Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 25:15 - ಪರಿಶುದ್ದ ಬೈಬಲ್‌

15 ತಾಳ್ಮೆಯು ಅಧಿಪತಿಯನ್ನು ಸಹ ಮನವೊಪ್ಪಿಸುವುದು. ನಯವಾದ ಮಾತಿಗೆ ಬಹುಬಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ದೀರ್ಘಶಾಂತಿಯಿಂದ ಪ್ರಭುವನ್ನೂ ಸಮ್ಮತಿಪಡಿಸಬಹುದು, ಮೃದುವಚನವು ಎಲುಬನ್ನು ಮುರಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸಹನಶೀಲತೆಯಿಂದ ಅರಸನನ್ನೂ ಒಲಿಸಿಕೊಳ್ಳಬಹುದು; ಮೃದುವಾದ ನಾಲಿಗೆ ಎಲುಬನ್ನೂ ಮುರಿಯಬಲ್ಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ದೀರ್ಘಶಾಂತಿಯಿಂದ ಪ್ರಭುವನ್ನೂ ಸಮ್ಮತಿಪಡಿಸಬಹುದು; ಮೃದುವಚನವು ಎಲುಬನ್ನು ಮುರಿಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ತಾಳ್ಮೆಯ ಮೂಲಕ ಪ್ರಭುವನ್ನು ಒಲಿಸಿಕೊಳ್ಳಬಹುದು; ಮೃದುವಾದ ಮಾತು ಎಲುಬನ್ನು ಮುರಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 25:15
9 ತಿಳಿವುಗಳ ಹೋಲಿಕೆ  

ಸಮಾಧಾನದ ಉತ್ತರ ಕೋಪವನ್ನು ಕಡಿಮೆ ಮಾಡುವುದು; ಒರಟು ಉತ್ತರ ಕೋಪವನ್ನು ಹೆಚ್ಚಿಸುವುದು.


ನಿನ್ನ ಯಜಮಾನನು ನಿನ್ನ ಮೇಲೆ ಕೋಪಗೊಂಡ ಮಾತ್ರಕ್ಕೆ ನಿನ್ನ ಉದ್ಯೋಗವನ್ನು ಬಿಡಬೇಡ. ನೀನು ತಾಳ್ಮೆಯಿಂದ ಸಹಾಯಕನಾಗಿದ್ದರೆ ದೊಡ್ಡ ತಪ್ಪುಗಳನ್ನು ಸಹ ನೀನು ಸರಿಪಡಿಸಲು ಸಾಧ್ಯ.


ರಾಜನು ಕೋಪದಿಂದಿರುವಾಗ ಯಾರನ್ನಾದರೂ ಕೊಂದರೂ ಕೊಲ್ಲಬಹುದು. ಆದರೆ ಜ್ಞಾನಿಯು ಆತನ ಕೋಪವನ್ನು ಶಮನಗೊಳಿಸಬಲ್ಲನು.


ನಾಬಾಲನ ಸೇವಕನೊಬ್ಬನು ನಾಬಾಲನ ಹೆಂಡತಿಯಾದ ಅಬೀಗೈಲಳಿಗೆ, “ನಮ್ಮ ಒಡೆಯನನ್ನು ವಂದಿಸಲು ದಾವೀದನು ಅರಣ್ಯದಿಂದ ಸಂದೇಶಕರನ್ನು ಕಳುಹಿಸಿದ್ದನು. ಆದರೆ ನಾಬಾಲನು ದಾವೀದನ ಸಂದೇಶಕರೊಂದಿಗೆ ಕೀಳಾಗಿ ನಡೆದುಕೊಂಡನು.


ಸಂಸೋನನು ತನ್ನ ಕೈಯಿಂದ ಸ್ವಲ್ಪ ಜೇನುತುಪ್ಪವನ್ನು ತೆಗೆದುಕೊಂಡು ಅದನ್ನು ತಿನ್ನುತ್ತಾ ನಡೆದನು. ತಂದೆತಾಯಿಗಳ ಹತ್ತಿರ ಬಂದು ಅವರಿಗೆ ಸ್ವಲ್ಪ ಜೇನುತುಪ್ಪವನ್ನು ಕೊಟ್ಟನು. ಅವರೂ ತಿಂದರು. ಆದರೆ ಆ ಸತ್ತಸಿಂಹದ ದೇಹದಿಂದ ಜೇನುತುಪ್ಪವನ್ನು ತೆಗೆದುಕೊಂಡ ಸಂಗತಿಯನ್ನು ಸಂಸೋನನು ಅವರಿಗೆ ಹೇಳಲಿಲ್ಲ.


ತನ್ನನ್ನು ಸ್ವತಂತ್ರವಾಗಿ ಬಿಟ್ಟುಕೊಡಬೇಕೆಂದು ಅದು ನಿನ್ನನ್ನು ಬೇಡಿಕೊಳ್ಳುವುದೇ? ಅದು ನಯವಾದ ಪದಗಳಿಂದ ನಿನ್ನೊಂದಿಗೆ ಮಾತಾಡುತ್ತದೆಯೋ?


ಶೂರನಾಗಿರುವುದಕ್ಕಿಂತ ತಾಳ್ಮೆಯಿಂದಿರುವುದೇ ಶ್ರೇಷ್ಠ; ಪಟ್ಟಣವನ್ನು ವಶಪಡಿಸಿಕೊಳ್ಳುವುದಕ್ಕಿಂತ ನಿಮ್ಮ ಕೋಪವನ್ನು ಸ್ವಾಧೀನದಲ್ಲಿಟ್ಟುಕೊಳ್ಳವುದೇ ಉತ್ತಮ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು