Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 24:9 - ಪರಿಶುದ್ದ ಬೈಬಲ್‌

9 ಮೂಢನ ಆಲೋಚನೆಗಳೆಲ್ಲಾ ಪಾಪಮಯ. ದುರಾಭಿಮಾನಿಯು ಜನರಿಗೆ ಅಸಹ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮೂರ್ಖನ ಸಂಕಲ್ಪವು ಪಾಪವೇ, ಧರ್ಮನಿಂದಕನು ಮನುಷ್ಯರಿಗೆ ಅಸಹ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮೂರ್ಖನ ಯೋಜನೆ ಪಾಪಮಯ; ಕುಚೋದ್ಯನು ಜನರಿಂದ ತಿರಸ್ಕೃತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮುರ್ಖನ ಸಂಕಲ್ಪವು ಪಾಪವೇ; ಧರ್ಮನಿಂದಕನು ಮನುಷ್ಯರಿಗೆ ಅಸಹ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಬುದ್ಧಿಹೀನನ ಆಲೋಚನೆಯು ಪಾಪಮಯ; ಪರಿಹಾಸ್ಯಗಾರನು ಮನುಷ್ಯರಿಗೆ ಅಸಹ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 24:9
16 ತಿಳಿವುಗಳ ಹೋಲಿಕೆ  

ಮನುಷ್ಯನ ಮನಸ್ಸಿನಲ್ಲಿ ದುರಾಲೋಚನೆ, ಕೊಲೆ, ವ್ಯಭಿಚಾರ, ಸೂಳೆಗಾರಿಕೆ, ಕಳ್ಳತನ, ಸುಳ್ಳುಸಾಕ್ಷಿ ಮತ್ತು ಬೈಗಳು ಹೊರಟುಬರುತ್ತವೆ.


ದೇವರ ಜ್ಞಾನಕ್ಕೆ ವಿರೋಧವಾಗಿ ಎದ್ದೇಳುವ ಪ್ರತಿಯೊಂದು ಗರ್ವದ ಸಂಗತಿಯನ್ನು ನಾಶಮಾಡುತ್ತೇವೆ; ಪ್ರತಿಯೊಂದು ಯೋಚನೆಯನ್ನು ಸ್ವಾಧೀನಪಡಿಸಿಕೊಂಡು ಅವುಗಳನ್ನು ಪರಿವರ್ತಿಸಿ ಕ್ರಿಸ್ತನಿಗೆ ವಿಧೇಯರಾಗುವಂತೆ ಮಾಡುತ್ತೇವೆ.


ಕೆಟ್ಟಜನರು ಕೆಟ್ಟತನದಲ್ಲಿ ಜೀವಿಸುವದನ್ನು ನಿಲ್ಲಿಸಲಿ. ಅವರು ಕೆಟ್ಟ ಆಲೋಚನೆಗಳನ್ನು ಮಾಡದಿರಲಿ. ಅವರು ಯೆಹೋವನ ಬಳಿಗೆ ಹಿಂತಿರುಗಲಿ. ಆಗ ಯೆಹೋವನು ಅವರನ್ನು ಆದರಿಸುವನು. ದೇವರಾದ ಯೆಹೋವನು ಕ್ಷಮಿಸುವುದರಿಂದ ಅವರು ಆತನ ಬಳಿಗೆ ಬರಲಿ.


ನಿನ್ನ ಹೃದಯವನ್ನು ಮಾರ್ಪಡಿಸಿಕೊ! ನೀನು ಮಾಡಿದ ಕೆಟ್ಟಕಾರ್ಯದಿಂದ ತಿರುಗಿಕೊ. ಪ್ರಭುವಿನಲ್ಲಿ ಪ್ರಾರ್ಥಿಸು. ನೀನು ಹೀಗೆ ಆಲೋಚಿಸಿದ್ದನ್ನು ಆತನು ಕ್ಷಮಿಸಬಹುದು.


ಅವರು ಹೀಗೆ ಆಲೋಚಿಸುತ್ತಿರುವುದು ಯೇಸುವಿಗೆ ತಿಳಿದಿತ್ತು. ಆತನು ಅವರಿಗೆ, “ನೀವು ಏಕೆ ದುರಾಲೋಚನೆ ಮಾಡುತ್ತಿದ್ದೀರಿ?


ದುರಾಭಿಮಾನಿಗಳು ಇಡೀ ಪಟ್ಟಣವನ್ನೇ ಬೇಸರಗೊಳಿಸುವರು. ಜ್ಞಾನಿಗಳಾದರೋ ಕೋಪದ ಜ್ವಾಲೆಗಳನ್ನು ನಂದಿಸುವರು.


ಕೇಡುಮಾಡುವವನನ್ನು ಜನರು “ಕೆಡುಕ” ಎಂದು ಕರೆಯುವರು.


ಆದರೆ ಒಬ್ಬನು ಪರಸ್ತ್ರೀಯನ್ನು ನೋಡಿ ಅವಳೊಂದಿಗೆ ಲೈಂಗಿಕ ಸಂಪರ್ಕ ಹೊಂದಲು ಬಯಸಿದರೆ, ಅವನು ಆಗಲೇ ತನ್ನ ಮನಸ್ಸಿನಲ್ಲಿ ಅವಳೊಂದಿಗೆ ವ್ಯಭಿಚಾರವನ್ನು ಮಾಡಿದ್ದಾನೆಂದು ನಾನು ನಿಮಗೆ ಹೇಳುತ್ತೇನೆ.


ಜೆರುಸಲೇಮಿನ ಜನರೇ, ನಿಮ್ಮ ಹೃದಯದ ಕೆಟ್ಟತನವನ್ನು ತೊಳೆದುಕೊಳ್ಳಿರಿ. ರಕ್ಷಣೆಹೊಂದಲು ನಿಮ್ಮ ಹೃದಯಗಳನ್ನು ಪವಿತ್ರಗೊಳಿಸಿರಿ. ದುರಾಲೋಚನೆಗಳನ್ನು ಮುಂದುವರಿಸಬೇಡಿರಿ.


ಭೂಮಿಯ ಮೇಲಿರುವ ಜನರು ತುಂಬ ದುಷ್ಟರಾಗಿದ್ದು ಯಾವಾಗಲೂ ಕೆಟ್ಟವಿಷಯಗಳ ಬಗ್ಗೆ ಆಲೋಚಿಸುತ್ತಿರುವುದನ್ನು ಯೆಹೋವನು ನೋಡಿದನು.


ಅವನು ವೆಚ್ಚದ ಬಗ್ಗೆ ಯೋಚಿಸುವಂಥವನು. ಅವನು ನಿನಗೆ, “ತಿನ್ನು, ಕುಡಿ” ಎಂದು ಹೇಳಿದರೂ ಅವನ ಉದ್ದೇಶವೇ ಬೇರೆ.


ದುರಾಭಿಮಾನಿಯನ್ನು ಬಲವಂತವಾಗಿ ಹೊರಗಟ್ಟಿ. ಆಗ ಜಗಳವಾಗಲಿ ವಾದಗಳಾಗಲಿ ಅವಮಾನಗಳಾಗಲಿ ಇರುವುದಿಲ್ಲ.


ನಿನಗೆ ಪೂರ್ಣವಾಗಿ ನಂಬಿಗಸ್ತರಾಗಿಲ್ಲದವರನ್ನು ದ್ವೇಷಿಸುವೆನು. ನಾನಾದರೋ ನಿನ್ನ ಉಪದೇಶಗಳನ್ನು ಪ್ರೀತಿಸುವೆನು.


ಈ ಯಜ್ಞಗಳ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯಾಯಿತು. ಆಗ ಯೆಹೋವನು ತನ್ನೊಳಗೆ, “ಜನರನ್ನು ದಂಡಿಸುವುದಕ್ಕಾಗಿ ನಾನು ಇನ್ನೆಂದೂ ಭೂಮಿಯನ್ನು ಶಪಿಸುವುದಿಲ್ಲ. ಜನರು ಚಿಕ್ಕಂದಿನಿಂದಲೇ ಕೆಟ್ಟವರು. ಆದ್ದರಿಂದ ನಾನು ಇನ್ನೆಂದೂ ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಯನ್ನು ನಾಶಮಾಡುವುದಿಲ್ಲ; ಮತ್ತೆಂದೂ ನಾನು ಹೀಗೆ ಮಾಡುವುದಿಲ್ಲ.


ನೀನು ಅಹಂಕಾರಿಗೆ ಅವನ ತಪ್ಪನ್ನು ತಿಳಿಸಲು ಪ್ರಯತ್ನಿಸಿದರೆ ಅವನು ನಿನ್ನನ್ನೇ ಖಂಡಿಸುವನು. ನೀನು ಕೆಡುಕನಿಗೆ ಅವನ ತಪ್ಪನ್ನು ತಿಳಿಸಿದರೆ ಅವನು ನಿನ್ನನ್ನೇ ಗೇಲಿಮಾಡುವನು.


ಗರ್ವಿಷ್ಠನೂ ದುರಾಭಿಮಾನಿಯೂ ಆಗಿರುವವನಿಗೆ ಗೇಲಿಗಾರನೆಂದು ಹೆಸರು. ಅವನ ನಡತೆಯು ಗರ್ವದ ಮದದಿಂದ ಕೂಡಿರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು