭಿಸುವುದು; ಅದರ ಮೇಲ್ಛಾವಣಿಗೆಯು ಬೀಳತೊಡಗುವುದು.


ಯೆಹೂದ ಜನಾಂಗದ ಜನರಿಗೂ ಜೆರುಸಲೇಮ್ ನಗರದ ಜನರಿಗೂ ಯೆಹೋವನು ಹೀಗೆ ಹೇಳುತ್ತಾನೆ: “ನಿಮ್ಮ ಹೊಲಗಳಲ್ಲಿ ನೇಗಿಲು ಹೊಡೆದಿಲ್ಲ, ಆ ಹೊಲಗಳನ್ನು ನೇಗಿಲು ಹೊಡೆದು ಸ್ವಚ್ಛಮಾಡಿರಿ. ಮುಳ್ಳುಗಳಲ್ಲಿ ಬೀಜಗಳನ್ನು ಬಿತ್ತಬೇಡಿರಿ.


“ನಾನೀಗ ನನ್ನ ದ್ರಾಕ್ಷಿತೋಟಕ್ಕೆ ಏನು ಮಾಡುವೆನೆಂದು ತಿಳಿಸುವೆನು: ಅದರ ಸುತ್ತಲೂ ರಕ್ಷಣೆಗಾಗಿ ಹಾಕಿದ್ದ ಮುಳ್ಳಿನ ಬೇಲಿಯನ್ನು ಕಿತ್ತು ಸುಟ್ಟುಬಿಡುವೆನು. ಅದರ ಕಲ್ಲಿನ ಗೋಡೆಯನ್ನು ಕೆಡವಿ ತುಳಿದಾಟಕ್ಕೆ ಈಡುಮಾಡುವೆನು.


ಆದರೆ ಅದು ಮುಳ್ಳುಗಿಡಗಳನ್ನೂ ಕಳೆಯನ್ನೂ ಬೆಳೆಸಿದರೆ ನಿಷ್ಪ್ರಯೋಜಕವಾಗಿ ದೇವರ ಶಾಪಕ್ಕೆ ಗುರಿಯಾಗುತ್ತದೆ. ಆ ಭೂಮಿಯನ್ನು ಬೆಂಕಿಯಿಂದ ಸುಟ್ಟು ನಾಶಮಾಡಲಾಗುವುದು.


“ಮುಳ್ಳುಗಿಡಗಳ ನಡುವೆ ಬಿದ್ದ ಬೀಜ ಅಂದರೇನು? ಬೋಧನೆಯನ್ನು ಕೇಳಿದರೂ ಜೀವನದ ಚಿಂತೆಗಳಿಂದ ಮತ್ತು ಹಣದ ಮೇಲಿನ ಪ್ರೀತಿಯಿಂದ ಬೋಧನೆಯನ್ನು ತನ್ನಲ್ಲಿ ಬೆಳೆಯದಂತೆ ಮಾಡುವವನೇ ಬೀಜ ಬಿದ್ದ ಮುಳ್ಳುಗಿಡಗಳ ನೆಲವಾಗಿರವನು. ಆದ್ದರಿಂದ ಬೋಧನೆಯು ಆ ಮನುಷ್ಯನ ಜೀವಿತದಲ್ಲಿ ಫಲ ಕೊಡುವುದಿಲ್ಲ.


ಬೇರೆ ಕೆಲವು ಬೀಜಗಳು ಮುಳ್ಳುಗಿಡಗಳಲ್ಲಿ ಬಿದ್ದವು. ಮುಳ್ಳುಗಿಡಗಳು ಬೆಳೆದು ಒಳ್ಳೆಯ ಗಿಡಗಳು ಬೆಳೆಯುವುದನ್ನು ತಡೆದುಬಿಟ್ಟವು.


ಕುಡುಕರೂ ಹೊಟ್ಟೆಬಾಕರೂ ಬಡವರಾಗುವರು. ತಿಂದು ಕುಡಿದು ನಿದ್ರಿಸುವುದೇ ಅವರ ಕಾರ್ಯಗಳು. ಅವರು ಬಹು ಬೇಗನೆ ಬಡವರಾಗುವರು.


“ನಾನು ಕೆಲಸಕ್ಕೆ ಹೋಗಲಾರೆ. ಹೊರಗಡೆ ಸಿಂಹವಿದೆ. ಅದು ನನ್ನನ್ನು ಕೊಲ್ಲುತ್ತದೆ” ಎನ್ನುತ್ತಾನೆ ಸೋಮಾರಿ.


ಸೋಮಾರಿಯು ಬಿತ್ತನೆಕಾಲದಲ್ಲಿ ಬೀಜ ಬಿತ್ತುವುದಿಲ್ಲ; ಸುಗ್ಗಿಕಾಲದಲ್ಲಿ ಅವನಿಗೆ ಬೆಳೆಯೂ ಇರುವುದಿಲ್ಲ.


ಭಯಭಕ್ತಿಯು ಒಳ್ಳೆಯ ಜೀವನಕ್ಕೆ ನಡೆಸುತ್ತದೆ. ಅದು ಅವನಿಗೆ ತೃಪ್ತಿಯನ್ನೂ ಕೊಡುವುದು; ಕೇಡಿನಿಂದಲೂ ತಪ್ಪಿಸಿ ಕಾಪಾಡುವುದು.


ಇವುಗಳಲ್ಲಿ ನಾನು ಯಾವುದನ್ನಾದರೂ ಮಾಡಿದ್ದರೆ, ಗೋಧಿ ಮತ್ತು ಬಾರ್ಲಿಗಳ ಬದಲಾಗಿ ನನ್ನ ಹೊಲಗಳಲ್ಲಿ ಮುಳ್ಳುಗಳೂ ಕಳೆಗಳೂ ಬೆಳೆಯಲಿ.” ಹೀಗೆ ಯೋಬನ ಮಾತುಗಳು ಮುಗಿದವು.


ಅವರು ಪೊದೆಗಳಲ್ಲಿ ಕಾಡುಕತ್ತೆಗಳಂತೆ ಅರಚುತ್ತಿದ್ದರು; ಮುಳ್ಳುಗಿಡಗಳ ಕೆಳಗೆ ಕೂಡಿಕೊಳ್ಳುತ್ತಿದ್ದರು.


ಅದನ್ನು ನೋಡಿ, ಆಲೋಚಿಸಿದೆ; ಒಂದು ಪಾಠವನ್ನು ಕಲಿತುಕೊಂಡೆ;


ಸೋಮಾರಿಯ ಆಸೆಗಳೆಲ್ಲಾ ವ್ಯರ್ಥ. ಅವನೆಂದಿಗೂ ಅವುಗಳನ್ನು ಪಡೆಯಲಾರ. ಕಷ್ಟಪಟ್ಟು ದುಡಿಯುವವನು ತನ್ನ ಆಸೆಗಳನ್ನು ಈಡೇರಿಸಿಕೊಳ್ಳುವನು.


ನಾನು ಅದನ್ನು ಬೆಂಗಾಡಾಗಿ ಮಾಡುವೆನು. ಅದರಲ್ಲಿರುವ ಸಸಿಗಳನ್ನು ಯಾರೂ ಲಕ್ಷಿಸರು. ತೋಟದಲ್ಲಿ ಯಾರೂ ಕೆಲಸ ಮಾಡುವದಿಲ್ಲ. ಮುಳ್ಳುಗಳೂ ಹಣಜಿಗಳೂ ಅಲ್ಲಿ ಬೆಳೆಯುವವು. ಅಲ್ಲಿ ಮಳೆಗರೆಯದಂತೆ ಮೋಡಗಳಿಗೆ ಆಜ್ಞಾಪಿಸುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು