Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 24:7 - ಪರಿಶುದ್ದ ಬೈಬಲ್‌

7 ಮೂಢರು ಜ್ಞಾನವನ್ನು ಅರ್ಥಮಾಡಿಕೊಳ್ಳಲಾರರು; ಮುಖ್ಯವಾದ ವಿಷಯಗಳನ್ನು ಚರ್ಚಿಸುವಾಗ ಮೂಢನು ಏನೂ ಹೇಳಲಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಜ್ಞಾನವು ಮೂರ್ಖನಿಗೆ ನಿಲುಕದು, ಅವನು ನ್ಯಾಯಸ್ಥಾನದಲ್ಲಿ ಬಾಯಿಬಿಡಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಜ್ಞಾನವು ಮೂರ್ಖನಿಗೆ ಎಟುಕದಷ್ಟು ಎತ್ತರ; ನ್ಯಾಯಸ್ಥಾನದಲ್ಲಿ ಅವನು ಬಾಯಿಬಿಡಲಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಜ್ಞಾನವು ಮೂರ್ಖನಿಗೆ ದುರ್ಲಭ; ಅವನು ನ್ಯಾಯಸ್ಥಾನದಲ್ಲಿ ಬಾಯಿಬಿಡಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಜ್ಞಾನವು ಬುದ್ಧಿಹೀನನಿಗೆ ನಿಲುಕದು; ಪುರದ್ವಾರದಲ್ಲಿ ಕೂಡಿಬಂದ ಸಭೆಯಲ್ಲಿ ಅವನು ತನ್ನ ಬಾಯಿಯನ್ನು ತೆರೆಯುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 24:7
21 ತಿಳಿವುಗಳ ಹೋಲಿಕೆ  

ಜ್ಞಾನದೂಷಕನು ಜ್ಞಾನಕ್ಕಾಗಿ ಹುಡುಕಿದರೂ ಅದನ್ನು ಕಂಡುಕೊಳ್ಳುವುದಿಲ್ಲ. ಆದರೆ ವಿವೇಕಿಯು ತಿಳುವಳಿಕೆಯನ್ನು ಸರಾಗವಾಗಿ ಕಂಡುಕೊಳ್ಳುವನು.


ಅವರು ಕುಯುಕ್ತಿಗಳನ್ನೇ ಮಾಡುತ್ತಾ ದೇವರ ಕಟ್ಟಳೆಗಳನ್ನೂ ಬುದ್ಧಿಮಾತುಗಳನ್ನೂ ಗಣನೆಗೆ ತೆಗೆದುಕೊಳ್ಳುವುದಿಲ್ಲ. ದೇವರ ವೈರಿಗಳು ಆತನ ಉಪದೇಶಗಳನ್ನು ಕಡೆಗಣಿಸುವರು.


ಆತ್ಮಿಕನಲ್ಲದ ವ್ಯಕ್ತಿಯು ದೇವಾರಾತ್ಮನ ವಿಷಯಗಳನ್ನು ಸ್ವೀಕರಿಸಿಕೊಳ್ಳವುದಿಲ್ಲ. ಅವನು ಆ ವಿಷಯಗಳನ್ನು ಮೂರ್ಖತನವೆಂದು ಯೋಚಿಸುತ್ತಾನೆ. ಅವನು ಪವಿತ್ರಾತ್ಮನ ವಿಷಯಗಳನ್ನು ಅರ್ಥಮಾಡಿಕೊಳ್ಳಲಾರನು; ಏಕೆಂದರೆ ಆ ವಿಷಯಗಳನ್ನು ಆತ್ಮಿಕವಾಗಿ ವಿಚಾರಣೆ ಮಾಡಲು ಮಾತ್ರ ಸಾಧ್ಯ.


ದುಷ್ಟತನವನ್ನು ದ್ವೇಷಿಸಿ ಒಳ್ಳೆಯತನವನ್ನು ಪ್ರೀತಿಸಿರಿ, ನಿಮ್ಮ ನ್ಯಾಯಾಲಯಗಳಲ್ಲಿ ನ್ಯಾಯವನ್ನು ಸ್ಧಾಪಿಸಿರಿ. ಆಗ ಒಂದುವೇಳೆ ಸರ್ವಶಕ್ತನಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ದಯೆತೋರಿಸಬಹುದು.


ಯಾಕೆ ಹೀಗೆ? ಯಾಕೆಂದರೆ ನಿಮ್ಮ ಅನೇಕ ಪಾಪಕೃತ್ಯಗಳನ್ನು ನಾನು ಬಲ್ಲೆನು. ನೀವು ಭಯಂಕರ ಪಾಪಗಳನ್ನು ಮಾಡಿದ್ದೀರಿ. ನ್ಯಾಯವಂತರನ್ನು ಗಾಯಗೊಳಿಸಿದ್ದೀರಿ. ಅನ್ಯಾಯ ಮಾಡಲು ಹಣವನ್ನು ತೆಗೆದುಕೊಂಡಿದ್ದೀರಿ. ಬಡಜನರಿಗೆ ನ್ಯಾಯವನ್ನು ದೊರಕಿಸುವುದಿಲ್ಲ.


ಪ್ರವಾದಿಗಳು ಸಾರ್ವಜನಿಕ ಸ್ಥಳಗಳಿಗೆ ಹೋಗಿ ಜನರು ಮಾಡುವ ದುಷ್ಕೃತ್ಯಗಳನ್ನು ಖಂಡಿಸುವರು. ಜನರು ಪ್ರವಾದಿಗಳನ್ನು ಹಗೆಮಾಡುವರು. ಪ್ರವಾದಿಗಳು ಒಳ್ಳೆಯದನ್ನು ಸರಳವಾದ ಸತ್ಯಗಳನ್ನು ಉಪದೇಶಿಸುವರು. ಆದರೆ ಜನರು ಅವರನ್ನು ದ್ವೇಷಿಸುವರು.


(ಅವರು ನೀತಿವಂತರ ವಿಷಯವಾಗಿ ಸುಳ್ಳಾಡುವರು. ನ್ಯಾಯಾಲಯದಲ್ಲಿ ಜನರನ್ನು ಸಿಕ್ಕಿಸಿ ಹಾಕುವರು. ದೀನರನ್ನು ನಾಶಮಾಡಲು ಅವರು ಪ್ರಯತ್ನಿಸುವರು.)


ಅಸಹಾಯಕರಾದ ಬಡವರಿಂದ ಕದ್ದುಕೊಳ್ಳಬೇಡ; ನ್ಯಾಯಾಲಯದಲ್ಲಿ ಅವರಿಗೆ ಅನ್ಯಾಯಮಾಡಬೇಡ.


ವಿವೇಕಿಯು ಜ್ಞಾನದ ಮೇಲೆ ಮನಸ್ಸಿಡುತ್ತಾನೆ. ಆದರೆ ಮೂಢನು ಬಹುದೂರದ ಸ್ಥಳಗಳ ಬಗ್ಗೆ ಕನಸು ಕಾಣುತ್ತಲೇ ಇರುವನು.


ಜ್ಞಾನಿಯ ಕಾರ್ಯಗಳು ಅವನನ್ನು ಯಶಸ್ಸಿಗೆ ನಡೆಸುತ್ತವೆ; ಅವು ಅವನನ್ನು ಮರಣದ ಹಾದಿಯಿಂದ ತಪ್ಪಿಸುತ್ತವೆ.


ನನಗೆ ನ್ಯಾಯಸ್ಥಾನದಲ್ಲಿ ಬೆಂಬಲವಿದ್ದರೂ ಅನಾಥರನ್ನು ಕಂಡು ನಾನೆಂದೂ ಅವರ ಮೇಲೆ ಕೈ ಮಾಡಲಿಲ್ಲ.


ಅವನ ಮಕ್ಕಳಿಗೆ ಸಹಾಯಮಾಡುವಂಥವರು ಇರಲಿಲ್ಲ. ಅವರ ಪರವಾಗಿ ವಾದಿಸಲು ನ್ಯಾಯಾಲಯದಲ್ಲಿ ಒಬ್ಬರೂ ಇರಲಿಲ್ಲ.


ತನ್ನ ಬತ್ತಳಿಕೆಯಲ್ಲಿ ಗಂಡುಮಕ್ಕಳನ್ನು ತುಂಬುವವನು ಭಾಗ್ಯವಂತನಾಗಿದ್ದಾನೆ. ಅವನಿಗೆ ಸೋಲೇ ಇಲ್ಲ. ಅವನ ಗಂಡುಮಕ್ಕಳು ಅವನ ಪರವಾಗಿಯೂ ಅವನ ಶತ್ರುಗಳ ವಿರೋಧವಾಗಿಯೂ ನ್ಯಾಯಸ್ಥ್ಥಾನಗಳಲ್ಲಿ ವಾದಿಸುವರು.


ವಾಕ್ಚಾತುರ್ಯವು ಮೂಢನಿಗೆ ವಿರುದ್ಧ; ಸುಳ್ಳು ಮಾತು ಗಣ್ಯನಿಗೆ ಇನ್ನೂ ವಿರುದ್ಧ.


ಮೂಢನಲ್ಲಿ ಹಣವಿದ್ದರೂ ಪ್ರಯೋಜನವಿಲ್ಲ. ಯಾಕೆಂದರೆ ಜ್ಞಾನವನ್ನು ಪಡೆದುಕೊಳ್ಳುವುದಕ್ಕೆ ಅವನ ಹಣ ನಿಷ್ಪ್ರಯೋಜಕ.


ದುಷ್ಟನು ದುಷ್ಟತೆಯ ಬಗ್ಗೆ ಮಾತನಾಡುವನು. ದುಷ್ಕೃತ್ಯಗಳನ್ನು ಮಾಡಲು ತನ್ನ ಹೃದಯದಲ್ಲಿ ಆಲೋಚಿಸುವನು. ದುಷ್ಟನು ಯೆಹೋವನ ಬಗ್ಗೆ ಕೆಟ್ಟವುಗಳನ್ನು ಹೇಳುತ್ತಾನೆ. ಹಸಿದವರಿಗೆ ಆಹಾರವನ್ನು ತಿನ್ನುವದಕ್ಕಾಗಲಿ ಬಾಯಾರಿದವರಿಗೆ ನೀರನ್ನು ಕುಡಿಯುವದಕ್ಕಾಗಲಿ ಅವನು ಬಿಡುವದಿಲ್ಲ.


ಕೆಡುಕರು ನ್ಯಾಯವನ್ನು ಅರ್ಥಮಾಡಿಕೊಳ್ಳಲಾರರು; ಯೆಹೋವನನ್ನು ಪ್ರೀತಿಸುವ ಜನರಾದರೋ ಅದನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳುವರು.


ಜನರು ಆಕೆಯ ಗಂಡನನ್ನು ಗೌರವಿಸುವರು. ಅವನು ದೇಶದ ಹಿರಿಯರುಗಳಲ್ಲಿ ಒಬ್ಬನಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು